Article Image

ಸತ್ತೂರು, ಧಾರವಾಡ: ನಾಯಕತ್ವ ತರಬೇತಿ ಶಿಬಿರ

Article Image

ಸತ್ತೂರು, ಧಾರವಾಡ: ನಾಯಕತ್ವ ತರಬೇತಿ ಶಿಬಿರ

ಎಸ್.ಡಿ.ಎಂ. ವಿಶ್ವವಿದ್ಯಾಲಯವು ತನ್ನ ಅಂಗ ಸಂಸ್ಥೆಗಳ ಆಯ್ದ ವಿದ್ಯಾರ್ಥಿಗಳಿಗಾಗಿ ಸೆಪ್ಟೆಂಬರ್ 1 ಮತ್ತು 2, 2025ರಂದು ಎರಡು ದಿನಗಳ ನಾಯಕತ್ವ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಮುಂಬೈನ, ಎಂ. ಆರ್. ಪೈ ಫೌಂಡೇಶನ್‌ನ ಸಹಯೋಗದೊಂದಿಗೆ ಈ ನಾಯಕತ್ವ ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ. ಇಬ್ಬರು ತಜ್ಞ ನಾಯಕತ್ವ ತರಬೇತುದಾರರಾದ ಸಚಿನ್ ಕಾಮತ್ ಮತ್ತು ಸುಧೀರ್ ಪೈ ಅವರು ನಮ್ಮ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮುಂಬೈನ ಎಂ. ಆರ್. ಪೈ ಫೌಂಡೇಶನ್‌ನಿಂದ ಬಂದಿದ್ದರು. ಸುಮಾರು 100ಕ್ಕೂ ಹೆಚ್ಚು ವಿದ್ಯಾ ಗೀತಾ ಪೈ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ವಾತಿ ಕಪಾಡಿಯಾ ಅವರು ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದರು. ಗುರಿ ನಿಗದಿ ಮತ್ತು ಸಾಧನೆ-ಯಶಸ್ಸಿಗೆ ಮಾರ್ಗಸೂಚಿ, ಸಂವಹನ ಕೌಶಲ್ಯಗಳನ್ನು ತೀಕ್ಷ್ಣಗೊಳಿಸುವುದು, ಅಭ್ಯಾಸಗಳನ್ನು ಕರಗತ ಮಾಡಿಕೊಳ್ಳುವುದು-ವೈಯಕ್ತಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವುದು, ಸರಿಯಾದ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಸಮಸ್ಯೆ ಪರಿಹರಿಸುವುದು, ಅಗತ್ಯ ತಂಡದ ಕೆಲಸ ಕೌಶಲ್ಯಗಳನ್ನು ಹೆಚ್ಚಿಸುವುದು, ತನ್ನಲ್ಲಿ ನಂಬಿಕೆ ಇಡುವುದು, ಅರ್ಥಪೂರ್ಣ ಸಂಪರ್ಕಗಳನ್ನು ನಿರ್ಮಿಸುವುದು ಎಂಬ ವಿಷಯಗಳು ಮೇಲೆ ಎರಡು ದಿನಗಳ ತರಬೇತಿಯನ್ನು ನೀಡಲಾಯಿತು. ಗೀತಾ ಪೈ ಅವರು ವಿದ್ಯಾಥಿಗಳನ್ನುದ್ದೇಶಿಸಿ ಮಾತನಾಡುತ್ತಾ: ವಿದ್ಯಾರ್ಥಿಗಳು ವೃತ್ತಿಪರ ನೀತಿ ಶಾಸ್ತ್ರವನ್ನು ನಿಕಟವಾಗಿ ಗಮನಿಸುತ್ತಾ ತಮ್ಮ ಜೀವನದಲ್ಲಿ ಅನುಸರಿಸಬೇಕು. ಆರೋಗ್ಯ ವೃತ್ತಿಪರರು ಅತೀ ಕಾಳಜಿಯಿಂದ ಉತ್ತಮ ಚಿಕಿತ್ಸೆ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಲಭ್ಯವಿರುವ ಅವಕಾಶಗಳನ್ನು ಸರಿಯಾಗಿ ಬಳಸಿ, ಉತ್ತಮ ನಾಯಕರಾಗಬೇಕು. ಎಸ್.ಡಿ.ಎಂ. ದಂತ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಲರಾಮ್ ನಾಯಕ್ ಅವರು ಮಾತನಾಡುತ್ತಾ, ನಾವು ಉತ್ತಮ ಅಭ್ಯಾಸಗಳನ್ನು ಅನುಸರಿಸಿ ದೀರ್ಘಕಾಲದವರೆಗೆ ಉಳಿಸಿಕೊಳ್ಳಬೇಕು. ಆರೋಗ್ಯ ಸೇವಾ ಸಿಬ್ಬಂದಿಗಳು ಸರಿಯಾದ ಸಂವಹನ ಮತ್ತು ಕೌಶಲ್ಯಗಳು ಅವಶ್ಯಕವಾಗಿದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯವು ನಾಯಕತ್ವ ಗುಣಗಳನ್ನು ಅಭಿವೃದ್ಧಿಪಡಿಸಲು ಅನೇಕ ಅವಕಾಶಗಳನ್ನು ಒದಗಿಸುತ್ತದೆ. ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೀತಾ ಪೈ ಮತ್ತು ಸ್ವಾತಿ ಕಪಾಡಿಯಾ ಅವರನ್ನು ಸನ್ಮಾನಿಸಿದರು. ಸಹ ಉಪ ಕುಲಪತಿಗಳಾದ ಜೀವಂಧರ್ ಕುಮಾರ್, ಗೀತಾ ಎಂ.ಆರ್. ಪೈ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ಸಂಶೋಧನಾ ನಿರ್ದೇಶಕರಾದ ಡಾ. ಕೆ. ಸತ್ಯಮೂರ್ತಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಬಾಬಣ್ಣ ಶೆಟ್ಟಿಗಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು.

ಕಲಿಕೆ ಎನ್ನುವುದು ಮುಗಿಯದ ಅಧ್ಯಾಯ: ದಿನೇಶ್ ಶೆಟ್ಟಿ ಕಾವಳಕಟ್ಟೆ

Article Image

ಕಲಿಕೆ ಎನ್ನುವುದು ಮುಗಿಯದ ಅಧ್ಯಾಯ: ದಿನೇಶ್ ಶೆಟ್ಟಿ ಕಾವಳಕಟ್ಟೆ

ಪುರಾಣದಿಂದಲೂ ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆಯಾಗಿದೆ ಮತ್ತು ವ್ಯಕ್ತಿತ್ವ ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ.ಹಾಗಾಗಿ ಕಲಿಕೆ ಎನ್ನುವುದು ತಕ್ಷಣಕ್ಕೆ ಮುಗಿಯುವುದಲ್ಲ ಅದೊಂದು ಮುಗಿಯದ ಅಧ್ಯಾಯ ಎಂದು ಖ್ಯಾತ ಯಕ್ಷಗಾನ ಕಲಾವಿದ, ವಾಗ್ಮಿ ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಆ.22ರಂದು ಆಯೋಜಿಸಲಾಗಿದ್ದ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ ಕಾರ್ಯಕ್ರಮ ಮತ್ತು "ವಿಶ್ವಮಾನವ ಶ್ರೀ ರಾಮಚಂದ್ರ" ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಚರಿತ್ರೆಯ ಪುಟದಲ್ಲಿ ಒಂದು ಮಗುವಿನಿಂದ ಹಿಡಿದು ವೃದ್ಧರವರೆಗೂ ಪ್ರತಿಯೊಬ್ಬರ ಬಾಯಲ್ಲೂ ಹರಿದಾಡುವ ಏಕೈಕ ಹೆಸರು ರಾಮ. ರಾಮ ಕೇವಲ ಪುರಾಣ ಮಹಾಕಾವ್ಯದ ವ್ಯಕ್ತಿಯಾಗಿ ಬರಲಿಲ್ಲ ಶಕ್ತಿಯಾಗಿ ಬಂದಿದ್ದಾನೆ ಇದ್ದಕ್ಕೆ ಕಾರಣ ಅವನ ಕಲಿಕೆ. ಕಲಿಕೆ ಎನ್ನುವುದು ಜೀವನದ ಅಂತ್ಯದವರೆಗೂ ಮುಗಿಯದ ಅಧ್ಯಾಯ. ಇದ್ದಕ್ಕೆ ನಮ್ಮ ಮುಂದಿರುವ ನಿದರ್ಶನ ಶ್ರೀರಾಮ ಎಂದರು. ವಿಶ್ವಮಾನವ ಗುಣಗಳುಳ್ಳ ಶ್ರೀರಾಮನ ಆದರ್ಶಗಳನ್ನು ವಿದ್ಯಾರ್ಥಿಗಳು ವರ್ತಮಾನದಲ್ಲಿ ರೂಢಿಸಿಕೊಳ್ಳುವ ಅವಶ್ಯಕತೆ ಇದೆ.ಸಧ್ಯ ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ಹೆಸರು ಮಾಡುವ ಹುನ್ನಾರಗಳು ನಡೆಯುತ್ತಿರುವುದು ಶೋಚನೀಯ. ಪ್ರತಿಯೊಂದು ದೇವಾಲಯವು ಕೂಡ ನಮ್ಮ ಸಮೃದ್ಧ ಹಿಂದು ಸಂಸ್ಕೃತಿಯ ಆಸ್ತಿಗಳು ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನತೆಯ ಮೇಲೆ ಇದೆ ಎಂದರು. ಧರ್ಮಸ್ಥಳ ಕ್ಷೇತ್ರದ ರೀತಿ ಪ್ರತಿಯೊಂದು ದೇವಾಲಯಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಭಾರತ ರಾಮ ರಾಜ್ಯ ಆಗುವುದರಲ್ಲಿ ಅನುಮಾನವಿಲ್ಲ. ಹಿಂದೂ ದೇವಾಲಯಗಳು ಮೇಲೆ ಆಗುತ್ತಿರುವ ಧೋರಣೆಗಳನ್ನು ತಡೆಗಟ್ಟುವಲ್ಲಿ ಯುವಜನತೆ ಶ್ರಮಿಸಬೇಕು. ಎಂದವರು ಕಿವಿಮಾತು ಹೇಳಿದರು. ಕಲಾಕೇಂದ್ರದ ಮಾತೃ ಸ್ವರೂಪಿ, ಸೋನಿಯಾ ಯಶೋವರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. "ಬೆಳಗಿದ ದೀಪ ನಿಮ್ಮ ಬಾಳಿಗೆ ಹಾಗೂ ಕಲಾ ಕೇಂದ್ರಕ್ಕೆ ಬೆಳಕಾಗಲಿ ಎಂದು ಹಾರೈಸಿ,ಕಲೆಯನ್ನು ಮೈಗೂಡಿಸಿಕೊಂಡರೆ ಕಾಲೇಜಿನಲ್ಲಿ ಓದಿದ ವಿಷಯಗಳು ಬೇಗ ಅರ್ಥ ಆಗುವುದರ ಜೊತೆಗೆ ಏಕಾಗ್ರತೆ ಹೆಚ್ಚಾಗುತ್ತದೆ. ನಿಮ್ಮ ಜೀವನದ ಹಾದಿಯಲ್ಲಿ ನಿಮ್ಮ ಬುದ್ದಿ ಯನ್ನು ಬೇರೆಯವರು ನಡೆಸಲು ಬಿಡಬೇಡಿ, ಸರಿ ತಪ್ಪುಗಳನ್ನು ಅರಿತು ವಿಶ್ಲೇಷಿಸಿ ಮುಂದುವರೆದರೆ ಯಶಸ್ಸು ನಿಮ್ಮದಾಗುತ್ತದೆ ಎಂದವರು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ನೂತನ ರಂಗಸ್ಥಳವನ್ನು ಉದ್ಘಾಟಿಸಿ ಮಾತನಾಡಿದರು. "ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಮೌಲ್ಯಯುತ ಶಿಕ್ಷಣ ಒದಗಿಸುವುದು, ನಮ್ಮ ಕಾಲೇಜಿನ ಅಧ್ಯಕ್ಷರ ಮೂಲ ಆಶಯವಾಗಿದೆ. ಇಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ನಮ್ಮ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ಬೇರೆ ಬೇರೆ ಚಟುವಟಿಕೆಗಳಿವೆ. ಅದರಲ್ಲಿ ಒದಗಿ ಬರುವ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು" ಎಂದರು. ಎಲ್ಲಾ ಸವಲತ್ತು ಹಾಗೂ ಅವಕಾಶಗಳನ್ನು ಉಪಯೋಸಿಕೊಂಡರೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ.ನಮ್ಮ ಆಸಕ್ತಿ ವಿಚಾರಗಳನ್ನು ನಾವು ಗುರುತಿಸಿಕೊಂಡು, ಶಿಕ್ಷಣದ ಜೊತೆಗೆ ನಮ್ಮ ಆಸಕ್ತಿ ವಿಷಯದಲ್ಲಿ ಮುಂದುವರೆದು ಪರಿಶ್ರಮ ಶ್ರದ್ಧೆಯ ಜೊತೆಗೆ ಆತ್ಮವಿಶ್ವಾಸವನ್ನು ಬೆಳಿಸಿಕೊಳ್ಳಬೇಕು. ಎಂದು ಸಲಹೆ ನೀಡಿದರು. ಪೂಜ್ಯ ಖಾವಂದರ ಕುರಿತ ಸಾಧನೆ ಹಾಗೂ ಅವರ ಚಿಂತನೆಗಳನ್ನು ಒಳಗೊಂಡಂತಹ ಕಾರ್ಯಕ್ರಮವನ್ನು "ಯಕ್ಷ ದರ್ಶನ" ಎಂಬ ಶೀರ್ಷಿಕೆ ಅಡಿಯಲ್ಲಿ ಹಾಗೂ ಯಕ್ಷಗಾನದ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಲಾಯಿತು. ಕಾಲೇಜಿನ ವತಿಯಿಂದ ಯಕ್ಷಗಾನ ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವಾಸವನ್ನು ವೆಂಕಪ್ಪಯ್ಯ ಸಾಂಸ್ಕೃತಿಕ ಯಕ್ಷಗಾನ ಅಧ್ಯಯನ ಭವನ ಸಿರಿಬಾಗಿಲು ಇಲ್ಲಿಗೆ ಭೇಟಿ ನೀಡಿದ ಅನುಭವಗಳನ್ನು ವಿದ್ಯಾರ್ಥಿಗಳು ಅಮೋಘ ಶಂಕರ್ ಹಾಗೂ ಅನನ್ಯ ಹಂಚಿಕೊಂಡರು. ವಿದ್ಯಾರ್ಥಿಗಳಿಬ್ಬರು "ಬಾಲ ಗೋಪಾಲ" ಪ್ರಸ್ತುತಿಯನ್ನು ಆಡಿ ತೋರಿಸಿದರು. ಪ್ರಸ್ತುತ ತಿಂಗಳು ಅತೀ ಹೆಚ್ಚು ಯಕ್ಷಗಾನ ತರಗತಿಗೆ ಹಾಜರಾದ ವಿದ್ಯಾರ್ಥಿಗಳಾದ ಸ್ಮೃತಿ ಹಾಗೂ ಅನನ್ಯರನ್ನು ಗುರುತಿಸಲಾಯಿತು. ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಡಾ. ನಾಗಣ್ಣ, ಯಕ್ಷಗಾನ ತರಬೇತುದಾರ ಅರುಣ್ ಕುಮಾರ್ ಧರ್ಮಸ್ಥಳ, ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ, ಕಾಲೇಜಿನ ಸಂಸ್ಕೃತ ವಿಭಾಗದ ಪ್ರಾಧ್ಯಾಪಕ ಶ್ರೇಯಸ್ ಪಾಳ್ಯಂದೆ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಸಚಿನ್ ಉಪಸ್ಥಿತರಿದ್ದರು. ಯಕ್ಷಗಾನದ ವಿದ್ಯಾರ್ಥಿಗಳು ಹಾಗೂ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಯಕ್ಷಗಾನ ವಿದ್ಯಾರ್ಥಿಗಳು ಪ್ರಾರ್ಥಿಸಿ, ತೇಜಸ್ ಸ್ವಾಗತಿಸಿ, ಸಹನಾ ವಂದಿಸಿದರು.ಕಾರ್ಯಕ್ರಮವನ್ನು ಪವಿತ್ರ ನಿರೂಪಿಸಿದರು.

