ಡೆಂಗ್ಯೂ ಜ್ವರ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ


Logo

Published Date: 11-Aug-2024

ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಉದ್ಯಾನವನ ವಿಭಾಗದ ಸಿಬ್ಬಂದಿಗಳಿಗೆ “ಡೆಂಗ್ಯೂ ಜ್ವರ ತಡೆಗಟ್ಟುವಿಕೆ” ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕೀಟಶಾಸ್ತ್ರಜ್ಞರಾದ ಮಂಜುನಾಥ್ ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಈ ಕಾರ್ಯಕ್ರಮವು ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ ಮತ್ತು ಅವುಗಳ ನಿಯಂತ್ರಣ ಮಾಡುವ ಪ್ರಾಮುಖ್ಯತೆಯನ್ನು ತಿಳಿಸಿದರು. ಸೊಳ್ಳೆ ಕಡಿತದಿಂದ ರಕ್ಷಿಸಲು ವೈಯಕ್ತಿಕ ರಕ್ಷಣಾ ಕ್ರಮಗಳ ಬಳಕೆಗೆ ಒತ್ತು ನೀಡಿತು, ಲಾರ್ವಿವೋರಸ್ ಮೀನುಗಳ (ಗಪ್ಪಿ ಮೀನು) ಜೊತೆಗೆ ಸೊಳ್ಳೆಗಳ ಲಾರ್ವಾ ಮತ್ತು ಪ್ಯೂಪಲ್ ಹಂತಗಳ ನೇರ ಪ್ರದರ್ಶನವನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಸಂಯೋಜಕ ಡಾ. ಉಮೇಶ್ ಆರ್. ದೀಕ್ಷಿತ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ರಾಕೇಶ್ ಕೆ. ನಾಯಕ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂ ಸೇವಕರು ಕರಪತ್ರಗಳು ಮತ್ತು ಸ್ಕ್ಯಾಂಡಿಗಳನ್ನು ಬಳಸಿಕೊಂಡು ಸಿಬ್ಬಂದಿಗೆ ಶಿಕ್ಷಣ ನೀಡಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img