Article Image

ಎಸ್.ಡಿ.ಎಂ: ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ

Article Image

ಎಸ್.ಡಿ.ಎಂ: ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ

ಉಜಿರೆ: ವಿದ್ಯೆ ಮತ್ತು ಮಾನವೀಯ ಮೌಲ್ಯಗಳಿಂದ ಸುಸಂಸ್ಕೃತ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಾವೂರದ ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ಆಟಿಕುಕ್ಕೆ ಹೇಳಿದರು. ಅವರು ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಆಯೋಜಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಸನ್ಮಾನಕ್ಕೆ ಕೃತಜ್ಞತೆ ವ್ಯಕ್ತಪಡಿಸಿ ಮಾತನಾಡಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸುಧಾರಣೆ ಮಾಡಿ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರನ್ನು ರೂಪಿಸಿವೆ. ಪಠ್ಯೇತರ ಚಟುವಟಿಕೆಗಳು ಜೀವನ ಶಿಕ್ಷಣವನ್ನು ನೀಡುತ್ತವೆ ಎಂದರು. ಶುಭಾಶಂಸನೆ ಮಾಡಿದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ. ಎಸ್. ಸತೀಶ್ಚಂದ್ರ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ರಾಯಭಾರಿಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸೇವೆ, ಸಾಧನೆ ಮಾಡುತ್ತಿರುವ ಬಗ್ಗೆ ಕೃತಜ್ಞತೆ ಮತ್ತು ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು. ಹಿರಿಯ ವಿದ್ಯಾರ್ಥಿಗಳ ಸನ್ಮಾನ: ವೈದ್ಯರುಗಳಾಗಿ ವಿವಿಧ ಊರುಗಳಲ್ಲಿ ಸೇವೆ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಡಾ. ಪ್ರಕಾಶ್, ಉಜಿರೆ, ಡಾ. ರಾಜಾರಾಮ, ಉಪ್ಪಿನಂಗಡಿ, ಡಾ. ಎಂ.ಎ. ದಯಾಕರ, ಡಾ. ಸದಾನಂದ ಪೂಜಾರಿ, ಮಂಗಳೂರು, ಡಾ. ಶ್ರೀಹರಿ, ಗುರುವಾಯನಕೆರೆ, ಡಾ. ಪ್ರದೀಪ್ ಆಟಿಕುಕ್ಕೆ, ನಾವೂರು, ಡಾ. ಶಶಿಕಾಂತ್ ಡೋಂಗ್ರೆ, ಬೆಳ್ತಂಗಡಿ, ಡಾ. ರಂಜನ್ ಕುಮಾರ್, ಉಜಿರೆ, ಡಾ, ರೇಷ್ಮಾ, ಮೂಡಬಿದ್ರೆ ಮತ್ತು ಡಾ. ಶ್ರೀಹರ್ಷ, ಉಜಿರೆ ಅವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಇಪ್ಪತ್ತು ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂ. ನಂತೆ ಒಂದು ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು. ಮಧ್ಯಾಹ್ನ ಭೋಜನ ವ್ಯವಸ್ಥೆಗೆ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ದೇಣಿಗೆ ನೀಡಿದರು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ವಿಶ್ವನಾಥ ಸ್ವಾಗತಿಸಿದರು. ವಕೀಲ ಬಿ.ಕೆ. ಧನಂಜಯ ರಾವ್ ಧನ್ಯವಾದವಿತ್ತರು. ಉಪನ್ಯಾಸಕರುಗಳಾದ ದಿವಾ ಕೊಕ್ಕಡ ಮತ್ತು ದೀಕ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.

ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ

Article Image

ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ

ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳವೆಂದು ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ಯುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು, ವೃತ್ತಿಪರ ಸಂಪರ್ಕ ಜಾಲವನ್ನು ಬೆಳೆಸಿಕೊಳ್ಳಬೇಕು ಹಾಗೂ ಕೃತಕ ಬುದ್ಧಿಮತ್ತೆ (ಎಐ) ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣವೊಂದೇ ಇಂದಿನ ವೇಗವಾಗಿ ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಕೌಶಲ್ಯವೂ ಅತ್ಯಗತ್ಯವಾಗಿದ್ದು, ಉದ್ಯೋಗ ಕ್ಷೇತ್ರದಲ್ಲಿ ಪ್ರಸ್ತುತವಾಗಿರಲು ಕೌಶಲ್ಯಗಳನ್ನು ನಿರಂತರವಾಗಿ ಉನ್ನತೀಕರಿಸಿಕೊಳ್ಳಬೇಕು. “ಶಿಕ್ಷಣ ಪಾಸ್‌ಪೋರ್ಟ್ ನಂತಿದ್ದರೆ, ಕೌಶಲ್ಯ ವೀಸಾದಂತೆ” ಎಂದು ರೂಪಕದ ಮೂಲಕ ವಿವರಿಸಿದ ಅವರು, ಯುವಜನರು ಪ್ರಾಯೋಗಿಕ ಹಾಗೂ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗಾಗಿ ಬಳಸದೆ, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು, ಸಾಮರ್ಥ್ಯಗಳನ್ನು ಪರಿಚಯಿಸಿಕೊಳ್ಳಲು ಹಾಗೂ ವೃತ್ತಿಪರ ಸಂಪರ್ಕಗಳನ್ನು ಬೆಳೆಸಿಕೊಳ್ಳಲು ಪರಿಣಾಮಕಾರಿಯಾಗಿ ಬಳಸಬೇಕು ಎಂದರು. “ನೆಟ್‌ವರ್ಕ್ ಯಾವಾಗಲೂ ನೆಟ್‌ವರ್ತ್ ಆಗಿರುತ್ತದೆ” ಎಂದು ಹೇಳಿದ ಅವರು, ವೃತ್ತಿಜೀವನದ ಬೆಳವಣಿಗೆಯಲ್ಲಿ ಅರ್ಥಪೂರ್ಣ ವೃತ್ತಿಪರ ಸಂಬಂಧಗಳ ಮಹತ್ವವನ್ನು ವಿವರಿಸಿದರು. ಯುವಜನರು ಉದ್ಯೋಗಕ್ಕೆ ಸೇರಿದ ಬಳಿಕ ಸಂಸ್ಥೆಯು ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಸಂಸ್ಥೆಗೆ ಸೇರಿದ ನಂತರ ತಮ್ಮ ಕಾರ್ಯಕ್ಷಮತೆ, ನಡವಳಿಕೆ ಮತ್ತು ಬದ್ಧತೆಯ ಮೂಲಕ ಸಂಸ್ಥೆಯ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಕೃತಕ ಬುದ್ಧಿಮತ್ತೆ ಉದ್ಯೋಗ ಕ್ಷೇತ್ರದ ಸ್ವರೂಪವನ್ನು ವೇಗವಾಗಿ ಬದಲಾಯಿಸುತ್ತಿದ್ದು, ಅದನ್ನು ಉದ್ಯೋಗ ಕಸಿದುಕೊಳ್ಳುವ ತಂತ್ರಜ್ಞಾನವೆಂದು ಪರಿಗಣಿಸುವ ಬದಲು, ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ನೆರವಾಗುವ ಸಾಧನವಾಗಿ ನೋಡಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಯುವಜನರಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರಯತ್ನವನ್ನು ಶ್ಲಾಘಿಸಿದರು. ಲೋಕಸಭೆಯ ಅಧಿವೇಶನ ನಡೆಯುತ್ತಿದ್ದರೂ, ತಮ್ಮ ಕ್ಷೇತ್ರದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಉದ್ಯೋಗ ಮೇಳ ಆಯೋಜಿಸಿರುವುದಕ್ಕೆ ಮಹತ್ವ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ರೂಪಿಸಿರುವ ಈ ಮಾದರಿಯು ವಿಕಸಿತ ಭಾರತದ ನಿರ್ಮಾಣಕ್ಕೆ ಮಹತ್ವದ ಕೊಡುಗೆಯಾಗಿದೆ. ದೇಶವು ವಿಕಸಿತ ಭಾರತದ ಗುರಿಯನ್ನು ಸಾಧಿಸಬೇಕಾದರೆ, ಯುವಜನರಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಮತ್ತು ಅವಕಾಶಗಳನ್ನು ಸೃಷ್ಟಿಸುವ ಇಂತಹ ಸಂಸ್ಥೆಗಳು ಹಾಗೂ ಉಪಕ್ರಮಗಳು ಅಗತ್ಯ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಶಿಕ್ಷಣದೊಂದಿಗೆ ಪ್ರಾಯೋಗಿಕ ಜ್ಞಾನ ಮತ್ತು ಸಾಮಾನ್ಯ ಜ್ಞಾನವೂ ಅತ್ಯಂತ ಅಗತ್ಯ. “ಶಿಕ್ಷಣಕ್ಕಿಂತಲೂ ಸಾಮಾನ್ಯ ಜ್ಞಾನ ಬಹಳ ಮುಖ್ಯ” ಎಂದ ಅವರು, ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವ, ಸೂಕ್ತ ನಿರ್ಧಾರ ಕೈಗೊಳ್ಳುವ ಹಾಗೂ ಸವಾಲುಗಳಿಗೆ ಸಮರ್ಥವಾಗಿ ಪ್ರತಿಕ್ರಿಯಿಸುವ ಸಾಮರ್ಥ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ತಮ್ಮ ಕ್ಷೇತ್ರದಲ್ಲಿ ಇಷ್ಟೊಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಆಳ್ವಾಸ್ ಪ್ರಗತಿಯ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತರಿಸುತ್ತಿರುವ ಹಿನ್ನೆಲೆಯಲ್ಲಿ, ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರಿಗೆ ಈ ವ್ಯವಸ್ಥೆಯು ನಿರಂತರ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಎಲ್ಲರ ಮೇಲಿದೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜಾ, ಎಸ್‌ಡಿಎಮ್ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಹಾಗೂ ಐಟಿ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರಣ್ ವರ್ಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧಿಯಾ, ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ ಇದ್ದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಪ್ರಾಧ್ಯಪಕಿ ಪ್ರಿಯಾ ಸಿಕ್ವೇರಾ ಅತಿಥಿಗಳನ್ನು ಪರಿಚಯಿಸಿದರು. ಆಳ್ವಾಸ್ ಪ್ರಗತಿಯ ಆರಂಭಿಕ ದಿನಗಳಲ್ಲಿ ಉದ್ಯೋಗ ಮೇಳಗಳ ಆಯೋಜನೆಗೆ ಅಮೂಲ್ಯ ಕೊಡುಗೆ ನೀಡಿದ ದಿವಂಗತ ಎ.ಕೆ. ಮಹೇಶ್ ಶೇಖರ್‌ರವರ ಸ್ಮರಣಾರ್ಥ ಉದ್ಘಾಟನಾ ವೇದಿಕೆಯನ್ನು ಸಮರ್ಪಿಸಲಾಯಿತು. ಕರಾವಳಿಯ ಸಾಧಕರಿಗೆ ಸನ್ಮಾನ ಉದ್ಘಾಟನಾ ಸಮಾರಂಭದಲ್ಲಿ ಕರಾವಳಿಯ ಉದ್ಯಮ ಹಾಗೂ ಉದ್ಯೋಗ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪರವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಕೆ. ಪ್ರಕಾಶ್ ಶೆಟ್ಟಿ, ಭವಾನಿ ಶಿಪ್ಪಿಂಗ್ ಗ್ರೂಪ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಕುಸುಮೋದರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸ್ಪರ್ಟೈಸ್ ಕಾಂಟ್ರಾಕ್ಟಿಂಗ್ ಕಂಪನಿಯ ಸಹ-ಸಂಸ್ಥಾಪಕ ಮೊಹಮ್ಮದ್ ಅಶ್ಫಾಕ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಗಾಲಿಕುರ್ಚಿಯಲ್ಲಿ ಬಂದ ಭವ್ಯಶ್ರೀಗೆ ಆಳ್ವಾಸ್ ಪ್ರಗತಿಯಲ್ಲಿ ಉದ್ಯೋಗದ ಹೊಸ ದಾರಿ ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದ ಭವ್ಯಶ್ರೀ ಅವರ ನಿರೀಕ್ಷೆಗೆ ಆಳ್ವಾಸ್ ಪ್ರಗತಿ–2026 ಹೊಸ ತಿರುವು ನೀಡಿದೆ. ದೈಹಿಕ ವಿಶೇಷಚೇತನರಾಗಿರುವ ಅವರು, ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಆಗಮಿಸಿ, ಉದ್ಯೋಗ ಮೇಳದಲ್ಲಿ ಭಾಗವಹಿಸಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿದ್ದಾರೆ. ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಭವ್ಯಶ್ರೀ, ಒಂದು ವರ್ಷದ ಹಿಂದೆ ಎಂ.ಕಾಂ ಪದವಿ ಪಡೆದಿದ್ದರು. ಪದವಿ ಪಡೆದ ಬಳಿಕ ಉದ್ಯೋಗಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ, ಕಳೆದ ಒಂದು ವರ್ಷದಿಂದ ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದರು. ಉದ್ಯೋಗದ ನಿರೀಕ್ಷೆಯೊಂದಿಗೆ ಆಳ್ವಾಸ್ ಪ್ರಗತಿಗೆ ಆಗಮಿಸಿದ ಭವ್ಯಶ್ರೀ ಅವರಿಗೆ, ದೈಹಿಕ ಸವಾಲು ಯಾವುದೂ ತಮ್ಮ ಕನಸಿಗೆ ಅಡ್ಡಿಯಾಗಲಿಲ್ಲ. ತಮ್ಮ ಸಹೋದರನ ನೆರವಿನಿಂದ ಗಾಲಿಕುರ್ಚಿಯಲ್ಲಿ ಮೇಳಕ್ಕೆ ಆಗಮಿಸಿ, ಸಂದರ್ಶನ ಎದುರಿಸಿ, ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಅಂತಿಮವಾಗಿ ಮೈಸೂರಿನ ರೆಡ್ಡೀಸ್ ಫೌಂಡೇಷನ್‌ನಲ್ಲಿ ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗುವ ಮೂಲಕ ತಮ್ಮ ಬಹುದಿನಗಳ ಉದ್ಯೋಗದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಉದ್ಯೋಗ ಸಿಕ್ಕಿರುವುದು ತುಂಬಾ ಸಂತೋಷ ತಂದಿದೆ. ಕಳೆದ ಒಂದು ವರ್ಷದಿಂದ ಉದ್ಯೋಗಕ್ಕಾಗಿ ಕಾಯುತ್ತಿದ್ದೆ. ಆಳ್ವಾಸ್ ಪ್ರಗತಿಗೆ ಬಂದು ಸಂದರ್ಶನ ಎದುರಿಸಿದ ಬಳಿಕ ನನಗೆ ಈ ಅವಕಾಶ ದೊರೆತಿದೆ. ಮೈಸೂರಿಗೆ ತೆರಳಿ ಕೆಲಸ ಮಾಡಲು ಸಿದ್ಧಳಾಗಿದ್ದೇನೆ ಎಂದು ಭವ್ಯಶ್ರೀ ಸಂತಸ ವ್ಯಕ್ತಪಡಿಸಿದರು. ಆಳ್ವಾಸ್ ಪ್ರಗತಿ 2026ರ ಮೊದಲ ದಿನದ ವಿವರ: ಆನ್‌ಲೈನ್ ನೋಂದಣಿ ಮಾಡಿಸಿದ ಉದ್ಯೋಗಾಕಾಂಕ್ಷಿಗಳು: 13247 ಸ್ಪಾಟ್ ನೋಂದಣಿ ಮಾಡಿಸಿದ ಅಭ್ಯರ್ಥಿಗಳು: 83 ಉದ್ಯೋಗ ಮೇಳಕ್ಕೆ ಆಗಮಿಸಿದ ಕಂಪನಿಗಳು: 326 ಮೊದಲ ದಿನ ಆಗಮಿಸಿದ ಉದ್ಯೋಗಾಕಾಂಕ್ಷಿಗಳು: 13016

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನಶಿಬಿರ

Article Image

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಆ.8ರಂದು ನಡೆಯಿತು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದಲ್ಲಿ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ ಇವರ ಮಾರ್ಗದರ್ಶನದಲ್ಲಿ ಅತ್ಯಂತ ಅವಶ್ಯವಾಗಿರುವ ರಕ್ತದಾನ ಶಿಬಿರವನ್ನು ನಿರಂತರವಾಗಿ ನಮ್ಮ ಆಸ್ಪತ್ರೆಯ ವತಿಯಿಂದ ನಡೆಸುತ್ತಿದ್ದೇವೆ. ದಾನ ಮಾಡಿದವರಿಗೂ ಅನುಕೂಲವಾಗುವ ದಾನ ಅಂದರೆ ಅದು ರಕ್ತದಾನ. ರಕ್ತದಾನ ಮಾಡಿದಾಗ ಉಚಿತವಾಗಿ ನಿಮ್ಮ ರಕ್ತದ ಪರೀಕ್ಷೆ ನಡೆಯುತ್ತದೆ. ದಾನದಿಂದಾಗಿ ನಿಮ್ಮ ಶರೀರದಲ್ಲಿ ರಕ್ತದ ಮರುಸೃಷ್ಟಿಯಾಗುತ್ತದೆ. ನೀವು ನೀಡುವ ರಕ್ತ 3-4 ಮಂದಿಗೆ ಪ್ರಯೋಜನಕ್ಕೆ ಬರುತ್ತದೆ ಎಂದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ರಕ್ತದಾನದ ಮಹತ್ವ ವಿವರಿಸುತ್ತಾ, ಮಳೆಗಾಲದಲ್ಲಿ ಡೆಂಗ್ಯೂ ಸರ್ವೇಸಾಮಾನ್ಯ. ಡೆಂಗ್ಯೂ ಪೀಡಿತರಲ್ಲಿ ಪ್ಲೇಟ್‌ಲೆಟ್ ಕೊರತೆ ಇರುವುದರಿಂದ ಈ ಸಮಯದಲ್ಲಿ ರಕ್ತದಾನ ಹೆಚ್ಚಿನ ಮಹತ್ವ ಪಡೆಯುತ್ತದೆ ಎಂದರು. ವೈದ್ಯಕೀಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ ರಕ್ತದಾನ ಮಾಡುವುದರಿಂದ ರಕ್ತದಲ್ಲಿ ಹಿಮೋಗ್ಲೋಬಿನ್ ಮತ್ತು ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂದರು. ನರರೋಗ ತಜ್ಞರಾದ ಡಾ| ಅರುಣ್ ಕುಮಾರ್ ಮಾತನಾಡಿ, ರಕ್ತದ ಅವಶ್ಯಕತೆ ಇರುವ ರೋಗಿಗೆ ಮತ್ತು ವೈದ್ಯರಿಗೆ ರಕ್ತದ ಮಹತ್ವ ಗೊತ್ತಿರುತ್ತದೆ. ಎಷ್ಟೋ ಬಾರಿ ವೈದ್ಯರು ರೋಗಿಯ ಜೀವ ಉಳಿಸಲು ರಕ್ತಕ್ಕಾಗಿ ಪರದಾಡಬೇಕಾಗುತ್ತದೆ ಎಂದರು. ಮಂಗಳೂರಿನ ರೆಡ್‌ಕ್ರಾಸ್ ಸಂಸ್ಥೆಯ ಟೆಕ್ನಿಕಲ್ ಸೂಪರ್‌ವೈಸರ್ ನಾಗಭೂಷನ್ ಮಾತನಾಡುತ್ತಾ, ಇನ್ನೊಬ್ಬರ ಜೀವ ಉಳಿಸಬಲ್ಲ ಉದ್ದೇಶದಿಂದ ಮಾಡುವ ರಕ್ತದಾನ ದಾನಗಳಲ್ಲಿಯೇ ಶ್ರೇಷ್ಠದಾನ. ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ರಕ್ತದ ತುರ್ತು ಅವಶ್ಯಕತೆ ಇರುವ ನೂರಾರು ರೋಗಿಗಳಿಗೆ ಸಹಾಯ ಮಾಡಿದೆ ಎಂದರು. ಬ್ಲಡ್ ಸ್ಟೋರೇಜ್ ಮೆಡಿಕಲ್ ಆಫೀಸರ್ ಡಾ| ಪ್ರೌಸ್ಟಿಲ್ ರಕ್ತದಾನಿಗಳಿಗೆ ಶುಭಹಾರೈಸಿದರು. ಮಾರುಕಟ್ಟೆ ಮತ್ತು ಸಂಪರ್ಕ ಅಧಿಕಾರಿ ಭವಿಷ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾರ್ಕೆಟಿಂಗ್ ಎಕ್ಸ್ಕ್ಯೂಟಿವ್ ಸುಮಂತ್ ರೈ ಮತ್ತು ಲ್ಯಾಬ್ ಇನ್‌ಚಾರ್ಜ್ ಮೀಣಾಕ್ಷಿ ರಮೇಶ್ ಸಹಕರಿಸಿದರು.