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

Article Image

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2025

ಮೂಡುಬಿದಿರೆ: ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವುದರಲ್ಲಿ ಮಹತ್ವದ ಕೊಡುಗೆಯನ್ನು ನೀಡಿರುತ್ತಾರೆ. ಫಲಿತಾಂಶ: 14 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಪ್ರಣವ್ ಎಸ್ - ಟ್ರಯಥ್ಲಾನ್-ಎ (ಪ್ರಥಮ), ಸುಭಾಷ್ - ಟ್ರಯಥ್ಲಾನ್-ಸಿ (ದ್ವಿತೀಯ), ಆದರ್ಶ್ - ಟ್ರಯಥ್ಲಾನ್- (ಪ್ರಥಮ), ಮೇಘಾ - ಟ್ರಯಥ್ಲಾನ್- ಸಿ (ಪ್ರಥಮ), ಸುಜಾತ - ಟ್ರಯಥ್ಲಾನ್-ಸಿ (ದ್ವಿತೀಯ) 16 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕೃಷ್ಣ - ಜಾವೆಲಿನ್ ಎಸೆತ (ಪ್ರಥಮ), ಮೈಲಾರಿ - ಜಾವೆಲಿನ್ ಎಸೆತ (ದ್ವಿತೀಯ), ನವೀನ್ - ಉದ್ದ ಜಿಗಿತ (ಪ್ರಥಮ), ಲೋಹಿತ್ ಗೌಡ- ಉದ್ದ ಜಿಗಿತ (ದ್ವಿತೀಯ), ನ್ಯಾನ್‌ದೇವ್ - 80ಮೀ ಹರ್ಡಲ್ಸ್ (ಪ್ರಥಮ), ಪ್ರೇಕ್ಷಿತಾ - ಜಾವೆಲಿನ್ ಎಸೆತ (ಪ್ರಥಮ) 18 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕವೀಶ್ - ಜಾವೆಲಿನ್ ಎಸೆತ (ದ್ವಿತೀಯ), ಆಕಾಶ್ - 110ಮೀ ಹರ್ಡಲ್ಸ್ (ತೃತೀಯ), ಉಲ್ಲಾಸ್ - 5ಕಿಮೀ ನಡಿಗೆ (ತೃತೀಯ), ಗುರು - ಹೆಪ್ಟತ್ಲಾನ್ (ಪ್ರಥಮ), ಉದ್ದ ಜಿಗಿತ (ದ್ವಿತೀಯ), ಮನೀಶ್ - ಉದ್ದ ಜಿಗಿತ (ತೃತೀಯ), ಭಾಗೀರಥಿ - 3ಕಿಮೀ ನಡಿಗೆ (ತೃತೀಯ), ನಾಗಿಣಿ - 1000ಮೀ (ಪ್ರಥಮ), ಚರೀಷ್ಮಾ - 1000ಮೀ (ದ್ವಿತೀಯ), ವೈಷ್ಣವಿ - ಉದ್ದ ಜಿಗಿತ (ಪ್ರಥಮ), 20 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ದಯಾನಂದ - 400ಮೀ (ದ್ವಿತೀಯ), ನೊಯಲ್ - ಉದ್ದ ಜಿಗಿತ (ಪ್ರಥಮ), ತಬಶೀರ್ - ತ್ರಿವಿಧ ಜಿಗಿತ (ಪ್ರಥಮ), ಉದ್ದ ಜಿಗಿತ (ತೃತೀಯ), ದರ್ಶನ್ - 10ಕಿಮೀ ನಡಿಗೆ (ಪ್ರಥಮ), ಸರ್ವಜಿತ್ - 100ಮೀ (ತೃತೀಯ), ಅಬ್ದುಲ್ ರಜಕ್ - ಹ್ಯಾಮರ್ ತ್ರೋ (ದ್ವಿತೀಯ), ಯಶವಂತ 800ಮೀ(ದ್ವಿತೀಯ), ರಾಮು-400ಮೀ (ತೃತೀಯ), ನಂದ - ಜಾವೆಲಿನ್ ಎಸೆತ (ದ್ವಿತೀಯ), ಶಬರಿ - 100ಮೀ ಹರ್ಡಲ್ಸ್ (ತೃತೀಯ), ಗೀತಾ - 400ಮೀ (ದ್ವಿತೀಯ), ಐಶ್ವರ್ಯ - ಚಕ್ರ ಎಸೆತ (ದ್ವಿತೀಯ), ಗುಂಡು ಎಸೆತ (ದ್ವಿತೀಯ) 23 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸನತ್- ಡೆಕತ್ಲಾನ್ (ಪ್ರಥಮ), ಗಣೇಶ್ - ಗುಂಡು ಎಸೆತ (ಪ್ರಥಮ), ನಾಗೇಂದ್ರ - ಚಕ್ರ ಎಸೆತ (ಪ್ರಥಮ), ರೇಖಾ - 800ಮೀ (ಪ್ರಥಮ), 400ಮೀ (ದ್ವಿತೀಯ), ಪ್ರಣಮ್ಯ - 10000ಮೀ (ಪ್ರಥಮ) 5000ಮೀ (ಪ್ರಥಮ) ಸ್ಥಾನ ಪಡೆದಿರುತ್ತಾರೆ. ನೂತನ ಕೂಟ ದಾಖಲೆ : 18 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ನಾಗಿಣಿ 1000 ಮೀ, ಹಾಗೂ 16 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನ್ಯಾನ್‌ದೇವ್ 80ಮೀ ಹರ್ಡಲ್ಸ್ ಹಾಗೂ 23 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಚಕ್ರ ಎಸೆತದಲ್ಲಿ ನೂತನ ಕೂಟ ದಾಖಲೆಯನ್ನು ಮಾಡಿರುತ್ತಾರೆ. ವೈಯಕ್ತಿಕ ಪ್ರಶಸ್ತಿ : 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಆದರ್ಶ್ ಕ್ರೀಡಾಕೂಟದಲ್ಲಿ ಕೊಡ ಮಾಡುವ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾನೆ. ವಿಜೇತ ಕ್ರೀಡಾಪಟಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನಲ್ಲಿ ಮಹೋತ್ಸವ ಸಮ್ಮೇಳನ

Article Image

ಸತ್ತೂರು, ಧಾರವಾಡ: ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನಲ್ಲಿ ಮಹೋತ್ಸವ ಸಮ್ಮೇಳನ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗವು ಆಗಸ್ಟ್ 22 ರಿಂದ 24, 2025 ರವರೆಗೆ ಡಿ. ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಕರ್ನಾಟಕ ಅಂಗರಚನಾಶಾಸ್ತ್ರಜ್ಞರ ಘಟಕದ ಬೆಳ್ಳಿ ಮಹೋತ್ಸವ ಸಮ್ಮೇಳನವನ್ನು “ಅನುವಾದ ಅಂಗರಚನಾಶಾಸ್ತ್ರ: ಸಂಪ್ರದಾಯ ಮತ್ತು ತಂತ್ರಜ್ಞಾನದ ಸಿನ್ಸಿಟಿಯಮ್” ಎಂಬ ಧ್ಯೇಯೆಯೊಂದಿಗೆ ಆಯೋಜಿಸಲಾಗಿತ್ತು. ಕರ್ನಾಟಕದಾದ್ಯಂತ 300ಕ್ಕೂ ಹೆಚ್ಚು ಅಂಗರಚನಾಶಾಸ್ತ್ರಜ್ಞರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ಸುಮಾರು 200ಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಸಮ್ಮೇಳನದಲ್ಲಿ ಮಂಡಿಸಲಾಯಿತು. ಕರ್ನಾಟಕ ಅಂಗರಚನಾಶಾಸ್ತ್ರಜ್ಞರ ಘಟಕದ (ಏಅಂ) ಸ್ಥಾಪಕ ಅಧ್ಯಕ್ಷರಾದ ಡಾ. ಎಸ್ ಕಾಂತ ಮತ್ತು ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮುಖ್ಯ ಅತಿಥಿಗಳಾಗಿ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ಅಂಗರಚನಾಶಾಸ್ತ್ರಜ್ಞರ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಖಜಾಂಚಿಗಳಾದ ಡಾ. ಅಶ್ವಿನಿ ಸಿಎ, ಉಪಾಧ್ಯಕ್ಷರುಗಳಾದ ಡಾ. ಎನ್ ಎಂ ಸುರೇಶ್ ಮತ್ತು ಡಾ. ವಿದ್ಯಾ ಸಿಎಸ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ಪಿ. ಎಸ್. ಭೂಸರಡ್ಡಿ ಅವರು ಗೌರವ ಅತಿಥಿಗಳಾಗಿದ್ದರು. ಗಣ್ಯರು ದೀಪ ಬೆಳಗಿಸುವ ಮೂಲಕ ಸಮ್ಮೇಳನವನ್ನು ಉದ್ಘಾಟಿಸಿದರು. ಡಾ. ಕಾಂತ ಅವರು ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್, ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಅನ್ಯಾಟಮಿಸ್ಟ್ಸ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿಗಳಾದ ಡಾ. ಜಥಾನಿ, ಖ್ಯಾತ ಸ್ವರೂಪ ಶಸ್ತ್ರಚಿಕಿತ್ಸಕರಾದ ಡಾ. ಎಸ್. ಎ. ಸುಬ್ರಮಣಿ ಮತ್ತು ಇತರರ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಕಾಂತ ಎಸ್. ಮತ್ತು ಡಾ. ನಿರಂಜನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಂಘಟನಾ ಕಾರ್ಯದರ್ಶಿಗಳಾದ ಡಾ. ವೀಣಾ ಕುಲಕರ್ಣಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಡಾ. ರೋಶನಿ ಸದಾಶಿವ ಮತ್ತು ಡಾ. ವಿನಯ್ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ಜಂಟಿ ಸಂಘಟನಾ ಕಾರ್ಯದರ್ಶಿಗಳಾದ ಡಾ. ಸುರೇಶ್ ಮನಗುತ್ತಿ ವಂದನಾರ್ಪಣೆ ಸಲ್ಲಿಸಿದರು.

