ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ


Logo

Published Date: 07-Aug-2025

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕುತ್ತಿಗೆ ನೋವಿನಿಂದ ಬಳಲುತ್ತಿದ್ದ 46 ವರ್ಷ ಪ್ರಾಯದ ರೋಗಿಯೊಬ್ಬರಿಗೆ ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಬೆನ್ನು ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಮಹೇಶ್ ಕೆ., ಮೂಳೆ ಶಸ್ತ್ರಚಿಕಿತ್ಸಾ ವೈದ್ಯರಾದ ಡಾ| ಶತಾನಂದ ಪ್ರಸಾದ್ ರಾವ್ ಮತ್ತು ಅರೆವಳಿಕೆ ತಜ್ಞರಾದ ಡಾ| ಚೈತ್ರಾ ಆರ್. ಇವರ ತಂಡ ಯಶಸ್ವಿಯಾಗಿ ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸರ್ಜರಿ ಬಳಿಕ ರೋಗಿಯಲ್ಲಿ ಕುತ್ತಿಗೆ ನೋವು ನಿವಾರಣೆಯಾಗಿದೆ ಮತ್ತು ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಸರ್ಜರಿ ನಡೆಸಿದ ಮೂಳೆ ಶಸ್ತ್ರಚಿಕಿತ್ಸಾ ಡಾ| ಶತಾನಂದ ಪ್ರಸಾದ್ ರಾವ್ ತಿಳಿಸಿದ್ದಾರೆ. ಏನಿದು ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ? ಎಂಡೋಸ್ಕೋಪಿಕ್ ಸರ್ವಿಕಲ್ ಸ್ಪೈನಲ್ ಸರ್ಜರಿ ಎನ್ನುವುದು ಕುತ್ತಿಗೆಯ ಮೇಲೆ ಪರಿಣಾಮ ಬೀರುವ ವಿವಿಧ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸಾ ವಿಧಾನವಾಗಿದೆ. ಈ ಶಸ್ತ್ರಚಿಕಿತ್ಸಾ ವಿಧಾನದಲ್ಲಿ ಅತೀ ಸಣ್ಣ ಛೇದನದೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುವುದರಿಂದ ಅತೀ ಕಡಿಮೆ ಅಂಗಾಂಶಗಳ ಹಾನಿ, ಶೀಘ್ರ ಚೇತರಿಕೆ, ಕಡಿಮೆ ನೋವು, ಅತೀ ಕಡಿಮೆ ರಕ್ತದ ನಷ್ಟ ಮತ್ತು ಸೋಂಕಿನ ಅಪಾಯವೂ ಕೂಡ ಕಡಿಮೆಯಾಗಿರುತ್ತದೆ. ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುವುದರೊಂದಿಗೆ ಸಂಕೀರ್ಣವಾದ ಶಸ್ತ್ರಚಿಕಿತ್ಸೆಗಳನ್ನು ಕೂಡ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇಲ್ಲಿ ನಡೆಯುತ್ತಿರುವ ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img