ಎಂ. ಬಾಹುಬಲಿ ಪ್ರಸಾದ್ ಅವರು ಅಧ್ಯಕ್ಷರಾಗಿ ಆಯ್ಕೆ
Published Date: 17-Jan-2024
ಮೂಡುಬಿದಿರೆ ಕೋ-ಓಪರೇಟಿವ್ ಸರ್ವಿಸ್ ಸೊಸೈಟಿ ಲಿ., ಇದರ ಅಧ್ಯಕ್ಷರಾಗಿ “ಸಹಕಾರ ರತ್ನ” ಎಂ. ಬಾಹುಬಲಿ ಪ್ರಸಾದ್ ನ್ಯಾಯವಾದಿ ಇವರು ಎರಡನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಕೆ. ಅಭಯಚಂದ್ರ ಜೈನ್, ಅಶೋಕ ಕಾಮತ್ ಎಂ.ಪಿ., ಎಂ. ಜ್ಞಾನೇಶ್ವರ ಕಾಳಿಂಗ ಪೈ, ಜಯರಾಮ ಕೋಟ್ಯಾನ್, ಮನೋಜ್ ಕುಮಾರ್ ಶೆಟ್ಟಿ, ಸಿ. ಎಚ್. ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಈಗಾಗಲೇ ಎಂ. ಗಣೇಶ್ ನಾಯಕ್, ಜಾರ್ಜ್ ಮೋನಿಸ್, ಎಂ. ಪದ್ಮನಾಭ ಹಾಗೂ ದಯಾನಂದ ನಾಯ್ಕರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.