ಮೂಡುಬಿದಿರೆ ಎಕ್ಸಲೆಂಟ್ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮ

Article Image

ಮೂಡುಬಿದಿರೆ ಎಕ್ಸಲೆಂಟ್ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮ

ಎಕ್ಸಲೆಂಟ್ ಮೂಡುಬಿದಿರೆಯ ರಾಷ್ಟ್ರೀಯ ಸೇವಾ ಯೋಜನೆ, ಕಾಲೇಜಿನ ಮಾದ್ಕ ವ್ಯಸನ ವಿರೋಧಿ ಸಮಿತಿ ಹಾಗೂ ಮೂಡುಬಿದಿರೆ ಆರಕ್ಷಕ ಠಾಣೆಯ ಸಹಯೋಗದೊಂದಿಗೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮ ಹಾಗೂ ಕಾನೂನು ಅರಿವು ನೀಡುವ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮ ಎಕ್ಸಲೆಂಟ್‌ಮೂಡುಬಿದಿರೆಯ ರಾಜಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಾನೂನಿನ ಅರಿವು ನೀಡಿದ ಮೂಡುಬಿದಿರೆ ಆರಕ್ಷಕ ಠಾಣೆಯ ಪಿಎಸ್‌ಐ ಪ್ರತಿಭಾ ಅವರು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಭಾರತದಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಜಾರಿಗೆ ತರಲಾದ ಒಂದು ಕಾಯ್ದೆ. ಈ ಕಾಯ್ದೆಯು ಮಾದಕ ವಸ್ತುಗಳ ಉತ್ಪಾದನೆ, ತಯಾರಿಕೆ, ಸಂಗ್ರಹಣೆ, ಸಾಗಣೆ, ಮಾರಾಟ, ಖರೀದಿ ಮತ್ತು ಬಳಕೆಯನ್ನು ನಿಷೇಧಿಸುತ್ತದೆ. ಮದ್ಯ, ಶುಗರ್, ವೈದ್ಯರ ಅನುಮತಿ ಇಲ್ಲದ ರಾಸಾಯನಿಕ ಔಷಧಗಳು ಇತ್ಯಾದಿ ಸೇವನೆಯು ದೇಶದಾದ್ಯಂತ ಯುವಜನರಲ್ಲಿ ಬೆಳೆಯುವ ಭೀತಿಯಾಗಿದೆ. ಇದರಿಂದ ಯುವಶಕ್ತಿ ತನ್ನ ಬಲವನ್ನು ಕಳಕೊಂಡಿದೆ. ಹದಿಹರೆಯದವರು ಮಾತ್ರವಲ್ಲ ಕೆಲವು ಸಂದರ್ಭಗಳಲ್ಲಿ ಹದಿಹರೆಯದ ಪೂರ್ವದ ಮಕ್ಕಳು ಇದಕ್ಕೆ ಬಲಿಯಾಗುತ್ತಾರೆ. ದೇಶದಲ್ಲಿ ಬಹಳಷ್ಟು ಜನರು ಸಹವಾಸ ದೋಷದಿಂದ, ಅನ್ಯ ಕಾರಣಗಳಿಂದ ಮಾದಕ ದ್ರವ್ಯ ಉಪಯೋಗಿಸುತ್ತಾರೆ. ಇದು ದೇಹದ ಹಾಗೂ ಮನಸ್ಸಿನ ಮೇಲೆ ಪರಿಣಾಮ ಬೀರಿ ಆರೋಗ್ಯವನ್ನು ಹಾಳು ಮಾಡುತ್ತದೆ. ಒಮ್ಮೆ ಅಪರಾಧ ಲೋಕದಲ್ಲಿ ಗುರುತಿಸಿ ಆದರೆ ನಿಮ್ಮ ಬಂಗಾರದತಹ ಭವಿಷ್ಯ, ಮನೆಯವರ ಸಾಮಾಜಿಕ ಸ್ಥಾನಮಾನ ಹಾಳಾಗುತ್ತದೆ ಎಂದರು. ಬಳಿಕ ಸೈಬರ್ ಅಪರಾಧಗಳ ಬಗ್ಗೆ, ಸಾಮಾಜಿಕ ಮಾಧ್ಯಮಗಳಿಂದ ಆಗುವ ತೊಂದರೆಗಳು, ವಿದ್ಯಾರ್ಥಿಗಳು ವಹಿಸಬೇಕಾದ ಎಚ್ಚರಿಕೆಗಳ ಕುರಿತು ವಿವರಣಾತ್ಮಕ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವ ಮಾದಕ ದ್ರವ್ಯದ ಜಾಲವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪೋಲೀಸ್ ಇಲಾಖೆಯ ಪ್ರಯತ್ನ ಶ್ಲಾಘನೀಯ. ಪ್ರತಿಯೊಂದು ಮಗುವಿನ ಬೆಳವಣಿಗೆ ಆರೋಗ್ಯದಾಯಕವಾಗಿರಬೇಕು. ಎತ್ತರಕ್ಕೆ ಏರಬೇಕು ಎಂಬುವುದು ಪ್ರತೀ ಹೆತ್ತವರ ಕನಸು. ಆ ಕನಸನ್ನು ಇಂತಹ ಮಾದಕ ದ್ರವ್ಯಗಳು ಪುಡಿಮಾಡಕೂಡದು. ನಾವು ಒಳ್ಳೆಯ ಅಭ್ಯಾಸಗಳಿಗೆ ವ್ಯಸನಿಗಳೋಣ. ಮಾನವೀಯ ಸಂಬಂಧ, ಶ್ರೇಷ್ಠ ಅಭ್ಯಾಸಗಳು, ದೇಶದ ಕುರಿತಾಗಿ ಗೌರವ ಬೆಳೆಸಿಕೊಳ್ಳಿ. ಸತ್ಯದ ದಾರಿಯಲ್ಲಿ ಮುಂದುವರಿಯಿರಿ. ಒಳ್ಳೆಯದನ್ನು ಬೆಂಬಲಿಸುತ್ತಾ ಇಂತಹ ಒಳ್ಳೆಯ ಕಾರ್ಯಕ್ರಮ ನಡೆಸುವರೇ ಎಕ್ಸಲೆಂಟ್ ಸಂಸ್ಥೆಗೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷ ಪಡುತ್ತಾ, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆದು ಮಾದಕ ವ್ಯಸನ ಮುಕ್ತ ಶ್ರೇಷ್ಠ ಭಾರತ ನಿರ್ಮಾಣವಾಗಲಿ ಎಂದರು. ವಿದ್ಯಾರ್ಥಿ ನಿತಿನ್ ಮಾದಕ ವ್ಯಸನ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳಾದ ರಶ್ಮಿತಾ ಶೆಟ್ಟಿ ಹಾಗೂ ಸಂಜನ್ ಕೋಟೆ ಮಾದಕ ವ್ಯಸನದ ಕುರಿತು ಮಾತಾನಾಡಿದರು. ವಿದ್ಯಾರ್ಥಿಗಳಿಂದ ಮಾದಕ ವ್ಯಸನ ಮುಕ್ತ ಸಮಾಜ ಎಂಬ ಪ್ರಹಸನ ನಡೆಯಿತು. ವೇದಿಕೆಯಲ್ಲಿ ಕಾಲೇಜಿನ ಮಾದಕ ವ್ಯಸನ ವಿರೋಧಿ ಸಮಿತಿಯ ಮುಖ್ಯಸ್ಥರಾದ ಪ್ರದೀಪ್ ಕೆ ಪಿ ಉಪಸ್ಥಿತರಿದ್ದರು. ಕಾರ್ತಿಕ್ ಹೆಚ್. ನಿರೂಪಿಸಿ ಕಾರ್ತಿಕ್ ಅಗಡಿ ವಂದಿಸಿದರು.

ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ಗಮನಹರಿಸಿ: ಜಯಶ್ರೀ

Article Image

ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ಗಮನಹರಿಸಿ: ಜಯಶ್ರೀ

ಕಾಲೇಜು ಜೀವನದಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಕಡೆಗೆ ವಿದ್ಯಾರ್ಥಿಗಳು ಗಮನಹರಿಸಿ ಸೂಕ್ತ ತಯಾರಿಯಲ್ಲಿ ತೊಡಗಬೇಕು ಎಂದು ಮನಃಶಾಸ್ತ್ರಜ್ಞೆ, ಬೆಂಗಳೂರಿನ ಭಾರತೀಯ ಮನಃಶಾಸ್ತ್ರ ಮತ್ತು ಸಂಶೋಧನಾ ಸಂಸ್ಥೆಯ ನಿಕಟಪೂರ್ವ ಪ್ರಾಧ್ಯಾಪಕಿ ಜಯಶ್ರೀ ಹೇಳಿದರು. ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ವಿಭಾಗದ ವತಿಯಿಂದ ಜು.30 ರಂದು ನಡೆದ ‘ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪುಸ್ತಕದ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರಾಯೋಗಿಕ ಕಲಿಕೆ ವಿದ್ಯಾರ್ಥಿಗಳಿಂದ ಆಗಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅದನ್ನು ಕಲಿಕೆಗೆ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿನಿಯೋಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪದ್ಮಶ್ರೀ ಸ್ವಾಗತಿಸಿ, ಯಶಸ್ವಿ ವಂದಿಸಿದರು.

ರೋಟಾಲಯ ಸಂಗೀತ ಸ್ಪರ್ಧೆ

Article Image

ರೋಟಾಲಯ ಸಂಗೀತ ಸ್ಪರ್ಧೆ

ಉಜಿರೆ: ಬೆಳ್ತಂಗಡಿ ರೋಟರಿಕ್ಲಬ್ ಮತ್ತು ಲಯನ್ಸ್‌ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಭಾನುವಾರ ಬೆಳ್ತಂಗಡಿಯಲ್ಲಿ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ರೋಟಾಲಯ ಸಂಗೀತ ಸ್ಪರ್ಧೆ ನಡೆಸಲಾಯಿತು. ರೋಟರಿ ಜಿಲ್ಲಾ ಉಪರಾಜ್ಯಪಾಲ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಮತ್ತು ಲಯನ್ಸ್ ಕ್ಲಬ್‌ನ ರಾಜು ಶೆಟ್ಟಿ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಫಲಿತಾಂಶ: ದೇಶಭಕ್ತಿಗೀತೆ: ಸಮೂಹ ಗಾಯನ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಸಿ), ಉಜಿರೆ (ಪ್ರಥಮ). ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ (ದ್ವಿತೀಯ) ಭಾವಗೀತೆ: ಪ್ರಾಪ್ತಿ ಶೆಟ್ಟಿ, ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ (ಪ್ರಥಮ). ಸ್ವಸ್ತಿಶ್ರೀ ಹೆಬ್ಬಾರ್ ಎಸ್.ಡಿ.ಎಂ., ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್‌ಸಿ), ಉಜಿರೆ (ದ್ವಿತೀಯ) ದೇಶಭಕ್ತಿ ಸಮೂಹ ಗಾಯನ: ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ, ಧರ್ಮಸ್ಥಳ (ಪ್ರಥಮ). ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ (ದ್ವಿತೀಯ) ಎ. ವಿಭಾಗ: ಭಾವಗೀತೆ ಸ್ಪರ್ಧೆ: ಸನ್ನಿಧಿ, ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ ಸಿ) ಉಜಿರೆ (ಪ್ರಥಮ). ಅಂಜಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ (ದ್ವಿತೀಯ) ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ. ಪ್ರಕಾಶ್ ಪ್ರಭು, ಗೀತಾಪ್ರಭು, ಕಾರ್ಯದರ್ಶಿ ಡಾ. ಎಂ. ಎಂ. ದಯಾಕರ್, ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಲಿಯೊ ಕ್ಲಬ್ ಅಧ್ಯಕ್ಷರಾದ ಡಾ. ಭಾಷಿಣಿ, ಡಾ. ಶಶಿಕಾಂತ ಡೋಂಗ್ರೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಎಸ್.ಡಿ.ಎಂ. ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಉಜಿರೆಯ ಬಿ. ಜನಾರ್ದನ ತೋಳ್ಪಾಡಿತ್ತಾಯ, ಸುಬ್ರಹಣ್ಯ, ಪ್ರಶಾಂತ ಬಾಳಿಗ ಬೆಳ್ತಂಗಡಿ ಮತ್ತು ಅಯ್ಯಪ್ಪ ಪ್ರಭು ಸಂಗೀತ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು.

ಗೃಹವಿಜ್ಞಾನ ವಿಭಾಗದ ಚಟುವಟಿಕೆ ಉದ್ಘಾಟನಾ ಸಮಾರಂಭ

Article Image

ಗೃಹವಿಜ್ಞಾನ ವಿಭಾಗದ ಚಟುವಟಿಕೆ ಉದ್ಘಾಟನಾ ಸಮಾರಂಭ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಗೃಹವಿಜ್ಞಾನ ವಿಭಾಗದ ಪ್ರಸಕ್ತ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ‘ಗೃಹವಾಹಿನಿ’ ಜು.25ರಂದು ನಡೆಯಿತು. ವಿಭಾಗದ ನಿಕಟಪೂರ್ವ ಮುಖ್ಯಸ್ಥೆ ಪ್ರೊ. ಆಲ್ಫೋನ್ಸಮ್ಮ ಅವರು ಉದ್ಘಾಟಿಸಿ ಮಾತನಾಡಿ, ಸ್ವಾವಲಂಬಿ ಜೀವನ ಹಾಗೂ ಅದಕ್ಕೆ ಬೇಕಾದ ಎಲ್ಲಾ ಪೂರಕ ಶಿಕ್ಷಣ ಗೃಹವಿಜ್ಞಾನ ಒದಗಿಸುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುವುದು, ಅಡುಗೆ ಮಾಡುವುದು ಸಹಿತ ನಿತ್ಯ ಜೀವನಕ್ಕೆ ಬೇಕಾದ ಎಲ್ಲಾ ಕೌಶಲಗಳನ್ನು ಸೂಕ್ತ ರೀತಿಯಲ್ಲಿ ತಿಳಿದುಕೊಳ್ಳಲು ಅವಕಾಶ ದೊರೆಯುತ್ತದೆ ಎಂದರು. ವಿಭಾಗದ ಭಿತ್ತಿಪತ್ರಿಕೆ ಗೃಹವಾಣಿಯ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ವಿಭಾಗದ ಮುಖ್ಯಸ್ಥೆ ಶೋಭಾ, ಸಹಾಯಕ ಪ್ರಾಧ್ಯಾಪಕಿ ಐಶ್ವರ್ಯ, ವಿದ್ಯಾರ್ಥಿ ಪ್ರತಿನಿಧಿಗಳಾದ ಅಂಜಲಿ ಎಚ್ ಆರ್, ಐಶ್ವರ್ಯ ಹೆಚ್ ಆರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದರ್ಶಿನಿ ಮತ್ತು ತಂಡದವರು ಪ್ರಾರ್ಥಿಸಿದರು. ಅಂಜಲಿ ಸ್ವಾಗತಿಸಿ, ಸೌಜನ್ಯ ವಂದಿಸಿ, ಸನುಷ ಪಿಂಟೋ ನಿರೂಪಿಸಿದರು.

