Article Image

ಶಾಲೆಗಳ ಉನ್ನತೀಕರಣಕ್ಕೆ ಅರ್ಜಿ ಆಹ್ವಾನ

Article Image

ಶಾಲೆಗಳ ಉನ್ನತೀಕರಣಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಸಾಲಿಗೆ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೊಸದಾಗಿ 6ರಿಂದ 10ನೇ ತರಗತಿವರೆಗೆ ಉನ್ನತೀಕರಣ, ಆಂಗ್ಲ ಮಾಧ್ಯಮ ಆರಂಭಿಸುವ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆಯು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಪ್ರತಿ ಶಾಲೆಗಳ ಉನ್ನತೀಕರಣಕ್ಕೆ ಇಲಾಖೆಯು ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ. ಇದರ ಅನ್ವಯ ಶಾಲೆಗಳು ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ. ಹಾಲಿ ಚಾಲ್ತಿಯಲ್ಲಿರುವ 1ರಿಂದ 5ನೇ ತರಗತಿ ಆಂಗ್ಲಮಾಧ್ಯಮ ವಿಭಾಗವನ್ನು 6ನೇ ತರಗತಿ ಸ್ವಾಭಾವಿಕ ಬೆಳವಣಿಗೆ ಅಡಿಯಲ್ಲಿ ಮುಂದುವರಿಸಲು ಉಪ ನಿರ್ದೇಶಕರು ಪ್ರಾಧಿಕಾರವಾಗಿರುತ್ತಾರೆ. ಇನ್ನು 1 ರಿಂದ 7 ಹಾಗೂ 8ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗಗಳಿರುವ ಶಾಲೆಗಳು 8, 9ನೇ ತರಗತಿಯಿಂದ ಆಂಗ್ಲ ಮಾಧ್ಯಮ ವಿಭಾಗ ಮುಂದುವರಿಸಲು ನಿರ್ದೇಶಕರು ಪ್ರಾಧಿಕಾರಗಳಾಗಿರುತ್ತಾರೆ. ಪ್ರತಿ ಪ್ರಸ್ತಾವನೆಗೂ ದಿನಾಂಕ ನಿಗದಿ ಮಾಡಿದೆ. ಹೆಚ್ಚಿನ ಮಾಹಿತಿಯನ್ನು : https://schooleducation. karnataka.gov.in/ ಈ ಲಿಂಕ್ ಮೂಲಕ ತಿಳಿದುಕೊಳ್ಳಬಹುದು.

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

Article Image

ಕೋಕೋ ಕೃಷಿಕರಿಗೆ ಸಂತಸ... ಮೊದಲ ಬಾರಿಗೆ ಕೆ.ಜಿ.ಗೆ 100 ರೂ.

ಕೋಕೋ ಬೆಳೆ ಧಾರಣೆ ಏರುಗತಿಯಲ್ಲಿರುವುದು ಬೆಳೆಗಾರರ ಮುಖದಲ್ಲಿ ಮಂದಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಹಸಿ ಕೋಕೋ ಕೆ.ಜಿ.ಗೆ 100 ರೂ. ಧಾರಣೆಯನ್ನು ತಲುಪಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ಕೃಷಿಕರ ಸಂಖ್ಯೆ ಹೆಚ್ಚಾಗಿದ್ದು, ಅಡಿಕೆ, ತೆಂಗು ಜತೆ ಕೋಕೋ ಬೆಳೆಯನ್ನು ಬೆಳೆಯುತ್ತಿದ್ದಾರೆ. ಆದರೆ ಇದಕ್ಕೂ ರೋಗ ಬಾಧೆ, ಬೆಲೆ ಇಳಿಕೆ ಸಮಸ್ಯೆ ಇದ್ದು ಕೃಷಿಕರಿಗೆ ನಿರೀಕ್ಷಿತ ಆದಾಯ ಕೈಗೆ ಸಿಗುತ್ತಿರಲಿಲ್ಲ. ಕೆ.ಜಿ.ಗೆ 100 ರೂ.: ಕೋಕೋಗೆ ಉತ್ತಮ ಬೇಡಿಕೆ ಇದ್ದರೂ ಬೆಳೆಗಾರರಿಗೆ ಉತ್ತಮ ಧಾರಣೆ ಸಿಗದ ಕಾರಣ ಕೋಕೋ ಬೆಳೆಯ ಬಗ್ಗೆ ನಿರಾಸಕ್ತಿ ವಹಿಸಿದ್ದರು. ಆದರೆ ಈಗ ಹಸಿ ಕೋಕೋ ಕೆ.ಜಿ.ಗೆ 80ರಿಂದ 100 ರೂ.ಗಳಂತೆ ಕ್ಯಾಂಪ್ಕೋ ಸಂಸ್ಥೆ ಖರೀದಿಸುತ್ತಿದೆ. ಮುಂದಿನ ದಿನಗಳಲ್ಲಿ ಹಸಿ ಕೋಕೋ ಕೆ.ಜಿ.ಗೆ 100ರಿಂದ 120 ರೂ. ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ. ಒಣ ಕೋಕೋ ಕೆ.ಜಿ.ಗೆ 370ರಿಂದ 400ರಂತೆ ಖರೀದಿಸಲಾಗುತ್ತಿದೆ. ಆದರೆ ಈ ಬೇಸಗೆಯಲ್ಲಿ ಮಾತ್ರವೇ ಸಿಗಲಿದೆ ಎನ್ನಲಾಗುತ್ತಿದೆ. ಮಳೆಗಾಲದಲ್ಲಿ ಹೆಚ್ಚಾಗಿ ನೀರಿನ ಅಂಶವನ್ನು ಹೊಂದಿರುವುದರಿಂದ ಕೋಕೋ ಹೆಚ್ಚಿನ ಧಾರಣೆ ನೀಡಲು ಸಾಧ್ಯವಾಗುತ್ತಿಲ್ಲ. ಬೇಸಗೆಯಲ್ಲಿ ಉತ್ಪನ್ನಗಳಿಗೆ ಗುಣಮಟ್ಟದ ಕೋಕೋ ಸಿಗುವುದರಿಂದ ಬೆಲೆ ಏರಿಕೆ ಆಗುತ್ತದೆ. ಬೆಲೆ ಏರಿಕೆಗೆ ಕಾರಣ-ವಿವಿಧ ಉತ್ಪನ್ನಗಳಿಗಾಗಿ ಕಂಪೆನಿಗಳು ವಿದೇಶದ ಆಶ್ರಯಿಸಿಕೊಂಡಿದ್ದವು. ಕೋಕೋಗಳನ್ನೇ ಐವರಿಕೋಸ್ಟ್ ಎಂಬಲ್ಲಿ ಕೋಕೋ ಬೆಳೆ ಉತ್ಪಾದನೆ ಕುಸಿತಗೊಂಡು ಅಲ್ಲಿಂದ ಭಾರತಕ್ಕೆ ಕೋಕೋ ಪೂರೈಕೆ ಆಗುತ್ತಿಲ್ಲ ಎನ್ನಲಾಗಿದೆ. ಇದರಿಂದ ದೇಶಿ ಕೋಕೋಗೆ ಬೇಡಿಕೆ ಹೆಚ್ಚಾಗಿದೆ. ಇತರೆ ಕೋಕೋ ಖರೀದಿ ಮಾಡುವ ವ್ಯಾಪಾರಸ್ಥರು ಹಾಗೂ ಕ್ಯಾಂಪ್ಕೋ ಸಂಸ್ಥೆ ಇದರಿಂದ ಬೆಲೆ ಏರಿಕೆ ಮಾಡಿದೆ ಎಂದು ಪ್ರಕಟಣೆಯಿಂದ ತಿಳಿದುಬಂದಿದೆ.

