ಎಸ್.ಡಿ.ಎಂ: ಚಿಗುರು ಸಂಘ ಉದ್ಘಾಟನೆ
Published Date: 23-Jul-2026
ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ 'ಚಿಗುರು ಸಂಘ’ ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು. 'ಮಂಜುವಾಣಿ' ಮಾಸ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ವಿಭಾಗದ ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ಅಲ್ಲದೆ, ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಬಲವಾದ ವೃತ್ತಿಪರ ಪೋರ್ಟ್ಫೋಲಿಯೊ ಬೆಳೆಸಿಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರೆದು, ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ಲೇಖನಗಳ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ ವಿಭಾಗದ ವೈವಿಧ್ಯಮಯ ಚಟುವಟಿಕೆಗಳನ್ನು ಬಿಂಬಿಸುವ ವಿಶೇಷ ‘ಭಿತ್ತಿ ಪತ್ರಿಕೆ'ಯನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಭಾಸ್ಕರ್ ಹೆಗಡೆ ಅವರು ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿದ್ಯಾರ್ಥಿನಿ ರಮ್ಯಾ ಅವರಿಗೆ ವೈಯಕ್ತಿಕವಾಗಿ ವಿದ್ಯಾರ್ಥಿವೇತನ ನೀಡಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಸುನಿಲ್ ಹೆಗ್ಡೆ, ಎಸ್.ಡಿ.ಎಂ ಮಲ್ಟಿಮೀಡಿಯಾ ಸ್ಟುಡಿಯೋದ ಸೀನಿಯರ್ ಪ್ರೊಡಕ್ಷನ್ ಅಸೋಸಿಯೇಟ್ ಸಂಹಿತಾ ಎಸ್. ಮೈಸೂರೆ, 'ರೇಡಿಯೋ ನಿನಾದ 90.4' ರ ಮುಖ್ಯಸ್ಥರಾದ ವಿ. ಕೆ. ಕಡಬ, ಕಾರ್ಯಕ್ರಮ ಸಂಯೋಜಕ ಸಂತೋಷ್, ಇ – ಲೆಕ್ಚರ್ ಸಂಯೋಜಕ ಕುಮಾರೇಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.