ಕಂದಾಯ ಇಲಾಖೆಯಿಂದ ಅರ್ಜಿ ಆಹ್ವಾನ


Logo

Published Date: 10-Mar-2024

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಆಸಕ್ತರು ಮಾರ್ಚ್ 4 ರಿಂದ http://kea.kar.nic.in ನ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಅಭ್ಯಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ನೇರ ನೇಮಕ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಕೆಗೆ ಏ.3 ಕೊನೆಯ ದಿನವಾಗಿದ್ದು, ಏ.6ರವರೆಗೆ ಶುಲ್ಕ ಪಾವತಿಗೆ ಅವಕಾಶವಿದೆ. ಅಭ್ಯರ್ಥಿಗಳು ಒಂದು ಜಿಲ್ಲೆಗೆ ಆಯ್ಕೆ ಬಯಸಿ, ಅಗತ್ಯ ದಾಖಲೆ ಜತೆಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು 080-23460460ಗೆ ಸಂಪರ್ಕಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img