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

Article Image

ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಎಲೆಚುಕ್ಕೆ ರೋಗ

ಎಲೆಚುಕ್ಕೆ ರೋಗವನ್ನು ಅಡಿಕೆ ಸಸಿ ಮತ್ತು ಸಣ್ಣ ಮರಗಳಲ್ಲಿ ಸಾಮಾನ್ಯವಾಗಿ ಬೇಸಿಗೆ ಮತ್ತು ಮಳೆಗಾಲದಲ್ಲಿ ಕಾಣಬಹುದು. ಕೆಳಭಾಗದ ಒಂದೆರಡು ಎಲೆಗಳಲ್ಲಿ ಚುಕ್ಕೆಗಳಿರುತ್ತವೆ. ಇತ್ತೀಚೆಗೆ ಈ ರೋಗವು ಹಲವೆಡೆ ಗಂಭೀರ ಸ್ವರೂಪವನ್ನು ಪಡೆದಿದೆ. ತಕ್ಷಣ ನಿರ್ವಹಣಾ ಕ್ರಮಗಳನ್ನು ಅನುಸರಿಸಿಕೊಳ್ಳಬೇಕಾದದ್ದು ಅನಿವಾರ್ಯ. ಮೊತ್ತಮೊದಲು ಎಲೆಚುಕ್ಕೆ ರೋಗದ ತೀವ್ರತೆಯನ್ನು ಗಮನಿಸಿದ್ದು ಭಾರತದ ಈಶಾನ್ಯ ರಾಜ್ಯ ತ್ರಿಪುರದ ಜಂಪುಯಿ ಹಿಲ್ಸ್ ಪ್ರದೇಶದಲ್ಲಿ, ಕರ್ನಾಟಕದ ಮೂಡಿಗೆರೆ ತಾಲೂಕಿನ ಕಳಸದ ಮರಸಣಿಗೆ ಪ್ರದೇಶದಲ್ಲಿ ಕೆಲವೇ ತೋಟಗಳಿಗೆ ಸೀಮಿತವಾಗಿದ್ದ ರೋಗಲಕ್ಷಣ, ಮರು ವರ್ಷದಲ್ಲಿ ಹಲವು ತೋಟಗಳಿಗೆ ಹಬ್ಬಿತ್ತು. ಗಾಳಿ ಮುಖೇನ ಈ ಹರಡುವ ಕಾರಣ, ಪ್ರಾಥಮಿಕ ಹಂತದಲ್ಲೇ ನಿರ್ವಹಣೆ ಮಾಡದಿದ್ದರೆ ಈ ರೋಗವನ್ನು ನಿಯಂತ್ರಿಸುವುದು ಕಷ್ಟ, ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಎಲೆಚುಕ್ಕೆ ರೋಗದ ಲಕ್ಷಣಗಳು ಇತ್ತೀಚೆಗೆ ಕಾಣಿಸಿಕೊಂಡಿವೆ. ಕೇರಳ ಮತ್ತು ತಮಿಳುನಾಡಿಗೂ ರೋಗ ಪಸರಿದೆ. ರೋಗಾಣು: ಕೊಲೆಟೋಟೈಕಮ್ ಸ್ವಿಸಿಸ್ ಮತ್ತು ಫಿಲೋಸ್ಟಿಕ್ಷಾ ಅರೆಕೆ ಎನ್ನುವ ಶಿಲೀಂಧ್ರಗಳು ಸಾಮಾನ್ಯವಾಗಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗವನ್ನು ಉಂಟುಮಾಡುತ್ತವೆ. ಆದರೆ, ಇತ್ತೀಚೆಗೆ ಗಂಭೀರ ಸ್ವರೂಪದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕೆ ರೋಗಕ್ಕೆ ಕೊಲೆಟೋಟೈಕಮ್ ಕಹಾವೆ ಸಬ್ಸ್ಟಿಸಿಸ್ ಸಿಗ್ಗಾರೊ ಎನ್ನುವ ಶಿಲೀಂಧ್ರವು ಪ್ರಮುಖ ಕಾರಣವೆಂದು ತಿಳಿದುಬಂದಿದೆ. ಎಲೆಚುಕ್ಕೆ ರೋಗದಿಂದ ಪತ್ರಹರಿತ್ತು ಕಡಿಮೆಯಾಗಿ ಉತ್ಪಾದನೆ ಕುಂಠಿತವಾಗುತ್ತದೆ. ಇದು ಮರದ ಬೆಳವಣಿಗೆ ಮತ್ತು ಇಳುವರಿಯ ಮೇಲೆ ದೀರ್ಘ ಕಾಲದ ದುಷ್ಪರಿಣಾಮ ಬೀರಬಹುದು. ರೋಗ ಲಕ್ಷಣಗಳು: ಅಡಿಕೆ ಮರದ ಎಲೆಯಲ್ಲಿ “ಹಳದಿ ಬಣ್ಣದಿಂದ ಆವೃತವಾಗಿರುವ ಕಂದು ಬಣ್ಣದ ಸಣ್ಣ ಚುಕ್ಕೆಗಳಿದ್ದರೆ, ಅದು ಎಲೆಚುಕ್ಕೆ ರೋಗವೆಂದರ್ಥ. ಕೆಲವೊಮ್ಮೆ, ಕಪ್ಪು ಬಣ್ಣದ ಅಂಚು ಇರುವ ಬೂದು ಬಣ್ಣದ ಸಣ್ಣ ಚುಕ್ಕೆಗಳನ್ನೂ ಕಾಣಬಹುದು. ಈ ರೀತಿಯ ಸಣ್ಣ ಚುಕ್ಕೆಗಳು ದೊಡ್ಡದಾಗಿ, ಈ ಒಂದಕ್ಕೊಂದು ಸೇರಿ ಇಡೀ ಸೋಗೆಗೆ ಹಬ್ಬಿ ಅದನ್ನು ಒಣಗಿಸುತ್ತವೆ. ಮೊದಲು ಕೆಳಭಾಗದ ಒಂದೆರಡು ಎಲೆಗಳಲ್ಲಿ ರೋಗಲಕ್ಷಣ ಕಾಣಿಸಿಕೊಂಡರೆ, ರೋಗ ತೀವ್ರತೆ ಹೆಚ್ಚಾದಾಗ ನಾಲ್ಕೈದು ಎಲೆಗಳಿಗದು ಹಬ್ಬುತ್ತದೆ. ಅಡಿಕೆ ಕಾಯಿ ಮತ್ತು ಹಾಳೆಯ ಮೇಲೂ ಚುಕ್ಕೆಗಳನ್ನು ಕಾಣಬಹುದು. ರೋಗಬಾಧಿತ ಕಾಯಿಗಳು ಬಲಿಯುವ ಮೊದಲೇ ಹಳದಿಯಾಗಿ ಬೀಳುತ್ತವೆ. ಕೆಲವೊಮ್ಮೆ ಕಾಯಿಯ ಮೇಲೆ ಚುಕ್ಕೆ ಮೂಡಿದ ಜಾಗವು ಸೀಳಿ ಅವು ಉದುರುವುದಿದೆ. ನಿರ್ವಹಣೆ ಹೇಗೆ: ಅಧಿಕ ರೋಗಬಾಧಿತ ಎಲೆಗಳನ್ನು ತುಂಡರಿಸಿ ತೆಗೆದು ನಾಶ ಮಾಡುವುದು ಸೋಂಕು ಕಡಿಮೆಗೊಳಿಸಲು ಪ್ರಯೋಜನಕಾರಿ. ಈ ಕೆಲಸ ಪ್ರಾಯೋಗಿಕವಾಗಿ ಕಷ್ಟ, ಆದರೆ, ತೀವ್ರ ಬಾಧೆಯಿರುವಲ್ಲಿ ಅನಿವಾರ್ಯ. ರೋಗಬಾಧಿತ ತೋಟಗಳಲ್ಲಿ ಅಡಿಕೆ ಗೊನೆಗಳಿಗೆ ಬೋರ್ಡೋ ಮಿಶ್ರಣ ಸಿಂಪಡಣೆ ಮಾಡುವಾಗ, ಎಲೆಗಳಿಗೂ ಮಾಡುವುದೊಳಿತು. ಹೆಚ್ಚು ರೋಗಬಾಧೆಯಿರುವ ತೋಟಗಳಲ್ಲಿ ಆಗಸ್ಟ್ - ಸೆಪ್ಟೆಂಬರ್ ಸಮಯದಲ್ಲಿ ಮಳೆ ಇಲ್ಲದಾಗ (Propiconazole 25EC) (Hexaconazole 5EC/5SC) ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಎಲೆಗಳಿಗೆ ಸಿಂಪಡಿಸಬೇಕು. ಮೂರರಿಂದ ನಾಲ್ಕು ವಾರಗಳ ನಂತರ, ಪ್ರೊಪಿನಬ್ 70WP ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಎರಡು ಗ್ರಾಂ ಪ್ರಮಾಣದಲ್ಲಿ ಸಿಂಪಡಿಸಬೇಕು. ಶಿಲೀಂದ್ರ ನಾಶಕ ದ್ರಾವಣ ತಯಾರಿಸುವಾಗ ಪ್ರತೀ ಲೀಟರ್ ದ್ರಾವಣಕ್ಕೆ ಒಂದು ಮಿಲಿಲೀಟರ್ ಪ್ರಮಾಣದಲ್ಲಿ ಅಂಟನ್ನು ಸೇರಿಸಬೇಕು. ತೀವ್ರ ರೋಗಬಾಧೆ ಇರುವಲ್ಲಿ, ಜನವರಿ ತಿಂಗಳ ನಂತರ ಸಿಂಗಾರ ಒಣಗುವ ರೋಗಕ್ಕೆ ಪ್ರೋಪಿಕೊನರೋಲ್ ಶಿಲೀಂಧ್ರನಾಶಕ ಸಿಂಪಡಿಸುವಾಗ ಎಲೆಚುಕ್ಕೆ ರೋಗವಿರುವ ಮರದ ಎಲೆಗಳಿಗೂ ಸಿಂಪಡಿಸಬಹುದು. ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ನೀಡುವುದು ಮತ್ತು ಹುಳಿ ಮಣ್ಣಿಗೆ ಸುಣ್ಣ ಹಾಕುವುದು ಒಳಿತು. ಸಾಮಾನ್ಯವಾಗಿ, ಅಡಿಕೆ ಮರಕ್ಕೆ 12 ಕಿಲೋ ಗ್ರಾಂ ಹಟ್ಟಿಗೊಬ್ಬರ ಮತ್ತು ಹಸಿರೆಲೆ, ಯೂರಿಯ(220 ಗ್ರಾಂ), ರಾಕ್ ಫಾಸ್ಪೆಟ್ (200 ಗ್ರಾಂ) ಮತ್ತು ಪೊಟಾಷ್ (240 - 350 ಗ್ರಾಂ) ನೀಡಬೇಕು. ರಸಗೊಬ್ಬರಗಳನ್ನು ಕನಿಷ್ಠ ಎರಡು ಕಂತುಗಳಲ್ಲಿ ನೀಡಬೇಕು. ಜೊತೆಗೆ, ಲಘುಪೋಷಕಾಂಶಗಳಾದ ಸತುವಿನ ಸಲ್ವೇಟ್ (5 ಗ್ರಾಂ) ಮತ್ತು ಬೊರಾಕ್ಸ್ (5 ಗ್ರಾಂ) ಕೂಡ ನೀಡಬಹುದು. ಗಾಳಿಯಲ್ಲಿ ರೋಗಾಣು ಬಹಳ ಬೇಗನೆ ಹರಡುತ್ತದೆ. ಹಾಗಾಗಿ, ರೋಗ ಪೀಡಿತ ಅಡಿಕೆ ಸಸಿಗಳನ್ನು ರೋಗವಿಲ್ಲದ ಪ್ರದೇಶಕ್ಕೆ ಸಾಗಿಸದಿರುವುದು ಮತ್ತು ಸಮುದಾಯ ಮಟ್ಟದ ರೋಗ ನಿಯಂತ್ರಣ ಕ್ರಮಗಳು ಬಲು ಮುಖ್ಯವಾಗುತ್ತವೆ.

