ಧರ್ಮಸ್ಥಳ: ನಿವೃತ್ತ ಮುಖ್ಯೋಪಾಧ್ಯಾಯರಿಗೆ ಬೀಳ್ಕೊಡುಗೆ


Logo

Published Date: 13-Jul-2024

ನಿವೃತ್ತ ಮುಖ್ಯೋಪಾಧ್ಯಾಯರಾದ ಪದ್ಮರಾಜು. ಎನ್. ಅವರನ್ನು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಶುಕ್ರವಾರ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ವಿವಿಧ ಸಂಘಗಳನ್ನು ಉದ್ಘಾಟಿಸಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಶುಭ ಹಾರೈಸಿ, ವಿದ್ಯಾರ್ಥಿಗಳು ಶಾಲೆಯಲ್ಲಿ ತಮಗೆ ಸಿಗುವ ಅವಕಾಶಗಳ ಸದುಪಯೋಗ ಪಡೆದು ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಪ್ರತಿಯೊಬ್ಬರಲ್ಲಿಯೂ ಸುಪ್ತ ಪ್ರತಿಭೆ ಇದ್ದು ಪ್ರತಿಭಾ ಪ್ರದರ್ಶನಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿವೆ ಎಂದರು. ಶಾಲೆಯ ಸಂಚಾಲಕ ಡಿ. ಅನಂತಪದ್ಮನಾಭ ಭಟ್ ವಿವಿಧ ಸಂಘಗಳ ನಾಮಫಲಕಗಳನ್ನು ಅನಾವರಣಗೊಳಿಸಿದರು. ನಿಡ್ಲೆ ಸಮೂಹ ಸಂಪನ್ಮೂಲ ಕೇಂದ್ರದ ಅಧಿಕಾರಿ ಪ್ರತಿಮಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯಕುಮಾರ್, ಶಿಕ್ಷಕ ಜಯರಾಮ ಮಯ್ಯ ಮತ್ತು ವಿದ್ಯಾರ್ಥಿಗಳ ಪರವಾಗಿ ನಿಧೀಶ್ ನಿವೃತ್ತ ಮುಖ್ಯೋಪಾಧ್ಯಾಯರಿಗೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಜೈನ್ ಅಧ್ಯಕ್ಷತೆ ವಹಿಸಿದರು. ಕನ್ನಡ ಶಿಕ್ಷಕ ಯುವರಾಜ ಸ್ವಾಗತಿಸಿದರು. ವಿನನ್ಯ ಮತ್ತು ಸ್ನೇಹ ಕಾರ್ಯಕ್ರಮ ನಿರ್ವಹಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img