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ

Article Image

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ನಡೆಸುವ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಶಾಂತಿವನ ಟ್ರಸ್ಟ್ ನ ಯೋಗ ನಿರ್ದೇಶಕ ಡಾ. ಶಶಿಕಾಂತ್ ಜೈನ್ ತಿಳಿಸಿದ್ದಾರೆ. “ನಮ್ಮೂರ ಸಂತೆ” ಎಂಬ ವಿಷಯದಲ್ಲಿ ಅಂಚೆ ಕಾರ್ಡ್ ನಲ್ಲಿ ಚಿತ್ರಗಳನ್ನು ರಚಿಸಿ 2027ರ ಮಾರ್ಚ್ 31ರೊಳಗೆ ಕಳುಹಿಸಬೇಕು. ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳಿರುತ್ತವೆ. ಸ್ಪರ್ಧೆಗೆ ಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ: ನಿರ್ದೇಶಕರು, ಅಂಚೆ-ಕುಂಚ ವಿಭಾಗ, ಶಾಂತಿವನ, ಧರ್ಮಸ್ಥಳ – 574216.

ಎಕ್ಸಲೆಂಟ್: ಡ್ರಗ್ ಅವೇರ್‌ನೆಸ್ ಕಾರ್ಯಕ್ರಮ

Article Image

ಎಕ್ಸಲೆಂಟ್: ಡ್ರಗ್ ಅವೇರ್‌ನೆಸ್ ಕಾರ್ಯಕ್ರಮ

ಮೂಡುಬಿದಿರೆ: "ವಿದ್ಯಾರ್ಥಿಗಳು ತಮ್ಮ ಸುವರ್ಣ ಭವಿಷ್ಯವನ್ನು ಸತ್ಪ್ರಜೆಗಳಾಗಿ ರೂಪಿಸಿಕೊಳ್ಳಬೇಕೆ ಹೊರತು ದುರಭ್ಯಾಸಗಳಿಗೆ ಬಲಿಯಾಗಬಾರದು. ಜೀವನವನ್ನು ಸುಂದರವಾಗಿ ಕಟ್ಟಿಕೊಳ್ಳಿ, ವ್ಯಸನವನ್ನಲ್ಲ," ಎಂದು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಜೇಂದ್ರ ಬಿ. ಪ್ರತಿಪಾದಿಸಿದರು. ಇಲ್ಲಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಮುದಾಯವನ್ನು ಮಾದಕ ದ್ರವ್ಯಗಳ ದುಷ್ಪರಿಣಾಮದಿಂದ ದೂರವಿರಿಸಿ, ಆರೋಗ್ಯವಂತ ಹಾಗೂ ಮೌಲ್ಯಾಧಾರಿತ ಬದುಕಿನತ್ತ ಮುನ್ನಡೆಸುವ ಉದ್ದೇಶದಿಂದ ಆಯೋಜಿಸಲಾಗಿದ್ದ 'ಡ್ರಗ್ ಅವೇರ್‌ನೆಸ್' (ಮಾದಕ ವಸ್ತು ಜಾಗೃತಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಾದಕ ವಸ್ತುಗಳ ಸೇವನೆಯು ಕೇವಲ ಒಬ್ಬ ವ್ಯಕ್ತಿಯ ಬದುಕನ್ನು ಮಾತ್ರವಲ್ಲದೆ, ಆತನ ಕುಟುಂಬದ ನೆಮ್ಮದಿ ಮತ್ತು ಇಡೀ ಸಮಾಜದ ಶಾಂತಿಯನ್ನೇ ಕದಡುವ ಗಂಭೀರ ಪಿಡುಗಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. "ಕ್ಷಣಿಕ ಕುತೂಹಲ ಅಥವಾ ಕೆಟ್ಟ ಸ್ನೇಹಿತರ ಸಂಗದಿಂದ ಆರಂಭವಾಗುವ ಸಣ್ಣ ಅಭ್ಯಾಸ, ಇಡೀ ಜೀವನದ ದಿಕ್ಕನ್ನೇ ಹಾಳುಗೆಡವಬಲ್ಲದು. ಶೈಕ್ಷಣಿಕವಾಗಿ ಬೆಳೆಯಲು ನಿಮ್ಮ ಮುಂದೆ ಹತ್ತಾರು ಸನ್ಮಾರ್ಗದ ಆಯ್ಕೆಗಳಿವೆ. ಹೀಗಾಗಿ ವಿದ್ಯಾರ್ಥಿಗಳು ಸೂಕ್ತ ಕಾನೂನಿನ ಅರಿವು, ಆತ್ಮ ಸಂಯಮ ಹಾಗೂ ಉತ್ತಮ ಜೀವನಮೌಲ್ಯಗಳನ್ನು ಮೈಗೂಡಿಸಿಕೊಂಡು ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು," ಎಂದು ರಾಜೇಂದ್ರ ಬಿ. ಯುವಜನತೆಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಮುಲ್ಕಿ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ನಾಯಕ್, ಯುವಜನತೆಯನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳ ಜಾಲ ವಿಸ್ತರಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು. ಪ್ರತಿಯೊಬ್ಬ ವಿದ್ಯಾರ್ಥಿಯೂ ಎಚ್ಚರಿಕೆಯ ಮನೋಭಾವ ಬೆಳೆಸಿಕೊಂಡು, ಸಂಶಯಾಸ್ಪದ ಚಟುವಟಿಕೆಗಳ ಬಗ್ಗೆ ನಿರ್ಭಯವಾಗಿ ಮಾಹಿತಿ ನೀಡುವ ಜವಾಬ್ದಾರಿಯುತ ನಾಗರಿಕನಾಗಬೇಕು ಎಂದು ಅವರು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಜೀವ ದೇವರ ಕೊಡುಗೆ; ಜೀವನ ನಮ್ಮ ಸಾಧನೆ. ಜೀವವನ್ನು ಕಾಪಾಡಿ, ಜೀವನವನ್ನು ಸಾರ್ಥಕಗೊಳಿಸಿ. ಜೀವ ಅಮೂಲ್ಯ; ಜೀವನ ಅದಕ್ಕಿಂತಲೂ ಅಮೂಲ್ಯವಾದ ಹೊಣೆಗಾರಿಕೆ. ಶಿಕ್ಷಣದ ನಿಜವಾದ ಉದ್ದೇಶ ಕೇವಲ ಶೈಕ್ಷಣಿಕ ಸಾಧನೆಯಲ್ಲ; ಉತ್ತಮ ವ್ಯಕ್ತಿತ್ವ, ಸಾಮಾಜಿಕ ಬದ್ಧತೆ ಹಾಗೂ ರಾಷ್ಟ್ರಪ್ರಜ್ಞೆಯುಳ್ಳ ಯುವಜನರನ್ನು ರೂಪಿಸುವುದಾಗಿದೆ ಎಂದು ಹೇಳಿದರು. ಜ್ಞಾನ, ಸಂಸ್ಕಾರ ಮತ್ತು ಶಿಸ್ತಿನ ಸಮನ್ವಯವೇ ವಿದ್ಯಾರ್ಥಿಯ ಬದುಕಿನ ನಿಜವಾದ ಯಶಸ್ಸಿನ ಮಾನದಂಡ ಎಂದು ಅವರು ಅಭಿಪ್ರಾಯಪಟ್ಟರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಕೆರಿಯರ್ ಗೈಡೆನ್ಸ್ ತಜ್ಞ ವಿವೇಕ್ ಭಂಡಾರಿ, ಹಾಗೂ ಪ್ರಾಂಶುಪಾಲ ಪುಷ್ಪರಾಜ್ ಉಪಸ್ಥಿತರಿದ್ದರು. ಉಪನ್ಯಾಸಕಿ ಮಂಜುಶ್ರೀ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.

ಎಸ್‌ಡಿಎಂ ಐಟಿಐ: 41ನೇ ಬ್ಯಾಚ್‌ಗೆ ಚಾಲನೆ

Article Image

ಎಸ್‌ಡಿಎಂ ಐಟಿಐ: 41ನೇ ಬ್ಯಾಚ್‌ಗೆ ಚಾಲನೆ

ವೇಣೂರು, ಆ. 3: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್‌ಡಿಎಂ ಐಟಿಐ), ವೇಣೂರಿನ 41ನೇ ಬ್ಯಾಚ್‌ನ ಉದ್ಘಾಟನಾ ಸಮಾರಂಭ ಸೋಮವಾರ ಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕ್ಷೇಮವನ, ಬೆಂಗಳೂರು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರದ್ಧಾ ಅಮಿತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಎಸ್‌ಡಿಎಂ ಐಟಿಐಯ ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ ಮತ್ತು ಉತ್ತಮ ಕಾರ್ಯಕ್ಷಮತೆಗೆ ಹೆಸರುವಾಸಿಯಾಗಿದ್ದಾರೆ. ಉದ್ಯಮಗಳಲ್ಲಿ ಉತ್ತಮ ಕೆಲಸಗಾರರಾಗಿ ಗುರುತಿಸಿಕೊಂಡಿರುವ ಈ ಸಂಸ್ಥೆಯ ವಿದ್ಯಾರ್ಥಿಗಳು ತಮ್ಮ ಗುಣಮಟ್ಟವನ್ನು ಸದಾ ಉಳಿಸಿಕೊಳ್ಳಬೇಕು” ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸುರಕ್ಷಾ ಕರಿಯರ್ ಅಕಾಡೆಮಿ, ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್ ರೈ ರವರು ಮಾತನಾಡಿ, "ಭವಿಷ್ಯದ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ತಾಂತ್ರಿಕ ಕೌಶಲ್ಯ ಅತ್ಯಂತ ಮುಖ್ಯ. ವೃತ್ತಿ ಜೀವನದ ಆರಂಭದ ವರ್ಷಗಳಲ್ಲಿ ಸಂಬಳದ ಬಗ್ಗೆ ಹೆಚ್ಚು ಗಮನ ಹರಿಸದೆ, ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳುವುದರತ್ತ ಹೆಚ್ಚಿನ ಒತ್ತು ನೀಡಬೇಕು. ಕೌಶಲ್ಯ ಇದ್ದರೆ ಉತ್ತಮ ಅವಕಾಶಗಳು ಮತ್ತು ಉತ್ತಮ ಸಂಬಳ ತಾನಾಗಿಯೇ ದೊರೆಯುತ್ತವೆ' ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪದ್ಮಂಭ ಗ್ರೂಪ್, ವೇಣೂರು ಸಂಸ್ಥೆಯ ಮಾಲೀಕರಾದ ಜಿನರಾಜ್ ಜೈನ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಕೇವಲ ಉದ್ಯೋಗವನ್ನು ಹುಡುಕುವವರಾಗದೆ, ಸ್ವಯಂ ಉದ್ಯೋಗ ಆರಂಭಿಸಿ ಇತರರಿಗೂ ಉದ್ಯೋಗ ನೀಡುವ ಉದ್ಯಮಿಗಳಾಗಿ ಬೆಳೆಯಬೇಕು. ಸಮಾಜಕ್ಕೆ ಉದ್ಯೋಗ ಸೃಷ್ಟಿಸುವ ಜವಾಬ್ದಾರಿಯನ್ನು ಯುವಕರು ವಹಿಸಬೇಕು” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ ಕೆ.ಆರ್. ಮಾತನಾಡಿ, 'ಎಸ್‌ಡಿಎಂ ಐಟಿಐ ಶಿಸ್ತು, ಗುಣಮಟ್ಟದ ತಾಂತ್ರಿಕ ಶಿಕ್ಷಣ ಹಾಗೂ ಅತ್ಯುತ್ತಮ ಕ್ಯಾಂಪಸ್ ನೇಮಕಾತಿಗೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳು ಶಿಸ್ತು, ಕೌಶಲ್ಯ ಮತ್ತು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡರೆ ದೇಶದ ಯಾವುದೇ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ” ಎಂದು ಹೇಳಿದರು. ಕಾರ್ಯಕ್ರಮದ ಆರಂಭದಲ್ಲಿ ಪ್ರಸನ್ನಕುಮಾರ್ ಪ್ರಾರ್ಥಿಸಿ, ರತ್ನಾಕರ ರಾವ್ ಎಚ್. ರವರು ಸ್ವಾಗತಿಸಿ ಸಂಸ್ಥೆಯ ಸಾಧನೆಗಳನ್ನು ಪರಿಚಯಿಸಿದರು. ಪದ್ಮಪ್ರಸಾದ್ ಬಸ್ತಿರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸತೀಶ್ ರವರು ವಂದನಾರ್ಪಣೆ ಸಲ್ಲಿಸಿದರು.

ಕುತ್ಲೂರು: ವನಮಹೋತ್ಸವ ಕಾರ್ಯಕ್ರಮ

Article Image

ಕುತ್ಲೂರು: ವನಮಹೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉದ್ಘಾಟಿಸಿ ಶುಭ ಹಾರೈಸಿದರು. ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣುಗಳ ಉದ್ಯಾನ ನಿರ್ಮಿಸಿಕೊಡುವುದಾಗಿ ಅವರು ಭರವಸೆ ನೀಡಿದರು. ಶಾಲಾ ವಠಾರದಲ್ಲಿ ಗಿಡನೆಟ್ಟು ಉತ್ತಮ ರೀತಿಯಲ್ಲಿ ಬೆಳೆಸುವ ಪ್ರತಿ ವಿದ್ಯಾರ್ಥಿಗೆ ತಲಾ ಇನ್ನೂರು ರೂ. ಬಹುಮಾನ, ಶಾಲಾ ಶಿಕ್ಷಕರೊಬ್ಬರ ಮಾಸಿಕ ವೇತನ ಎಂಟು ಸಾವಿರ ರೂ. ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ತನ್ನ ವೈಯಕ್ತಿಕ ದೇಣಿಗೆಯಾಗಿ ನೀಡುವುದಾಗಿ ಅವರು ಪ್ರಕಟಿಸಿದರು. ಪರಿಸರ ಸಂರಕ್ಷಣೆಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಹೇಳಿದ ಅವರು ಶಾಲೆಯ ಪ್ರಗತಿಗೆ ಜಿಲ್ಲಾ ಪತ್ರಕರ್ತರ ಸಂಘದ ಕೊಡುಗೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್, ಬಿ.ಎನ್. ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್ ಮತ್ತು ಉಪಾಧ್ಯಕ್ಷರಾದ ಶ್ವೇತಾ ಜಗದೀಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಎಕ್ಸಲೆಂಟ್: ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ

Article Image

ಎಕ್ಸಲೆಂಟ್: ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಜವಾಬ್ದಾರಿಯ ಪ್ರಜ್ಞೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ನಿರ್ದೇಶಕರಾದ ರವೀಂದ್ರ ಪುತ್ತೂರು ಹೇಳಿದರು. ಅವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾದ ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. “ಶಾಲಾ ಸಂಸತ್ತು ಎಂಬುದು ಕೇವಲ ವಿದ್ಯಾರ್ಥಿಗಳಿಗೆ ಹುದ್ದೆ ನೀಡುವ ಕಾರ್ಯಕ್ರಮವಲ್ಲ; ಅದು ಭವಿಷ್ಯದ ಉತ್ತಮ ನಾಯಕರು, ಜವಾಬ್ದಾರಿಯುತ ನಾಗರಿಕರು ಹಾಗೂ ಸಮಾಜಮುಖಿ ವ್ಯಕ್ತಿತ್ವಗಳನ್ನು ರೂಪಿಸುವ ಪ್ರಜಾಪ್ರಭುತ್ವದ ಪಾಠಶಾಲೆಯಾಗಿದೆ. ವಿದ್ಯಾರ್ಥಿಗಳು ಇಂದು ಶಾಲಾ ಸಂಸತ್ತಿನ ಮೂಲಕ ಕಲಿಯುವ ನಾಯಕತ್ವ, ಶಿಸ್ತು, ಸಮಯಪಾಲನೆ, ಸೇವಾ ಮನೋಭಾವ ಮತ್ತು ಜವಾಬ್ದಾರಿಯ ಗುಣಗಳು ಇರುವವರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಪ್ರಭಾವ ಬೀರುತ್ತಾರೆ. ಜಗತ್ತಿನ ಅತ್ಯುತ್ತಮ ನಾಯಕನ ಆಡಳಿತ ವ್ಯವಸ್ಥೆಯಲ್ಲಿ ನಾವಿದ್ದೇವೆ ಅದು ನಮಗೆ ಹೆಮ್ಮೆಯ ಸಂಗತಿ. ಲಾಲ್ ಬಹದ್ದೂರ್ ಶಾಸ್ತ್ರಿಯವರ ನಾಯಕನ ಬದ್ಧತೆಯಂತೆ ನಾಯಕರು ಇರಬೇಕು. ನಮ್ಮ ಮೌಲ್ಯಗಳಿಗೆ ನಮ್ಮ ಯೋಚನೆಗಳಿಗೆ, ನಮ್ಮ ಕೆಲಸಗಳಿಗೆ ನಾವು ಗೌರವ ನೀಡಿದರೆ ನಾವು ಹೆಮ್ಮೆಯ ಭಾರತದ ರಾಯಭಾರಿಗಳಾಗುತ್ತೇವೆ ಎಂದರು. ಮುಂದುವರಿದು ಅವರು, “ಎಕ್ಸೆಲೆಂಟ್ ಶಿಕ್ಷಣ ಸಂಸ್ಥೆ ಶಿಕ್ಷಣದಲ್ಲಿ ಮಾತ್ರವಲ್ಲದೆ ಸಂಸ್ಕಾರ, ನೈತಿಕ ಮೌಲ್ಯಗಳು, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಯಕತ್ವ ಬೆಳೆಸುವ ಕಾರ್ಯಕ್ರಮಗಳ ಮೂಲಕ ರಾಜ್ಯದಲ್ಲೇ ಮಾದರಿ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಪ್ರಜಾಪ್ರಭುತ್ವದ ಸುಖವನ್ನು ವಿದ್ಯಾರ್ಥಿಗಳು ಅನುಭವಿಸುವಂತೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಈ ಶಿಕ್ಷಣ ಸಂಸ್ಥೆ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಂಸ್ಥೆ ನೀಡುತ್ತಿರುವ ಒತ್ತು ನಿಜಕ್ಕೂ ಶ್ಲಾಘನೀಯವಾಗಿದೆ. ಶಾಲಾ ಸಂಸತ್ತಿಗೆ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಹುದ್ದೆಯನ್ನು ಅಧಿಕಾರದ ಸಂಕೇತವಾಗಿ ಅಲ್ಲ, ಸೇವೆಯ ಅವಕಾಶವಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕು. ಸಹಪಾಠಿಗಳ ಸಮಸ್ಯೆಗಳಿಗೆ ಸ್ಪಂದಿಸಿ, ಶಿಕ್ಷಕರೊಂದಿಗೆ ಸಮನ್ವಯ ಸಾಧಿಸಿ ಶಾಲೆಯ ಶಿಸ್ತು, ಸ್ವಚ್ಛತೆ ಮತ್ತು ಉತ್ತಮ ವಾತಾವರಣ ಕಾಪಾಡುವಲ್ಲಿ ಮುಂಚೂಣಿಯಲ್ಲಿರಬೇಕು” ಎಂದು ಕರೆ ನೀಡಿದರು. ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ವಿದ್ಯಾರ್ಥಿಗಳು ಇಲ್ಲಿಗೆ ಬಂದಿರುವ ಉದ್ದೇಶವನ್ನು ಮರೆಯಬಾರದು. ಜೀವನದಲ್ಲಿ ಒಮ್ಮೆ ಸೋಲಿನ ಇಳಿಜಾರಿಗೆ ಇಳಿದರೆ ನಾವು ಜೀವನದಲ್ಲಿ ಸೋಲುತ್ತೇವೆ. “ಇಂದಿನ ವಿದ್ಯಾರ್ಥಿಗಳೇ ನಾಳಿನ ಜನಪ್ರತಿನಿಧಿಗಳು, ಆಡಳಿತಗಾರರು, ವಿಜ್ಞಾನಿಗಳು ಮತ್ತು ರಾಷ್ಟ್ರ ನಿರ್ಮಾತೃಗಳು. ಆದ್ದರಿಂದ ಶಾಲಾ ದಿನಗಳಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಂತಹ ಮೌಲ್ಯಧಾರಿತ ಶಿಕ್ಷಣ ನೀಡುವ ಸಂಸ್ಥೆಗಳು ಸಮಾಜಕ್ಕೆ ಉತ್ತಮ ನಾಗರಿಕರನ್ನು ಕೊಡುಗೆಯಾಗಿ ನೀಡುತ್ತಿವೆ. ನೂತನ ಶಾಲಾ ಸಂಸತ್ತಿನ ಎಲ್ಲಾ ಸದಸ್ಯರು ತಮ್ಮ ಜವಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಶಾಲೆಗೆ ಮತ್ತಷ್ಟು ಕೀರ್ತಿತರಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ, ಮತದಾನ ಪ್ರತಿಯೊಬ್ಬರ ಹಕ್ಕು ಅಂತಹ ಹಕ್ಕನ್ನು ನಾವು ಸರಿಯಾದ ವ್ಯಕ್ತಿಗೆ ನೀಡಬೇಕು. ವಿದ್ಯಾರ್ಥಿಗಳು ಒಳ್ಳೊಳ್ಳೆ ನಾಯಕರುಗಳನ್ನು ಮಾದರಿಯಾಗಿ ತೆಗೆದುಕೊಂಡು ಅತ್ಯುತ್ತಮ ನಾಯಕರಾಗಬೇಕು, ಒಳ್ಳೆಯ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ತಂದೆ ತಾಯಿಯರ ಕಷ್ಟ ಯಾರಿಗೆ ಗೊತ್ತಿರುತ್ತದೆಯೋ ಅವರು ಯಾವತ್ತೂ ಕೆಟ್ಟ ದಾರಿ ಹಿಡಿಯುವುದಿಲ್ಲ ಹೆತ್ತವರು ಹೆಮ್ಮೆ ಪಡುವಂತಹ ವ್ಯಕ್ತಿಗಳು ನೀವಾಗಬೇಕು ಎಂದು ವಿದ್ಯಾರ್ಥಿಗಳು ಹಾಗೂ ನೂತನವಾಗಿ ಆಯ್ಕೆಯಾದ ಶಾಲಾ ಸಂಸತ್ ಸದಸ್ಯರಿಗೆ ಶುಭ ಹಾರೈಸಿ, ತಮ್ಮ ಜವಬ್ದಾರಿಗಳನ್ನು ಪ್ರಾಮಾಣಿಕತೆ ಹಾಗೂ ಸಮರ್ಪಣಾ ಮನೋಭಾವದಿಂದ ನಿರ್ವಹಿಸಿ ಶಾಲೆಗೆ ಉತ್ತಮ ಹೆಸರು ತರುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಮಾತನಾಡಿ. ಶಾಲಾ ಸಂಸತ್ತಿನ ಸದಸ್ಯರು ವಿದ್ಯಾರ್ಥಿಗಳ ಧ್ವನಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ತಾಯಿ ಮನೆಯಲ್ಲಿ ಹೇಗೆ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸುತ್ತಾಳೋ ಹಾಗೇ ನಾಯಕರಾದವರು ಇರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಳ್ಳೊಳ್ಳೆಯ ಸಾಮಾರ್ಥ್ಯ ಇರುತ್ತದೆ. ಅದನ್ನು ನಿಮ್ಮ ಸಾಧನೆಗೆ ಪೂರಕವಾಗಿ ಉಪಯೋಗಿಸಿಕೊಳ್ಳಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಒಳ್ಳೆಯದಕ್ಕೆ ಬಳಸಿಕೊಳ್ಳಿ ಎಂದು ಹೇಳುತ್ತಾ ಶಿಸ್ತು, ಸಮಯಪಾಲನೆ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಅಳವಡಿಸಿಕೊಂಡು ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ.ಪಿ ಸಂಪತ್ ಕುಮಾರ್, ಸಿಬಿಎಸ್‌ಸಿ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ್, ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಸಂಸತ್ತಿನ ನಾಯಕನಾಗಿ ಋಷಿಕೇಶ್ ಎ ಮಿನಾಚೆ, ಉಪನಾಯಕ ನಿಶಾಂತ್ ರಾಜ್, ಸ್ಪೀಕರ್ ನಿಹಾರಿಕ, ಶಿಕ್ಷಣ ಮತ್ತು ಸಾಂಸ್ಕತಿಕ ಮಂತ್ರಿ ಸಯ್ಯದಾ ಆನಂ, ಶಿಸ್ತು ಮಂತ್ರಿ ದೃಷ್ಠಿ, ಕ್ರೀಡಾ ಮಂತ್ರಿ ಚೇತನ್, ಜಲಶಕ್ತಿ ಮಂತ್ರಿ ಸಾನ್ವಿಕಾ ಹಾಗೂ ವಿರೋಧ ಪಕ್ಷದ ನಾಯಕಿಯಾಗಿ ತನ್ವಿ ಪೂಜಾರಿ ತಮ್ಮ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಉಪಮುಖ್ಯೋಪಾಧ್ಯಾಯರಾದ ಜಯಶೀಲ ಬೆಳ್ತಂಗಡಿ ಕ್ಷೇತ್ರದ ಜನಪ್ರೀಯ ಶಾಸಕರಾದ ಹರೀಶ್ ಪೂಂಜಾ ಅವರು ಕಾರ್ಯಕ್ರಮದ ಕುರಿತಾಗಿ ಕಳುಹಿಸಿದ ಶುಭ ನುಡಿಗಳ ಸಂದೇಶವನ್ನು ವಾಚಿಸಿದರು. ಶಿಕ್ಷಕಿ ರಶ್ಮಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಸ್ವರ್ಣಲತಾ ಸಂಸತ್ತ್ತಿನ ನೂತನ ನಾಯಕರ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಶಿಕ್ಷಕಿ ವನಿತಾ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ ಸಂಸತ್ತಿನ ನಾಯಕ ಋಷಿಕೇಶ್ ನಾಯಕನ ಜವಾಬ್ದಾರಿಗಳನ್ನು, ಶಿಸ್ತು ಮಂತ್ರಿ ದೃಷ್ಠಿ, ವಿರೋಧ ಪಕ್ಷದ ನಾಯಕಿ ತನ್ವಿ ಪೂಜಾರಿ ತಮ್ಮ ತಮ್ಮ ಜವಾಬ್ದಾರಿಗಳನ್ನು ವಾಚಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಸ್ವಾಗತಿಸಿದರು ಶಿಕ್ಷಕಿ ಜಯಲಕ್ಷ್ಮೀ ನಿರೂಪಿಸಿದರು. ಸ್ಪೀಕರ್ ನಿಹಾರಿಕ ವಂದಿಸಿದರು. ನೂತನ ಸಂಸತ್ ಸದಸ್ಯರ ಪದಗ್ರಹಣದೊಂದಿಗೆ ಕಾರ್ಯಕ್ರಮವು ಸಂಭ್ರಮ, ಶಿಸ್ತು ಹಾಗೂ ರಾಷ್ಟ್ರ ಭಕ್ತಿಯ ವಾತವರಣದಲ್ಲಿ ಯಶಸ್ವಿಯಾಗಿ ನೆರವೇರಿತು.