ಮಂಗಳೂರು: ಬೃಹತ್ ಉದ್ಯೋಗ ಮೇಳ

Article Image

ಮಂಗಳೂರು: ಬೃಹತ್ ಉದ್ಯೋಗ ಮೇಳ

ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26, 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. https://skillconnect.kaushalkar.com/ ಗೆ ಭೇಟಿ ನೀಡಿ, ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿ ನೋಂದಣಿ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬಹುದು

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಣೆ

Article Image

ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವ ಅವಧಿ ವಿಸ್ತರಣೆ

ವಿಧಾನ್ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ, ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಎಚ್‌ಎಸ್‌ಆರ್‌ಪಿ ನೇಮ್ ಪ್ಲೇಟ್ ಅಳವಡಿಸಿಲ್ಲ. ಆನ್‌ಲೈನ್‌ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ಸೈಟ್ ಹಾವಳಿ ಹೆಚ್ಚಾಗಿದೆ. ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಹೇಳಿದರು. ಫೇಕ್ ವೆಬ್ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ನಂಬರ್ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಬಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತದೆ. https://transport.karnataka.gov.in ಅಥವಾ http://www.siam.in ಭೇಟಿ ನೀಡಿ ಅಥವಾ Book HSRP ಮೂಲಕ ಈ ನಂಬರ್ ಪ್ಲೇಟ್ ಪಡೆದುಕೊಳ್ಳಲು ಸಾಧ್ಯವಿದೆ.