ಒಡಿಯೂರು-ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್‌ನ ಎರಡು ನಾಟಕಗಳಿಗೆ ಪ್ರಶಸ್ತಿ

Article Image

ಒಡಿಯೂರು-ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್‌ನ ಎರಡು ನಾಟಕಗಳಿಗೆ ಪ್ರಶಸ್ತಿ

ಮೂಡುಬಿದಿರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಮತ್ತು ಒಡಿಯೂರು ಗ್ರಾಮೋತ್ಸವದ ಅಂಗವಾಗಿ, ಶ್ರೀಕ್ಷೇತ್ರದ ರಾಜಾಂಗಣದಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎರಡು ನಾಟಕಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿಯನ್ನು ಪಡೆದವು. ಡಾ| ಜೀವನ್ ರಾಂ ಸುಳ್ಯ ರಚಿಸಿ, ನಿರ್ದೇಶಿಸಿದ "ದೇವವೃದ್ಧರು" ನಾಟಕವು ಅತ್ಯುತ್ತಮ ನಾಟಕ ಪ್ರಶಸ್ತಿಯೊಂದಿಗೆ ರೂ.50,000 ನಗದು ಬಹುಮಾನ ಹಾಗೂ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದೇ ನಾಟಕಕ್ಕೆ ಅತ್ಯುತ್ತಮ ಸಂಗೀತ ಸಂಯೋಜಕ ಪ್ರಶಸ್ತಿಯನ್ನು ಆಳ್ವಾಸ್ ಪಿ.ಯು. ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪಡೆದುಕೊಂಡರು. ಆಳ್ವಾಸ್‌ನ ಇನ್ನೊಂದು ತಂಡ ಪ್ರದರ್ಶಿಸಿದ, ಪ್ರಶಾಂತ್ ಶೆಟ್ಟಿ ಕೋಟ ನಿರ್ದೇಶಿಸಿದ್ದ ‘ಮಗು ಮತ್ತು ಮರ’ ನಾಟಕವು ದ್ವಿತೀಯ ಪ್ರಶಸ್ತಿಯೊಂದಿಗೆ ರೂ 30,000 ನಗದನ್ನು ಪಡೆಯಿತು. ಈ ನಾಟಕದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮನೋಜ್ ತೀರ್ಥಹಳ್ಳಿ ಹಾಗೂ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತೇಜಸ್ವಿನಿ ತರೀಕೆರೆ ಪಡೆದುಕೊಂಡರು. ಪ್ರಶಸ್ತಿಯನ್ನು ಶ್ರೀ ಒಡಿಯೂರು ಗುರುದೇವಾನಂದ ಸ್ವಾಮಿಗಳು ನೀಡಿದರು. ಸ್ಪರ್ಧೆಯಲ್ಲಿ ಉಡುಪಿ, ದ.ಕ ಜಿಲ್ಲೆಯ ಒಟ್ಟು 12 ತಂಡಗಳು ಭಾಗವಹಿಸಿದ್ದವು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರು ಅಭಿನಂದಿಸಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Article Image

ಎಕ್ಸಲೆಂಟ್ ಮೂಡುಬಿದಿರೆ: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪರಿವರ್ತನಾಶೀಲವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ ಇಂದಿನ ಸಮಾಜಕ್ಕೆ ಅವಕಾಶಗಳು ಮುಕ್ತವಾಗಿದೆ. ಚೇತನವನ್ನು ಕೇಂದ್ರವಾಗಿರಿಸಿಕೊಂಡು, ವೃತ್ತಿ ನಿರಂತರ ಮಾರ್ಗದರ್ಶನದೊಂದಿಗೆ ಶ್ರದ್ಧೆ, ಅಭ್ಯಾಸದೊಂದಿಗೆ ಮುಂದುವರಿದಲ್ಲಿ ವೃತ್ತಿಯಲ್ಲಿ ಯಶಸ್ಸು ಶತಸಿದ್ಧ. ಎರಡು ದಶಕಗಳ ಹಿಂದೆ ಇದ್ದಷ್ಟು ಕಷ್ಟ ಈಗಿಲ್ಲ ಈಗ ಸರಿಯಾದ ವೃತ್ತಿಯಲ್ಲಿ ಮುಂದೆ ಸಾಗುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಮಾರ್ಗದರ್ಷನ ನೀಡುವ ತಜ್ಞರಿದ್ದಾರೆ. ವಾಣಿಜ್ಯ ವಿಭಾಗದ ಭವಿಷ್ಯ ಉಜ್ವಲವಾಗಿದೆ ಎಂದು ಹಿರಿಯ ಚಾರ್ಟೆಡ್ ಅಕೌಂಟೆಂಟ್, ಆರ್.ಎಸ್. ಭಟ್ ಮತ್ತು ಕೊ.ನ ಸಿಎ ರಘುಪತಿ ಎಸ್. ಭಟ್ ಹೇಳಿದರು. ಅವರು ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದರು. ಪಿಪಿಕೆ ಎಸೋಷಿಯೇಟ್ಸ್ ಮುಖ್ಯಸ್ಥರಾದ ಸಿಎ ಪ್ರಶಾಂತ್ ಪೈ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ಆದ ನಂತರ ಇರುವ ಬಹು ಆಯ್ಕೆಗಳ ವಿವರಣೆ ನೀಡುತ್ತಾ ಏಕಾಗ್ರತೆ ಹಾಗೂ ಬದ್ಧತೆಯಿಂದ ಸಿಎ ಉತ್ತೀರ್ಣರಾಗಬಹುದು ತನ್ಮೂಲಕ ಆರ್ಥಿಕವಾಗಿ ಬಲಿಷ್ಠರಾಗಬಹುದು ಎಂದರು. ಸಮಾರಂಭದ ಅಧ್ಯಕ್ಷರಾದ ಎಕ್ಸಲೆಂಟ್ ಮೂಡುಬಿದಿರೆಯ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಭಾರತದ ಆರ್ಥಿಕ ನೀತಿಯಲ್ಲಿ ವಾಣಿಜ್ಯ ವಿಭಾಗದ ಪಾತ್ರ ಬಹಳ ದೊಡ್ಡದು. ಈಗಲೂ ಭಾರತದಲ್ಲಿ ಸಿಎ ಉತ್ತೀರ್ಣರಾದವರಿಗೆ ಬಹಳಷ್ಟು ಅವಕಾಶಗಳಿವೆ. ಭವಿಷ್ಯದಲ್ಲಿ ಎತ್ತರಕ್ಕೇರುವ, ಆರ್ಥಿಕವಾಗಿ ಸದೃಢವಾಗುವ ಉಳಿದವರಿಗೆ ನೆರವಾಗುವ ಹಳ್ಳಿಯಿಂದ ರಾಷ್ಟ್ರ ರಾಜಧಾನಿಯ ತನಕ ಅನಿವಾರ್ಯವಾಗಿರುವ ಸಿಎ ವೃತ್ತಿ ಆಯ್ಕೆ ಮಾಡಿ ಕಠಿಣ ಪರಿಶ್ರಮದಿಂದ ಮುಂದುವರಿದರೆ ನಿಮ್ಮೆಲ್ಲರ ಭವಿಷ್ಯ ಭದ್ರವಾಗುವುದು ಅಲ್ಲದೆ ಉಳಿದ ವೃತ್ತಿಗಳ ಸರಿಯಾದ ಆಯ್ಕೆ ನಿಮ್ಮ ಮುಂದಿನ ನಡೆಗಳನ್ನು ಬಲಿಷ್ಠಗೊಳಿಸುವುದು ಎಂದರು. ಬಳಿಕ ಭಾರತೀಯ ಸನದಿ ಲೆಕ್ಕಿಗರ ಸಂಘದ ವತಿಯಿಂದ ಸಿಎ ಆಕಾಶ್‌ದೀಪ್ ಹಾಗೂ ಸಿಎ ವೃಂದಾ ಕೊನ್ನರ್ ಅವರಿಂದ ವಾಣಿಜ್ಯ ವಿಭಾಗ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಯಿತು. ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಖಿತಾ ಸ್ವಾಗತಿಸಿ ಅದಿತಿ ಕಾರ್ಯಕ್ರಮ ನಿರೂಪಿಸಿದರು.

15ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2873 ಮಂದಿಗೆ ಉದ್ಯೋಗ, 288 ಕಂಪನಿಗಳು ಭಾಗಿ

Article Image

15ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2873 ಮಂದಿಗೆ ಉದ್ಯೋಗ, 288 ಕಂಪನಿಗಳು ಭಾಗಿ

ಮೂಡುಬಿದಿರೆ: 15ನೇ ಆವೃತ್ತಿಯ "ಆಳ್ವಾಸ್ ಪ್ರಗತಿ" ಬೃಹತ್ ಉದ್ಯೋಗ ಮೇಳ ಆಗಸ್ಟ್ 2 ರಂದು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಸಮಾಪನಗೊಂಡಿತು. ಎರಡು ದಿನಗಳ ಕಾಲ ನಡೆದ ಉದ್ಯೋಗ ಮೇಳದಲ್ಲಿ, 2873 ಉದ್ಯೋಗಾಕಾಂಕ್ಷಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಯಿತು. ಭಾಗವಹಿಸಿದ ಒಟ್ಟು 288 ಕಂಪನಿಗಳ ಪೈಕಿ 260 ಕಂಪೆನಿಗಳು, 3734 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಒಟ್ಟು 14,245 ಅಭ್ಯರ್ಥಿಗಳು 2 ದಿನದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದರು. ದುಬೈ ಮೂಲದ ಫಾರ್ಚುನ್ ಸಂಸ್ಥೆಯು 5 ಅಭ್ಯರ್ಥಿಗಳನ್ನು 5 ರಿಂದ 8 ಲಕ್ಷ ವಾರ್ಷಿಕ ವೇತನದ ಹುದ್ದೆಗೆ ಆಯ್ಕೆ ಮಾಡಿದ್ದು, 25 ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಗೊಂಡಿದ್ದಾರೆ. ನಾರಾಯಣ ಹೃದಯಾಲಯವು 43 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಮತ್ತು ಅಂತಿಮ ಸುತ್ತಿನ ಸಂದರ್ಶನಕ್ಕೆ 28 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಝೀ ಎಂಟರ್‌ಟೈನ್‌ಮೆಂಟ್ ಕಂಪೆನಿಯು ಅಂತಿಮ ಸುತ್ತಿಗೆ 11 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಸೌದಿ ಅರೇಬಿಯಾ ಮೂಲದ ಎಕ್ಪರ್ಟೈಸ್ ಕಂಪೆನಿಯು 37 ಜನರನ್ನು ನೇಮಿಸಿಕೊಂಡಿದೆ. ಮುಂಬೈ ಮೂಲದ ಆಲ್‌ಕಾರ್ಗೋ ಲಾಜಿಸ್ಟಿಕ್ಸ್ 3 ರಿಂದ 5 ಲಕ್ಷ ವರೆಗಿನ ವಾರ್ಷಿಕ ವೇತನವಿರುವ ಹುದ್ದೆಗಳಿಗೆ 9 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ತೇಜಸ್ವಿನಿ ಗ್ರೂಪ್ಸ್ ವಾರ್ಷಿಕ 6 ಲಕ್ಷ ಪ್ಯಾಕೇಜ್‌ಗೆ 11 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇನ್‌ಫೋಸಿಸ್ ಬಿಪಿಎಂ ಕಂಪೆನಿಯು 79 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಕೋಡ್‌ಯಂಗ್ ಸಂಸ್ಥೆಯು 20 ಅಭ್ಯರ್ಥಿಗಳನ್ನು 4.36 ದಿಂದ 8.36 ಲಕ್ಷದ ವಾರ್ಷಿಕ ವೇತನಕ್ಕೆ ಆಯ್ಕೆ ಮಾಡಿಕೊಂಡಿದೆ.

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಜೆಕ್ಟ್‌ಗೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ

Article Image

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಜೆಕ್ಟ್‌ಗೆ ವರ್ಷದ ಅತ್ಯುತ್ತಮ ಪ್ರಾಜೆಕ್ಟ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಂದನ್ ಬಿ.ಎಂ, ಉಸ್ಮಾ, ಪ್ರೇಕ್ಷಾ ಹಾಗೂ ಸಾವನ್ ಶೆಟ್ಟಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಶಿವಮೊಗ್ಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಲ್ಲಿ ಆಯೋಜಿಸಿದ್ದ 48ನೇ ಸರಣಿಯ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಅವರು ತಯಾರಿಸಿದ ಪ್ರಾಜೆಕ್ಟ್‌ಗೆ ‘ವರ್ಷದ ಅತ್ಯುತ್ತಮ ಪ್ರಾಜೆಕ್ಟ್’ ಪ್ರಶಸ್ತಿ ಲಭಿಸಿತು. ಒಟ್ಟು ಈ ವಿಭಾಗದಲ್ಲಿ 496 ಪ್ರಾಜೆಕ್ಟ್‌ಗಳು ಸ್ಪರ್ಧೆಗೆ ಆಗಮಿಸಿದ್ದವು. ಮೆಕ್ಕುಜೋಳದ ಒಣಗಿದ ಸಿಪ್ಪೆಯಿಂದ ಕಪ್ ತಯಾರಿಕಾ ಯಂತ್ರದ ಅಭಿವೃದ್ಧಿಗಾಗಿ ಈ ಪ್ರಶಸ್ತಿ ಪಡೆದುಕೊಂಡರು. ಪರಿಸರ ಸ್ನೇಹಿ ಆವಿಷ್ಕಾರ ಮತ್ತು ದಕ್ಷತೆಯ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ ಮೌಲ್ಯಮಾಪನಾ ಸಮಿತಿಯ ಸದಸ್ಯರ ಮೆಚ್ಚುಗೆಗೆ ಪಾತ್ರವಾಯಿತು. ಈ ಪ್ರಾಜೆ‌ಕ್ಟ್‌ಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಕೆ. ವಿ. ಸುರೇಶ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಶ್ಲಾಘಿಸಿದ್ದಾರೆ. ರೈತರಿಗೆ ಉಪಯೋಗವಾಗುವ ಯಂತ್ರ: 10 ರಿಂದ 12 ಡಿಗ್ರಿ ಬಿಸಿ ನೀರನ್ನು 4 ಗಂಟೆ, ತಣ್ಣೀರನ್ನು 5 ರಿಂದ 6 ಘಂಟೆ ಶೇಖರಿಸಬಹುದಾಗಿದೆ. ಒಂದು ಕಪ್‌ಗೆ 59ಪೈಸೆ ಖರ್ಚಾಗಲಿದ್ದು, ಒಂದು ರೂಪಾಯಿಗೆ ಮಾರಾಟ ಮಾಡಿದರೂ 41 ಪೈಸೆಯನ್ನು ಉಳಿಸಬಹುದಾಗಿದೆ. ಈ ಯಂತ್ರ ಒಂದು ಗಂಟೆಗೆ 114 ಕಪ್‌ಗಳನ್ನು ಉತ್ಪಾದನೆ ಮಾಡಬಲ್ಲದು.

ಉಜಿರೆ ಎಸ್.ಡಿ.ಎಂ. ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಉಜಿರೆಯ ರತ್ನಮಾನಸದಲ್ಲಿ ಜು.20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರತ್ನಮಾನಸದ ಮೇಲ್ವಿಚಾರಕರಾದ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಜಗದೀಶ ಮುಂಡಾಜೆ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಪ್ರಥಮ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 25 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಶಕುಂತಲಾ. ಬಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು.

ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

Article Image

ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ ಅಡಿಪಾಯವನ್ನು ಹಾಕುತ್ತದೆ ಎಂಬುದನ್ನು ಉಲ್ಲೇಖಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಆದರೆ ಜೆ.ಇ.ಇ., ಎನ್.ಎ.ಟಿ.ಎ., ಎನ್.ಡಿ.ಎ., ಬಿ. ನಂತಹ ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ಬಂದಾಗ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ. ಪಿ.ಯು.ಸಿ. ಮಟ್ಟದಲ್ಲಿ ಫಲಿತಾಂಶಗಳನ್ನು ಹೆಚ್ಚಿಸಲು ಗಣಿತದ ಅಡಿಪಾಯವನ್ನು ಬಲಪಡಿಸಲು ಉಪನ್ಯಾಸಕರು ಕಾರ್ಯ ಪ್ರವೃತರಾಗಬೇಕೆಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ, ಶಿಕ್ಷಕರು ಕೇವಲ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು, ಇಲ್ಲವಾದರೆ ಭವಿಷ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ಶಿಕ್ಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತದೆ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಿದ್ಯಾರ್ಥಿಗಳು ಗಣಿತದಲ್ಲಿ ಏಕೆ ಹಿಂದುಳಿಯುತ್ತಾರೆ ಎಂಬುದಕ್ಕೆ ಉದಾಹರಣೆಗಳನ್ನು ನೀಡಿದರು. ಗಣಿತ ಮತ್ತು ಭೌತಶಾಸ್ತ್ರವು ಹೇಗೆ ಪರಸ್ಪರ ಸಂಬಂಧ ಹೊಂದಿದೆ ಎಂಬುದನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಘವೇಂದ್ರ ಹಾಗೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಡಾ. ಪ್ರಶಾಂತ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ 'ದಿ ಬುಕ್ ಮ್ಯಾಥ್ ಮೇಡ್ ಈಸಿ' ಪುಸ್ತಕದ 8ನೇ ಆವೃತ್ತಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಗಣಿತ ಶಿಕ್ಷಕಿ ಸೀತಾ ಹಾಗೂ ಪುಸ್ತಕದ ಸಂಪಾದಕೀಯ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಯಿತು. ಮುಂಬರುವ ಶೈಕ್ಷಣಿಕ ವರ್ಷದ ಸಂಘದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಲಾರೆನ್ಸ್ ಸಿಕ್ವೆರಿಯಾ, ಉಪಾಧ್ಯಕ್ಷ ಆದರ್ಶ್ ಚೊಕ್ಕಾಡಿ, ಕಾರ್ಯದರ್ಶಿ ಅನುಪಮಾ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ವರುಣ್ ಪ್ರಭು, ವೆಲಿಟ, ಲೋಹಿತ್ ಸಾಲ್ಯಾನ್ ಹಾಗೂ ಸುಕನ್ಯ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರನಾಥ್ ಬರ್ವೆ ವಂದಿಸಿದರು.

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್

Article Image

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೂರಜ್ ಶೈಕ್ಷಣಿಕ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರೊಟೇರಿಯನ್ ಪಿ.ಎಚ್.ಎಫ್ ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ ಇವರು ಆಗಮಿಸಿದ್ದರು. ಗೌರವ ಅತಿಥಿಗಳಾದ ಅಡ್ವೋಕೇಟ್ ಪದ್ಮಪ್ರಸಾದ್ ಜೈನ್, ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಶಾಲಾ ಪ್ರಾಂಶುಪಾಲರಾದ ಪ್ರಸಾದ್ ಇವರು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವಿಧ ಜವಾಬ್ದಾರಿಯುತ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಕೋರಿ ನಾಯಕತ್ವದ ಗುಣವನ್ನು ಎಳವೆಯಲ್ಲಿಯೇ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ರವರು ತಿಳಿಸಿದರು. ಈ ಶುಭ ಸಂದರ್ಭದಲ್ಲಿ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಯಕತ್ವದ ಗುಣ ದೊಡ್ಡ ಗುಣ. ಶಿಕ್ಷಣದೊಂದಿಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ. ಎಲ್ಲಿ ಸಂಸ್ಕಾರವಿರುತ್ತದೆಯೋ ಅಲ್ಲಿ ಶಿಕ್ಷಣವಿರುತ್ತದೆ ಶಾಲಾ ಸುಧಾರಣೆ ಮಕ್ಕಳ ಕೈಯಲ್ಲಿದೆ ಎಂದು ಮುಖ್ಯ ಅತಿಥಿಗಳಾದ ಡಾ. ಮಂಜುನಾಥ್ ಶ್ರೀಪಾದ್ ರೇವಣ್‌ಕರ್ ರವರು ತಿಳಿಸಿದರು. ಗೌರವ ಅತಿಥಿಗಳಾದ ಪದ್ಮಪ್ರಸಾದ್ ಜೈನರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗ್ರಹಿಕಾ ಸಾಮರ್ಥ್ಯ ಬಹಳ ಅವಶ್ಯಕತೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬಹಳ ಮುಖ್ಯ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಮಾಣವಚನವನ್ನು ಸ್ವೀಕರಿಸಿ ಉದ್ಘಾಟನಾ ಸಮಾರಂಭವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಹರ್ಷಿತ ನೆರವೇರಿಸಿದರು. ಶಾಲಾ ನಾಯಕಿ ನಿರೀಕ್ಷಾ ಸ್ವಾಗತಿಸಿ, ಶಾಲಾ ನಾಯಕ ಶ್ರೀಕಾರ್ ಪಾಟೀಲ್ ವಂದಿಸಿದರು.

ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

Article Image

ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ, ಜು.12: ವಿಜ್ಞಾನ, ಕಲೆ, ಆಧ್ಯಾತ್ಮಿಕತೆ ಹೀಗೆ ಎಲ್ಲವನ್ನೂ ಒಳಗೊಂಡಿರುವ ಸಾಂಪ್ರದಾಯಿಕ ಭಾರತೀಯ ಜ್ಞಾನವ್ಯವಸ್ಥೆಯು ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗಬೇಕಿದೆ ಎಂದು ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಎನ್.ಸಿ.ಇ.ಆರ್.ಟಿ.)ಯ ಸಹಾಯಕ ಪ್ರಾಧ್ಯಾಪಕ, ಯುವ ವಿಜ್ಞಾನಿ ಡಾ. ಅರ್ಪಣ್ ಕುಮಾರ್ ನಾಯಕ್ ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗವು ಜು.12 ರಂದು ಆಯೋಜಿಸಿದ್ದ ‘ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಭಾರತೀಯ ಸಾಂಪ್ರದಾಯಿಕ ಜ್ಞಾನವ್ಯವಸ್ಥೆಯು ಬ್ರಿಟಿಷರ ಆಡಳಿತ ಪರಿಣಾಮವಾಗಿ ಎಲ್ಲಿಯೂ ನಿಖರವಾಗಿ ದಾಖಲಾಗಿಲ್ಲ. ಇಂದಿನ ಪಠ್ಯಪುಸ್ತಕಗಳು ಕೂಡ ಅವುಗಳ ಕುರಿತಾಗಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಾವಿರಾರು ವರ್ಷಗಳು ಕಳೆದರೂ ದೃಢವಾಗಿ ನಿಂತಿರುವ ಪುರಾತನ ಕಟ್ಟಡಗಳ ನಿರ್ಮಾಣ ಮಾಡಲು ಬಳಸಿರುವ ಸಾಂಪ್ರದಾಯಿಕ ಜ್ಞಾನವ್ಯವಸ್ಥೆಯು ಇಂದಿನ ಯುವಜನತೆಗೆ ಪ್ರೇರಣೆಯಾಗಬೇಕಿದೆ ಎಂದು ಅವರು ಹೇಳಿದರು. “ಆಧುನಿಕ ವಿಜ್ಞಾನಕ್ಕೂ ಸವಾಲೆಸೆಯುವ ಶಿಲ್ಪಕಲೆಗಳ ರಚನೆ ಪುರಾತನ ಕಾಲದಲ್ಲಿ ನಡೆದಿದೆ. ತಂತ್ರಜ್ಞಾನದ ಸಹಾಯವಿಲ್ಲದೆ ಕೇವಲ ಇತರರಿಂದ ಕೇಳಿ, ನಿರಂತರ ಅಭ್ಯಾಸ ಮತ್ತು ಪ್ರಯೋಗಗಳಿಂದಲೇ ನಿರ್ಮಾಣಗೊಂಡ ಅವುಗಳ ಹಿಂದೆ ಒಂದು ವೈಜ್ಞಾನಿಕ ದೃಷ್ಟಿಕೋನವಿದೆ. ಅದನ್ನು ಗುರುತಿಸುವಲ್ಲಿ ನಾವುಗಳು ಎಡವುತ್ತಿದ್ದೇವೆ. ಯಾವುದೇ ಕಲಿಕೆಯಿಲ್ಲದೆಯೇ ನಮ್ಮ ಪೂರ್ವಜರು ಗಣಿತಶಾಸ್ತ್ರ, ಭೌತಶಾಸ್ತ್ರ ಹಾಗೂ ಖಗೋಳ ಶಾಸ್ತ್ರಗಳನ್ನು ಪುರಾತನ ಕಟ್ಟಡಗಳ ನಿರ್ಮಾಣದಲ್ಲಿ ಬಳಸಿಕೊಂಡಿರುವ ರೀತಿ ನಿಜಕ್ಕೂ ಮೆಚ್ಚುವಂತದ್ದು. ಅವರು ವಿಜ್ಞಾನವನ್ನು ಬಳಸಿಕೊಂಡಿರುವ ರೀತಿ ಮತ್ತು ಅವರ ಕೆಲಸಗಳಲ್ಲಿದ್ದ ಪರಿಪೂರ್ಣತೆಯನ್ನು ನಾವು ಅಳವಡಿಸಿಕೊಳ್ಳಬೇಕಿದೆ” ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಉಪ ಪ್ರಾಂಶುಪಾಲೆ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ ಕೆ.ಪಿ. ಹಾಗೂ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಜ್ಯೋತಿಕಾ ಕಾರ್ಯಕ್ರಮ ನಿರೂಪಿಸಿ, ಹೇಮಾವತಿ ವಂದಿಸಿದರು.

