Article Image 1 Article Image 2

ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಆರಂಭ

Article Image

ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಆರಂಭ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಐತಿಹಾಸಿಕ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಪಂಚಕಲ್ಯಾಣ ಮಹೋತ್ಸವವು ಇಂದಿನಿಂದ ಪ್ರಾರಂಭಗೊಂಡು ಜ. 22ರ ವರೆಗೆ ನಡೆಯಲಿದೆ. ಸುಮಾರು 5 ಶತಮಾನಗಳಷ್ಟು ಪ್ರಾಚೀನ ಆನೆಕೆರೆ ಬಸದಿ ಐವರು ತೀರ್ಥಂಕರರ ಭವ್ಯ ಬಿಂಬಗಳಿಂದ ಕೂಡಿದೆ. ಚತುರ್ಮುಖ ಬಸದಿಯ ವಾಸ್ತು ಶೈಲಿಯನ್ನು ಹೊಂದಿರುವ ಕೆರೆ ಬಸದಿಯನ್ನು ಭೈರವರಸರ ವಂಶಸ್ಥ ಪಾಂಡ್ಯನಾಥ ಪಾಂಡ್ಯಪ್ಪೊಡೆಯ 16.05.1545ರಲ್ಲಿ ಕಟ್ಟಿಸಿದರು ಎಂದು ಇತಿಹಾಸ ಹೇಳುತ್ತದೆ. 2022ರಲ್ಲಿ ಜೀರ್ಣೋದ್ಧಾರ ಕಾರ್ಯವನ್ನು ಆರಂಭಿಸಿದ್ದು, ಸುಮಾರು 26 ಎಕರೆ ವಿಸ್ತೀರ್ಣದಲ್ಲಿ ಆನೆಕೆರೆ ಬಸದಿಯು ಶೋಭಿಸುತ್ತಿದೆ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಶ್ರೀ ಜೈನಮಠ, ದಾನಶಾಲಾ ಕಾರ್ಕಳ ಇವರ ನೇತೃತ್ವದಲ್ಲಿ ಮತ್ತು ಸಮಸ್ತ ಭಟ್ಟಾರಕರ ಪಾವನ ಸಾನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರ ಸಹಕಾರದೊಂದಿಗೆ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಕಲ್ಯಾಣ ಮಹೋತ್ಸವವು ನೂತನ ಶಿಲಾಮಂದಿರಲ್ಲಿ ಆಗಮೋಕ್ತ ವಿಧಿ- ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿದೆ. ನೂತನ ಆನೆಕೆರೆ ಬಸದಿಯು ಸುಂದರವಾದ ಕೆತ್ತನೆಯಲ್ಲಿ ಶಿಲಾಮಯವಾಗಿ ರೂಪುಗೊಂಡ ದ್ವಾರಪಾಲಕರು, ತಿರುಗಿಸಬಹುದಾದಂತಹ ಕಂಬಗಳು, ಪಾಣಿಪೀಠದ ಬುಡದಲ್ಲಿ ಸೂಕ್ಷ್ಮವಾದ ಕೆತ್ತನೆಗಳು, ಶಾಶ್ವತ ವಿದ್ಯುತ್ ದೀಪಾಲಂಕಾರ ಹೀಗೆ ಅನೇಕ ವಿಶೇಷತೆಗಳೊಂದಿಗೆ ಲೋಕಾರ್ಪಣೆಗೆ ಸಿದ್ದವಾಗಿದೆ.

ವೇಣೂರು: ಮಹಾಮಸ್ತಕಾಭಿಷೇಕಕ್ಕೆ ವಿವಿಧ ಮೂಲಗಳಿಂದ ಅನುದಾನ, ಭರದಿಂದ ಸಾಗುತ್ತಿರುವ ಅಭಿವೃದ್ಧಿ ಕಾರ್ಯ

Article Image

ವೇಣೂರು: ಮಹಾಮಸ್ತಕಾಭಿಷೇಕಕ್ಕೆ ವಿವಿಧ ಮೂಲಗಳಿಂದ ಅನುದಾನ, ಭರದಿಂದ ಸಾಗುತ್ತಿರುವ ಅಭಿವೃದ್ಧಿ ಕಾರ್ಯ