ಫೆ. 13ರಿಂದ ಫೆ. 22: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಫೆ. 13ರಿಂದ ಫೆ. 22: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 13ರಿಂದ ಫೆ. 22ರ ವರೆಗೆ ನಡೆಯಲಿದ್ದು ಫೆ. 20ರಂದು ಶ್ರೀ ಮನ್ಮಹಾರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್‌ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರಮಲೆಬೆಟ್ಟ: ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಅರಮಲೆಬೆಟ್ಟ: ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಕುವೆಟ್ಟು ಗ್ರಾಮದ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ. 13ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೋಕ್ತೇಸರರಾದ ಸುಖೇಶ್ ಕುಮಾರ್ ಕಡಂಬುರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಫೆ. 25: ಪೊಲೀಸ್ ಕಾನ್ ಸ್ಟೇಬಲ್ ಪರೀಕ್ಷೆ

Article Image

ಫೆ. 25: ಪೊಲೀಸ್ ಕಾನ್ ಸ್ಟೇಬಲ್ ಪರೀಕ್ಷೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) (ಪುರುಷ, ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ), ಸೇವಾನಿರತ ಹಾಗೂ ಬ್ಯಾಕ್ ಲಾಗ್-1137 ಹುದ್ದೆಗಳಿಗೆ ಫೆ. 25ರಂದು ಬೆಳಗ್ಗೆ 11ರಿಂದ 12.30ರ ವರೆಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯಥಿ೯ಗಳಿಗೆ ಕರೆಪತ್ರದ ಬಗ್ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು. ಕರೆಪತ್ರದ ಲಿಂಕ್ ಕಳುಹಿಸಲಾಗುವುದು. ಇನ್ನೂ ಅಭ್ಯಥಿ೯ಗಳಿಗೆ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ. ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳಿಗೆ ಅರ್ಧ ತೋಳಿನ ಶರ್ಟ್ ಕಡ್ಡಾಯವಾಗಿ ಧರಿಸುವುದು, ಸಾಧ್ಯವಾದಷ್ಟು ಕಾಲರ್ ರಹಿತ ಶಟ್೯ಗಳನ್ನು ಧರಿಸುವುದು, ಝಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳಿರುವ ಶರ್ಟ್ ಧರಿಸುವಂತಿಲ್ಲ. ಜೀನ್ಸ್ ಹಾಗೂ ಹೆಚ್ಚಿನ ಜೇಬುಗಳಿರುವ ಪ್ಯಾಂಟ್ ಧರಿಸತಕ್ಕದ್ದಲ್ಲ, ತೆಳುವಾದ ಅಡಿಭಾಗವಿರುವ ಪಾದರಕ್ಷೆ (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಲೋಹದ ಆಭರಣ ಅಥವಾ ಉಂಗುರ, ಕಡಗಗಳನ್ನು ಧರಿಸುವುದು ನಿಷೇಧ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳಿಗೆ: ವಿಸ್ತಾರವಾದ ಕಸೂತಿ, ಹೂ, ಬೂಚ್ ಅಥವಾ ಬಟನ್‌ಗಳು ಹೊಂದಿರುವ ಉಡುಗೆ, ಪರ್ಣ ತೋಳಿನ ಬಟ್ಟೆ/ ಜೀನ್ಸ್ ಪ್ಯಾಂಟ್ ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂ/ಚಪ್ಪಲಿ ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂ/ ಚಪ್ಪಲಿ ಧರಿಸಬಾರದು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಫೆ. 8 : ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಮಾವಿನಕಟ್ಟೆ ಶಾಖೆಯ ಉದ್ಘಾಟನೆ

Article Image

ಫೆ. 8 : ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಮಾವಿನಕಟ್ಟೆ ಶಾಖೆಯ ಉದ್ಘಾಟನೆ

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ 3ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಎಲಿಯನಡುಗೋಡು ಗ್ರಾಮದ ಮಾವಿನಕಟ್ಟೆಯ ಚಾಮುಂಡೇಶ್ವರಿ ಕಾಂಪ್ಲೆಕ್ಸ್‌ನಲ್ಲಿ ಫೆ. 8ರಂದು ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಈ ಸಂದರ್ಭದಲ್ಲಿ ಚಾಲನೆ ನೀಡಿ ಮಾತನಾಡುತ್ತಾ, ಸಹಕಾರಿ ಸಂಘಗಳು ಜನರಿಂದ, ಜನರಿಗಾಗಿ ಪ್ರಾಮಾಣಿಕತೆ, ವಿಶ್ವಾಸದಿಂದ ವ್ಯವಹಾರ ನಡೆಸುವ ಅತೀ ದೊಡ್ಡ ಹಣಕಾಸಿನ ಸಂಸ್ಥೆಯಾಗಿದೆ. ದೇಹದ ಅಂಗಗಳು ಪರಸ್ಪರ ಪೂರಕವಾಗಿ ಸಹಕಾರ ನೀಡುತ್ತಾ ಕಾರ್ಯ ನಿರ್ವಹಿಸಿದಂತೆ ಗ್ರಾಹಕರು ಮತ್ತು ಸಹಕಾರಿ ಸಂಘಗಳು ಪರಸ್ಪರ ಸಹಕಾರ ನೀಡಿದಾಗ ಜನ, ಸಂಘ ಹಾಗೂ ಊರಿನ ಅಭಿವೃದ್ಧಿಯಾಗುತ್ತದೆ ಎಂದರು. ಬಳಿಕ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ ಭಟ್ ಭದ್ರತಾ ಕೊಠಡಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಗಣಕಯಂತ್ರ ವ್ಯವಸ್ಥೆ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿ'ಸೋಜಾ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಮಾಜಿ ಅಧ್ಯಕ್ಷ ಗೋಪಿನಾಥ್ ರೈ, ಕುಕ್ಕಿಪಾಡಿ ಗ್ರಾಪಂ, ಉಪಾಧ್ಯಕ್ಷೆ ಬೇಬಿ, ಸದಸ್ಯರಾದ ಯೋಗೀಶ್‌ ಆಚಾರ್ಯ, ಸುಜಾತ, ಲಿಂಗಪ್ಪ ಪೂಜಾರಿ, ಪ್ರತಿಭಾ ಶೆಟ್ಟಿ, ಪುಷ್ಪಾ, ಶೋಭ, ಚಂದ್ರ, ದಿನೇಶ್‌, ಗೀತಾ, ಪೂರ್ಣಿಮಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ, ನಿರ್ದೇಶಕರಾದ ಸಂದೇಶ್‌ ಶೆಟ್ಟಿ, ರಾಜೇಶ್‌ ಶೆಟ್ಟಿ, ಹರೀಶ್‌ ಆಚಾರ್ಯ, ದಿನೇಶ್‌ ಪೂಜಾರಿ, ದೇವರಾಜ್‌ ಸಾಲ್ಯಾನ್‌, ಜಾರಪ್ಪ ನಾಯ್ಕ, ಉಮೇಶ್‌ ಗೌಡ, ವೀರಪ್ಪ ಪರವ, ಅರುಣಾ ಎಸ್.‌ ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್‌, ಶಾಖಾ ಪ್ರಬಂಧಕ ಜೇಸನ್‌ ಫೆರ್ನಾಂಡಿಸ್‌ ಮುಂತಾದವರು ಉಪಸ್ಥಿತರಿದ್ದರು.

