ಎಕ್ಸಲೆಂಟ್: ಜಾನಪದ ರಸಪ್ರಶ್ನೆ ಕಾರ್ಯಕ್ರಮ


Logo

Published Date: 09-Aug-2026

ಮೂಡುಬಿದಿರೆ: ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಮೂಡುಬಿದಿರೆ ತಾಲೂಕು ಘಟಕ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಾನಪದ ರಸಪ್ರಶ್ನೆ ಕಾರ್ಯಕ್ರಮ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಕರ್ನಾಟಕ ಜಾನಪದ ಪರಿಷತ್ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷೆ ಪದ್ಮಶ್ರೀ ಭಟ್ ನಿಡ್ಡೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಮಂದಾರ ರಾಜೇಶ್ ಭಟ್, ಉದ್ಯಮಿ ಸದಾಶಿವ ರಾವ್, ಸಾಹಿತಿ ಸದಾನಂದ ನಾರವಿ ಹಾಗೂ ಕರ್ನಾಟಕ ಜಾನಪದ ಪರಿಷತ್ ಮೂಡುಬಿದಿರೆ ತಾಲೂಕು ಘಟಕದ ಕಾರ್ಯದರ್ಶಿ ಮಲ್ಲಿಕಾ ಸುರೇಶ್, ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡಿ “ಜಾನಪದವು ನಮ್ಮ ಸಂಸ್ಕೃತಿಯ ಜೀವಾಳವಾಗಿದೆ. ಇಂದಿನ ವಿದ್ಯಾರ್ಥಿಗಳು ಆಧುನಿಕ ಶಿಕ್ಷಣದೊಂದಿಗೆ ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯ ಬಗ್ಗೆ ಅರಿವು ಹೊಂದುವುದು ಅತ್ಯಗತ್ಯ. ಜಾನಪದ ರಸಪ್ರಶ್ನೆಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ಚಿಂತನಶಕ್ತಿ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವುದರ ಜೊತೆಗೆ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉತ್ತಮ ವೇದಿಕೆಯಾಗಿದೆ. ಇಂತಹ ಮೌಲ್ಯಯುತ ಕಾರ್ಯಕ್ರಮಗಳಿಗೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಸದಾ ಪ್ರೋತ್ಸಾಹ ನೀಡಲಿದೆ,” ಎಂದು ಹೇಳಿದರು. ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಮಂದಾರ ರಾಜೇಶ್ ಭಟ್ ಮಾತನಾಡಿ, “ಜಾನಪದ ಸಾಹಿತ್ಯ ಮತ್ತು ಸಂಸ್ಕೃತಿ ನಮ್ಮ ಜೀವನದ ಬೇರುಗಳಾಗಿವೆ. ಜಾನಪದವು ಕೇವಲ ಮನರಂಜನೆಗೆ ಸೀಮಿತವಾಗದೆ ಜೀವನ ಮೌಲ್ಯಗಳು, ಸಾಮಾಜಿಕ ಅರಿವು ಹಾಗೂ ಸಂಸ್ಕೃತಿಯ ಶ್ರೀಮಂತಿಕೆಯನ್ನು ಸಾರುವ ಮಾಧ್ಯಮವಾಗಿದೆ. ವಿದ್ಯಾರ್ಥಿಗಳು ಜಾನಪದದ ಬಗ್ಗೆ ಆಸಕ್ತಿ ಬೆಳೆಸಿಕೊಂಡಾಗ ತಮ್ಮ ನೆಲ, ನುಡಿ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಮೂಡುತ್ತದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜ್ಞಾನವೃದ್ಧಿಯೊಂದಿಗೆ ಸಂಶೋಧನಾ ಮನೋಭಾವ ಮತ್ತು ಸೃಜನಶೀಲತೆಯನ್ನು ಬೆಳೆಸುತ್ತವೆ,” ಎಂದು ತಿಳಿಸಿದರು. ಕಾರ್ಯಕ್ರಮ ನಿರೂಪಕಿ ಚೇತನಾ ರಾಜೇಂದ್ರ ಹೆಗ್ಡೆ ಅವರು, “ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯವರು ಶಿಕ್ಷಣ ಕ್ಷೇತ್ರದ ಜೊತೆಗೆ ಪ್ರಾಣಿ-ಪಕ್ಷಿಗಳ ಸಂರಕ್ಷಣೆ ಹಾಗೂ ಪೋಷಣೆಯಂತಹ ಸಮಾಜಮುಖಿ ಚಿಂತನೆ ಶ್ಲಾಘನೀಯ. ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ಕೆ ಅವರು ನೀಡುತ್ತಿರುವ ಬೆಂಬಲಕ್ಕೆ ಕರ್ನಾಟಕ ಜಾನಪದ ಪರಿಷತ್ತಿನ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ,” ಎಂದು ಹೇಳಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗಾಗಿ ಜಾನಪದ ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು. ವಿದ್ಯಾರ್ಥಿಗಳು ಅಪಾರ ಉತ್ಸಾಹದಿಂದ ಭಾಗವಹಿಸಿ ತಮ್ಮ ಜಾನಪದ ಜ್ಞಾನವನ್ನು ಪ್ರದರ್ಶಿಸಿದರು. ಕಾರ್ಯಕ್ರಮವನ್ನು ಚೇತನಾ ರಾಜೇಂದ್ರ ಹೆಗ್ಡೆ ನಿರೂಪಿಸಿದರೆ, ಸತೀಶ್ ಅಬ್ಬನಡ್ಕ ವಂದಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img