ಆಳ್ವಾಸ್‌: ಕನ್ನಡ ಗಾನ ಗುಚ್ಛ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

Article Image

ಆಳ್ವಾಸ್‌: ಕನ್ನಡ ಗಾನ ಗುಚ್ಛ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ' ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಸಂಯೋಜಿಸಿದ್ದಾರೆ. ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು ತಂಡದಲ್ಲಿ ಡಾ| ಜೀವನ್ ರಾಂ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ಮುಂತಾದವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ ಮನೋಭಾವವಿದೆ ಎಂದರು. ಅವರು ವೈದ್ಯರ ದಿನಾಚರಣೆಯ ಅಂಗವಾಗಿ ಇಲ್ಲಿನ ವೈದ್ಯರನ್ನು ಸನ್ಮಾನಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯರಿಗೆ ಅವರ ಪರಿವಾರದವರ ಸಹಕಾರ ಇರುವುದರಿಂದ ಮಾತ್ರ ಇಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕೇವಲ ವೈದ್ಯಕೀಯ ಸಲಕರಣೆಗಳು ಇದ್ದರೆ ಸಾಲದು ಅದನ್ನು ಸರಿಯಾಗಿ ಬಳಸುವವರ ಮೂಲಕ ರೋಗಿಗಳಿಗೆ ಉಪಯುಕ್ತವಾಗಬೇಕು. ಅಂತಹ ಕೆಲಸ ಈ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ನಗರದ ಹೈಟೆಕ್ ವೈದ್ಯಕೀಯ ಸೇವೆ ಕಡಿಮೆ ಖರ್ಚಿನಲ್ಲಿ ಸಿಗಬೇಕು ಎಂಬ ಉದ್ದೇಶದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಇಲ್ಲಿನ ವೈದ್ಯಕೀಯ ಸೇವೆಯನ್ನು ಗಮನಿಸಿ ನಗರದ ವೈದ್ಯರು ಅತ್ಯಂತ ಉತ್ಸಾಹದಿಂದ ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುತ್ತಿರುವುದು ಖುಷಿ ಕೊಟ್ಟಿದೆ. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಆಡಳಿತದಿಂದ ಆಸ್ಪತ್ರೆ ಬೆಳೆಯುತ್ತಿದೆ. ಅತೀ ಶೀಘ್ರದಲ್ಲಿ ಎಂ.ಆರ್ ಸ್ಕ್ಯಾನಿಂಗ್ ಸೇವೆ ಇಲ್ಲಿ ದೊರೆಯಲಿದೆ ಎಂದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಗಿಡ ಹೆಮ್ಮರವಾಗಿ ಬೆಳೆಯುವಂತೆ ನಮ್ಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಬೆಳೆಯುತ್ತಿದೆ. ಮರದ ರೆಂಬೆ ಕೊಂಬೆಗಳು ವಿಸ್ತಾರವಾಗುವಂತೆ ಇಲ್ಲಿ ಹೊಸ ಹೊಸ ವಿಭಾಗಗಳು ಕೂಡ ತೆರೆದುಕೊಳ್ಳುತ್ತಿವೆ. ಸೇವಾ ಮನೋಭಾವ ಹೊಂದಿರುವ ಇಲ್ಲಿನ ವೈದ್ಯರು ಕೇವಲ ವೃತ್ತಿಯಿಂದ ಮಾತ್ರ ಅಲ್ಲ ಹೃದಯದಿಂದ ವೈದ್ಯರಾಗಿದ್ದಾರೆ. ವೈದ್ಯರ ಸೇವೆಗೆ ಬೆಲೆ ಕಟ್ಟಲಾಗದು. ಅತ್ಯುತ್ತಮ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಎಸ್.ಡಿ.ಎಂ ಬ್ರಾಂಡ್‌ಗೆ ಹೊಸ ಗರಿಯಾಗಿ ಶೋಭಿಸುತ್ತಿದೆ. ಇದಕ್ಕೆಲ್ಲ ಕಾರಣ ಎಲ್ಲರ ಶ್ರಮದೊಂದಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಕಠಿಣ ಪರಿಶ್ರಮ ಮತ್ತು ಎಲ್ಲರನ್ನು ಒಗ್ಗೂಡಿ ಕೆಲಸ ಮಾಡಿಸುವ ಚಾಣಾಕ್ಯತೆ ಇದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 2025-26ರ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಸೇವೆಯನ್ನು ಡಾ. ಹೆಗ್ಗಡೆಯವರ ನಿದೇರ್ಶನದಂತೆ ಉಚಿತವಾಗಿ ನೀಡಲಾಗಿದೆ. 11 ಹಾಸಿಗೆಗಳ ಸುಸಜ್ಜಿತ ಹವಾನಿಯಂತ್ರಿತ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, 2025-26ರಲ್ಲಿ 1.44 ಕೋಟಿ ಮೊತ್ತದ 9644 ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದೆ. 60 ಕ್ಕೂ ಹೆಚ್ಚು ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯರು ಇಲ್ಲಿ ಲಭ್ಯವಿದ್ದಾರೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಮಾತನಾಡಿ ಎಲ್ಲಾ ವಿಭಾಗಗಳಲ್ಲಿ ತಜ್ಞ ವೈದ್ಯರಿದ್ದು, ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತು ಪಡಿಸಿ ಅತೀ ಹೆಚ್ಚು ಹೆರಿಗೆ ನಡೆಸುವ ಆಸ್ಪತ್ರೆ ನಮ್ಮದಾಗಿದೆ. ಇಲ್ಲಿ 2 ಸುಸಜ್ಜಿತ ಆಪರೇಶನ್ ಥಿಯೇಟರ್ ಇದ್ದು, ದಿನ ಒಂದಕ್ಕೆ 10 ರಿಂದ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ 40 ಲಕ್ಷ ರೂಪಾಯಿ ಮೌಲ್ಯದ ಲ್ಯಾಪರೋಸ್ಕೋಪಿಕ್ ಯಂತ್ರ ಅಳವಡಿಸಿದ್ದು, ಕಳೆದ ಮೇ ತಿಂಗಳಲ್ಲಿ 100 ಕ್ಕೂ ಹೆಚ್ಚು ಲ್ಯಾಪರೋಸ್ಕೋಪಿಕ್ ಸರ್ಜರಿ ನಡೆಸಲಾಗಿದೆ. ಲೇಸರ್ ಶಸ್ತ್ರಚಿಕಿತ್ಸೆ ಲ್ಯಾಪರೋಸ್ಕೋಪಿಕ್ ಸರ್ಜರಿ, ಎಂಡೋಸ್ಕೋಪಿಕ್ ಸರ್ಜರಿ ಸೇವೆ ಇಲ್ಲಿ ಲಭ್ಯವಿದ್ದು, ನ್ಯೂರೋ ಸರ್ಜರಿ ಸೇವೆ, ಎಮರ್ಜೆನ್ಸಿ ಮೆಡಿಸಿನ್, ಇಬ್ಬರು ಸಾಮಾನ್ಯ ಸರ್ಜರಿ, 5 ಮಂದಿ ಆರ್ಥೋಪೆಡಿಕ್ ಸರ್ಜನ್, ಕಣ್ಣಿನ ಶಸ್ತ್ರಚಿಕಿತ್ಸಾ ತಜ್ಞರು, ಕಿವಿ-ಮೂಗು ಗಂಟಲು ಸರ್ಜನ್, ಇಬ್ಬರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರೊಂದಿಗೆ ನಮ್ಮ ಸರ್ಜರಿ ತಂಡ ಬಲಶಾಲಿಯಾಗಿದೆ. ನೋವು ರಹಿತ ಹೆರಿಗೆ, ಕ್ಲಿಷ್ಟಕರವಾದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತೆ, ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು. ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಮಾತನಾಡಿ ಡಾ. ಹೆಗ್ಗಡೆರ ಸಹಕಾರದಿಂದ ಈ ಆಸ್ಪತ್ರೆಯಲ್ಲಿ ಸರ್ಜರಿ ಮತ್ತು ಡ್ಯೂರಲ್ ರಿಪೇರ್ ಶಸ್ತ್ರಚಿಕಿತ್ಸೆಯನ್ನು ಯಸಸ್ವಿಯಾಗಿ ನಡೆಸಿದ್ದು, ವಿಶ್ವ ಮಟ್ಟದಲ್ಲಿ ನಮ್ಮ ಆಸ್ಪತ್ರೆ ಗುರುತಿಸಲ್ಪಟ್ಟಿದೆ. ಈ ಹಿಂದೆ ಸರ್ಜರಿ ಮಾಡಿಸಲು ಮಂಗಳೂರಿಗೆ ಹೋಗುತ್ತಿದ್ದ ಜನ ಇವತ್ತಿನ ದಿನಗಳಲ್ಲಿ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಿ ಎಂದು ನಮ್ಮ ವೈದ್ಯರಲ್ಲಿ ವಿನಂತಿ ಮಾಡುತ್ತಿದ್ದಾರೆ ಎಂದರು. ಡಾ| ಉಷಾ ಜಿ. ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾ, ಡಾ. ಹೆಗ್ಗಡೆರ ಸಂಸ್ಥೆಯಲ್ಲಿ ವೈದ್ಯ ವೃತ್ತಿ ನಡೆಸಲು ಹೆಮ್ಮೆ ಎನಿಸುತ್ತಿದೆ. ನಂಬಿಕೆ, ವಿಶ್ವಾಸಗಳಿಗೆ ಹೆಸರುವಾಸಿಯಾಗಿರುವ ಎಸ್.ಡಿ.ಎಂ ಸಂಸ್ಥೆಯಲ್ಲಿ ದುಡಿಯುವುದೇ ನಮ್ಮ ಸುಯೋಗ ಎಂದರು. ವೈದ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಉತ್ತಮ ವಾತಾವರಣ ಇದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ ಜನಾರ್ದನ್ ಅವರ ಸಹಕಾರ ಮತ್ತು ಉತ್ತಮ ಆಡಳಿತ ನಮಗೆಲ್ಲಾ ಹೊಸ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು. ಧರ್ಮಸ್ಥಳ ಬೀಡಿನ ಕು| ಮಾನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ, ಸೇವೆಯಲ್ಲಿರುವ ಸಂತೋಷ ಬೇರೆಲ್ಲಿಯೂ ಸಿಗಲಾರದು. ನಮ್ಮೆಲ್ಲಾ ವೈದ್ಯರಲ್ಲಿ ಆ ಸೇವಾ ಮನೋಭಾವವಿದೆ ಎಂದರು. ಅವರು ವೈದ್ಯರ ದಿನಾಚರಣೆಯ ಅಂಗವಾಗಿ ಇಲ್ಲಿನ ವೈದ್ಯರನ್ನು ಸನ್ಮಾನಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೈದ್ಯರಿಗೆ ಅವರ ಪರಿವಾರದವರ ಸಹಕಾರ ಇರುವುದರಿಂದ ಮಾತ್ರ ಇಂತಹ ಗ್ರಾಮೀಣ ಪ್ರದೇಶದಲ್ಲಿ ನಮ್ಮ ವೈದ್ಯರು ಸೇವೆ ಸಲ್ಲಿಸಲು ಸಾಧ್ಯವಾಗಿದೆ. ಕೇವಲ ವೈದ್ಯಕೀಯ ಸಲಕರಣೆಗಳು ಇದ್ದರೆ ಸಾಲದು ಅದನ್ನು ಸರಿಯಾಗಿ ಬಳಸುವವರ ಮೂಲಕ ರೋಗಿಗಳಿಗೆ ಉಪಯುಕ್ತವಾಗಬೇಕು. ಅಂತಹ ಕೆಲಸ ಈ ಆಸ್ಪತ್ರೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ನಗರದ ಹೈಟೆಕ್ ವೈದ್ಯಕೀಯ ಸೇವೆ ಕಡಿಮೆ ಖರ್ಚಿನಲ್ಲಿ ಸಿಗಬೇಕು ಎಂಬ ಉದ್ದೇಶದಿಂದ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಇಲ್ಲಿನ ವೈದ್ಯಕೀಯ ಸೇವೆಯನ್ನು ಗಮನಿಸಿ ನಗರದ ವೈದ್ಯರು ಅತ್ಯಂತ ಉತ್ಸಾಹದಿಂದ ಈ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಮುಂದೆ ಬರುತ್ತಿರುವುದು ಖುಷಿ ಕೊಟ್ಟಿದೆ. ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಆಡಳಿತದಿಂದ ಆಸ್ಪತ್ರೆ ಬೆಳೆಯುತ್ತಿದೆ. ಅತೀ ಶೀಘ್ರದಲ್ಲಿ ಎಂ.ಆರ್ ಸ್ಕ್ಯಾನಿಂಗ್ ಸೇವೆ ಇಲ್ಲಿ ದೊರೆಯಲಿದೆ ಎಂದರು. ಹೇಮಾವತಿ ವಿ. ಹೆಗ್ಗಡೆಯವರು ಮಾತನಾಡಿ ಗಿಡ ಹೆಮ್ಮರವಾಗಿ ಬೆಳೆಯುವಂತೆ ನಮ್ಮ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಬೆಳೆಯುತ್ತಿದೆ. ಮರದ ರೆಂಬೆ ಕೊಂಬೆಗಳು ವಿಸ್ತಾರವಾಗುವಂತೆ ಇಲ್ಲಿ ಹೊಸ ಹೊಸ ವಿಭಾಗಗಳು ಕೂಡ ತೆರೆದುಕೊಳ್ಳುತ್ತಿವೆ. ಸೇವಾ ಮನೋಭಾವ ಹೊಂದಿರುವ ಇಲ್ಲಿನ ವೈದ್ಯರು ಕೇವಲ ವೃತ್ತಿಯಿಂದ ಮಾತ್ರ ಅಲ್ಲ ಹೃದಯದಿಂದ ವೈದ್ಯರಾಗಿದ್ದಾರೆ. ವೈದ್ಯರ ಸೇವೆಗೆ ಬೆಲೆ ಕಟ್ಟಲಾಗದು. ಅತ್ಯುತ್ತಮ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಆಸ್ಪತ್ರೆ ಎಸ್.ಡಿ.ಎಂ ಬ್ರಾಂಡ್‌ಗೆ ಹೊಸ ಗರಿಯಾಗಿ ಶೋಭಿಸುತ್ತಿದೆ. ಇದಕ್ಕೆಲ್ಲ ಕಾರಣ ಎಲ್ಲರ ಶ್ರಮದೊಂದಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರ ಕಠಿಣ ಪರಿಶ್ರಮ ಮತ್ತು ಎಲ್ಲರನ್ನು ಒಗ್ಗೂಡಿ ಕೆಲಸ ಮಾಡಿಸುವ ಚಾಣಾಕ್ಯತೆ ಇದೆ ಎಂದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 2025-26ರ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಸೇವೆಯನ್ನು ಡಾ. ಹೆಗ್ಗಡೆಯವರ ನಿದೇರ್ಶನದಂತೆ ಉಚಿತವಾಗಿ ನೀಡಲಾಗಿದೆ. 11 ಹಾಸಿಗೆಗಳ ಸುಸಜ್ಜಿತ ಹವಾನಿಯಂತ್ರಿತ ಡಯಾಲಿಸಿಸ್ ಸೆಂಟರ್‌ನಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, 2025-26ರಲ್ಲಿ 1.44 ಕೋಟಿ ಮೊತ್ತದ 9644 ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದೆ. 60 ಕ್ಕೂ ಹೆಚ್ಚು ಸ್ಪೆಷಾಲಿಟಿ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯರು ಇಲ್ಲಿ ಲಭ್ಯವಿದ್ದಾರೆ ಎಂದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ಮಾತನಾಡಿ ಎಲ್ಲಾ ವಿಭಾಗಗಳಲ್ಲಿ ತಜ್ಞ ವೈದ್ಯರಿದ್ದು, ಅತ್ಯಾಧುನಿಕ ವೈದ್ಯಕೀಯ ಸೇವೆಯನ್ನು ಇಲ್ಲಿ ನೀಡಲಾಗುತ್ತಿದೆ ಎಂದರು. ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ದ.ಕ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತು ಪಡಿಸಿ ಅತೀ ಹೆಚ್ಚು ಹೆರಿಗೆ ನಡೆಸುವ ಆಸ್ಪತ್ರೆ ನಮ್ಮದಾಗಿದೆ. ಇಲ್ಲಿ 2 ಸುಸಜ್ಜಿತ ಆಪರೇಶನ್ ಥಿಯೇಟರ್ ಇದ್ದು, ದಿನ ಒಂದಕ್ಕೆ 10 ರಿಂದ 15 ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ 40 ಲಕ್ಷ ರೂಪಾಯಿ ಮೌಲ್ಯದ ಲ್ಯಾಪರೋಸ್ಕೋಪಿಕ್ ಯಂತ್ರ ಅಳವಡಿಸಿದ್ದು, ಕಳೆದ ಮೇ ತಿಂಗಳಲ್ಲಿ 100 ಕ್ಕೂ ಹೆಚ್ಚು ಲ್ಯಾಪರೋಸ್ಕೋಪಿಕ್ ಸರ್ಜರಿ ನಡೆಸಲಾಗಿದೆ. ಲೇಸರ್ ಶಸ್ತ್ರಚಿಕಿತ್ಸೆ ಲ್ಯಾಪರೋಸ್ಕೋಪಿಕ್ ಸರ್ಜರಿ, ಎಂಡೋಸ್ಕೋಪಿಕ್ ಸರ್ಜರಿ ಸೇವೆ ಇಲ್ಲಿ ಲಭ್ಯವಿದ್ದು, ನ್ಯೂರೋ ಸರ್ಜರಿ ಸೇವೆ, ಎಮರ್ಜೆನ್ಸಿ ಮೆಡಿಸಿನ್, ಇಬ್ಬರು ಸಾಮಾನ್ಯ ಸರ್ಜರಿ, 5 ಮಂದಿ ಆರ್ಥೋಪೆಡಿಕ್ ಸರ್ಜನ್, ಕಣ್ಣಿನ ಶಸ್ತ್ರಚಿಕಿತ್ಸಾ ತಜ್ಞರು, ಕಿವಿ-ಮೂಗು ಗಂಟಲು ಸರ್ಜನ್, ಇಬ್ಬರು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರೊಂದಿಗೆ ನಮ್ಮ ಸರ್ಜರಿ ತಂಡ ಬಲಶಾಲಿಯಾಗಿದೆ. ನೋವು ರಹಿತ ಹೆರಿಗೆ, ಕ್ಲಿಷ್ಟಕರವಾದ ಬೆನ್ನುಮೂಳೆ ಶಸ್ತ್ರಚಿಕಿತ್ಸೆ, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತೆ, ಬಾಯಿಯ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ ಎಂದರು. ಬೆನ್ನುಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಶತಾನಂದ ಪ್ರಸಾದ್ ರಾವ್ ಮಾತನಾಡಿ ಡಾ. ಹೆಗ್ಗಡೆರ ಸಹಕಾರದಿಂದ ಈ ಆಸ್ಪತ್ರೆಯಲ್ಲಿ ಸರ್ಜರಿ ಮತ್ತು ಡ್ಯೂರಲ್ ರಿಪೇರ್ ಶಸ್ತ್ರಚಿಕಿತ್ಸೆಯನ್ನು ಯಸಸ್ವಿಯಾಗಿ ನಡೆಸಿದ್ದು, ವಿಶ್ವ ಮಟ್ಟದಲ್ಲಿ ನಮ್ಮ ಆಸ್ಪತ್ರೆ ಗುರುತಿಸಲ್ಪಟ್ಟಿದೆ. ಈ ಹಿಂದೆ ಸರ್ಜರಿ ಮಾಡಿಸಲು ಮಂಗಳೂರಿಗೆ ಹೋಗುತ್ತಿದ್ದ ಜನ ಇವತ್ತಿನ ದಿನಗಳಲ್ಲಿ ಇಲ್ಲಿಯೇ ಶಸ್ತ್ರಚಿಕಿತ್ಸೆ ನಡೆಸಿ ಎಂದು ನಮ್ಮ ವೈದ್ಯರಲ್ಲಿ ವಿನಂತಿ ಮಾಡುತ್ತಿದ್ದಾರೆ ಎಂದರು. ಡಾ| ಉಷಾ ಜಿ. ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸುತ್ತಾ, ಡಾ. ಹೆಗ್ಗಡೆರ ಸಂಸ್ಥೆಯಲ್ಲಿ ವೈದ್ಯ ವೃತ್ತಿ ನಡೆಸಲು ಹೆಮ್ಮೆ ಎನಿಸುತ್ತಿದೆ. ನಂಬಿಕೆ, ವಿಶ್ವಾಸಗಳಿಗೆ ಹೆಸರುವಾಸಿಯಾಗಿರುವ ಎಸ್.ಡಿ.ಎಂ ಸಂಸ್ಥೆಯಲ್ಲಿ ದುಡಿಯುವುದೇ ನಮ್ಮ ಸುಯೋಗ ಎಂದರು. ವೈದ್ಯರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಉತ್ತಮ ವಾತಾವರಣ ಇದೆ. ವ್ಯವಸ್ಥಾಪಕ ನಿರ್ದೇಶಕರಾದ ಎಂ ಜನಾರ್ದನ್ ಅವರ ಸಹಕಾರ ಮತ್ತು ಉತ್ತಮ ಆಡಳಿತ ನಮಗೆಲ್ಲಾ ಹೊಸ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು. ಧರ್ಮಸ್ಥಳ ಬೀಡಿನ ಕು| ಮಾನ್ಯ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಡಾ. ಹೆಗ್ಗಡೆಯವರು ಸನ್ಮಾನಿಸಿದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಳ್ವಾಸ್: ಹಸಿರು ಸಂವಾದ ಅಭಿಯಾನಕ್ಕೆ ಚಾಲನೆ