ಫೆ. 10-11 : ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Article Image

ಫೆ. 10-11 : ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿಪೂಜೆಯು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಫೆ. 10 ಮತ್ತು 11ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳು, ದೈವಗಳ ನೇಮೋತ್ಸವದೊಂದಿಗೆ ಜರುಗಲಿರುವುದು ಎಂದು ಆಡಳಿತ ಮೊಕ್ತೇಸರರಾದ ಅಮರನಾಥ ಹೆಗ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ. 1ರಿಂದ : ಮೂಡುಬಿದಿರೆ ಉತ್ಸವ ಮತ್ತು ಮ್ಯೂಸಿಕಲ್ ಡ್ಯಾನ್ಸಿಂಗ್ ವಾಟರ್ ಕೌಂಟರ್

Article Image

ಫೆ. 1ರಿಂದ : ಮೂಡುಬಿದಿರೆ ಉತ್ಸವ ಮತ್ತು ಮ್ಯೂಸಿಕಲ್ ಡ್ಯಾನ್ಸಿಂಗ್ ವಾಟರ್ ಕೌಂಟರ್

ಮೂಡುಬಿದಿರೆಯ ಶಾಲಿಮಾರ್ ಹಾಲ್ ಬಳಿ ನ್ಯಾಷನಲ್ ಅಮ್ಯೂಸ್‌ಮೆಂಟ್ ಪಾರ್ಕ್ ಇವರಿಂದ ಮೂಡುಬಿದಿರೆ ಉತ್ಸವ ಮತ್ತು ಮ್ಯೂಸಿಕಲ್ ಡ್ಯಾನ್ಸಿಂಗ್ ವಾಟರ್ ಕೌಂಟರ್ ಇಂದಿನಿಂದ (ಫೆ. 1) ಪ್ರಾರಂಭಗೊಳ್ಳಲಿದೆ. ಮೂಡುಬಿದಿರೆಯಲ್ಲಿ ಪ್ರಪ್ರಥಮ ಬಾರಿಗೆ ಈ ಉತ್ಸವ ನಡೆಯುತ್ತಿದ್ದು, ಶಾಪಿಂಗ್, ಗೃಹೋಪಯೋಗಿ ವಸ್ತುಗಳು, ಸಿದ್ಧ ಉಡುಪುಗಳು, ಮಹಿಳೆಯರ ಇಮಿಟೇಷನ್ ಜ್ಯುವೆಲ್ಲರಿಗಳು, ಮಕ್ಕಳ ಆಟದ ಸಾಮಾಗ್ರಿಗಳು, ಶುಚಿ ರುಚಿಯಾದ ತಿಂಡಿ ತಿನಿಸುಗಳು, ಪುಟಾಣಿಗಳಿಗಾಗಿ ಕಿಡ್ಸ್ ರೈಡ್ಸ್, ಬೃಹತ್ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಇನ್ನೂ ಅನೇಕ ಮನರಂಜನೆಗಳು ಅಭ್ಯವಿರುತ್ತದೆಯೆಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

Article Image

ಉಜಿರೆಯಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರ

ಉಜಿರೆಯ ಪೆರ್ಲ ರಸ್ತೆಯಲ್ಲಿರುವ ಪ್ರಾಣನೆಸ್ಟ್, ಪ್ರಾಣಿಕ್ ಹೀಲಿಂಗ್ ಮತ್ತು ಅರ್ಹಾಟಿಕ್ ಯೋಗ ಕೇಂದ್ರದಲ್ಲಿ ಎರಡು ದಿನಗಳ ಪ್ರಾಣಿಕ್ ಹೀಲಿಂಗ್ ತರಬೇತಿ ‌ಶಿಬಿರವನ್ನು ದಿನಾಂಕ ಫೆಬ್ರವರಿ 3 ಮತ್ತು 4 (ಶನಿವಾರ ಮತ್ತು ಭಾನುವಾರ)ರಂದು ಹಮ್ಮಿಕೊಳ್ಳಲಾಗಿದೆ. ಪ್ರಾಣಿಕ್ ಹೀಲಿಂಗ್ ಒಂದು ಪುರಾತನವಾದ ಕಲೆ ಮತ್ತು ವಿಜ್ಞಾನವಾಗಿದ್ದು, ಇದರಲ್ಲಿ ಸ್ಪಶಿ೯ಸದೆ, ಔಷಧಗಳನ್ನು ಕೊಡದೇ, ಕೇವಲ ಪ್ರಾಣ ಶಕ್ತಿಯಿಂದ ಖಾಯಿಲೆಗಳನ್ನು  ಗುಣಪಡಿಸುವ ಪೂರಕ‌ ಚಿಕಿತ್ಸಾ ವಿಧಾನವಾಗಿದೆ. 16 ವರ್ಷ ಮೇಲ್ಪಟ್ಟ ಎಲ್ಲಾ ಆಸಕ್ತರು ಇದನ್ನು ಕಲಿಯಬಹುದಾಗಿದೆ. ಶುಲ್ಕ, ಹೆಸರು ನೋಂದಾಯಿಸಲು ಮತ್ತು ‌ಇತರ ಮಾಹಿತಿಗೆ 8105023414 ಇವರನ್ನು ಸಂಪರ್ಕಿಸಬಹುದು.