ಬೆಳ್ತಂಗಡಿ ತಾಲೂಕಿನ ವೇಣೂರಿನ ಭ| ಶ್ರೀ ಬಾಹುಬಲಿ ಸ್ವಾಮಿಯ ವೈಭವದ ಮಹಾಮಸ್ತಕಾಭಿಷೇಕಕ್ಕೆ ಇನ್ನು ಕೆಲವೇ ದಿನಗಳ ಅಂತರವಿದ್ದು, 12 ವರುಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ನಾಡಿನ ಜನತೆ ಕಾತುರರಾಗಿದ್ದಾರೆ. ಅಟ್ಟಳಿಗೆಯ ನಿಮಾ೯ಣವು ಭರದಿಂದ ಸಾಗುತ್ತಿದೆ. ಇದರ ಜೊತೆಗೆ ರಾಜ್ಯ ಸರಕಾರದ ಅಲ್ಪಸಂಖ್ಯಾತರ ಇಲಾಖೆಯಿಂದ ಗ್ರಾನೈಟ್, ಇಂಟರ್ಲಾಕ್ ಮತ್ತು ಹಳೆಯ ಹಾಸುಗಲ್ಲಿನ ಬದಲು ಹೊಸ ಹಾಸುಗಲ್ಲುಗಳ ಹೊದಿಕೆ ಹಾಗೂ ಬೆಟ್ಟದ ಎಡ ಮತ್ತು ಬಲ ಬದಿಯಲ್ಲಿರುವ ಬಿನ್ನಾಣಿ ಬಸದಿ ಮತ್ತು ಅಕ್ಕಂಗಳ ಬಸದಿಯ ದುರಸ್ತಿಗೆ 1 ಕೋಟಿ ರೂ.ಗಳ ಅನುದಾನವನ್ನು ಮಂಜೂರು ಮಾಡಿರುತ್ತದೆ. ಸ್ವಚ್ಛ ಭಾರತ ಅಭಿಯಾನದಿಂದ ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಶೌಚಾಲಯದ ನಿಮಾ೯ಣ, MRPLನ CSR ಫಂಡ್ ಮೂಲಕ ಭಕ್ತಾಧಿಗಳಿಗೆ ಮೂಲಭೂತ ಸೌಕಯ೯ ಒದಗಿಸಲು ತ್ಯಾಗಿನಿವಾಸದ ಬಳಿ ಶೌಚಾಲಯ ಮತ್ತು ಸ್ನಾನಗೃಹದ ನಿಮಾ೯ಣದ ಕೆಲಸವು ನಡೆಯುತ್ತಿದೆ. ಅಲ್ಲದೆ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರ ವಿಶೇಷ ಮುತುವರ್ಜಿಯಿಂದ ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ಧರಾಮಯ್ಯನವರು ಕಲ್ಲು ಬಸದಿಯ ಆವರಣದಲ್ಲಿ ಸಭಾ ಭವನದ ನಿರ್ಮಾಣಕ್ಕೆ ರೂ. 50 ಲಕ್ಷ ಬಿಡುಗಡೆಗೊಳಿಸಿರುತ್ತಾರೆ. ಹಾಗೆಯೇ ಕರ್ನಾಟಕ ಸರಕಾರದ ಸಣ್ಣ ನೀರಾವರಿಯ ಇಲಾಖೆಯಿಂದ 45 ಲಕ್ಷ ರೂ. ಕಲ್ಲು ಬಸದಿಯ ಸನಿಹದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿರುತ್ತಾರೆ. ಮಂಗಳೂರಿನ ಶ್ರೀ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಬೆಟ್ಟದ ಹೊರಾಂಗಣಕ್ಕೆ 20 ಸೋಲಾರ್ ದೀಪಗಳ ಅಳವಡಿಕೆಗೆ 2 ಲಕ್ಷ ರೂ.ಗಳನ್ನು ನೀಡಿರುತ್ತಾರೆ. ವಿಶೇಷವಾಗಿ, ಈ ಬಾರಿಯ ಮಹಾಮಸ್ತಕಾಭಿಷೇಕದ ಮನವಿ ಪತ್ರ ಮತ್ತು ಶ್ರೀಮುಖ ಪತ್ರಿಕೆಯನ್ನು ಅವಿಭಜಿತ ದ.ಕ. ಜಿಲ್ಲೆಯ ಪ್ರತಿಯೊಂದು ಮನೆಗೆ ಸಮಿತಿಯ ಸದಸ್ಯರು ಭೇಟಿ ನೀಡಿ ಮಹಾಮಸ್ತಕಾಭಿಷೇಕಕ್ಕೆ ಆಹ್ವಾನಿಸುತ್ತಿದ್ದಾರೆ. ಇದುವರೆಗೆ 1500ಕ್ಕಿಂತಲೂ ಅಧಿಕ ಮನೆಗೆ ಭೇಟಿ ನೀಡಿ ಆಮಂತ್ರಣ ಪತ್ರಿಕೆ ನೀಡಿರುತ್ತಾರೆ. ಮಸ್ತಕಾಭಿಷೇಕ ಸಮಿತಿಯಲ್ಲಿ 30ರಷ್ಟು ವಿವಿಧ ಉಪಸಮಿತಿಗಳನ್ನು ರಚನೆ ಮಾಡಲಾಗಿದ್ದು, ಆ ಸಮಿತಿಗಳ ಸಭೆಯು ಆಗಾಗ ನಡೆಯುತ್ತಿದ್ದು, ಮಹಾಮಸ್ತಕಾಭಿಷೇಕದ ಯಶಸ್ಸಿಗೆ ಶ್ರಮಿಸುತ್ತಿದೆ. ಪ್ರತಿಯೊಂದು ಮನೆಯವರು ಕನಿಷ್ಟ ಒಂದು ಕಲಶವನ್ನಾದರೂ ಪಡೆದುಕೊಂಡು ಪುಣ್ಯಭಾಗಿಗಳಾಗಬೇಕಾಗಿ ಸಮಿತಿಯವರು ವಿನಂತಿಸಿರುತ್ತಾರೆ.