Article Image

ಆಳ್ವಾಸ್: ಹಸಿರು ಸಂವಾದ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ಕರಾವಳಿ ನದಿಗಳ ಮೂಲಕ ಸಮುದ್ರ ಸೇರುವ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ಮೂಲದಲ್ಲೇ ತಡೆಗಟ್ಟುವ ಉದ್ದೇಶದಿಂದ ರೂಪಿಸಲಾದ ಮಹತ್ವಾಕಾಂಕ್ಷೆಯ ‘ಹಸಿರು ಸಂವಾದ’ ಅಭಿಯಾನಕ್ಕೆ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಭಾನುವಾರ ಚಾಲನೆ ದೊರೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪರ್ಯಾವರಣ ಸಂರಕ್ಷಣಾ ತಂಡ ಹಾಗೂ ವಿವಿಧ ಶೈಕ್ಷಣಿಕ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು, ಕೈಗಾರಿಕೆಗಳು ಮತ್ತು ಆಡಳಿತ ವ್ಯವಸ್ಥೆಯ ಸಹಭಾಗಿತ್ವದಲ್ಲಿ ಈ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಆರಂಭಗೊಂಡಿದ್ದು, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಸುಸ್ಥಿರ ಪರಿಸರ ಸಂರಕ್ಷಣೆಗೆ ಮಾದರಿಯಾಗುವ ಗುರಿ ಹೊಂದಿದೆ. ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ‍್ಯದರ್ಶಿ ಜಯಲಕ್ಷ್ಮೀ ರಾಯ್ಕೋಡ್ ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯ ಪರಸ್ಪರ ಸಂಬಂಧ ಹೊಂದಿದ್ದು, ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಜನರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯ. ಸರ್ಕಾರ ಮತ್ತು ಸಾರ್ವಜನಿಕರ ಸಹಕಾರ ಚಪ್ಪಾಳೆಯ ಎರಡು ಕೈಗಳಂತೆ ಒಂದಾದಾಗ ಮಾತ್ರ ಅಭಿವೃದ್ಧಿಯ ಸದ್ದು ಮೂಡುತ್ತದೆ. ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಪರಿಸರಕ್ಕೂ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಅಪಾಯವನ್ನುಂಟು ಮಾಡುತ್ತಿದೆ. ಆರೋಗ್ಯಕರ ಜೀವನಶೈಲಿ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಆಳವಡಿಸಿಕೊಳ್ಳುವುದು ಇಂದಿನ ಅಗತ್ಯ. ಪರಿಸರದ ಬಗ್ಗೆ ಪ್ರತಿಯೊಬ್ಬರೂ ವೈಯಕ್ತಿಕ ಹೊಣೆಗಾರಿಕೆ ಹೊಂದಿದಾಗ ಮಾತ್ರ ಸುಸ್ಥಿರ ಅಭಿವೃದ್ಧಿಯ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಲವು ವರ್ಷಗಳಿಂದ ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಮೌಲ್ಯಾಧಾರಿತ ಕಾರ್ಯಕ್ರಮಗಳ ಮೂಲಕ ಮಾದರಿ ಕಾರ್ಯಗಳನ್ನು ನಡೆಸುತ್ತಿದೆ ಎಂದು ಶ್ಲಾಘಿಸಿದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚುತ್ತಿರುವ ಕೆಲವು ಆರೋಗ್ಯ ಸಮಸ್ಯೆಗಳಿಗೆ, ವಿಶೇಷವಾಗಿ ಗರ್ಭಕೋಶ ಸಂಬಂಧಿತ ತೊಂದರೆಗಳಿಗೆ, ಒಂದು ಬಾರಿ ಬಳಸಿ ತ್ಯಜಿಸುವ ಸ್ಯಾನಿಟರಿ ಹಾಗೂ ಅಡಲ್ಟ್ ಪ್ಯಾಡ್‌ಗಳಲ್ಲಿ ಬಳಸಲಾಗುವ ಕೆಲವು ರಾಸಾಯನಿಕಗಳ ಪರಿಣಾಮವೂ ಕಾರಣವಾಗಿರಬಹುದೆಂಬ ಆತಂಕಗಳು ವ್ಯಕ್ತವಾಗುತ್ತಿವೆ. ಆದ್ದರಿಂದ ಇಂತಹ ಉತ್ಪನ್ನಗಳ ಬಳಕೆ, ಸುರಕ್ಷಿತ ವಿಲೇವಾರಿ ಹಾಗೂ ಪರಿಸರ ಸ್ನೇಹಿ ಪರ್ಯಾಯಗಳ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಪರ್ಯಾವರಣ ಸಂರಕ್ಷಣಾ ತಂಡದ ಪ್ರಾಂತ ಸಂಯೋಜಕ ವೆಂಕಟೇಶ್ ಸಂಗನಾಳ್ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಸ್ವಚ್ಛತಾ ಅಭಿಯಾನವಾಗಿರದೆ, ಜನರ ಜೀವನಶೈಲಿಯಲ್ಲಿ ಬದಲಾವಣೆ ತರುವ ಸಾಮಾಜಿಕ ಚಳವಳಿಯಾಗಬೇಕು ಎಂದರು. ಹಸಿರು ಸಂವಾದ ಅಭಿಯಾನವು ಕೇವಲ ಒಂದು ಕಾರ್ಯಕ್ರಮವಲ್ಲ; ಅದು ಪ್ರತಿ ಮನೆ ಮತ್ತು ಪ್ರತಿ ಗ್ರಾಮವನ್ನು ತಲುಪುವ ಜನಾಂದೋಲನವಾಗಿ ಮೂಡಿಬರಬೇಕು ಎಂದರು. ಇಂದಿನ ದಿನಗಳಲ್ಲಿ ಜನರ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವಂತೆ ಬಳಕೆಯ ವಸ್ತುಗಳ ಪ್ರಮಾಣವೂ ಹೆಚ್ಚುತ್ತಿದ್ದು, ಅದರೊಂದಿಗೆ ತ್ಯಾಜ್ಯದ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಬಳಕೆ ಆಧಾರಿತ ಜೀವನಶೈಲಿಯ ಪರಿಣಾಮವಾಗಿ ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾಗಿದೆ ಎಂದು ಹೇಳಿದರು. ಈ ಹಿಂದೆ ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಜೀವನಶೈಲಿಯ ಬದಲಾವಣೆಗಳು ಈಗ ಗ್ರಾಮೀಣ ಪ್ರದೇಶಗಳಿಗೂ ವೇಗವಾಗಿ ವ್ಯಾಪಿಸುತ್ತಿವೆ. ಇದರ ಪರಿಣಾಮವಾಗಿ ಗ್ರಾಮಗಳಲ್ಲಿಯೂ ಪ್ಲಾಸ್ಟಿಕ್ ಹಾಗೂ ಇತರ ಘನ ತ್ಯಾಜ್ಯದ ಸಮಸ್ಯೆ ಗಂಭೀರ ಸ್ವರೂಪ ಪಡೆಯುತ್ತಿದೆ. ಆದ್ದರಿಂದ ಸಮಸ್ಯೆ ಉಲ್ಬಣವಾಗುವ ಮುನ್ನವೇ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು. ಹಸಿರು ಸಂವಾದ ಅಭಿಯಾನದ ಮೂಲಕ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿ, ಗ್ರಾಮ ಮಟ್ಟದಲ್ಲೇ ಸುಸ್ಥಿರ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕರಾವಳಿ ಕರ್ನಾಟಕವು ಒಂದು ಕಡೆ ಅರಬ್ಬಿ ಸಮುದ್ರ ಹಾಗೂ ಮತ್ತೊಂದು ಕಡೆ ವಿಶ್ವದ ಜೀವವೈವಿಧ್ಯದ ಅತ್ಯಂತ ಸೂಕ್ಷ್ಮ ಪರಿಸರ ವಲಯಗಳಲ್ಲಿ ಒಂದಾದ ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಅಪರೂಪದ ಭೌಗೋಳಿಕ ಪ್ರದೇಶವಾಗಿದೆ. ಇಂತಹ ಅಮೂಲ್ಯ ನೈಸರ್ಗಿಕ ಪರಿಸರ ವ್ಯವಸ್ಥೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು. ಪಶ್ಚಿಮ ಘಟ್ಟಗಳು ಈ ಭಾಗದ ಜೀವನಾಡಿ ಹಾಗೂ ಶ್ವಾಸಕೋಶದಂತಿವೆ. ಅವು ಕೇವಲ ಜೀವವೈವಿಧ್ಯದ ತಾಣಗಳಷ್ಟೇ ಅಲ್ಲ, ಕರಾವಳಿ ಭಾಗದ ಹವಾಮಾನ ಸಮತೋಲನ, ಜಲಸಂಪನ್ಮೂಲ ಮತ್ತು ಪರಿಸರ ಆರೋಗ್ಯವನ್ನು ಕಾಪಾಡುವ ಪ್ರಮುಖ ನೈಸರ್ಗಿಕ ವ್ಯವಸ್ಥೆಯಾಗಿವೆ. ಆದ್ದರಿಂದ ಪರಿಸರ ಸಂರಕ್ಷಣೆಯನ್ನು ಅಭಿವೃದ್ಧಿಗೆ ವಿರುದ್ಧವಾದ ವಿಚಾರವಾಗಿ ನೋಡದೆ, ಸುಸ್ಥಿರ ಅಭಿವೃದ್ಧಿಯ ಅವಿಭಾಜ್ಯ ಅಂಗವಾಗಿ ಪರಿಗಣಿಸಬೇಕು ಎಂದರು. ‘ಹಸಿರು ಸಂವಾದ' ಅಭಿಯಾನವು ಕೇವಲ ತ್ಯಾಜ್ಯ ನಿರ್ವಹಣೆಯ ಕಾರ್ಯಕ್ರಮವಾಗಿರದೆ, ಸಮಾಜದಲ್ಲಿ ಪರಿಸರದ ಬಗ್ಗೆ ಜಾಗೃತಿ, ಹೊಣೆಗಾರಿಕೆ ಮತ್ತು ವರ್ತನಾತ್ಮಕ ಬದಲಾವಣೆಯನ್ನು ತರುವ ಜನಾಂದೋಲನವಾಗಿ ರೂಪುಗೊಳ್ಳಬೇಕು. ಈ ಅಭಿಯಾನದ ನಿಜವಾದ ಯಶಸ್ಸು ಸಾಮಾಜಿಕ ಪರಿವರ್ತನೆಯಲ್ಲಿ ಅಡಗಿದೆ ಎಂದರು. ‘ಹಸಿರು ಸಂವಾದ’ ಅಭಿಯಾನದ ಕುರಿತು ವಿವರಣೆ ನೀಡಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ ಕುರಿಯನ್, ಸಾಂಪ್ರದಾಯಿಕ ಸ್ವಚ್ಛತಾ ಕಾರ್ಯಾಚರಣೆಗಳನ್ನು ಮೀರಿ, ತ್ಯಾಜ್ಯವು ನದಿಗಳ ಮೂಲಕ ಸಮುದ್ರ ಸೇರಿ ಮೈಕ್ರೋಪ್ಲಾಸ್ಟಿಕ್ ಆಗಿ ಪರಿವರ್ತನೆಯಾಗುವುದನ್ನು ತಡೆಯಲು ಮೂಲ ಹಂತದಲ್ಲೇ ವೈಜ್ಞಾನಿಕ ಹಾಗೂ ಸಮುದಾಯ ಆಧಾರಿತ ವ್ಯವಸ್ಥೆಯನ್ನು ರೂಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜನರ ಪಾಲ್ಗೊಳ್ಳುವಿಕೆ, ಸ್ಥಳೀಯ ಆಡಳಿತದ ಹೊಣೆಗಾರಿಕೆ ಮತ್ತು ವಲಯ ಆರ್ಥಿಕತೆ ಆಧಾರಿತ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ನಿರ್ಮಿಸಲು ಅಭಿಯಾನ ಒತ್ತು ನೀಡಲಿದೆ. ಈ ಯೋಜನೆಯಡಿ ಪಾವಂಜೆ (ಗುರುಪುರ), ನಂದಿನಿ ಹಾಗೂ ಶಾಂಭವಿ ನದಿಗಳ ಜಲಾನಯನ ಪ್ರದೇಶದ 46 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ನದಿಗಳ ಮೂಲಕ ಸಮುದ್ರಕ್ಕೆ ಸೇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿತಗೊಳಿಸಲು ಗ್ರಾಮ ಮಟ್ಟದಲ್ಲಿಯೇ ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಅಭಿಯಾನವನ್ನು ಮೂರು ಹಂತಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಮೊದಲ ಹಂತವು ಜುಲೈ–ಆಗಸ್ಟ್ 2026ರವರೆಗೆ ನಡೆಯಲಿದ್ದು, ಕ್ಷೇತ್ರ ಸಮೀಕ್ಷೆ, ಮಾಹಿತಿ ಸಂಗ್ರಹ, ತ್ಯಾಜ್ಯ ಸಮಸ್ಯೆಗಳ ಮೌಲ್ಯಮಾಪನ ಹಾಗೂ ಜನಜಾಗೃತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಸ್ಥಳೀಯ ಸಂಘಟನೆಗಳು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯದ ಪಾಲುದಾರಿಕೆಯನ್ನು ಬಲಪಡಿಸಲಾಗುತ್ತದೆ ಎಂದರು. ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಲು ‘ಚೋಟಾ ಕಾಪ್’ ಯೋಜನೆ ಜಾರಿಗೊಳ್ಳಲಿದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮತ್ತು ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಯುವಜನರಲ್ಲಿ ಹೊಸ ತಂತ್ರಜ್ಞಾನ ಹಾಗೂ ನವೀನ ಆಲೋಚನೆಗಳಿಗೆ ಉತ್ತೇಜನ ನೀಡಲು ಐಡಿಯಾಥಾನ್ ಆಯೋಜಿಸಲಾಗುತ್ತಿದ್ದು, ಆಯ್ಕೆಯಾಗುವ ಪರಿಸರ ಸ್ನೇಹಿ ಆವಿಷ್ಕಾರಗಳಿಗೆ ಅಭಿವೃದ್ಧಿ ನಿಧಿಯನ್ನೂ ಒದಗಿಸಲಾಗುತ್ತದೆ. ಎರಡನೇ ಹಂತವು ಆಗಸ್ಟ್ ನಿಂದ ನವೆಂಬರ್‌ವರೆಗೆ ನಡೆಯಲಿದ್ದು, ಘನ ತ್ಯಾಜ್ಯ ನಿರ್ವಹಣಾ ನಿಯಮಾವಳಿ–2026 ಅನುಸಾರ ವಿವಿಧ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ. ನದಿಗಳ ಮೇಲ್ಮೈ ಹಾಗೂ ನೀರಿನ ಅಡಿಯಲ್ಲಿರುವ ತ್ಯಾಜ್ಯ ತೆರವು, ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆ, ಸಂಗ್ರಹ ಮತ್ತು ಮರುಬಳಕೆ ವ್ಯವಸ್ಥೆ, ಮರುಸಂಸ್ಕರಣೆಗೆ ಅಸಾಧ್ಯವಾದ ತ್ಯಾಜ್ಯದ ಸೂಕ್ತ ವಿಲೇವಾರಿ, ‘ಸ್ವಚ್ಛ ಗ್ರಾಮ’ ಸ್ಪರ್ಧೆ, ಪರಿಸರ ಜಾಗೃತಿ ಮೂಡಿಸುವ ರೀಲ್ಸ್ ಸ್ಪರ್ಧೆ, ಫನ್ನಿ ರಿಪೋರ್ಟರ್ಸ್, ವಿದ್ಯಾರ್ಥಿ ಚಟುವಟಿಕೆಗಳು ಹಾಗೂ ವಿವಿಧ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ. ಮೂರನೇ ಹಂತವಾಗಿ ಡಿಸೆಂಬರ್ 2026ರಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗುತ್ತದೆ. ಭಾಗವಹಿಸುವ ಗ್ರಾಮ ಪಂಚಾಯಿತಿಗಳು ತಮ್ಮ ತ್ಯಾಜ್ಯ ನಿರ್ವಹಣಾ ಅನುಭವ ಮತ್ತು ಸಾಧನೆಗಳನ್ನು ಪ್ರಸ್ತುತಪಡಿಸಲಿದ್ದು, ದೇಶದ ಖ್ಯಾತ ಪರಿಸರ ವಿಜ್ಞಾನಿಗಳು, ತಜ್ಞರು ಮತ್ತು ಪರಿಸರ ಹೋರಾಟಗಾರರು ವೈಜ್ಞಾನಿಕ ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ. ಸ್ಥಳೀಯ ಮಟ್ಟದ ಯಶಸ್ವಿ ಮಾದರಿಗಳನ್ನು ರಾಷ್ಟ್ರೀಯ ಮಟ್ಟದ ಉತ್ತಮ ಪದ್ಧತಿಗಳೊಂದಿಗೆ ಸಂಪರ್ಕಿಸುವ ವೇದಿಕೆಯಾಗಲಿದೆ. ಸಮ್ಮೇಳನದ ಸಮಾರೋಪದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ನದಿಗಳಿಗೆ ಸೇರುವ ಪ್ರಮಾಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಕಡಿಮೆಗೊಳಿಸಿದ ಗ್ರಾಮಕ್ಕೆ ಪ್ರತಿಷ್ಠಿತ ‘ಸ್ವಚ್ಛ ಗ್ರಾಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಉತ್ತಮ ಸಾಧನೆ ತೋರಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಿಸರ ಪ್ರಶಸ್ತಿಗಳಿಗೆ ಶಿಫಾರಸು ಮಾಡಲಾಗುವುದು. ಪರಿಸರ ಸಂರಕ್ಷಣೆಯಲ್ಲಿ ವಿಶೇಷ ಸೇವೆ ಸಲ್ಲಿಸಿದ ‘ವೇಸ್ಟ್ ವಾರಿಯರ್ಸ್’, ವಿದ್ಯಾರ್ಥಿಗಳು ಹಾಗೂ ಸ್ಪರ್ಧೆಗಳ ವಿಜೇತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು. ಕರಾವಳಿ ಪರಿಸರ ಸಂರಕ್ಷಣೆಯಲ್ಲಿ ಸಮುದಾಯ, ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಆಡಳಿತ ಮತ್ತು ತಜ್ಞರನ್ನು ಒಂದೇ ವೇದಿಕೆಗೆ ತರುವ ಈ ‘ಹಸಿರು ಸಂವಾದ’ ಅಭಿಯಾನವು, ಕರಾವಳಿ ಕರ್ನಾಟಕದಲ್ಲಿ ವೈಜ್ಞಾನಿಕ ಹಾಗೂ ಶಾಶ್ವತ ತ್ಯಾಜ್ಯ ನಿರ್ವಹಣೆಗೆ ಹೊಸ ಮಾದರಿಯಾಗಿ ರೂಪುಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪರ್ಯಾವರಣ ಸಂರಕ್ಷಣಾ ತಂಡದ ಜಯರಾಮ್ ಬೊಳ್ಳಾಜೆ, ಹೊಸದಿಂಗತ ಪತ್ರಿಕೆಯ ಸಿಇಒ ಪಿ.ಎಸ್ ಪ್ರಕಾಶ್, ಪರಿಸರ ವಿಜ್ಞಾನಿ ಡಾ. ಬಿನಿಷಾ ಪಿ., ಘನ ತ್ಯಾಜ್ಯ ನಿರ್ವಹಣಾ ತಜ್ಞ ಹಾಗೂ ‘ಫ್ರೆಂಡ್ಸ್ ಆಫ್ ಲೇಕ್ಸ್’ ಸಂಸ್ಥೆಯ ಸಂಸ್ಥಾಪಕ ರಾಮಪ್ರಸಾದ್, ಸ್ವಚ್ಛ ಕಾರ್ಕಳ ಬ್ರಿಗೇಡ್‌ನ ಅರ್ಜುನ ಕುಮಾರ್ ಇದ್ದರು. ಹಸಿರು ಸಂವಾದ ಅಭಿಯಾನದ ಮಂಜುನಾಥ್ ಸ್ವಾಗತಿಸಿ, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026 ಪ್ರತಿಭೋತ್ಸವ