ಸತ್ತೂರು-ಧಾರವಾಡ ಜ.30: ವಿಶ್ವ ಕುಷ್ಠರೋಗ ದಿನ

Article Image

ಸತ್ತೂರು-ಧಾರವಾಡ ಜ.30: ವಿಶ್ವ ಕುಷ್ಠರೋಗ ದಿನ

ಸತ್ತೂರು/ಧಾರವಾಡ: ಇಲ್ಲಿಯ ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಚರ್ಮರೋಗ ವಿಭಾಗದಲ್ಲಿ ವಿಶ್ವ ಕುಷ್ಠರೋಗ ದಿನವನ್ನು ಜನವರಿ 30ರಂದು ಆಚರಿಸಲಾಯಿತು. “ಕುಷ್ಠರೋಗವನ್ನು ಸೋಲಿಸಿ” ಎಂಬ ಧ್ಯೇಯೆಯೊಂದಿಗೆ ಭಿತ್ತಿಪತ್ರ ಪ್ರದರ್ಶನ ಸ್ಪರ್ಧೆ ಏರ್ಪಡಿಸುವ ಮೂಲಕ ಜನರಲ್ಲಿ ರೋಗದ ಕುರಿತು ಜಾಗೃತಿ ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ, ವೈದ್ಯಕೀಯ ಉಪ ಅಧೀಕ್ಷಕರಾದ ಡಾ. ಮಖ್ದೂಮ ಕಿಲ್ಲೆದಾರ, ಚರ್ಮರೋಗ ವಿಭಾಗದ ಮುಖ್ಯಸ್ಥರಾದ ಡಾ. ನವೀನ ಕೆ. ಎನ್., ಡಾ. ಎಸ್.ಬಿ. ಅಥಣಿಕರ ಮತ್ತಿತರರು ಉಪಸ್ಥಿತರಿದ್ದರು. ಕುಷ್ಠರೋಗ ಕಳಂಕದ ನಿರ್ಮೂಲನೆ, ಆರಂಭಿಕ ಹಂತದಲ್ಲೆ ಪತ್ತೆ ಹಚ್ಚುವುದು ಮತ್ತು ಸಮುದಾಯ ಜಾಗೃತಿಯನ್ನು ಕೇಂದ್ರಿಕರಿಸುತ್ತಾ ಕುಷ್ಠರೋಗ ಪೀಡಿತ ವ್ಯಕ್ತಿಗಳ ತಾರತಮ್ಯವನ್ನು ತೊಡೆದುಹಾಕಲು ಎಲ್ಲಾ ಸದಸ್ಯರಿಂದ ಪ್ರತಿಜ್ಞೆ ಮಾಡಲಾಯಿತು.

ಧರ್ಮಸ್ಥಳ, ಜ.30: ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Article Image

ಧರ್ಮಸ್ಥಳ, ಜ.30: ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಮಂಗಳವಾರ ಧರ್ಮಸ್ಥಳದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ಮಧ್ಯೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿ ಒಪ್ಪಿಗೆ ಸೂಚಿಸಲಾಯಿತು. ಆಯುರ್ವಿಜ್ಞಾನ ಸಂಪದ ಸಂಸ್ಥಾನದ ಹೈದರಾಬಾದ್‌ನ ಸಹಾಯಕ ನಿರ್ದೇಶಕ ಡಾ. ಗೋಲಿ ಪೆಂಚಲ ಪ್ರಸಾದ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನದ ಪ್ರಾಂಶುಪಾಲರಾದ ಡಾ. ಪ್ರಸನ್ನ ಎನ್. ರಾವ್ ಮತ್ತಿತರರು ಉಪಸ್ಥಿತರಿದ್ದರು.

ಗೃಹರಕ್ಷಕ ದಳ ಅರ್ಜಿ ಆಹ್ವಾನ

Article Image

ಗೃಹರಕ್ಷಕ ದಳ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ (Home guard) ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡಬಿದ್ರೆ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತೆ : ಎಸ್.ಎಸ್.ಎಲ್.ಸಿ. ಉತ್ತೀರ್ಣಗೊಂಡಿರುವ ಹಾಗೂ 19 ರಿಂದ 50 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇಲ್ಲಿ ಅರ್ಜಿಯನ್ನು ಉಚಿತವಾಗಿ ಪಡೆಯಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.02.2024. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2220562 ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 22ನೇ ಶಾಖೆ ಪುರುಷರಕಟ್ಟೆಯಲ್ಲಿ ಶುಭಾರಂಭ

Article Image

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 22ನೇ ಶಾಖೆ ಪುರುಷರಕಟ್ಟೆಯಲ್ಲಿ ಶುಭಾರಂಭ

ಪುತ್ತೂರು: ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ' ಹಾಗೂ ರಾಜ್ಯ ಮಟ್ಟದ ‘ಉತ್ತಮ ಸಹಕಾರ ಸಂಘ ಪ್ರಶಸ್ತಿ' ಪುರಸ್ಕೃತಗೊಂಡ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, 22ನೇ ಶಾಖೆಯು ಜ. 28ರಂದು ನರಿಮೊಗರು ಗ್ರಾಮದ ಪುರುಷರಕಟ್ಟೆ ಸಿದ್ದಣ್ಣ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮವನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಿ ಮಾತನಾಡುತ್ತಾ, ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಅತೀ ಕಡಿಮೆ ಅವಧಿಯಲ್ಲಿ ರೂ. 1000 ಕೋಟಿ ವ್ಯವಹಾರ ನಡೆಸುವ ಗಣನೀಯ ಸಾಧನೆ ಮಾಡಿದೆ. ಬ್ಯಾಂಕ್ ಮುನ್ನಡೆಯಲು ಠೇವಣಿಗಾರರಗಿಂತ ಸಾಲಗಾರರೇ ಮುಖ್ಯ. ನೀಡಿದ ಸಾಲ ಮರುಪಾವತಿಸುವಲ್ಲಿ ಸಿಬ್ಬಂದಿಗಳ ಕಾರ್ಯದಕ್ಷತೆ, ಕ್ರಿಯಾಶೀಲತೆ ಪ್ರಮುಖವಾಗಿದೆ. ಈ ಸಂಘವು ಅಂತರಾಜ್ಯ ಸಂಸ್ಥೆಯಾಗಿ ಬೆಳೆಯಲಿ. ಪುತ್ತೂರಿನಲ್ಲಿ ಈಗಾಗಲೇ ಎರಡು ಶಾಖೆ ಪ್ರಾರಂಭವಾಗಿದ್ದು ಇನ್ನೂ 8 ಶಾಖೆಗಳು ಪ್ರಾರಂಭವಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ ಮಾತನಾಡುತ್ತಾ, ನಮ್ಮ ಶಾಖೆಯ ಮುಖಾಂತರ ಗ್ರಾಹಕರಿಗೆ ಪ್ರಾಮಾಣಿಕ, ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತವನ್ನು ಸಿಬಂದಿಗಳ ಮೂಲಕ ನೀಡಲಾಗುವುದು ಎಂದು ಹೇಳಿದರು. ಕ್ರೀಡಾ ಕ್ಷೇತ್ರದ ಸಾಧಕರಾದ ದೀಕ್ಷಾ ಹಾಗೂ ಭವಿತ್ರವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಾಖೆಗೆ ಸ್ಥಳಾವಕಾಶ ನೀಡಿದ ಸಿದ್ದಣ್ಣ ಪ್ರಭು ಕಟ್ಟಡದ ಮಾಲಕ ನವೀನ್ ಪ್ರಭುರವರನ್ನು ಕಾರ್ಯಕ್ರಮದಲ್ಲಿ ಸನ್ಮಾಸಲಾಯಿತು. ಕಾರ್ಯಕ್ರಮದಲ್ಲಿ ಭದ್ರತಾ ಕೋಶ ಉದ್ಘಾಟಿಸಿದ ನರಿಮೊಗರು ಗ್ರಾ.ಪಂ. ಅಧ್ಯಕ್ಷೆ ಹರಿಣಿ ನಿತ್ಯಾನಂದ, ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ., ನಿರಖು ಠೇವಣಿ ಪ್ರಮಾಣ ಪತ್ರ ವಿತರಿಸಿದ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ಸಂಚಾಲಕ ಭಾಸ್ಕರ ಆಚಾರ್ ಹಿಂದಾರ್, ಸಂಪ್ಯ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಸಂಘದ ವಿಶೇಷಾಧಿಕಾರಿ ಯಂ. ಮೋನಪ್ಪ ಪೂಜಾರಿ ಕಂಡೆತ್ಯಾರುರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರಿ ಹೊನ್ನಪ್ಪ ಶಾಂತಿಗೋಡು ಪ್ರಾರ್ಥಿಸಿ, ಸಂಘದ ಉಪಾಧ್ಯಕ್ಷ ಭಗೀರಥ ಜಿ. ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ಕುಮಾರ್ ಹಾಗೂ ಕಡಬ ಶಾಖೆಯ ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಆನಂದ ಪೂಜಾರಿ ಸರ್ವೆದೋಳ ವಂದಿಸಿದರು.

