ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ ಗಳ ಅಭಿನಂದನಾ ಕಾರ್ಯಕ್ರಮ


Logo

Published Date: 18-Jun-2024

ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ - ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಸಹಯೋಗದಲ್ಲಿ ನಡೆದ 2023-24 ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್ ಗಳ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರಾದ, ಪಿ. ಜಿ. ಆರ್. ಸಿಂಧ್ಯಾ ಮಾತನಾಡಿ, ಒಂದು ವಿಶ್ವವಿದ್ಯಾಲಯ ಮಾಡಲಾಗದ ಶೈಕ್ಷಣಿಕ ಕಾರ್ಯವನ್ನು ಮೋಹನ ಆಳ್ವರು ಮಾಡುತ್ತಿದ್ದಾರೆ ಎಂದರು. ಶೈಕ್ಷಣಿಕ ಕಾರ್ಯದ ಜೊತೆಯಲ್ಲಿ ಅಂತರಾಷ್ಟ್ರೀಯ ಜಾಂಬೂರಿ ಆಯೋಜಿಸಿದ್ದ ಕುರಿತು ನೆನೆದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳು ಬಹಳಷ್ಟಿದ್ದಾರೆ ಆದರೆ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಜೊತೆಗೆ ರ‍್ಯಾಂಕ್ ಗಳಿಸಿರುವುದು ಅಭಿನಂದನೀಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಎಸ್. ವಿರೂಪಾಕ್ಷ ಮಾತನಾಡಿ ಶಿಕ್ಷಣದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ತೊಡಿಸಿಕೊಂಡಾಗ ಸರ್ವತೋಮುಖ ಕಲಿಕೆ ಸಾಧ್ಯ ಎಂದರು. ಉತ್ತಮ ಶಿಸ್ತುಬದ್ಧ ಜೀವನ ರೂಪಿಸುವ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕರಿಸುತ್ತಿದೆ ಎಂದರು. ಆತ್ಮ ವಿಶ್ವಾಸದ ಜೊತೆಗೆ ಮಾನವೀಯ ಗುಣಗಳನ್ನು ಬೆಳೆಸುವಲ್ಲಿ ಈ ಶಿಕ್ಷಣ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ದಕ್ಷಿಣ ಕನ್ನಡ, ಕಾರವಾರ, ಉಡುಪಿ, ಶಿರಸಿ, ಕೊಡಗು ಜಿಲ್ಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್ ವಂದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷ ಶ್ರೀಪತಿ ಭಟ್, ಜಿಲ್ಲಾ ಗೈಡ್ಸ್ ಆಯುಕ್ತೆ ವಿಮಲಾ ರಂಗಯ್ಯ, ಜ್ಯೋತಿ ಜೆ. ಪೈ. ಜಿಲ್ಲಾ ಗೈಡ್ ಆಯುಕ್ತೆ ಉಡುಪಿ ಜಿಲ್ಲೆ, ಜಿಲ್ಲಾ ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್, ಚಂದ್ರಶೇಖರ್ ಜಿಲ್ಲಾ ಸ್ಕೌಟ್ ತರಬೇತಿ ಆಯುಕ್ತರು, ಶಿರಸಿ ಜಿಲ್ಲೆ, ಸಾವಿತ್ರಿ ಮನೋಹರ್, ALT, ಉಡುಪಿ ಜಿಲ್ಲೆ, ಮೂಡಬಿದಿರೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಭಾರತಿ ನಾಯಕ್ ಉಪಸ್ಥಿತರಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ. ವಿದ್ಯಾರ್ಥಿಗಳ ಅಭಿನಂದನಾ ಪತ್ರಗಳನ್ನು ಘೋಷಿಸಿದರು, ಕಾರ್ಯಕ್ರಮವನ್ನು ನವೀನ್ ಚಂದ್ರ ಅಂಬೂರಿ ನಿರೂಪಿಸಿ, ವಸಂತ್ ದೇವಾಡಿಗ ಸ್ವಾಗತಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img