Article Image

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026 ಪ್ರತಿಭೋತ್ಸವ

ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ “ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026” ಪ್ರತಿಭೋತ್ಸವದ ಅಂಗವಾಗಿ ಆಯೋಜಿಸಲಾದ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಭ್ರಮ, ಸಾಂಸ್ಕೃತಿ ಮತ್ತು ಕಲಾ ವೈಭವದ ನಡುವೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಹಾಗೂ ಸಾಂಸ್ಕೃತಿಕ ತೇರನ್ನು ಎಳೆಯುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ಅವರು, “ ಇಂತಹ ಸಾಂಸ್ಕೃತಿಕ ವಾತವರಣದಲ್ಲಿ ಬೆಳೆದು ಬರುತ್ತಿರುವ ವಿದ್ಯಾರ್ಥಿಗಳೇ ನಿಜವಾಗಿಯೂ ಧನ್ಯರು. ಶಿಕ್ಷಣದೊಂದಿಗೆ ಸಾಂಸ್ಕೃತಿಕ ಸಂಸ್ಕಾರ ಮತ್ತು ಉತ್ತಮ ಪರಿಸರವು ಅತ್ಯಂತ ಮುಖ್ಯ. ಶಾಲೆಯು ಕೇವಲ ಶಿಕ್ಷಣ ನೀಡುವ ಕೇಂದ್ರವಲ್ಲ; ಉತ್ತಮ ಸಂಸ್ಕಾರವನ್ನು ರೂಪಿಸುವ ಪವಿತ್ರ ಕ್ಷೇತ್ರವಾಗಿದೆ,” ಎಂದು ಹೇಳಿದರು. “ಭಗವಂತನು ಕೊಟ್ಟರುವ ಈ ದೇಹವನ್ನು ಸಮಾಜದ. ವಿಶೇಷವಾಗಿ ಬಡವರ ಮತ್ತು ನೊಂದವರ ಒಳಿತಿಗಾಗಿ ಮೀಸಲಿಡಬೇಕು. ಜೀವನದಲ್ಲಿ ತಂದೆ, ತಾಯಿ ಮತ್ತು ಗುರುಗಳಿಗೆ ಸದಾ ಋಣಿಗಳಾಗಿರಬೇಕು. ಅವರ ಆರ್ಶೀವಾದವೇ ನಮ್ಮ ಬದುಕಿನ ನಿಜವಾದ ಸಂಪತ್ತು,” ಎಂದು ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳ ಕುರಿತು ಕಿವಿಮಾತು ಹೇಳಿದರು. ನಂತರ “ಯಕ್ಷಗಾನಂ ವಿಶ್ವಗಾನಂ” ಎಂಬ ಘೋಷಣೆಯೊಂದಿಗೆ ತಮ್ಮ ಸುಮಧುರ ಕಂಠಸಿರಿಯ ಮೂಲಕ ಯಕ್ಷಗಾನದ ಗಾನಸುಧೆಯನ್ನು ಹರಿಸಿ ಸಭಿಕರನ್ನು ಮಂತ್ರಮುಗ್ಧರನ್ನಾಗಿಸಿದರು. ಅವರ ಭಾವಪೂರ್ಣ ಗಾಯನಕ್ಕೆ ಸಭಾಂಗಣ ಕರತಾಡನದಿಂದ ಮೊಳಗಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಪಟ್ಲ ಸತೀಶ್ ಶೆಟ್ಟಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಮಹವೀರ ಪಾಂಡಿ ಅವರು ಮಾತನಾಡಿ, “ಅವಕಾಶವನ್ನು ಗುರುತಿಸಿ ಶ್ರಮದಿಂದ ಸದುಪಯೋಗಪಡಿಸಿಕೊಡವರಿಗೆ ದೇವರ ಆರ್ಶೀವಾದ ಸದಾ ಜೊತೆಯಾಗಿರುತ್ತದೆ,” ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಅವರು ಮಾತನಾಡಿ, “ಯಕ್ಷಗಾನದ ಮೂಲಕ ಕರಾವಳಿಯ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ ಪಟ್ಲ ಸತೀಶ್ ಶೆಟ್ಟಿಯವರ ಸಾಧನೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಸ್ಪೂರ್ತಿದಾಯಕವಾಗಿದೆ. ಅವರನ್ನು ಆದರ್ಶವಾಗಿಟ್ಟುಕೊಂಡು ತಮ್ಮ ಪ್ರತಿಭೆಯನ್ನು ಬೆಳಸಿಕೊಂಡು ಸಾಧನೆಯ ಶಿಖರವನ್ನು ತಲುಪಬೇಕು, " ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರು, “ಯಕ್ಷಗಾನವನ್ನು ವಿಶ್ವಮಟ್ಟದಲ್ಲಿ ಪರಿಚಯಿಸಿ ಕರಾವಳಿಯ ಕೀರ್ತಿಯನ್ನು ಪಸರಿಸುವಲ್ಲಿ ಪಟ್ಲ ಸತೀಶ್ ಶೆಟ್ಟಿಯವರ ಕೊಡುಗೆ ಅಪಾರವಾಗಿದೆ. ಕಲೆಗೆ ಸಮಾಜವನ್ನು ಜಾಗೃತಗೊಳಿಸುವ ಅದ್ಭುತ ಶಕ್ತಿಯಿದೆ. ನಾವು ನಮ್ಮೊಂದಿಗೆ ಇತರರನ್ನೂ ಬೆಳೆಸುವ ಮನೋಭಾವವನ್ನು ಹೊಂದಿದಾಗ ಸಮಾಜವೂ ಅಭಿವೃದ್ಧಿಯಾಗುತ್ತದೆ. ಭಗವಂತ ಪ್ರತಿಯೊಬ್ಬರಿಗೂ ಯೋಗ ಮತ್ತು ಯೋಗ್ಯತೆಯನ್ನು ನೀಡುತ್ತಾನೆ. ಅದನ್ನು ಸಾರ್ಥಕಗೊಳಿಸುವ ರೀತಿಯಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು,” ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ. ಸಂಪತ್ ಕುಮಾರ್ ಜೈನ್, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮೂಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್, ಸಿಬಿಎಸ್‌ಸಿ ಪ್ರಾಂಶುಪಾಲರಾದ ಶ್ರೀಪ್ರಸಾದ್, ಕೀಬೋರ್ಡ್ ಪರಿಣಿತ ಸದಾಶಿವ ಭಟ್ ಶಿವಗಿರಿ. ತಬಲಾ ಪರಿಣಿತ ಗೌರಿಪ್ರಸಾದ್ ಗುರುವಾಯನಕೆರೆ, ಭರತನಾಟ್ಯ ಕಲಾವಿದೆ ರಶ್ಮಿತಾ ಅರವಿಂದ್ ಕರಾಟೆ ತರಬೇತುದಾರ ಸರ್ಫರಾಜ್ ಎ.ಕೆ, ಚಿತ್ರಕಲೆ ಶಿಕ್ಷಕ ಭಾಸ್ಕರ ನೆಲ್ಯಾಡಿ, ಕೊಳಲು ವಾದಕ ಲೋಕೇಶ್ ಸಂಪಿಗೆ, ಚೆಂಡೆ ವಾದಕ ಚಂದ್ರಶೇಖರ ಆಚಾರ್, ಪಾಶ್ಚಾತ್ಯ ನೃತ್ಯ ತರಬೇತುದಾರ ರೂಪೇಶ್ ಕುಮಾರ್ ಹಾಗೂ ಕರಕುಶಲ ಕಲೆ ಶಿಕ್ಷಕಿ ಚೇತನಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿ ಪ್ರತಿಭೆಯ ಅನಾವರಣ ಮಾಡುವ ಮೂಲಕ ಕಾರ್ಯಕ್ರಮದ ಮೆರುಗನ್ನು ಇನ್ನಷ್ಟು ಹೆಚ್ಚಿಸಿದರು. ಶಿಕ್ಷಕಿ ಹರ್ಷಿತಾ ಸ್ವಾರ್ಗತಿಸಿದರು. ಮೌಲ್ಯ ವೈ ಆರ್ ಜೈನ್ ಅವರು ಪಟ್ಲ ಸತೀಶ್ ಶೆಟ್ಟಿಯವರ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ವಿಜೇತ ಹಾಗೂ ಶರ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ವನಿತಾ ವಂದಿಸಿದರು.

ಎಕ್ಸಲೆಂಟ್: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Article Image

ಎಕ್ಸಲೆಂಟ್: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು. ಅವರು ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನವು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ವಿವರಿಸಿದ ಅವರು, ಕ್ಷಣಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಸ್ನೇಹ, ಸತ್ಪ್ರವೃತ್ತಿ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಜನತೆ ವ್ಯಸನಮುಕ್ತ ಜೀವನಶೈಲಿಯನ್ನು ರೂಢಿಸಿಕೊಂಡಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪುಷ್ಪರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುವ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಸ್ವೀಕರಿಸಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮದಲ್ಲಿ ಸಿಇಟಿ ಸಂಯೋಜಕರಾದ ರಂಜಿತ್ ಜೈನ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಶೃತಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಸುನಾದರಾಜ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

ಧರ್ಮಸ್ಥಳ: ಸ್ವಚ್ಛ ನೇತ್ರಾವತಿ ಅಭಿಯಾನ

Article Image

ಧರ್ಮಸ್ಥಳ: ಸ್ವಚ್ಛ ನೇತ್ರಾವತಿ ಅಭಿಯಾನ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅನೇಕ ಸ್ಥಳೀಯ ಸಂಘಟನೆಗಳ ಸದಸ್ಯರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ “ಸ್ವಚ್ಛತಾ ಸೂಚನಾ ಫಲಕ” ಅನಾವರಣಗೊಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿ.ಡಿ.ಒ. ಗಾಯತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು.

ಬೆಳ್ತಂಗಡಿ: ಡಾ. ಡಿ. ಹೆಗ್ಗಡೆ ದಂಪತಿಗಳು ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ

Article Image

ಬೆಳ್ತಂಗಡಿ: ಡಾ. ಡಿ. ಹೆಗ್ಗಡೆ ದಂಪತಿಗಳು ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಹೇಮಾವತಿ ವಿ. ಹೆಗ್ಗಡೆಯವರು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಿದ ಹೆಗ್ಗಡೆ ದಂಪತಿಗಳು, ಸಿಬ್ಬಂದಿಗಳ ಕಾರ್ಯನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿ ಶುಭ ಹಾರೈಸಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ ಅವರು ಹೆಗ್ಗಡೆ ದಂಪತಿಗಳನ್ನು ಹಾಗೂ ಹೆಗ್ಗಡೆಯವರ ಮೊಮ್ಮಗಳಾದ ಮಾನ್ಯರವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಮಹೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತ ಹಾಗೂ ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಹೆಗ್ಗಡೆ ದಂಪತಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ರಾಜೇಶ್ ಪೈ, ಡಾ. ಹರೀಶ್ ಕೃಷ್ಣಸ್ವಾಮಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Article Image

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ: ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಜೂನ್ ತಿಂಗಳಿನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸಿರಿ ಸಿಬ್ಬಂದಿಗಳಿಗೆ ಹಾಗೂ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗಳಿಗೆ ಶುಭ ಹಾರೈಸಿದರು. ನಂತರ ಅವರು ಮಾತನಾಡಿ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರು ಮಹಿಳಾ ಸಬಲೀಕರಣದ ಧ್ಯೇಯೋದ್ದೇಶದಿಂದ ಪ್ರಾರಂಭಿಸಿರುವ ಸಿರಿ ಸಂಸ್ಥೆಯಲ್ಲಿ ಎಲ್ಲಾ ಸಿರಿ ಸಿಬ್ಬಂದಿಗಳು ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಸಿರಿ ಬ್ರ‍್ಯಾಂಡನ್ನು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯುವ ಮೂಲಕ ದಂಪತಿಗಳ ಕನಸನ್ನು ನನಸಾಗಿಸಬೇಕೆಂದು ಪ್ರೇರಣಾತ್ಮಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಎ,ವಿ, ಶೆಟ್ಟಿ ಮತ್ತು ಅವರ ಧರ್ಮಪತ್ನಿ ಅರುಣ ವಿ ಶೆಟ್ಟಿಯವರನ್ನು ಅತ್ಯಂತ ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು, ಪ್ರಾಸ್ತಾವಿಕವಾಗಿ ಮಾತನಾಡಿ, ಸಿರಿ ಸಂಸ್ಥೆಯ ಸಮಗ್ರ ಏಳಿಗೆಗಾಗಿ ಶ್ರಮವಹಿಸಿ, ಸಂಪೂರ್ಣ ಸಹಕಾರ ನೀಡುತ್ತಾ ಬಂದಿರುವ ಎ,ವಿ, ಶೆಟ್ಟಿ ದಂಪತಿಗಳಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು. ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ಧನರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಸಿರಿ ಸಿಬ್ಬಂದಿಗಳಿಗೆ ಶುಭಕೋರಿದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದ ಖಾವಂದರು ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ಕುರಿತು ವಿಡಿಯೋ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಸಿರಿ ಕ್ಲಬ್ ಅಧ್ಯಕ್ಷೆ ಉಷಾ, ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಿರಿ ಸಿಬ್ಬಂದಿಗಳು ಭಾಗವಹಿಸಿದ್ದರು. ಸಿರಿ ಸಂಸ್ಥೆಯ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನರವರು ವಂದಿಸಿದರು.

ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

Article Image

ಧರ್ಮಸ್ಥಳ: ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ ಹಾಗೂ ಅನುಕರಣೀಯವಾಗಿವೆ ಎಂದು ಕೊಡಗು ವಿರಾಜಪೇಟೆಯ ಪೂಜ್ಯ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಧರ್ಮಸ್ಥಳದ ವತಿಯಿಂದ ಬದುಕಿಗೆ ಬೇಕಾದ ಎಲ್ಲಾ ಅವಶ್ಯಕತೆಗಳನ್ನು ಮತ್ತು ಸೌಲಭ್ಯಗಳನ್ನು ಒದಗಿಸಿ ಫಲಾನುಭವಿಗಳ ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದವರು ಕಾರ್ಯ ಮಾಡದ ಸೇವಾ ಕ್ಷೇತ್ರವಿಲ್ಲ. ವ್ಯಸನಮುಕ್ತರು ದೃಢಸಂಕಲ್ಪದಿಂದ ಸಾರ್ಥಕ ಜೀವನ ನಡೆಸಬೇಕು. ಇದು ಅತ್ಯಂತ ಸಂತೋಷ ಮತ್ತು ಸಂಭ್ರಮದ ಸಮಾರಂಭವಾಗಿದ್ದು ವ್ಯಸನಮುಕ್ತರ ಮುಖದಲ್ಲಿರುವ ಮಂದಹಾಸ ಹಾಗೂ ತೃಪ್ತಿ ಆಶಾದಾಯಕವಾಗಿದೆ. ಪೂಜ್ಯ ಹೆಗ್ಗಡೆಯವರು ತಮ್ಮ ಎಲ್ಲಾ ಸೇವಾಕಾರ್ಯಗಳ ಯಶಸ್ಸನ್ನು ದೇವರ ಸೇವೆ ಎಂದೇ ಭಾವಿಸಿ, ಶ್ರೀ ಸ್ವಾಮಿಗೆ ಅರ್ಪಿಸಿ ಧನ್ಯತೆಯನ್ನು ಹೊಂದುತ್ತಾರೆ. ವ್ಯಸನಮುಕ್ತರು ಇಲ್ಲಿಗೆ ಬಂದು ಒಳ್ಳೆಯ ಜ್ಞಾನ ಹಾಗೂ ವಿಚಾರಗಳನ್ನು ಮನದಲ್ಲಿ ತುಂಬಿಕೊಂಡು ಮುಂದೆ ಸಾರ್ಥಕ ಜೀವನ ನಡೆಸಬೇಕು. ಏಕೆಂದರೆ ಇತರ ಕ್ಷೇತ್ರಗಳಲ್ಲಿ ಮಾಡಿದ ಪಾಪಕರ್ಮಗಳು ಪುಣ್ಯಕ್ಷೇತ್ರದಲ್ಲಿ ನಾಶವಾಗುತ್ತವೆ. ಪುಣ್ಯಕ್ಷೇತ್ರದಲ್ಲಿ ಪಾಪ ಮಾಡಿದರೆ ವಜ್ರಲೇಪದಂತೆ ಅದು ಬದುಕಿನಲ್ಲಿ ಶಾಶ್ವತವಾಗಿರುತ್ತದೆ ಎಂದು ಸ್ವಾಮೀಜಿ ಸಲಹೆ ನೀಡಿದರು. ನವಜೀವನ ಪ್ರಶಸ್ತಿ ಪ್ರದಾನ ಮಾಡಿದ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ವ್ಯಸನಮುಕ್ತರು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು, ತಮ್ಮ ಕೆಲಸವನ್ನು ಸಂತೋಷದಿಂದ ಮಾಡಿ ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಬೇಕು ಎಂದು ಹೇಳಿದರು. ವಾರ್ಷಿಕ ವರದಿ ಬಿಡುಗಡೆಗೊಳಿಸಿದ ಹೇಮಾವತಿಯವರು ವೀ. ಹೆಗ್ಗಡೆ ಮಾತನಾಡಿ ಮದ್ಯಪಾನದಂತಹ ದುಶ್ಚಟಗಳಿಂದ ಕೊಲೆ, ಅನ್ಯಾಯ, ಅತ್ಯಾಚಾರ ಹೆಚ್ಚಾಗುತ್ತದೆ. ಮಹಿಳೆಯರ ಜೀವನ ನರಕಯಾತನೆಯಾಗುತ್ತದೆ. ಮಾನವಜನ್ಮ ಶ್ರೇಷ್ಠವಾಗಿದ್ದು ಬುದ್ಧಿ, ವಿವೇಕ ಮತ್ತು ಶಕ್ತಿಯ ಸದುಪಯೋಗ ಮಾಡಿ ಸುಖ-ಶಾಂತಿ, ನೆಮ್ಮದಿಯ ಕುಟುಂಬಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು. ಗ್ರಾಮಾಭಿವೃದ್ಧಿ ಯೋಜನೆಯ ಸಿ.ಇ.ಒ. ಅನಿಲ್ ಕುಮಾರ್ ಮಾತನಾಡಿ ಫಲಾನುಭವಿಗಳ ಕಲ್ಯಾಣಕ್ಕಾಗಿ ಅನುಷ್ಠಾನಗೊಳಿಸಿದ ಯಶಸ್ವಿ ಕಾರ್ಯಕ್ರಮಗಳ ಮಾಹಿತಿ ನೀಡಿದರು. “ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ” ಪ್ರಶಸ್ತಿ: ಹೊನ್ನಾವರದ ಮಂಜುನಾಯ್ಕ, ನಂಜನಗೂಡು ಮಣಿಕಂಠ ಮತ್ತು ಗದಗ ಜಿಲ್ಲೆಯ ನವಲಗುಂದದ ಜಗದೀಶ ಮಲ್ಲಪ್ಪ ಬ್ಯಾಳಿ ಅವರಿಗೆ “ಜಾಗೃತಿ ಅಣ್ಣ” ಹಾಗೂ ಹುಬ್ಬಳ್ಳಿಯ ಸಿದ್ದಪ್ಪ ಕಲ್ಲಪ್ಪ ನೀಲರಗಿ, ಅಥಣಿಯ ಅಂದಾನಿ ದುರದುಂಡೆಪ್ಪ, ಶಿವಮೊಗ್ಗದ ರಮೇಶ್, ಎಸ್.ಎಲ್. ಗದಗದ ಶಿವಾನಂದ ಕುರಿ, ತುಮಕೂರಿನ ರವಿಕುಮಾರ್ ಮತ್ತು ವಿಜಯಪುರದ ಬಬಲೇಶ್ವರ ಸುಭಾಶ್ ಅವರಿಗೆ “ಜಾಗೃತಿ ಮಿತ್ರ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪಾನಮುಕ್ತರ ಪರವಾಗಿ ಕೂಡ್ಲಿಗಿಯ ಸತೀಶ್ ಮತ್ತು ತುಮಕೂರಿನ ಮಂಜುಳಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ವ್ಯಸನಮುಕ್ತರು ದೃಢಸಂಕಲ್ಪದಿಂದ ಇದ್ದು ಮುಂದೆ ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗಿ ಮತ್ತೆ ದುಶ್ಚಟಕ್ಕೆ ಬಲಿಯಾಗಬಾರದು. ತಾವು ಸಾರ್ಥಕ ಜೀವನ ನಡೆಸುವುದರೊಂದಿಗೆ, ಇತರ ಮದ್ಯವ್ಯಸನಿಗಳೂ ವ್ಯಸನಮುಕ್ತರಾಗುವಂತೆ ಪ್ರೇರಣೆ, ಸಹಕಾರ ನೀಡಬೇಕು ಎಂದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಮಾತನಾಡಿ, ಈ ವರೆಗೆ 2063 ಮದ್ಯವರ್ಜನ ಶಿಬಿರಗಳ ಮೂಲಕ 1,38,000 ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಪರಿವರ್ತನೆ ಮಾಡಿದ್ದು ಇದಕ್ಕಾಗಿ 75 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ ಧನ್ಯವಾದವಿತ್ತರು. ಯೋಜನಾಧಿಕಾರಿ ಗಣೇಶ್ ಅಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಧರ್ಮಸ್ಥಳ: ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