ಎಕ್ಸಲೆಂಟ್ ಮೂಡುಬಿದಿರೆ: ವಾಣಿಜ್ಯ ಸಂಘದ ಉದ್ಘಾಟನೆ

Article Image

ಎಕ್ಸಲೆಂಟ್ ಮೂಡುಬಿದಿರೆ: ವಾಣಿಜ್ಯ ಸಂಘದ ಉದ್ಘಾಟನೆ

ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ಯಾಲಾಕ್ಸಿ ಸ್ಪೋರ್ಟ್ಸ್‌ ವರ್ಲ್ಡ್‌ನ ಎಂಡಿ, ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ನಾನು ತರಗತಿಯಲ್ಲಿ ಕಲಿತ ಪಾಠ ನನ್ನ ಜೀವನದಲ್ಲಿ ಉಪಯೋಗ ಆಗಲಿಲ್ಲ. ಆದರೆ ನಾನು ಭಾಗವಹಿಸಿದ ಪಠ್ಯೇತರ ಚಟುವಟಿಗಳು ನನ್ನ ವ್ಯಕ್ತಿತ್ವವನ್ನು ರೂಪಿಸಿತು. ಇದು ನನ್ನ ಉದ್ಯಮವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು. ವಾಣಿಜ್ಯ ವಿಭಾಗದ ಚಟುವಟಿಕೆಗಳನ್ನು ಕ0ಡಾಗ ಖಂಡಿತವಾಗಿ ನಿಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಪಡೆಯಲು ಇದು ಸಹಕಾರಿಯಾಗುತ್ತದೆ ಎಂದರು. ಜಗತ್ತಿನ ಶೇಕಡಾ ತೊಂಭತ್ತೊಂದರಷ್ಟು ಜನರು ಉದ್ಯೋಗಿ ಅಥವಾ ಸ್ವಉದ್ಯೋಗಿಗಳಾಗಿರುತ್ತಾರೆ. ಉದ್ಯಮವನ್ನು ನಡೆಸಬೇಕಾದರೆ ರಿಸ್ಕ್ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಯಶಸ್ಸು ಕೇವಲ ರಿಸ್ಕ್ ತೆಗೆದುಕೊಳ್ಳುವವರ ಪಾಲಾಗಿದೆ ಎಂದರು. ಜೀವನದಲ್ಲಿ ಪ್ರಗತಿಯನ್ನು ಕಾಣಬೇಕಾದರೆ ತನ್ನ ತಪ್ಪನ್ನು ತಿದ್ದಿಕೊಂಡು ಮುನ್ನಡೆಯುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಉದ್ಯೋಗದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಕಾಲದೊಂದಿಗೆ ಬದಲಾಗಲು ಬಯಸದ ಅನೇಕ ಉದ್ದಿಮೆಗಳು ಇಂದು ವಿಫಲವಾಗಿವೆ. ತನ್ನ ಯಶಸ್ಸು ಅಥವಾ ಸೋಲಿಗೆ ತನ್ನ ಮನೋಭಾವವೇ ಕಾರಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ವಾಣಿಜ್ಯ ವಿಭಾಗ ಸಂಸ್ಥೆಯ ಅನೇಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊ0ಡಿದೆ. ಈ ಶೈಕ್ಷಣಿಕ ವರ್ಷದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯನ್ನು ರೂಪಿಸಿಕೊ0ಡಿದೆ. ಪ್ರತಿಯೊಂದು ಕಾರ್ಯಕ್ರಮವೂ ವಿದ್ಯಾರ್ಥಿಗಳ ಕೌಶಲವನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರಿಯಾಗಿದೆ. ಈ ಎಲ್ಲಾ ಪಠ್ಯೇತರ ಚಟುವಟಿಕೆಗಳ ಹೊರತಾಗಿಯೂ ಶೈಕ್ಷಣಿಕವಾಗಿಯೂ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಯಲ್ಲಿ ಅನೇಕ ಸ್ಥಾನಗಳನ್ನು ಪಡೆದುಕೊಳ್ಳುತ್ತಾ ಇದೆ. ಇಂಥಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿದೆ ಎನ್ನುವುದಕ್ಕೆ ಈ ಫಲಿತಾಂಶಗಳೇ ಸಾಕ್ಷಿ ಎಂದು ಪ್ರಸಕ್ತ ಶೈಕ್ಷಣಿಕ ವರ್ಷದ ವಾಣಿಜ್ಯ ವಿಭಾಗದ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಅತಿಥಿಯಾಗಿ ಉಪಸ್ಥಿತರಿದ್ದ ಜೋರಮ್ಮಾ ಹೋಂ ಪ್ರೊಡಕ್ಟ್ಸ್‌ನ ಸ್ಥಾಪಕ ಹಾಗೂ ಪೂರ್ವ ವಿದ್ಯಾರ್ಥಿ ಶೇಖ್ ಸಾಹಿಲ್ ಮಾತನಾಡುತ್ತಾ ತಾನು ಉದ್ಯಮವನ್ನು ಆರಂಭಿಸಬೇಕಾದರೆ ಇಲ್ಲಿನ ವಾಣಿಜ್ಯ ವಿಭಾಗದ ಚಟುವಟಿಕೆಗಳೇ ಕಾರಣ. ಒಂದು ಉತ್ಪನ್ನದ ಬಗ್ಗೆ ಪ್ರದರ್ಶಿಸುವ ಸ್ಪರ್ಧೆ ಮತ್ತು ಇನ್ನಿತರ ಚಟುವಟಿಕೆಗಳು ನನ್ನಲ್ಲಿ ಆತ್ಮ ವಿಶ್ವಾಸವನ್ನು ಬೆಳೆಸಿತು ಮತ್ತು ಉದ್ಯಮವನ್ನು ಆರಂಭಿಸುವ ಯೋಚನೆಯನ್ನು ನೀಡಿತು. ಇಲ್ಲಿ ನಡೆಯುವ ಚಟುವಟಿಕೆಗಳ ಸ0ಪೂರ್ಣ ಲಾಭವನ್ನು ನೀವು ಪಡೆದುಕೊಂಡರೆ ಖ0ಡಿತ ನೀವು ಕೂಡ ಯಶಸ್ವಿ ಉದ್ಯಮಿಗಳಾಗಿ ರೂಪುಗೊಳ್ಳುವಿದರಲ್ಲಿ ಸಂದೇಹವಿಲ್ಲ. ಉದ್ಯಮದಲ್ಲಿ ಏರಿಳಿತಗಳು ಸರ್ವೇ ಸಾಮಾನ್ಯ. ಆದರೆ ಅವನ್ನು ಮೆಟ್ಟಿ ನಿಂತು ತಾಳ್ಮೆಯಿಂದ ನಿಮ್ಮ ಕರ್ತವ್ಯವನ್ನು ನೀವು ಮಾಡಿದರೆ ಯಶಸ್ಸು ಖಂಡಿತ ನಿಮಗೊಲಿಯುತ್ತದೆ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾ ವಾಣಿಜ್ಯ ವಿಭಾಗವು ಸ0ಸ್ಥೆಯ ಹೃದಯಬಡಿತವಾಗಿದೆ. ವರ್ಷದಿಂದ ವರ್ಷಕ್ಕೆ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬ0ದಿದೆ. ನಮ್ಮ ವಿದ್ಯಾರ್ಥಿಗಳು ಇಲ್ಲಿ ನಡೆಯುತ್ತಿರುವ ಚಟುವಟಿಗಳ ಲಾಭವನ್ನು ಪಡೆದುಕೊ0ಡು ಬೆಳೆದ ರೀತಿ ತು0ಬಾ ಸಂತಸ ತಂದಿದೆ. ಸ0ಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅನೇಕ ಅವಕಾಶಗಳಿವೆ. ಅದರ ಸದುಪಯೋಗವನ್ನು ಪಡೆದು ಜೀವನದಲ್ಲಿ ಸಾರ್ಥಕತೆಯನ್ನು ಪಡೆಯುವಂತಾಗಲಿ ಎಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಸುವಿತ್ ಭಂಡಾರಿ ಸ್ವಾಗತಿಸಿದರು. ವಾಣಿಜ್ಯ ಸಂಘದ ಅಧ್ಯಕ್ಷೆ ಶ್ರಾವಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿ ಸದಾನಂದ ನಾವಡರನ್ನು ನಿಶ್ಚಯ ಪರಿಚಯಿಸಿದರು. ಅತಿಥಿ ಶೇಖ್ ಸಾಹಿಲ್ ರನ್ನು ಸುಹಾನ ಸಚಿನ್ ಪರಿಚಯಿಸಿದರು. ಶಮಂತ್ ಕೆ ಎಂ ವಂದಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ: ಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.11ರಂದು ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ, ತಾ.ಪಂ. ಬೆಳ್ತಂಗಡಿ, ಗ್ರಾ.ಪಂ. ಉಜಿರೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಎಸ್.ಡಿ.ಎಂ. ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. “ಚೀನಾ ನಮ್ಮ ದೇಶಕ್ಕಿಂತ ಎರಡೂವರೆ ಪಟ್ಟು ದೊಡ್ಡ ದೇಶ. ಆದರೆ ಅದನ್ನು ಹಿಂದೆ ಹಾಕಿ ನಾವು ಮುಂದೆ ಬಂದಿದ್ದೇವೆ. ವಿಶ್ವ ಜನಸಂಖ್ಯೆ 820 ಕೋಟಿಯಲ್ಲಿ ಭಾರತದ ಜನಸಂಖ್ಯೆ 146 ಕೋಟಿ ಆಗಿದೆ. ಇದು ಹೆಮ್ಮೆ ಪಡುವ, ಸಂಭ್ರಮಿಸುವ ಸಂಗತಿಯಲ್ಲ. ಹೆಚ್ಚುತ್ತಿರುವ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವುದು ಅನಿವಾರ್ಯ” ಎಂದು ಅವರು ಹೇಳಿದರು. ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಪನ್ಮೂಲ ಕೂಡ ಹೆಚ್ಚು ಬೇಕಾಗುತ್ತದೆ. ಭೂಮಿಯಿಂದ ಪರಿಸರದಿಂದ ಸಂಪನ್ಮೂಲಗಳನ್ನು ಪಡೆಯುವ ಮಾನವ ಅರಣ್ಯನಾಶ ಮತ್ತು ಗಣಿಗಾರಿಕೆಯಲ್ಲಿ ತೊಡಗಿದ್ದಾನೆ. ಗಣಿಗಾರಿಕೆ ಆದಂತಹ ಜಾಗದಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇದರಿಂದ ಆಹಾರ ಉತ್ಪತ್ತಿಯೂ ಕಡಿಮೆಯಾಗುತ್ತದೆ‌ ಎಂದರು. ಪ್ರಾಣಿಗಳ ವಾಸಸ್ಥಳವನ್ನು ನಾವು ಅತಿಕ್ರಮಿಸಿರುವುದರಿಂದ ಅವುಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಪ್ರವಾಹದಿಂದ ಸಂಪನ್ಮೂಲಗಳು ನಾಶವಾಗುತ್ತಿವೆ. ಮನುಷ್ಯನ ಆಸೆಗಳಿಗೆ ಕೊನೆಯಿಲ್ಲದಂತಾಗಿದೆ. ಯುದ್ಧಗಳಲ್ಲಿ ಬಾಂಬ್ ಬಳಕೆಯಿಂದ ಭೂಮಿ ತನ್ನ ಫಲವಂತಿಕೆ ಕಳೆದುಕೊಳ್ಳುತ್ತಿದೆ ಎಂದರು. ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., “ಜನಸಂಖ್ಯೆ ಹೆಚ್ಚಳ ಸಮಸ್ಯೆಯೇ ಅಲ್ಲ ಆದರೆ, ಜನರಿಗೆ ಬೇಕಾದ ವ್ಯವಸ್ಥೆ ಆಗದೆ ಇರುವುದೇ ಸಮಸ್ಯೆ. ಹಾಗಾಗಿ ಈ ಕುರಿತು ಅರಿವು ಮೂಡಿಸುವುದು ಅಗತ್ಯ” ಎಂದು ಅಭಿಪ್ರಾಯಪಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಮಾತನಾಡಿ, ಮರಣ ಸಂಖ್ಯೆ ಕಡಿಮೆ ಆಗಿರುವುದರ ಜೊತೆಗೆ ಜನನ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನಸಂಖ್ಯೆ ಹೆಚ್ಚಳ ಕಂಡಿದ್ದು, ಜನಸಂಖ್ಯೆ ಸ್ಫೋಟಕ್ಕೆ ಕಾರಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಆರ್.ಬಿ., ಪ್ರಕೃತಿಗೆ ವಿರುದ್ಧವಾಗಿ ಮನುಷ್ಯನ ವಿವಿಧ ಚಟುವಟಿಕೆಗಳಿಗೆ ಪ್ರತಿಯಾಗಿ ಇಂದು ಪ್ರಕೃತಿಯು ಮನುಷ್ಯನ ವಿರುದ್ಧ ಕ್ರಮ ಕೈಗೊಂಡಿದೆ ಎಂದು ವಿಶ್ಲೇಷಿಸಿದರು. ತಾಯಿ-ಮಗುವಿನ ಆರೋಗ್ಯಕ್ಕೆ ಬಹುವಾಗಿ ಪ್ರಾಮುಖ್ಯ ನೀಡಬೇಕು. ಕುಟುಂಬ ಯೋಜನೆ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಶಾ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಪ್ರಹಸನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹೆಚ್ಚು ಫಲಾನುಭವಿಗಳನ್ನು ಆರೋಗ್ಯ ಕೇಂದ್ರಗಳಿಗೆ ಕರೆತರುವಲ್ಲಿ ಯಶಸ್ವಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯಕರ್ತರನ್ನು ಗೌರವಿಸಲಾಯಿತು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬೆಳ್ತಂಗಡಿ ತಾ.ಸಾ. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮೇಲ್ವಿಚಾರಕಿ ಲೀಲಾವತಿ, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನಿತಾ, ತಾಲೂಕು ಆರೋಗ್ಯ ವಿಭಾಗದ ಸಿಬ್ಬಂದಿ ಅಮ್ಮಿ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಜೇಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ವಂದಿಸಿದರು.

ಉಜಿರೆ ಎಸ್‌.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ

Article Image

ಉಜಿರೆ ಎಸ್‌.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ

ಉಜಿರೆ, ಜು.10: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಟ್ರಸ್ಟ್ 2025ನೇ ಶೈಕ್ಷಣಿಕ ವರ್ಷದಲ್ಲಿ ಮೀಸಲಿಟ್ಟಿರುವ ಒಟ್ಟು 2.50 ಕೋಟಿ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ ಪ್ರಕ್ರಿಯೆಗೆ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಇಂದು (ಜು.10) ಸಾಂಕೇತಿಕ ಚಾಲನೆ ನೀಡಿದರು. ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ 2 ಸಾವಿರ ವಿದ್ಯಾರ್ಥಿಗಳನ್ನು ಒಳಗೊಳ್ಳುವ ವಿದ್ಯಾರ್ಥಿವೇತನ ಯೋಜನೆಯ ಮೊದಲ ಕಂತಿನ ಚೆಕ್ ವಿತರಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವ ಅರ್ಹ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸಿ ಮನೆಯನ್ನು ಬೆಳಗಬೇಕು. ಹಣ ಸಂಪಾದನೆಗೆ ಇರುವ ಶ್ರಮವನ್ನು ಅರಿಯಬೇಕು. ಸಮಾಜದಲ್ಲಿ ಪ್ರಕಾಶಿಸುವ ವ್ಯಕ್ತಿತ್ವಗಳಾಗಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. ಎಸ್.ಡಿ.ಎಂ. ಸಂಸ್ಥೆಗಳ 1,450 ವಿದ್ಯಾರ್ಥಿಗಳ ಜೊತೆಗೆ ಇತರ ಸಂಸ್ಥೆಗಳ ವಿದ್ಯಾರ್ಥಿಗಳನ್ನೂ ಈ ವಿದ್ಯಾರ್ಥಿವೇತನ ಯೋಜನೆ ಒಳಗೊಂಡಿದೆ ಎಂದ ಅವರು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಸ್.ಡಿ.ಎಂ. ಕಾಲೇಜು, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಇತ್ಯಾದಿ ಸಂಸ್ಥೆಗಳ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಬದ್ಧತೆ ಹಾಗೂ ಕಾಳಜಿ ಕುರಿತು ವಿವರಿಸಿದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, “ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳವು ಶ್ರೇಷ್ಠ, ಮೌಲ್ಯಯುತ ಶಿಕ್ಷಣ ಒದಗಿಸುತ್ತಿದೆ. 1985ರಿಂದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ ಮೂಲಕ ನಮ್ಮ ಸಂಸ್ಥೆಗಳ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡುತ್ತಿದ್ದು, ಆ ಮೂಲಕ ವಿದ್ಯಾದಾನದ ಕ್ರಾಂತಿ ನಡೆಯುತ್ತಿದೆ” ಎಂದರು. ಎಸ್ ಡಿ ಎಂ ಎಜುಕೇಶನಲ್ ಸೊಸೈಟಿಯ ಇನ್ನೋರ್ವ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯಾ ಬಿ.ಪಿ. ಉಪಸ್ಥಿತರಿದ್ದರು. ಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಂದಿಸಿದರು. ಡಾ. ನೆಫೀಸತ್ ಪಿ. ನಿರೂಪಿಸಿದರು. ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸಿಗೆ ಅನುಗುಣವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ 10 ತಿಂಗಳ ಕಾಲ 1,000 ಮತ್ತು 1,250 ರೂ.ಗಳನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತದೆ.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ

Article Image

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ

ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ದಿನಾಂಕ 08-ಜುಲೈ 2025 ರ ಮಂಗಳವಾರದಂದು ಜರಗಿದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ವೇದಿಕೆಯ ಮೇಲಿರುವವರು ಮಾತ್ರ ನಾಯಕರಲ್ಲ ಮುಂಭಾಗದಲ್ಲಿರುವವರು ನಾಯಕರಾಗುವ ಯೋಗ್ಯತೆಯನ್ನು ಹೊಂದಿರುತ್ತಾರೆ. ಗುರುಕುಲ ಶಿಕ್ಷಣ ವ್ಯವಸ್ತೆ ಇರುವ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ’ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಯಾಗಿ ಆಗಮಿಸಿದ ನ್ಯಾಯವಾದಿ ಜಿನೇಂದ್ರ ಕುಮಾರ್ ಅವರು ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು. ಇಲ್ಲಿ ಗೆದ್ದವನು ನಾಯಕನಲ್ಲ ಬಿದ್ದವನನ್ನು ಮೇಲೆತ್ತುವವ ನಿಜವಾದ ನಾಯಕ’ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ವಿದ್ಯಾರ್ಥಿ ಸಂಸತ್ತು ಕಲಿಕೆಯನ್ನು ಪಾಯೋಗಿಕವಾಗಿ ಅನುಭವಿಸುವ ಒಂದು ಉತ್ತಮ ವೇದಿಕೆಯಾಗಿದ್ದು, ಅದು ನಾಯಕತ್ವ ಮತ್ತು ಜವಬ್ದಾರಿಯ ಮೌಲ್ಯವನ್ನು ಬೆಳೆಸುತ್ತದೆ. ವ್ಯಕ್ತಿಯ ವರ್ತನೆ, ನಡತೆಗಳೇ ವ್ಯಕ್ತಿತ್ವದ ಮಾನದಂಡವಾಗಿದೆ. ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ತಿಳಿಸಿದರು. ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ಅವರು ಮಾತನಾಡುತ್ತಾ ಸಿಕ್ಕ ಜವಬ್ದಾರಿಗಳನ್ನು ಶ್ರದ್ಧೆಯಿಂದ ನಿರ್ವಹಿಸುತ್ತ ಸಮಾಜದ ಶ್ರೇಯಸ್ಸಿಗೆ ಕಾರಣರಾಗಬೇಕು. ಇಂದು ನಿಮಗೆ ಸಿಕ್ಕ ಸ್ಥಾನ ಭಾರತೀಯ ಸಂಸತ್ತನ್ನೇರಲು ಪ್ರಥಮ ಮೆಟ್ಟಿಲಾಗಲಿ. ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

ಜೈನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Article Image

ಜೈನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಜೈನ ಪದವಿಪೂರ್ವ ಕಾಲೇಜು ಮೂಡುಬಿದಿರೆ ಇದರ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು.ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಗೌರವಾನ್ವಿತ ಸಂಚಾಲಕರಾದ ಶ್ರೀಯುತ ಕೆ. ಹೇಮರಾಜ್ ವಹಿಸಿದ್ದರು. ಉದ್ಘಾಟಕರಾಗಿ ಆಗಮಿಸಿದ ಡಾII ಮಾಧವ ಎಮ್. ಕೆ. ಮುಖ್ಯಸ್ಥರು ಕನ್ನಡ ವಿಭಾಗ ಹಾಗೂ ಸಂಯೋಜಕರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳೂರು ಇವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಜೀವನದಲ್ಲಿಒಳ್ಳೆಯ ಸಂಸ್ಕಾರ, ಒಂದು ಗುರಿಯನ್ನು ಇಟ್ಟುಕೊಂಡು, ಕಠಿಣ ಪರಿಶ್ರಮ ಪಡುತ್ತಾ ಇಷ್ಡಪಟ್ಟು ಓದಿದರೆ ಯಶಸ್ಸು ಖಂಡಿತ ಸಾಧ್ಯ. ಎಷ್ಟೇ ಶ್ರೀಮಂತರಿರಲಿ ಎಷ್ಟೇ ಬಡವರಿರಲಿ ಎಲ್ಲರಿಗೂ ಇರುವ ದಿನದ ಸಮಯ ಒಂದೇ. ವಿದ್ಯಾರ್ಥಿಗಳು ಅದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ಶ್ರಮ ಪಡಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾII ಪ್ರಭಾತ್ ಬಲ್ನಾಡು ಇವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚರಣ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಪರಿಚಯಿಸಿದರು. ದಿಗಂಬರ ಜೈನ ವಿದ್ಯಾವರ್ಧಕ ಸಂಘದ ವತಿಯಿಂದ 2024-25 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಘದ ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷರೂ ಆಗಿರುವ ಕೆ. ಹೇಮರಾಜ್ ಇವರು ಅಭಿನಂದಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಮಾತುಗಳನ್ನು ಆಡಿದರು. ವಿದ್ಯಾರ್ಥಿ ಸಂಘದ ಮಾರ್ಗದರ್ಶಕ ಉಪನ್ಯಾಸಕರಾದ ಶ್ರೀರಾಮಚಂದ್ರ ಭಟ್ ಇವರು ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ಟಿ.ಜಿ ಸರ್ವರನ್ನೂ ಸ್ವಾಗತಿಸಿದರು, ಕಾರ್ಯದರ್ಶಿ ಸಿಲ್ವಿಯಾ ಡಿ.ಸೋಜ ವಂದಿಸಿದರು. ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಕಾರ್ಯದರ್ಶಿ ಶ್ರವಣ್ ಶೆಟ್ಟಿ ಹಾಗೂ ಜೊತೆ ಕಾರ್ಯದರ್ಶಿ ಸಾನಿಕಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿ 17 ನೇ ಸ್ಥಾನ: ರಾಷ್ಟ್ರಮಟ್ಟದ ಸಾಧನೆ

Article Image

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿ 17 ನೇ ಸ್ಥಾನ: ರಾಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಷ್ಠಿತ ಐಸರ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಿಶಿರ್ ಶೆಟ್ಟಿ ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್ ನ ವಿದ್ಯಾರ್ಥಿ 17 ನೇ ಸ್ಥಾನವನ್ನು ಪಡೆದಿದ್ದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾನೆ. ಶಿಶಿರ್ ಈ ವರ್ಷ ನಡೆದ ಕಾಮೆಡ್ ಕೆ ನಲ್ಲಿ ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ, ಜೆಇಇ ಅಡ್ವಾನ್ಸ್ಡ್‌ನಲ್ಲಿ ರಾಷ್ಟ್ರ ಮಟ್ಟದಲ್ಲಿ 664ನೇ ಸ್ಥಾನ, ಸಿಇಟಿ ಇ0ಜಿನಿಯರಿಂಗ್ ವಿಭಾಗದಲ್ಲಿ 4 ನೇ ಸ್ಥಾನ ಮತ್ತು ದ್ವಿತೀಯ ಪದವಿಪೂರ್ವ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುತ್ತಾನೆ. ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಯುವರಾಜ ಜೈನ್, ಪ್ರಾಂಶುಪಾಲರಾದ ಪ್ರದೀಪ ಕುಮಾರ್ ಶೆಟ್ಟಿ, ಮತ್ತು ಉಪನ್ಯಾಸಕ ವರ್ಗದವರು ಅಭಿನ0ದನೆ ಸಲ್ಲಿಸಿದ್ದಾರೆ.

ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Article Image

ಎಕ್ಸಲೆಂಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ನೂತನ್ ಕೃಷ್ಣ 599 (99.9328752), ಖುಷಿ ವಿನಯ್ ರಾಚೋಟಿ 588 (99.8864355), ರೋಹಿತ್ ಕಾಮತ್ 582 (99.8504968), ಸೋಹನ್ ಯಡಾಲ್ 572 (99.7700194), ಲಿಖಿತ್ ಸಿ ಪಿ 570 , ಶ್ರೇಯಸ್ ಹೆಚ್ ಎಸ್ 547, ಧ್ರುವ ಎಸ್ ಪಿ 536 , ಹೆಚ್ ಎ0 ದೇವಸೇನ್ 533, ಚಿನ್ಮಯಿ ಕೆ ಎಲ್ 529, ಚೇತನ್ ಕೆ ಎಸ್ 523, ನಮೃತಾ ಕೆ 518, ಪ್ರೀತಮ್ ಗೌಡ 516, ಮನೋಜ್ ಕೆ 514, ಪವನ್ ಗೌಡ 512, ಪ್ರತ್ಯೂಶ್ ಬಿ ಪಿ 508, ಸಮೃದ್ಧಿ ಎ ಎ0 507, ಲೇಖನ್ ಕುಮಾರ್ ಎ0 ಎಸ್ 506 ಯಶಸ್ ನಾಯ್ದು 502 , ಸ0ಪ್ರೀತ್ ಸಿ 500 ಅಂಕಗಳನ್ನು ಗಳಿಸಿರುತ್ತಾರೆ ಸಾಧಕ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ ಕುಮಾರ್ ಶೆಟ್ಟಿ, ಎಕ್ಸಾಮ್ ಡೈರೆಕ್ಟರ್ ಡಾ.ಪ್ರಶಾ0ತ್ ಹೆಗಡೆ, ನೀಟ್ ಸಂಯೋಜಕ ರಾಮಮೂರ್ತಿ ಮತ್ತು ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಡ್‌ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

Article Image

ಕಾಮೆಡ್‌ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

ಖಾಸಗಿ ಎಂಜಿನಿಯರಿಂಗ್ ಪದವಿ ಕಾಲೇಜುಗಳಲ್ಲಿ ಸೀಟ್ ಪಡೆಯಲು ಕಾಮೆಡ್-ಕೆ ನಡೆಸಿದ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಶಿಶಿರ್ ಹೆಚ್ ಶೆಟ್ಟಿ ಮೊದಲ (1 st Rank) ರ‍್ಯಾಂಕ್ ಗಳಿಸಿದ್ದಾರೆ. ರಾಷ್ಟ್ರದಾದ್ಯಂತ 1,13,111 ವಿದ್ಯಾರ್ಥಿಗಳು ಬರೆದ ಈ ಪರೀಕ್ಷೆಯನ್ನು ಬರೆದಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜ್ ಗಮನಾರ್ಹ ಸಾಧನೆ ಮಾಡಿದೆ. ಮೂಡುಬಿದಿರೆ ಹರೀಶ ಶೆಟ್ಟಿ ಮತ್ತು ಸುಮಿತಾ ಶೆಟ್ಟಿ ಮಗನಾದ ಶಿಶಿರ್ ಹೆಚ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664 ನೇ ಸ್ಥಾನ. ಜೆ.ಇ.ಇ ಮೈನ್ಸ್ ನಲ್ಲಿ 99.971 ಪರ್ಸಂಟೈಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 4ನೇರ‍್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ದ್ವಿತೀಯ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ‍್ಯಾಂಕ್ (593 ಅಂಕಗಳು) ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು, ಉತ್ಕ್ರಷ್ಠ ಸಾಧನೆ ತೋರಿಸಿದ್ದು ಬೋರ್ಡ್ ಪರೀಕ್ಷೆಯಲ್ಲಿ ಒಟ್ಟು 15 ರ‍್ಯಾಂಕ್‌ಗಳು, ಜೆಇಇ ಅಡ್ವಾನ್ಸ್ ನಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ‍್ಯಾಂಕ್‌ನ ಒಳಗೆ 6 ವಿದ್ಯಾರ್ಥಿಗಳು, ಸಿಇಟಿಯಲ್ಲಿ ನಾನಾ ವಿಭಾಗಗಳಲ್ಲಿ 100 ರೊಳಗೆ 13 ರ‍್ಯಾಂಕ್, 500 ರೊಳಗೆ 38 ರ‍್ಯಾಂಕ್, 1000 ರೊಳಗೆ 64 ರ‍್ಯಾಂಕ್ ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಎನ್‌ಡಿಎ, ನಾಟ ಲಿಖಿತ ಪರೀಕ್ಷೆಗಳಲ್ಲಿ ಸಂಸ್ಥೆಯ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಷ್ಟ್ರೀಯ ಮೆರಿಟೈಮ್ ಯೂನಿವರ್ಸಿಟಿ ಮುಕ್ತ ಸ್ಪರ್ಧೆಯಲ್ಲಿ 124ನೇ ಸ್ಥಾನ ಪಡೆಯುದರೊಂದಿಗೆ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆ ಗುಣಮಟ್ಟದ ಶಿಕ್ಷಣದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ದಾಖಲೆ ಫಲಿತಾಂಶವನ್ನು ಸಾಧಿಸಿದೆ. ಅತ್ಯುತ್ತಮ ದಾಖಲೆಗಳೊಂದಿಗೆರಾಷ್ಟ್ರಮಟ್ಟದಲ್ಲಿ 1ನೇ ರ‍್ಯಾಂಕ್ ಪಡೆದಿರುವ ಶಿಶಿರ್ ಹೆಚ್ ಶೆಟ್ಟಿ ಇವರನ್ನು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಾಧನೆ ಬಗ್ಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ಜೈನ್ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ಹರ್ಷವ್ಯಕ್ತಪಡಿಸಿದ್ದಾರೆ. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಮನೋಜ್ ಕುಮಾರ್, ಸ್ಪರ್ಧಾತ್ಮಕ ಪರೀಕ್ಷೆಗಳ ವಿಭಾಗದ ಮುಖ್ಯಸ್ಥರಾದ ರಾಮಮೂರ್ತಿ, ಡಾ, ದಯಾನಂದ, ವಿದ್ಯಾರ್ಥಿಯ ತಂದೆ ಹರೀಶ್ ಶೆಟ್ಟಿ ಇವರು ಉಪಸ್ಥಿತರಿದ್ದರು. ಉಪನ್ಯಾಸ ವಿಕ್ರಮ ನಾಯಕ್ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

Article Image

ಎಕ್ಸಲೆ0ಟ್ ಮೂಡುಬಿದಿರೆ : ಜೆ ಇ ಇ ಅಡ್ವಾನ್ಸ್ಡ್ ರಾ‌ಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಇತ್ತೀಚೆಗೆ ನಡೆದ ರಾ‌ಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆ0ಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅ0ಕಗಳನ್ನು ಪಡೆದು ಉತ್ಕೃಷ್ಟ ಸಾಧನೆಗೈದಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ರಾ‌ಷ್ಟ್ರಮಟ್ಟದಲ್ಲಿ 664 ನೇ ಸ್ಥಾನ (OPEN), ಕಾರ್ತಿಕ್ ಎಸ್ 12072 ನೇ ಸ್ಥಾನ (OPEN) , ಶ್ರೇಯಾಂಕ್ ಮನೋಹರ್ ಪೈ 4601ನೇ ಸ್ಥಾನ (C), ಶೌರ್ಯ್ ಬಿ ತಲ್‌ವಾರ್ 610ನೇ ಸ್ಥಾನ (C) , ಸ್ಮಿರಾ ತಲ್‌ವಾರ್ 27 ನೇ ಸ್ಥಾನ (C), ಪೂರ್ಣಚಂದ್ರ ಎಸ್ 2367 ನೇ ಸ್ಥಾನ (C), ಪಡೆದು ಉತ್ತಮ ಸ್ಥಾನ ಗಳಿಸುವುದರ ಮೂಲಕ ಸ0ಸ್ಥೆಗೆ ಕೀರ್ತಿ ತ0ದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಸ್ಪರ್ಧಾತ್ಮಕ ಪರೀಕ್ಷಾ ನಿರ್ದೇಶಕರಾದ ಡಾ. ಪ್ರಶಾಂತ್ ಹೆಗ್ಡೆ , ಜೆಇಇ ಸ0ಯೋಜಕರಾದ ವಿ ಅರುಣ್, ಹಾಗೂ ಉಪನ್ಯಾಸಕ ವೃ0ದದವರು ವಿದ್ಯಾರ್ಥಿಗಳನ್ನು ಅಭಿನ0ದಿಸಿದ್ದಾರೆ.