ಕಲ್ಲೇಗ: ಕಲ್ಕುಡ ದೈವದ ವಾರ್ಷಿಕ ಜಾತ್ರೋತ್ಸವ

Article Image

ಕಲ್ಲೇಗ: ಕಲ್ಕುಡ ದೈವದ ವಾರ್ಷಿಕ ಜಾತ್ರೋತ್ಸವ

ಪುತ್ತೂರು ಕಲ್ಲೇಗದಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಕಲ್ಕುಡ ದೈವದ ವಾರ್ಷಿಕ ಜಾತ್ರೋತ್ಸವವು ಜನವರಿ 24ರಂದು ಜರಗಲಿರುವುದು. ಬೆಳಗ್ಗೆ ಗಂಟೆ 9ಕ್ಕೆ ಕಾರ್ಜಾಲು ಗುತ್ತುವಿನಲ್ಲಿ ಸ್ಥಳ ಶುದ್ಧಿ ಹೋಮ ಮತ್ತು ಕಲಶ ಪ್ರತಿಷ್ಠೆ, ಬೆಳಗ್ಗೆ 11.30ಕ್ಕೆ ಶ್ರೀ ದೈವಸ್ಥಾನದಲ್ಲಿ ಗಣಹೋಮ ಮತ್ತು ಶ್ರೀ ದೈವಗಳ ತಂಬಿಲ ಮತ್ತು ನಾಗತಂಬಿಲ, ರಾತ್ರಿ ಗಂಟೆ 7.30ಕ್ಕೆ ಸರಿಯಾಗಿ ಶ್ರೀ ದೈವಗಳ ಮೂಲಸೆಳೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ರಾತ್ರಿ 9.30ಕ್ಕೆ ಕಲ್ಕುಡ ದೈವದ ನೇಮೋತ್ಸವ ನಡೆಯಲಿದೆ.

ಮಿಜಾರು, ಎಡಪದವು : ಶ್ರೀ ಧರ್ಮರಸು, ಕೊಡಮಣಿತ್ತಾಯ, ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Article Image

ಮಿಜಾರು, ಎಡಪದವು : ಶ್ರೀ ಧರ್ಮರಸು, ಕೊಡಮಣಿತ್ತಾಯ, ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

ಮಂಗಳೂರು ತಾಲೂಕಿನ ಮಿಜಾರು, ಎಡಪದವು ಶ್ರೀ ಧರ್ಮರಸು, ಕೊಡಮಣಿತ್ತಾಯ, ಕುಕ್ಕಿನಂತಾಯ ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಇಂದಿನಿಂದ (ಜ. 23) ಪ್ರಾರಂಭಗೊಂಡು ಜನವರಿ 28ರ ವರೆಗೆ ನಡೆಯಲಿದೆ. 24ರಂದು ಎಡಪದವು ಗುತ್ತಿನಿಂದ ಭಂಡಾರ ಹೊರಟು 25ರಂದು ರಾತ್ರಿ ದೈವ ನೇಮ ಮತ್ತು 26ರಂದು ರಾತ್ರಿ ಶ್ರೀ ಕೊಡಮಣಿತ್ತಾಯ-ಕುಕ್ಕಿನಂತಾಯ ದೈವಗಳ ನೇಮೋತ್ಸವವು ನಡೆಯಲಿದೆ. 27ರಂದು ಸಂಜೆ 6:30ಕ್ಕೆ ಶ್ರೀ ಬ್ರಹ್ಮಬೈದರ್ಕಳ ನೇಮ ಮತ್ತು ರಾತ್ರಿ 2 ಗಂಟೆಗೆ ಮಾಣಿಬಾಲೆ ನೇಮೋತ್ಸವವು ನಡೆಯಲಿದೆ ಎಂದು ಆಡಳಿತ ಮೊಕ್ತೇಸರರಾದ ಕೆ. ಸನತ್ ಕುಮಾರ್ ಪಡಿವಾಳ್‌ರವರು ತಿಳಿಸಿರುತ್ತಾರೆ.

