ಉಜಿರೆ ರುಡ್‌ಸೆಟ್ ಸಂಸ್ಥೆ ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭೇಟಿ


Logo

Published Date: 23-Sep-2025

ಉಜಿರೆ: ಉಜಿರೆಯ ಸಿದ್ಧವನ ರುಡ್ ಸೆಟ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯಲ್ಲಿ ನಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡುತ್ತಾ ರುಡ್‌ಸೆಟ್ ಸಂಸ್ಥೆಗಳ ತರಬೇತಿಯಲ್ಲಿ ಪ್ರಯೋಗಿಕ ತರಬೇತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದರಿಂದ ಶಿಭಿರಾರ್ಥಿಗಳಿಗೆ ಹೆಚ್ಚು ಕೌಶಲ್ಯ ಪಡೆಯಲು ಸಾದ್ಯವಾಗುತ್ತದೆ ಎಂದು ತಿಳಿಸಿದರು. ಇದರಿಂದ ಸ್ವಂತ ಉದ್ಯೋಗ ಪ್ರಾರಂಬಿಸಲು ಅನುಕೂಲವಾಗುತ್ತದೆ, ಇಲ್ಲಿನ ತರಬೇತಿ ಪಡೆದ ನಂತರವೂ ಹೊಸ ಹೊಸ ತಂತ್ರಜ್ಞಾನಗಳನ್ನು ನವೀಕರಿಸಿಕೊಳ್ಳಿ, ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿ ಹಾಗೂ ಉದ್ಯಮಿಗಳು ಲೆಕ್ಕಪತ್ರಗಳನ್ನು ಸರಿಯಾಗಿ ಇಟ್ಟುಕೊಂಡಾಗ ಲಾಭ ನಷ್ಟಗಳ ವಿವರ ದೊರೆಯುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಶ್ರೀಯುತ ನರ್ವಾಡೆ ವಿನಾಯಕಕಾರಭಾರಿ IAS, ಹೇಳಿ ತರಬೇತಿ ಪಡೆದಯಿತ್ತಿರುವ ಎಲ್ಲರಿಗೂ ಶುಭ ಹಾರೈಸಿದರು ನಂತರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ರುಡ್ ಸೆಟ್ ಸಂಸ್ಥೆಯ ಜಿಲ್ಲಾ ಮಟ್ಟದ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿ, ಸಲಹೆಗಳನ್ನು ನೀಡಿ ಸಹಕಾರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಗ್ರಣಿ ಬ್ಯಾಂಕಿನ್ ಮುಖ್ಯ ಪ್ರಬಂಧಕರಾದ ಕವಿತಾ ಎನ್ ಶೆಟ್ಟಿ ಹಾಗೂ ನರ್ಬಾಡ್ ಸಂಸ್ಥೆಯ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಸಂಗೀತಾ ಕರ್ತಾ, ಶ್ರೀ ಧರ್ಮಸ್ಥ ಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಾ. ಎಸ್ ಸತೀಶ್ಚಂದ್ರ, ಉಜಿರೆ ಕೆನರಾ ಬ್ಯಾಂಕಿನ ಹಿರಿಯ ಪ್ರಬಂಧಕರಾದ ಜಯಂತ ಅಡಿಗ ಮತ್ತು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ವಿಜಯ ಕುಮಾರ ಬಿ.ಪಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img