Article Image

ಧರ್ಮಸ್ಥಳ: ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

ಧರ್ಮಸ್ಥಳ, ಜೂ. 9: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಬಿಡುಗಡೆ ಬಳಿಕ ಕಿರುಚಿತ್ರವನ್ನು ವೀಕ್ಷಿಸಿದ ಹೆಗ್ಗಡೆ‌ ದಂಪತಿಗಳು, ತುಳುನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ದೈವ ಆರಾಧನೆಯ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿರುವ ಯುವಕರ ಪ್ರಯತ್ನವನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಅವರು ಕಿರುಚಿತ್ರವನ್ನು ವೀಕ್ಷಿಸಿ, ಚಿತ್ರದ ಕಲಾವಿದರು ಹಾಗೂ ತಾಂತ್ರಿಕ ತಂಡಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಕಲಾಕೇಂದ್ರದ ಪೋಷಕರಾದ ಸೋನಿಯಾ ಯಶೋವರ್ಮರವರು ಕೂಡ ಕಿರು ಚಿತ್ರ ವೀಕ್ಷೀಸಿ ಯುವಕರ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದರು. ಸುಮಾರು 15 ನಿಮಿಷಗಳ ಅವಧಿಯ ಈ ಕಿರುಚಿತ್ರವು ತುಳುನಾಡಿನ ದೈವ ಆರಾಧನೆಯ ಹಿನ್ನೆಲೆಯ ಕಥಾವಸ್ತುವನ್ನು ಒಳಗೊಂಡಿದ್ದು, ಯುವಕರು ಮತ್ತು ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿದೆ. ಕಿರುಚಿತ್ರದ ನಿರ್ಮಾಪಕರಾಗಿ ಕಾರ್ತಿಕ್ ಸುಬ್ರಹ್ಮಣ್ಯ, ರಚನೆ ಹಾಗೂ ನಿರ್ದೇಶನವನ್ನು ನೂತನ ಅಮೀನ್, ಕಥೆ ಮತ್ತು ಸಂಭಾಷಣೆಯನ್ನು ಸುಜಿತ್ ಸೂರ್ಯ ನಿರ್ವಹಿಸಿದ್ದಾರೆ. ಭೂಷಣ್ ಪೂಜಾರಿ ಸಂಗೀತ ಸಂಯೋಜನೆ ಮಾಡಿದ್ದು, ಸಮರ್ಥನ್ ರಾವ್ ಹಿನ್ನೆಲೆ ಸಂಗೀತವನ್ನು ನೀಡಿದ್ದಾರೆ. ಗಗನ್ ರಾಜ್ ಛಾಯಾಗ್ರಹಣ ಹಾಗೂ ಸಂಕಲನದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಸುಬ್ರಹ್ಮಣ್ಯದ ಸ್ಥಳಿಯರಾದ ರೋಹಿತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದು, ಕಾರ್ತಿಕ್ ಶೋಬಿತ್, ಕಿರಣ್, ಜಯರಾಮ್ , ರಾಜಾರಾಮ್ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುಚಿತ್ರದ ನಿರ್ಮಾಣದಲ್ಲಿ ಸುನಿಲ್ ಶೆಟ್ಟಿ ಕಲ್ಕೊಪ್ಪ ಹಾಗೂ ಯಶವಂತ್ ಬೆಳ್ತಂಗಡಿ (ನೀನಾಸಂ) ಅವರು ಸಲಹೆ ಮತ್ತು ಸಹಕಾರ ನೀಡಿದ್ದು, ಯುವ ಕಲಾವಿದರ ಈ ಪ್ರಯತ್ನಕ್ಕೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಒದಗಿಸಿದ್ದಾರೆ. ಯುವಕರ ಸೃಜನಶೀಲತೆ, ಸಾಂಸ್ಕೃತಿಕ ಬದ್ಧತೆ ಮತ್ತು ತುಳುನಾಡಿನ ಪರಂಪರೆಯ ಮೇಲಿನ ಅಭಿಮಾನವನ್ನು ಪ್ರತಿಬಿಂಬಿಸುವ ‘ಶ್ರೀಗಣ’ ಕಿರುಚಿತ್ರವು ಕುಕ್ಕೆಶ್ರಿ ಕ್ರೀಯೇಷನ್ಸ್ ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ವಿಶ್ವ ಬೈಸಿಕಲ್ ದಿನಾಚರಣೆ ಮತ್ತು ಪರಿಸರ ದಿನಾಚರಣೆ

Article Image

ವಿಶ್ವ ಬೈಸಿಕಲ್ ದಿನಾಚರಣೆ ಮತ್ತು ಪರಿಸರ ದಿನಾಚರಣೆ

ಸತ್ತೂರು, ಧಾರವಾಡ: ಎಸ್.ಡಿ.ಎಂ. ವಿಶ್ವವಿದ್ಯಾಲಯ ಹಾಗೂ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಜಂಟಿಯಾಗಿ ‘ವಿಶ್ವ ಬೈಸಿಕಲ್ ದಿನಾಚರಣೆ’ ಮತ್ತು ‘ವಿಶ್ವ ಪರಿಸರ ದಿನಾಚರಣೆ’ಯನ್ನು ಆಚರಿಸಿದವು. ಇದರೊಂದಿಗೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಹತ್ತನೇ ವರ್ಷದ ಯಶಸ್ವಿ ದಶಮಾನೋತ್ಸವ ಸಂಭ್ರಮಾಚರಣೆಯನ್ನು ಜೂ. 7ರಂದು ಅತ್ಯಂತ ಸಡಗರದಿಂದ ಆಚರಿಸಲಾಯಿತು.​ಭಾರತದ ಮೊದಲ ಕ್ಯಾನ್ಸರ್ ಮುಕ್ತ ಸಾಧಕ ಟ್ರಯಾಥ್ಲೆಟ್ ಹಾಗೂ ಐರನ್‌ಮ್ಯಾನ್ (Ironman) ಪ್ರಶಸ್ತಿ ವಿಜೇತರಾದ ಡಾ. ಮಯೂರಾ ಶಿವಾಲ್ಕರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ​ಈ ವಿಶೇಷ ಸಂದರ್ಭದ ಅಂಗವಾಗಿ ಎಸ್‌ಡಿಎಂ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗಾಗಿ 10 ಕಿಲೋಮೀಟರ್ ಉದ್ದದ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಮತ್ತು ಪರಿಸರ ಜಾಗೃತಿ ಮೂಡಿಸುವ ಈ ರ‍್ಯಾಲಿಯಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಸದಸ್ಯರು ಸೇರಿದಂತೆ 120ಕ್ಕೂ ಹೆಚ್ಚು ಸೈಕಲ್ ಸವಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಇದೇ ವೇಳೆ ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಸಾಧಕರಿಗೆ, ಗಣ್ಯರು ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಿದರು.​ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯ್ ಕೆ. ಕುಲಕರ್ಣಿ, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ ಮತ್ತು ಸಂಘಟನಾ ಕಾರ್ಯದರ್ಶಿಯಾದ ಡಾ. ಮಹಾಂತೇಶ್ ಮಟ್ಟಿ ಮತ್ತಿತರರು ಉಪಸ್ಥಿತರಿದ್ದರು.​ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಅಧ್ಯಕ್ಷರಾದ ಶೆಟ್ಟೆಪ್ಪ ಪಿರಂಗಿ ಅವರು ಸ್ವಾಗತಿಸಿದರು. ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನ ಕಾರ್ಯದರ್ಶಿಯಾದ ಶಿವಾನಂದ ದಂಡವತಿಮಠ ಅವರು ವಂದನಾರ್ಪಣೆ ಮಾಡಿದರು. ಡಾ. ವೈಷ್ಣವಿ ಮತ್ತು ಡಾ. ಅನಘಾ ಕಾರ್ಯಕ್ರಮವನ್ನು ನಿರೂಪಿಸಿದರು.

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ

Article Image

ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಭೇಟಿ

ಧರ್ಮಸ್ಥಳ, ಮೇ 31: ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಅವರು ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಉಪರಾಷ್ಟ್ರಪತಿಗಳು ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಕ್ಷೇತ್ರವು ಸಮಾಜಮುಖಿ ಸೇವೆಯಲ್ಲಿ ಸಲ್ಲಿಸುತ್ತಿರುವ ಕೊಡುಗೆಯನ್ನು ಶ್ಲಾಘಿಸಿದರು. ಭೇಟಿಯ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬ ಸದಸ್ಯರೂ ಕರ್ನಾಟಕ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್ ಹಾಗೂ ಅಮಿತ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಉಜಿರೆ: ಎಸ್‌.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ವಾಹನದ ಸೇವೆ

Article Image

ಉಜಿರೆ: ಎಸ್‌.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಗ್ಗಿ ವಾಹನದ ಸೇವೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲು ಕಷ್ಟಪಡುವ ರೋಗಿಗಳಿಗೆ ಬಗ್ಗಿ ವಾಹನದ ಸೇವೆ ಇನ್ನು ಮುಂದೆ ವಯೋವೃದ್ಧರಿಗೆ ಮತ್ತು ಅಶಕ್ತರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹೊರ ಆವರಣದೊಳಗೆ ಸಂಚರಿಸಲು ಬಗ್ಗಿ ವಾಹನದ ಸೇವೆ ಲಭ್ಯವಿರಲಿದೆ. ಪರಿಸರ ಸ್ನೇಹಿ ಮತ್ತು ಶಬ್ದ ರಹಿತ ವಾಹನ ಇದಾಗಿದ್ದು, ನಡೆಯಲು ಕಷ್ಟ ಪಡುವವರಿಗೆ ಆಸ್ಪತ್ರೆಯ ಹೊರ ಆವರಣದಲ್ಲಿ ಸಂಚರಿಸಲು ಇದು ಬಹು ಉಪಯುಕ್ತವಾಗಿದೆ. 4.65 ಲಕ್ಷ ಮೌಲ್ಯದ ಈ ವಾಹನವನ್ನು ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನವರು ಉಚಿತವಾಗಿ ನೀಡಿದ್ದು, ಬ್ಯಾಂಕ್ ಆಫ್ ಬರೋಡಾ ಇದರ ಪ್ರಾದೇಶಿಕ ಮೇನೇಜರ್ ಗಣೇಶ್ ಉಜಿನ ಮತ್ತು ಜನರಲ್ ಮೆನೇಜರ್ ರಾಜೇಶ್ ಖನ್ನಾ ಇವರು ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬಗ್ಗಿ ವಾಹನದ ಕೀಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು, ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನ ಉಜಿರೆ ಶಾಖೆಯ ಮೇನೇಜರ್ ಶಿವರಾಮ ಹಾಗೂ ಧರ್ಮಸ್ಥಳ ಶಾಖೆಯ ಮೆನೇಜರ್ ಚೈತನ್ಯಾನಂದ ಎನ್ ಉಪಸ್ಥಿತರಿದ್ದರು.

ಎಕ್ಸೆಲ್ ಕಾಲೇಜಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನ ರಾಯಭಾರಿ ರಮೇಶ್ ಅರವಿಂದ್ ಭೇಟಿ

Article Image

ಎಕ್ಸೆಲ್ ಕಾಲೇಜಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನ ರಾಯಭಾರಿ ರಮೇಶ್ ಅರವಿಂದ್ ಭೇಟಿ

ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನ ರಾಯಭಾರಿ ರಮೇಶ್ ಅರವಿಂದ್ ಅವರನ್ನು ಬೆಳ್ತಂಗಡಿ ಶಾಖಾ ಪ್ರಬಂಧಕರಾದ ಲೋಹಿತ್ ಕುಮಾರ್ ಹಾಗೂ ಸಿಬ್ಬಂದಿ ಶಿವರಾಜ್‌ರವರು, ಎಕ್ಸೆಲ್ ಕಾಲೇಜ್‌ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಗೌರವಿಸಲಾಯಿತು.

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ ಮತ್ತು ಸಿರಿ ಕೆಫೆ-ಸಿರಿ ಮಳಿಗೆ ಉದ್ಘಾಟನೆ

Article Image

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿಧಿ 2 ಕೋಟಿ ಕಾಮಗಾರಿ ಶಿಲಾನ್ಯಾಸ ಮತ್ತು ಸಿರಿ ಕೆಫೆ-ಸಿರಿ ಮಳಿಗೆ ಉದ್ಘಾಟನೆ

ಬೆಳ್ತಂಗಡಿ: ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಜನರ ಜೀವನ ಮಟ್ಟ ಸುಧಾರಣೆ ಅಗತ್ಯತೆ ಮನಗಂಡು ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ರಾಜ್ಯಸಭಾ ಸಂಸದರಾದ ಡಾ.‌ ವೀರೇಂದ್ರ ಹೆಗ್ಗಡೆಯವರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2 ಕೋ.ರೂ. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡುತ್ತಾ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ತಾಲೂಕಿನ ಕೆಲವು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ರಾಜ್ಯಸಭಾ ನಿಧಿಯನ್ನು ಬಳಸಲಾಗಿದೆ. ಗ್ರಾಮಾಭಿವೃದ್ದಿ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಬೆಳಕು ಬಂದರೆ, ಸಿರಿ ಸಂಸ್ಥೆಯಿಂದ ಸಾವಿರಾರು ಮಂದಿಗೆ ಉದ್ಯೋಗ ದೊರಕಿದೆ. ಮುಂದೆಯೂ ಇನ್ನಷ್ಟು ಉತ್ಪನ್ನಗಳನ್ನು ತಯಾರಿಸಿ ಮೂರು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು. ಇಲ್ಲಿನ ಶಾಸಕರ, ಪಟ್ಟಣ ಪಂಚಾಯಿತಿ ಅಧ್ಯಕ್ಷರ ,ಸದಸ್ಯರ ಬೇಡಿಕೆಯಂತೆ ಜನರ ಅನುಕೂಲಕ್ಕಾಗಿ ಈ ರಸ್ತೆಗೆ 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು. ಶಾಸಕ‌ ಹರೀಶ್ ಪೂಂಜ ಅವರು ಮಾತನಾಡಿ, ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಡಿ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಹುಣ್ಸೆಕಟ್ಟೆ ವರೆಗಿನ ರಸ್ತೆ ಅಭಿವೃದ್ದಿಗೆ 2 ಕೋಟಿ ರೂ. ನೀಡುವ ಮೂಲಕ ಉಪ್ಪಿನಂಗಡಿ- ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ಗುರುವಾಯನಕರೆಯಲ್ಲಿ ಟ್ರಾಫಿಕ್ ಸಮಸ್ಯೆ ಬಂದಾಗ ಈ ಸಂಪರ್ಕ ರಸ್ತೆ ಸಾವಿರಾರು ಜನರಿಗೆ ಅನುಕೂಲವಾಗಿದೆ. ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಿಂದ 10 ಕೋಟಿ ರೂ. ಅನುದಾನ ನೀಡಿ ಸಾವಿರಾರು ಕುಟುಂಬಗಳ ಆರ್ಥಿಕ ಬೆಳವಣಿಗೆ ಕಾರಣವಾಗಿದ್ದಾರೆ. ಇದರಿಂದ ದೇಶದಲ್ಲಿ ಸಂಸದರ ನಿಧಿ ವಿನಿಯೋಗ ಹೇಗೆ ಮಾಡಬಹುದೆಂದು ಡಾ. ಹೆಗ್ಗಡೆಯವರು ಕೆಲಸ ಮಾಡಿ ತೋರಿಸಿಕೊಟ್ಟು ಮಾದರಿಯಾಗಿದ್ದಾರೆ. ಸಿರಿ ಸಂಸ್ಥೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳು ಇದ್ದಾರೆ. ಮಹಿಳೆಯರಿಗೆ ಉದ್ಯೋಗ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. ಪಟ್ಟಣ ಪಂಚಾಯತ್ ಗೆ ಅನುದಾನಗಳ ಕೊರತೆ ಇದ್ದ ಸಂದರ್ಭದಲ್ಲಿ ರಸ್ತೆಗೆ ಎರಡು ಕೋಟಿ ಅನುದಾನ ನೀಡಿ ನಗರ ಪಂಚಾಯತ್ ಗೆ ಶಕ್ತಿ ತುಂಬಿದ್ದಾರೆ. ಇದಕ್ಕಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರ ಪರವಾಗಿ ಡಾ.ಹೆಗ್ಗಡೆಯವರಿಗೆ ಅಭಿನಂದಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಧ. ಗ್ರಾ. ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್., ಸಿರಿ ಸಂಸ್ಥೆ ಟ್ರಸ್ಟಿ ರಾಜೇಶ್ ಪೈ ಉಜಿರೆ, ಪ.ಪಂ.‌ ಮುಖ್ಯಾಧಿಕಾರಿ ರಾಜೇಶ್, ಸಿರಿ ಸಂಸ್ಥೆ ಸಿಇಒ ಪ್ರಸನ್ನ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ಜನಾರ್ದನ್ ಪ್ರಸ್ತಾವಿಸಿ, ಸ್ವಾಗತಿಸಿದರು. ಸಿರಿ ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ಎಂ.ಡಿ, ಸಿಇಒ ಭೇಟಿ

Article Image

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ಎಂ.ಡಿ, ಸಿಇಒ ಭೇಟಿ

ಉಜಿರೆ : ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಜಿರೆಯ ಕೇಂದ್ರ ಕಛೇರಿಗೆ ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ಭೇಟಿ ನೀಡಿದರು. ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಘವೇಂದ್ರ ಶ್ರೀನಿವಾಸ ಭಟ್ ರವರಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿನಂದಿಸಿದರು. ಈ ವೇಳೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ವಾದಿರಾಜ ಭಟ್, ಉಡುಪಿ ರಥಬೀದಿ ಶಾಖೆಯ ಹಿರಿಯ ಪ್ರಬಂಧಕ ಪ್ರಶಾಂತ್ ಎಂ. ರಾವ್ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿ ಹಣಕಾಸು ಅಧಿಕಾರಿ ಅರವಿಂದ್ ಭಗವತ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಘವೇಂದ್ರ ಶ್ರೀನಿವಾಸ ಭಟ್ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಕ್ಕೊ ಬೆಳೆಯ ವಿಚಾರ ವಿನಿಮಯ