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Article Image

ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್‌ಇ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ದೀಪವನ್ನು ಬೆಳಗಿಸುವುದರ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನರವರು ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸುತ್ತಾ, ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಭಾವದಿಂದ ಕಾಣುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಜೀವನವನ್ನು ಸಂತೋಷದಿಂದ ಮುಂದುವರಿಸಿ, ಕ್ರಿಯಾಶೀಲರಾಗಿ ಬೆಳೆಯಬೇಕು ಎಂದು ಶುಭ ಹಾರೈಸಿದರು. ಈ ಸುಸಂದರ್ಭದಲ್ಲಿ ಶೈಕ್ಷಣಿಕ ನಿರ್ದೇಶಕರಾದ ಪುಷ್ಪರಾಜ್ ಬಿ, ಟ್ರಸ್ಟಿನ ಸದಸ್ಯರಾದ ನಟರಾಜ, ಶಾಲಾ ಪ್ರಾಂಶುಪಾಲರಾದ ಪ್ರಸಾದ್, ಸಿಬಿಎಸ್ಇ ಸಂಯೋಜಕರಾದ ವಿಮಲಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಸ್ವಾತಿ ನೆರವೇರಿಸಿ, ಹರ್ಷಿತಾರವರು ಸ್ವಾಗತಿಸಿ, ಪದ್ಮಾವತಿಯವರು ವಂದಿಸಿದರು.

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Article Image

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ0ಜಿನಿಯರಿ0ಗ್ ವಿಭಾಗದಲ್ಲಿ 4 ನೇ ರ‍್ಯಾಂಕ್, ನೂತನ್ ಕೃಷ್ಣ ಬಿ.ಬಿ.ಎನ್.ವೈ.ಎಸ್. ನಲ್ಲಿ 4 ನೇ ರ‍್ಯಾಂಕ್, ಬಿ ಫಾರ್ಮ ಮತ್ತು ಫಾರ್ಮಾ ಡಿ ನಲ್ಲಿ 5 ನೇ ರ‍್ಯಾಂಕ್, ಬಿ ಎಸ್ಸಿ ನರ್ಸಿ0ಗ್ ಮತ್ತು ವೆಟರಿನರಿ ಸಾಯನ್ಸ್ ನಲ್ಲಿ 6 ನೇ ರ‍್ಯಾಂಕ್ ನ್ನು ಗಳಿಸಿರುತ್ತಾನೆ. ವಿವಿಧ ವಿಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ನೂರರ ಒಳಗೆ 13 ರ‍್ಯಾಂಕ್, ಐದುನೂರರ ಒಳಗೆ 38 ರ‍್ಯಾಂಕ್, ಸಾವಿರದ ಒಳಗೆ 64 ರ‍್ಯಾಂಕ್ ಗಳನ್ನು ಪಡೆದು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಹತೆ ಗಳಿಸಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಎಕ್ಸಲೆಂಟ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸಿದೆ. ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ ಶೆಟ್ಟಿ, ಮತ್ತು ಉಪನ್ಯಾಸಕ ವೃ0ದ ವಿದ್ಯಾರ್ಥಿಗಳನ್ನು ಅಭಿನಂದಿಸಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

Article Image

ಎಸ್.ಡಿ.ಎಂ. ‘ಮನೀಷಾ’ ವಾರ್ಷಿಕ ಸಂಚಿಕೆಗೆ ಅತ್ಯುತ್ತಮ ಮ್ಯಾಗಝಿನ್ ಮನ್ನಣೆ

ಉಜಿರೆ, ಮೇ 21: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊರತಂದ ‘ಮನೀಷಾ’ ವಾರ್ಷಿಕ ಸಂಚಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮೊದಲ ಬಹುಮಾನಿತ ಆದ್ಯತೆಯೊಂದಿಗೆ ‘ಅತ್ಯುತ್ತಮ ಕಾಲೇಜು ಮ್ಯಾಗಝಿನ್’ ಎಂಬ ಮನ್ನಣೆಗೆ ಪಾತ್ರವಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶ್ವನಾಥ ಪಿ ಅವರಿಗೆ ‘ಮನೀಷಾ’ ಸಂಚಿಕೆಯ ಅನನ್ಯ ಪ್ರಯೋಗಶೀಲತೆಗಾಗಿ ಪ್ರಥಮ ಬಹುಮಾನಿತ ಮನ್ನಣೆಯ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಆಡಳಿತಾಂಗ ಕುಲಸಚಿವರಾದ ಕೆ.ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವರಾದ ಡಾ.ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಡಾ.ಸಂಗಪ್ಪ ವೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕಿ ಡಾ.ಪರಿಣಿತಾ ಅವರ ಅಧ್ಯಕ್ಷತೆಯ ಕಾಲೇಜು ಮ್ಯಾಗಝೀನ್ ತಜ್ಞರ ಆಯ್ಕೆ ಸಮಿತಿಯು ವಿ.ವಿ. ವ್ಯಾಪ್ತಿಯ ಸಂಯೋಜಿತ ಕಾಲೇಜುಗಳ ವಾರ್ಷಿಕ ಸಂಚಿಕೆಗಳನ್ನು ಪರಿಶೀಲಿಸಿ ‘ಮನೀಷಾ’ ಸಂಚಿಕೆಯನ್ನು ಮೊದಲ ಬಹುಮಾನಕ್ಕೆ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಡಾ.ಪರಿಣಿತಾ ಅವರು ‘ಮನೀಷಾ’ ಸೇರಿದಂತೆ ಸ್ಪರ್ಧೆಗೆ ಪರಿಗಣಿತವಾದ ವಿವಿಧ ಕಾಲೇಜುಗಳು ಹೊರತಂದ ಸಂಚಿಕೆಗಳ ವಿಶೇಷತೆಯನ್ನು ಪರಿಚಯಿಸಿದರು. ಸ್ಪರ್ಧೆಗೆ ಬಂದ ಕಾಲೇಜು ಸಂಚಿಕೆಗಳ ವಿದ್ಯಾರ್ಥಿ ಬರಹಗಳು ಪ್ರಚಲಿತ ಘಟನೆಗಳನ್ನು ಕೇಂದ್ರೀಕರಿಸಿಕೊಂಡಿದ್ದವು. ಬಹಳ ಮುಖ್ಯವಾಗಿ ಸ್ಥಳೀಯ ಸಂಸ್ಕೃತಿಯನ್ನು ಅನಾವರಣಗೊಳಿಸುವ ಬರಹಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಅಲ್ಲದೇ, ಜ್ಞಾನ ಸಂವಹನದ ಉದ್ದೇಶದ ಬರಹಗಳಿಗಿಂತ ಬಹಳ ಮುಖ್ಯವಾಗಿ ಗಮನ ಸೆಳೆದದ್ದು ಆದರ್ಶ ಮೌಲ್ಯಗಳು ಮತ್ತು ಸಂಸ್ಕಾರಯುತ ಚಿಂತನೆಯನ್ನು ಕಾಣಿಸುವ ಲೇಖನಗಳು. ಅಲ್ಲದೇ, ಈ ಸಲದ ಬಹಳಷ್ಟು ಸಂಚಿಕೆಗಳಲ್ಲಿ ಜನರಿಗೆ ಸಾಮಾಜಿಕವಾಗಿ ನೆರವಾಗಿ ಜನಜನಿತರಾದ ಸ್ಥಳೀಯ ವ್ಯಕ್ತಿತ್ವಗಳ ಹಿರಿಮೆಯನ್ನು ಧ್ವನಿಸುವ ಬರಹಗಳು ಇದ್ದವು. ಅಲ್ಲದೇ ಉಚಿತ ಬಸ್ ಪ್ರಯಾಣದ ಕುರಿತ ನಿಲುವುಗಳನ್ನು ವಿದ್ಯಾರ್ಥಿ ಬರಹಗಾರರು ಈ ಸಂಚಿಕೆಗಳ ಮೂಲಕ ಅಭಿವ್ಯಕ್ತಿಸಿದ್ದಾರೆ ಎಂದು ಡಾ.ಪರಿಣಿತಾ ತಿಳಿಸಿದರು. ಪ್ರಚಲಿತ ಘಟನೆಗಳು, ಮೌಲಿಕ ಪುಸ್ತಕಗಳ ಪರಿಚಯಾತ್ಮಕ ನಿಲುವುಗಳು, ತಾರುಣ್ಯದ ಹೊಸಿಲಲ್ಲಿರುವ ಯುವ ಮನಸುಗಳ ತವಕ-ತಲ್ಲಣಗಳು, ಹೊಸ ಕಾಲವನ್ನು ವ್ಯಾಖ್ಯಾನಿಸುವ ಕಾವ್ಯಾತ್ಮಕ ಧ್ವನಿ, ಸ್ವಾನುಭವಗಳ ವಿನೂತನ ಅಭಿವ್ಯಕ್ತಿಯ ಆಶಯಗಳನ್ನು ಈ ಬಹುಮಾನಿತ ಸಂಚಿಕೆ ಒಳಗೊಂಡಿದೆ. ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಧ್ವನಿಸುವ ಭಾಷಿಕ ಸೊಗಡಿನ ಬರಹಗಳು ಮಾತ್ರವಲ್ಲದೇ ವಿವಿಧ ಭಾಷೆಗಳಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳು ಬರೆದ ಬರಹಗಳು ‘ಮನೀಷಾ’ ಸಂಚಿಕೆಯಲ್ಲಿವೆ. ಇವುಗಳ ಮೌಲಿಕತೆಯನ್ನು ಪರಿಗಣಿಸಿ ಒಟ್ಟು 350 ಅಂಕಗಳಲ್ಲಿ 266 ಅಂಕಗಳನ್ನು ತಜ್ಞರ ಸಮಿತಿ ನೀಡಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಮನೀಷಾ’ ಸಂಚಿಕೆಯ ಎಸ್.ಡಿ.ಎಂ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಬಿ.ಗಣೇಶ್‌ನಾಯಕ್, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯ ಬಿ.ಪಿ, ‘ಮನೀಷಾ’ ಸಂಪಾದಕೀಯ ಮಂಡಳಿಯ ಸಂಯೋಜಕರಾದ ಡಾ.ರಾಜಶೇಖರ ಹಳೆಮನೆ, ಸದಸ್ಯ ವಿರಾಟ್ ಪದ್ಮನಾಭ ಅವರು ಭಾಗವಹಿಸಿದ್ದರು.

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

Article Image

ಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಗೆ ಶೇ. 100 ಫಲಿತಾಂಶ

ಮೂಡುಬಿದಿರೆ : ಮೂಡುಬಿದಿರೆಯ ಕಲ್ಲಬೆಟ್ಟುಎಕ್ಸಲೆಂಟ್ ಸಿ. ಬಿ. ಎಸ್. ಇ. ಶಾಲೆಯ ಅಂತಿಮ ಪರೀಕ್ಷೆಯಲ್ಲಿ ಶೇ. 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿರುತ್ತಾರೆ. ರುಚಿರಾ ಕುಂದರ್ ಶೇ. 91% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಶೇ. 90% ಅಂಕ ಗಳಿಸಿದ ಆಂಥಿಯಾ ಶೈನ, ಮಿರಂಡಾ ದ್ವಿತೀಯ ಸ್ಥಾನ ಹಾಗೂ ಶಿಖಾ ಶೆಟ್ಟಿ ಶೇ 86.6 % ಅಂಕ ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಸಂಸ್ಥೆಯ ಅಧ್ಯಕ್ಷರು ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್

Article Image

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್ ನ ಗೋಲ್ಡ್ ಮೆಡಲ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ನಾನ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಡಾ. ಗನ್ಯಾಶ್ರೀ ಮೊದಲ ಶ್ರೇಯಾಂಕಕ್ಕಾಗಿ ಹಾಗೂ ಆಯುಷ್ ವಿಭಾಗದಲ್ಲಿಯೂ ಮೊದಲನೇ ಸ್ಥಾನ ಪಡೆದು 4 ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 27ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಥಾವರ್ ಚಂದ್ ಗೆಹ್ಲೋಟ್ ಅವರು ಚಿನ್ನದ ಪದಕವನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರು, ಅಜೀಂ ಪ್ರೇಮ್‌ಜಿ ಫೌಂಡೇಶನ್, ಸಂಸ್ಥಾಪಕ ಮತ್ತು ಅಧ್ಯಕ್ಷರು, ವಿಪ್ರೋ ಲಿಮಿಟೆಡ್ ಮತ್ತು ವಿಪ್ರೋ ಎಂಟರ್‌ಪ್ರೈಸಸ್ ಲಿಮಿಟೆಡ್ ಹಾಗೂ ಡಾ. ಶರಣಪ್ರಕಾಶ್ ಆರ್ ಪಾಟೀಲ್, ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರು, ವಿಶ್ವವಿದ್ಯಾಲಯದ ಸಹ-ಕುಲಪತಿಗಳು ಹಾಗೂ ಕುಲಸಚಿವರು ಉಪಸ್ಥಿತರಿದ್ದರು.

First Previous

Showing 2 of 7 pages

Next Last