ಮಾರ್ಚ್ ನಲ್ಲಿ ಕೇಂದ್ರೀಯ ವಿವಿ ಆನ್ ಲೈನ್ ಪ್ರವೇಶ ಪರೀಕ್ಷೆ

Article Image

ಮಾರ್ಚ್ ನಲ್ಲಿ ಕೇಂದ್ರೀಯ ವಿವಿ ಆನ್ ಲೈನ್ ಪ್ರವೇಶ ಪರೀಕ್ಷೆ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿಗೆ 2024ರ ಮಾರ್ಚ್ 11ರಿಂದ 28ರವರೆಗೆ ಆನ್ ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಡಿ.26ರಿಂದ ಆನ್ ಲೈನ್ ಮೂಲಕ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭಗೊಂಡಿದ್ದು, ಜ.24ರಂದು ಸಂಜೆ 5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿ ತಿದ್ದುಪಡಿಗೆ ಜ.27ರಿಂದ 29ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ನಾತಕ ಪದವಿಯ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಸಹ http://pgcuet.samarth.ac.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಿಯುಕೆ ಕೋರ್ಸುಗಳ ವಿವರ ಮತ್ತು ನಿಗದಿಪಡಿಸಲಾಗಿರುವ ಅರ್ಹತೆ ಕುರಿತು ವಿಶ್ವವಿದ್ಯಾಲಯದ ವೆಬ್ ಸೈಟ್ www.cuk.ac.in ಮತ್ತು http://nta.ac.in ಹಾಗೂ http://pgcuet.samarth.ac.in ಮೂಲಕ ಪರಿಶೀಲಿಸಬಹುದಾಗಿದೆ ಎಂದರು.

ವಸಂತ ಗಿಳಿಯಾರ್ ರವರಿಂದ ಭುವನವಾಹಿನಿ ವೆಬ್ ಸೈಟ್ ಅನಾವರಣ

Article Image

ವಸಂತ ಗಿಳಿಯಾರ್ ರವರಿಂದ ಭುವನವಾಹಿನಿ ವೆಬ್ ಸೈಟ್ ಅನಾವರಣ

ಕುಂದಾಪುರ ಜ. 16: ಭುವನವಾಹಿನಿ ಜಿನಮಿತ್ರ ಮತ್ತು ಜನಮಿತ್ರ ಪತ್ರಿಕೆಯು ರಜತ ವಷ೯ ಪೂರೈಸಿರುವ ಈ ಸುಸಂದಭ೯ದಲ್ಲಿ ಭುವನವಾಹಿನಿಯ ನೂತನ ವೆಬ್ ಸೈಟ್ ನ್ನು ಪತ್ರಕತ೯ ವಸಂತ ಗಿಳಿಯಾರ್ ಇವರು ಉದ್ಘಾಟಿಸುವ ಮೂಲಕ ಅನಾವರಣಗೊಳಿಸಿ ಶುಭ ಹಾರೈಸಿದರು ಮತ್ತು ಭುವನವಾಹಿನಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ| ವಿಜಯ ಕುಮಾರ್ ಕತ್ತೋಡಿರವರು ಮೊದಲ ನ್ಯೂಸ್ ನ್ನು ಅಪ್ಲೋಡ್ ಮಾಡುವ ಮೂಲಕ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಭುವನವಾಹಿನಿಯ ಪರವಾಗಿ ಶ್ರೀಮುಖ ವಿ. ಕೆ, ಹರ್ಷೇಂದ್ರ ಕುಮಾರ್ ಮೂಡುಕೋಡಿ, ಪ್ರಣಾಮ್ ಎಂ. ಬಿ, ಮಮತಾ ಮತ್ತು ಪವಿತ್ರ ಉಪಸ್ಥಿತರಿದ್ದರು

ಎಂ. ಬಾಹುಬಲಿ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆ

Article Image

ಎಂ. ಬಾಹುಬಲಿ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ, ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಫೆ. 22 - ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Article Image

ಫೆ. 22 - ಮಾ. 1: ವೇಣೂರು ಭ| ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವವು ಪರಮಪೂಜ್ಯ ಯುಗಳ ಮುನಿವರ್ಯರಾದ ೧೦೮ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ೧೦೮ ಅಮರಕೀರ್ತಿ ಮುನಿ ಮಹಾರಾಜರ ಪಾವನ ಸಾನಿಧ್ಯ-ಶುಭಾಶೀರ್ವಾದಗಳೊಂದಿಗೆ, ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಡಾ| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ʼರಾಜರ್ಷಿʼ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರ ಕಾರ್ಯಾಧ್ಯಕ್ಷತೆಯಲ್ಲಿ ಫೆ. 22ರಿಂದ ಮಾ. 1ರ ತನಕ ಜರಗಲಿದೆ.

First Previous

Showing 10 of 10 pages

Next Last