Article Image

ಕೊಕ್ಕೊ ಬೆಳೆಯ ವಿಚಾರ ವಿನಿಮಯ

ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರದಿಂದ ಕೊಕ್ಕೋ ಬೆಳೆಯಲ್ಲಿ ಸುಧಾರಿತ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಸಮಾಜ ಮಂದಿರದಲ್ಲಿ ಅಕ್ಟೋಬರ್ 4 ರಂದು ನಡೆದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಕೋಲಾರದ ಡಾ. ರಶ್ಮಿ ಆರ್ ಅವರು ಮಾತನಾಡಿ ಮಳೆಯ ನೀರಿನೊಂದಿಗೆ ಕೊಚ್ಚಿ ಹೋಗುವ ಮೇಲ್ಮಣ್ಣನ್ನು ಉಳಿಸಿಕೊಂಡಲ್ಲಿ ಫಲವನ್ನು ಹೆಚ್ಚಿಸಬಹುದಾಗಿದೆ. ಕೊಕ್ಕೋ ನಾಟಿಗೆ ಕನಿಷ್ಠ 18 ಫೀಟುಗಳ ಅಂತರ ಇರತಕ್ಕದ್ದು ಅಗತ್ಯ ಇರುವ ರಸಸಾರವನ್ನು ಒದಗಿಸಿ ಬೆಳೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿದ ಪ್ರಭಾತ್ ಸಿಲ್ಕ್ಸ್ ಮಾಲೀಕ ಪ್ರಭಾ ಚಂದ್ರ ಜೈನ್ ಕೃಷಿಗೆ ಪ್ರಾಣಿಗಳ ಉಪಟಳ ಇದ್ದರೂ, ಉತ್ತಮ ಆರೋಗ್ಯಕ್ಕೆ ಹಟ್ಟಿ ಗೊಬ್ಬರದಿಂದ ಬೆಳೆದ ಬೆಳೆ ಹೆಚ್ಚು ಪರಿಣಾಮಕಾರಿ ಎಂದು ನೆನಪಿಸಿದರು. ಕೃಷಿ ಕೇಂದ್ರದ ಅಧ್ಯಕ್ಷ ಅಭಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಿಜಾರು ಹೊಸ ಮನೆ ವಿನಯ್ ಕುಮಾರ್ ಹಾಜರಿದ್ದರು. ಗುಣಪಾಲ ಮುದ್ಯ ಸ್ವಾಗತಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹರೀಶ್ ಕೋಟ್ಯಾನ್ ವರದಿ ಮಂಡಿಸಿದರು. ಲಿಡ್ವಿನ್ ಡಿ ಕೋಸ್ತ ವಂದಿಸಿದರು.

ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

Article Image

ಅಮ್ಮ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ತಮ್ಮ ತಾಯಿ ಸ್ಮರಣಾರ್ಥ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ 25ನೇ ವರ್ಷದ 'ಅಮ್ಮ ಪ್ರಶಸ್ತಿ'ಗಾಗಿ 2024 ಮತ್ತು 2025ನೇ ಸಾಲಿನಲ್ಲಿ ಪ್ರಕಟವಾದ ಕೃತಿ ಆಹ್ವಾನಿಸಲಾಗಿದೆ. 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ ಈಗ 25ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ 'ಅಮ್ಮ ಪ್ರಶಸ್ತಿ'ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿ ಕೃತಿಗಳ ಆಹ್ವಾನ ಕಳುಹಿಸಬಹುದು. ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಯ ರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು 'ಅ.30 ಕೊನೆಯ ದಿನಾಂಕವಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃತಿಗಳನ್ನು ರತ್ನಕಲಾ ಮಹಿಪಾಲರೆಡ್ಡಿ ಮುನ್ಸೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂ‌ ಪ್ರತಿಷ್ಠಾನ 'ಅಮ್ಮ ನಿಲಯ', ರಾಮಚಂದ್ರ ಲೇಔಟ್, ಪಿಡಬ್ಲ್ಯುಡಿ ಕಚೇರಿ ಹತ್ತಿರ, ಸೇಡಂ-585 222. ಕಲಬುರಗಿ ಜಿಲ್ಲೆ ಈ ವಿಳಾಸಕ್ಕೆ ಕಳಿಸಬೇಕು.

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Article Image

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರು ಹಾಗೂ ಸಿರಿ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾಗಿರುವ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಸಿರಿ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಸಿರಿ ಸಂಸ್ಥೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಹೆಗ್ಗಡೆ ದಂಪತಿಗಳು, ಇಲ್ಲಿ ನಡೆಯುತ್ತಿರುವ ವಿವಿಧ ಉತ್ಪನ್ನಗಳ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ನವರಾತ್ರಿ ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಸಿಬ್ಬಂದಿಗಳನ್ನುದ್ದೇಶಿಸಿ ಮಾತನಾಡಿದ ಅವರು ನವರಾತ್ರಿಯು ಶಕ್ತಿ, ಬುದ್ಧಿವಂತಿಕೆ, ಧೈರ್ಯ, ಭಕ್ತಿ ಮತ್ತು ರಕ್ಷಣೆಯಂತಹ ವಿಭಿನ್ನ ಗುಣಗಳ ಸ್ವರೂಪವಾಗಿರುವ ನವದುರ್ಗೆಯರ ಪೂಜೆಗೆ ಸಮರ್ಪಿತವಾಗಿದೆ. ಸಿರಿಯಲ್ಲಿ ದುಡಿಯುವ ಮಹಿಳೆಯರು ಕೂಡಾ ಸಿರಿಯ ಶಕ್ತಿ ಸ್ವರೂಪಿಣಿಯರಾಗಿದ್ದು, ಎಲ್ಲರೂ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿದು ಸಿರಿ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸಿ, ಮುನ್ನಡೆಸುವ ಮೂಲಕ ಇನ್ನೂ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ದೊರೆತು ನೆಮ್ಮದಿಯ ಜೀವನ ನಡೆಸುವಂತಾಗಲಿ, ಎಲ್ಲರಿಗೂ ನವದುರ್ಗೆಯರ ಆಶೀರ್ವಾದವಿರಲಿ ಎಂದು ಶುಭ ಹಾರೈಸಿದರು. ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಕೆ.ಎನ್ ಜನಾರ್ಧನರವರು ಹೆಗ್ಗಡೆ ದಂಪತಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್ ಪೈ, ಸಿರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಮಹಾವೀರ ಅಜ್ರಿ, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ಮಾರುಕಟ್ಟೆ ವಿಭಾಗ ಮತ್ತು ವಿವಿಧ ಉತ್ಪಾದನಾ ವಿಭಾಗಗಳ ಮೇಲಾಧಿಕಾರಿಗಳು, ಮೇಲ್ವಿಚಾರಕರು, ಗೋದಾಮು ಪ್ರಬಂಧಕರು ಹಾಗೂ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆಳ್ವಾಸ್ ಕಾಲೇಜಿನಲ್ಲಿ ಮಾಯಾಚಕ್ರ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

Article Image

ಆಳ್ವಾಸ್ ಕಾಲೇಜಿನಲ್ಲಿ ಮಾಯಾಚಕ್ರ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಹೆಗ್ಡೆ ನಿರ್ದೇಶನದ ಕಿರುಚಿತ್ರ ‘ಮಾಯಾಚಕ್ರ’ದ ಪ್ರೀಮಿಯರ್ ಷೋ ಆಳ್ವಾಸ್ ಕಾಲೇಜಿನ ರಾಷ್ಟ್ರೀ ಯ ಸೇವಾ ಯೋಜನೆಯ ಸಹಯೋಗದಲ್ಲಿ ಕಾಲೇಜಿನ ಆಡಿಯೋ ವೀಡಿಯೋ ಥಿಯೇಟರ್‌ನಲ್ಲಿ ನಡೆಯಿತು. ಕಿರುಚಿತ್ರ ವೀಕ್ಷಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಗೌರವ್ ಹೆಗ್ಡೆ ಮತ್ತು ಅವರ ತಂಡದ ಚೊಚ್ಚಲ ಪ್ರಯತ್ನವನ್ನು ಶ್ಲಾಘಿಸಿದರು. ಎಳವೆಯಲ್ಲಿಯೇ ಇಂತಹ ಸೃಜನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು ಸಮಾಜಕ್ಕೆ ಪ್ರೇರಣಾದಾಯಕ. ತನಿಖಾ ಪತ್ರಿಕೋದ್ಯಮದ ಕಥಾಹಂದರ ಹೊಂದಿರುವ ಈ ಕಿರುಚಿತ್ರವು, ಪತ್ರಕರ್ತರು ವೃತ್ತಿಜೀವನದಲ್ಲಿ ಎದುರಿಸಬೇಕಾಗುವ ತೊಂದರೆಗಳು, ಸವಾಲುಗಳು ಮತ್ತು ಸಮಾಜದ ಒತ್ತಡಗಳ ನೈಜ ಚಿತ್ರಣವನ್ನು ನೀಡುತ್ತದೆ. ‘ಮಾಯಾಚಕ್ರ’ದ ಇನ್ನೊಂದು ವಿಶೇಷತೆ, ಚಿತ್ರದಲ್ಲಿ ಸ್ಥಳೀಯ ಸ್ಥಳಗಳು ಮತ್ತು ಪ್ರತಿಭೆಗಳನ್ನು ಬಳಸಿರುವುದು. ಈ ಮೂಲಕ ಗ್ರಾಮೀಣ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ, ಪ್ರತಿಭಾವಂತರಿಗೆ ತಮ್ಮ ನಟನಾ ಕೌಶಲ್ಯವನ್ನು ತೋರಿಸಲು ವೇದಿಕೆ ಒದಗಿಸಲಾಗಿದೆ ಎಂದರು. ಸಿನಿಮಾದ ನಿರ್ದೇಶಕ ಗೌರವ್ ಹೆಗ್ಡೆ ಮಾತನಾಡಿ, “ಈಗಿನ ರೀಲ್ಸ್ ಜಮಾನದಲ್ಲಿ ದೀರ್ಘ ಅವಧಿಯ ಕಿರುಚಿತ್ರಗಳ ಮೂಲಕ ಪ್ರೇಕ್ಷಕರನ್ನು ಸೆಳೆಯುವುದು ಒಂದು ಸವಾಲಿನ ಕೆಲಸ. ಆ ಅಂಶವನ್ನು ಮನದಲ್ಲಿ ಇಟ್ಟುಕೊಂಡು, ನಾವು ಸುಮಾರು ಅರ್ಧ ಗಂಟೆಯ ಅವಧಿಯ ಸಿನಿಮಾವನ್ನು ತಯಾರಿಸಿದ್ದೇವೆ. ಈ ಕಿರುಚಿತ್ರದ ಮೂಲಕ ಸಾಮಾನ್ಯ ಜನರ ಹಕ್ಕನ್ನು ಪ್ರಶ್ನಿಸಲು ಮುಂದಾದ ಒಬ್ಬ ಪತ್ರಕರ್ತೆಯ ಧೈರ್ಯ, ಸತ್ಯಕ್ಕಾಗಿ ಹೋರಾಟ ಮತ್ತು ಆ ಹೋರಾಟದ ವಿರುದ್ಧ ಬಲಿಷ್ಠ ಲಾಬಿ ಹೇಗೆ ಪ್ರತಿಕ್ರಿಯಿಸಿತು ಎಂಬುದನ್ನು ತಿಳಿಸಲಾಗಿದೆ. ಮಾಧ್ಯಮದ ಜವಾಬ್ದಾರಿ, ಸಮಾಜದಲ್ಲಿ ಬೇರೂರಿರುವ ಅಸಮರ್ಪಕ ಪದ್ಧತಿಗಳ ವಿರುದ್ಧ ಧೈರ್ಯದಿಂದ ನಿಲ್ಲುವ ಅಗತ್ಯ ಮತ್ತು ಸತ್ಯಕ್ಕಾಗಿ ಹೋರಾಡುವವರ ಎದುರಿಸುವ ಸಂಕಷ್ಟಗಳನ್ನು ಚಿತ್ರಿಸಲಾಗಿದೆ ಎಂದರು. ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ. ಕುರಿಯನ್ ಮಾತನಾಡಿ, ಆಸಕ್ತಿಯ ಹಾದಿಯಲ್ಲಿ ನಿರಂತರ ಪ್ರಯತ್ನ ಮಾಡಿದರೆ ಖಂಡಿತವಾಗಿಯೂ ಯಶಸ್ಸು ನಮ್ಮದಾಗುತ್ತದೆ. ಜೀವನದಲ್ಲಿ ಪ್ರತಿಯೊಬ್ಬರೂ ತಮ್ಮ ಆಸಕ್ತಿಯನ್ನು ಗುರುತಿಸಿ, ಅದನ್ನು ಪೋಷಿಸುತ್ತಾ ಸಾಗಬೇಕು ಎಂದರು. ಸಂಗೀತ ನಿರ್ದೇಶಕ ಹಾಗೂ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಗೌತಮ್ ಮಾತನಾಡಿ, ಸಾಧಾರಣ ಕಥಾಹಂದರದ ಮೂಲಕ ಸಮಾಜಕ್ಕೆ ಮಹತ್ವದ ಸಂದೇಶವನ್ನು ತಲುಪಿಸುವ ಪ್ರಯತ್ನ ಮಾಡಲಾಗಿದೆ ಎಂದರು. ಕಾರ‍್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಸುದೀಪ್ ಇದ್ದರು. ಕಿರಣ್ ಕಾರ‍್ಯಕ್ರಮ ನಿರೂಪಿಸಿ, ಶಶಾಂಕ್ ಸ್ವಾಗತಿಸಿ, ಸಮೀಕ್ಷಾ ವಂದಿಸಿದರು.

ಎಸ್.ಡಿ.ಎಂ ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್‌ಗೆ ಚಾಲನೆ

Article Image

ಎಸ್.ಡಿ.ಎಂ ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್‌ಗೆ ಚಾಲನೆ

ಉಜಿರೆ,ಸೆ.22: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗವಕಾಶ ಕಡಿಮೆಯಾಗುತ್ತಿಲ್ಲ. ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಜಿ. ಎಸ್. ತ್ಯಾಗರಾಜು ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗದ ‘ಸ್ಟ್ಯಾಟ್ ಎಕ್ಸ್‌ಪ್ಲೋರ್ ಅಸೋಸಿಯೇಷನ್’ನ ಕಾರ್ಯಚಟುವಟಿಕೆಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ‘ದಿ ರೋಲ್ ಆಫ್ ಸ್ಟ್ಯಾಟಿಸ್ಟಿಕ್ಸ್ ಇನ್ ಬಿಲ್ಡಿಂಗ್ ರಿಲಯೇಬಲ್ ಎಐ ಸಿಸ್ಟಮ್’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕೃತಕ ಬುದ್ಧಿಮತ್ತೆಗೆ ಪೂರಕವಾದ ಹೊಸ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕಂಪ್ಯೂಟರ್ ಆವಿಪ್ಕಾರವಾದಾಗ ಹಲವರು ಉದ್ಯೋಗವಕಾಶಗಳನ್ನು ಕಳೆದುಕೊಂಡರು. ಮುಂದೆ ಅದರೊಂದಿಗೆಯೇ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಹೊಸ ಬಗೆಯ ಉದ್ಯೋಗಳನ್ನು ಸೃಷ್ಟಿಸಿಕೊಂಡರು. ಅದರಂತೆಯೇ ಆರ್ಟಿಫಿಷಿಯಲ್ ಇಂಟಲಿಜೆನ್ಸ್‌ನ ಹೊಸ ಕೌಶಲ್ಯಗಳೊಂದಿಗೆ ಮುಂದುವರಿಯಬೇಕಾಗಿದೆ ಎಂದರು. ಎಐ ಈಗ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕತೆ. ಸಂಖ್ಯಾಶಾಸ್ತ್ರದ ಸಾಧ್ಯತೆಗಳನ್ನು ಎಐ ವಿಸ್ತರಿಸಬಲ್ಲದು. ಸಂಖ್ಯಾಶಾಸ್ತ್ರ, ವಲಯದಲ್ಲಿ ನೂತನ ಆವಿಷ್ಕಾರಗಳನ್ನು ರೂಪಿಸುವುದಕ್ಕೆ ಎಐ ತಂತ್ರಜ್ಞಾನವನ್ನು ಪೂರಕವಾಗಿಸಿಕೊಳ್ಳಬೇಕು. ಎಲ್ಲಾ ವಿಷಯಗಳಲ್ಲಿಯೂ ನಿಖರತೆ ಅವಶ್ಯಕ. ಈ ನಿಖರತೆಗೆ ಸಂಖ್ಯಾಶಾಸ್ತ್ರದ ಅಗತ್ಯವಿದೆ. ಈ ನಿಖರತೆಯ ಸ್ವರೂಪವನ್ನು ಇನ್ನಷ್ಟು ಅಧಿಕೃತಗೊಳಿಸುವುದಕ್ಕೆ ಎಐ ತಂತ್ರಜ್ಞಾನ ನೆರವಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ ಸ್ನಾತಕೋತ್ತರ ಕೇದ್ರದ ಡೀನ್ ಸೌಮ್ಯ ಬಿ.ಪಿ ಮಾತನಾಡಿದರು. ಸರಕಾರವು ಹೊಸ ನೀತಿ ನಿಯಮಗಳನ್ನು ಅಭಿವೃದ್ಧಿಪಡಿಸುವಾಗ ಸಾಂಖ್ಯಿಕ ಮಾಹಿತಿಯನ್ನೇ ಅವಲಂಬಿಸಿರುತ್ತದೆ. ಉದ್ಯಮ ವಲಯ ಮತ್ತು ವ್ಯವಹಾರಗಳಲ್ಲಿಯೂ ಕೂಡ ಸಂಖ್ಯಾಶಾ‌ಸ್ತ್ರವೇ ಮುಖ್ಯ ಪಾತ್ರ ವಹಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಇದರ ಕಡೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು. ಕಾರ‍್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥೆ ಡಾ. ಸವಿತಾ ಕುಮಾರಿ ಉಪಸ್ಥಿತರಿದ್ದರು. ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಪ್ರಕೃತಿ ಟಿ.ಪಿ ವಂದಿಸಿದರು.

First Previous

Showing 1 of 7 pages

Next Last