ವೇಣೂರು: 2ನೇ ವರ್ಷದ ಪ್ರತಿಷ್ಠಾ ದಿನಾಚರಣೆಯ
Published Date: 21-Feb-2025
ಬೆಳ್ತಂಗಡಿ ತಾಲೂಕು, ವೇಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 23(ನಾಳೆ)ರಂದು 2ನೇ ವರ್ಷದ ಪ್ರತಿಷ್ಠಾ ದಿನಾಚರಣೆಯ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಾರ್ಯಕ್ರಮಗಳು ಪೂರ್ವಾಹ್ನ ಗಂಟೆ 8.30ಕ್ಕೆ ದೇವತಾ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಪರಿವಾರ ದೇವರಿಗೆ ನವಕಲಶ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.