ಜ. 22-30 : ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Article Image

ಜ. 22-30 : ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ನೂತನ ಚಂದ್ರಮಂಡಲ ರಥ ಮತ್ತು ಪಲ್ಲಕ್ಕಿ ಸಮರ್ಪಣೆಯು ಜನವರಿ 22ರಿಂದ ಪ್ರಾರಂಭಗೊಂಡು 30ರವರೆಗೆ ನಡೆಯಲಿದೆ. ಸುಮಾರು 800 ವರ್ಷಗಳ ಇತಿಹಾಸವಿರುವ ಪ್ರಸಿದ್ಧ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದಲ್ಲಿದೆ. ವ್ಯಾಜ್ಯಗಳನ್ನು ಪರಿಹರಿಸಿ, "ತೀರ್ಪು" ನೀಡುವ ಸ್ಥಳವೆಂದೇ ಪ್ರತೀತಿ ಪಡೆದು ಮುಂದಕ್ಕೆ "ನ್ಯಾಯತೀರ್ಪು-ನ್ಯಾಯತರ್ಪು" ಎಂದಾಯಿತೆಂದು ಇಲ್ಲಿನ ಇತಿಹಾಸ. ನ್ಯಾಯತರ್ಪು, ಕಳಿಯ ಮತ್ತು ಓಡಿಲ್ನಾಳ ಗ್ರಾಮಗಳಲ್ಲದೆ ಹತ್ತಿರದ ಕಣಿಯೂರು, ಕೊಯ್ಯೂರು, ಕುವೆಟ್ಟು ಮತ್ತು ಮಚ್ಚಿನ ಗ್ರಾಮದ ಆಸುಪಾಸಿಗೂ ಶ್ರೀ ಕ್ಷೇತ್ರದ ವ್ಯಾಪ್ತಿ ಹಬ್ಬಿದೆ. ಊರ-ಪರವೂರಿನ ಭಕ್ತವೃಂದದ ಪರಿಶ್ರಮದಿಂದ ಶ್ರೀ ಕ್ಷೇತ್ರವು ಜೀರ್ಣೋದ್ಧಾರಗೊಂಡು, 2002ರಲ್ಲಿ ಪುನಃಪ್ರತಿಷ್ಠಾ-ಅಷ್ಟಬಂಧ ಬ್ರಹ್ಮಕಲಶದೊಂದಿಗೆ ನವೀಕರಣಗೊಂಡಿದೆ. ಕ್ಷೇತ್ರದ ಅಭಿವೃದ್ಧಿ ಮುಂದಿನ ಹಂತವಾಗಿ ಕ್ಷೇತ್ರದ ದೈವಗಳಾದ ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಗಳಿಗೆ ಮಾಡ್ಯಾರುಗುಡ್ಡೆಯಲ್ಲಿ ದೈವಸ್ಥಾನ ನಿರ್ಮಿಸಿ ಪ್ರತಿಷ್ಠೆ ಮಾಡಲಾಗಿದೆ. 2010ರಲ್ಲಿ ಕ್ಷೇತ್ರದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವಂತೆ ದಾಖಲೆ ಅವಧಿಯಲ್ಲಿ ನೂತನ ರಥ ಸಮರ್ಪಣೆ ಹಾಗೂ ಧ್ವಜಸ್ತಂಭದ ಪ್ರತಿಷ್ಠೆ ನಡೆದಿದೆ. ಈ ಎಲ್ಲ ಕಾರ್ಯಗಳಿಂದ ನಾಳ ಕ್ಷೇತ್ರವು ಅಭಿವೃದ್ಧಿ ಹೊಂದಿ, ಕ್ಷೇತ್ರದ ಸಾನ್ನಿಧ್ಯವು ವೃದ್ಧಿಯಾಗಿ ಹೆಚ್ಚಿನ ಭಕ್ತವೃಂದವನ್ನು ತನ್ನತ್ತ ಸೆಳೆಯುತ್ತಿದೆ. ಜ. 26ರಂದು ಸಂಜೆ 7 ಗಂಟೆಗೆ ಚಂದ್ರಮಂಡಲ ಉತ್ಸವ, 27ರಂದು ಬೆಳಗ್ಗೆ 9 ಗಂಟೆಗೆ ದೇವರ ದರ್ಶನ ಬಲಿ, ರಾತ್ರಿ 8 ಗಂಟೆಗೆ ದೇವರ ಉತ್ಸವ ಬಲಿ ಹೊರಟು, ಕೊಡಮಣಿತ್ತಾಯ ದೈವದ ಗಗ್ಗರ ಸೇವೆ ಮತ್ತು ರಾತ್ರಿ 11 ಗಂಟೆಗೆ ಮಹಾರಥೋತ್ಸವ ನೆರವೇರಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಜಾತ್ರಾ ಮಹೋತ್ಸವಕ್ಕೆ ಮೆರುಗು ನೀಡಲಿದ್ದು, ದಿನಾಂಕ 25ರಂದು ಗುರುವಾರ ರಾತ್ರಿ 8 ಗಂಟೆಗೆ ಮೋಕೆದ ಕಲಾವಿದೆರ್ ಅಭಿನಯಿಸುವ ಸುಟ್ಟು ಸೆಟ್ಯಾರು ವಿರಚಿತ ತುಳು ಹಾಸ್ಯಮಯ ನಾಟಕ “ಕಾಸ್ದ ಕಸರತ್ತ್” ದಿನಾಂಕ 26ರಂದು ರಾತ್ರಿ 9 ಗಂಟೆಗೆ ಉಮೇಶ್ ಮಿಜಾರ್ ಸಾರಥ್ಯದ ನವ ಕಲಾವಿದೆರ್ ಬೆದ್ರ ಅಭಿನಯದ ತುಳು ನಾಟಕ “ಆಕೆ ಪನೊಡಾತೆ” ದಿನಾಂಕ 27ರಂದು ರಾತ್ರಿ 7 ಗಂಟೆಗೆ ಡಾ. ನಯನ ಎ. ಭಟ್ ಗಂಗಾ ನಿಲಯ ಗೇರುಕಟ್ಟೆ ಮತ್ತು ತಂಡದವರಿಂದ ‘ನೃತ್ಯ ವೈಭವ’ ಮತ್ತು ರಾತ್ರಿ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯ ಎದೆತುಂಬಿ ಹಾಡುವೆನು ಖ್ಯಾತಿಯ ಸಂದೇಶ್ ನೀರುಮಾರ್ಗ ಮತ್ತು ತಂಡದವರಿಂದ “ಸಂಗೀತ ಸಂಭ್ರಮ” ದಿನಾಂಕ 28ರಂದು ರಾತ್ರಿ 8 ಗಂಟೆಗೆ ಮಹಾವಿಷ್ಣು ಕಲಾ ತಂಡ ಕಣಿಯೂರು ಇವರಿಂದ ರವಿಶಂಕರ್ ಶಾಸ್ತ್ರೀ ಮಾಣಿಲ ವಿರಚಿತ ತುಳು ನಾಟಕ “ಬುಡ್ದು ಪಾಡೋಡ್ಚಿ” ದಿನಾಂಕ 29ರಂದು ರಾತ್ರಿ 8.30ಕ್ಕೆ ಗಂಟೆಗೆ ಊರ ಹವ್ಯಾಸಿ ಕಲಾವಿದರಿಂದ ರವಿಚಂದ್ರ ಬಿ. ಸಾಲ್ಯಾನ್ ವಿರಚಿತ ತುಳು ಸಾಮಾಜಿಕ ನಾಟಕ “ಅಣ್ಣಡ ತಾಂಟೊರ್ಚಿ” ದಿನಾಂಕ 30ರಂದು ರಾತ್ರಿ 7ಕ್ಕೆ “ಪಾಪಣ್ಣ ವಿಜಯ ಗುಣ ಸುಂದರಿ” ಎಂಬ ಪ್ರಸಂಗವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮತ್ತು ಊರ ಹವ್ಯಾಸಿ ಕಲಾವಿದರು ಆಡಿ ತೋರಿಸಲಿದ್ದಾರೆ. ಹೀಗೆ ದಿನಂಪ್ರತಿ ಎಲ್ಲಾ ಕಾರ್ಯಕ್ರಮಗಳು ನೆರವೇರಲಿದೆ.

ಈ ವರ್ಷ ಗಳಿಕೆಯಲ್ಲಿ ಅಂಬಾನಿ ನಂ.1

Article Image

ಈ ವರ್ಷ ಗಳಿಕೆಯಲ್ಲಿ ಅಂಬಾನಿ ನಂ.1

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು 2023ರಲ್ಲಿ ತಮ್ಮ ಸಂಪತ್ತಿಗೆ 6.8 ಶತಕೋಟಿ ಡಾಲರ್ (ಸುಮಾರು 81.34 ಲಕ್ಷ ಕೋಟಿ ರೂ.) ಮೌಲ್ಯದ ಆಸ್ತಿಯನ್ನು ಸೇರ್ಪಡೆ ಮಾಡಿದ್ದು, ಈ ವರ್ಷ ಹೆಚ್ಚು ಸಂಪತ್ತುಗಳಿಸಿದ ದೇಶದ ನಂ.೧ ಕುಬೇರರಾಗಿ ಹೊರ ಹೊಮ್ಮಿದ್ದಾರೆ. ಬ್ಲೂಮ್ ಬರ್ಗ್ ಡೇಟಾ ಪ್ರಕಾರ, ಜಿಂದಾಲ್ ಕುಟುಂಬದ ಸಾವಿತ್ರಿ ಜಿಂದಾಲ್ ಅವರು ಅಂಬಾನಿ ನಂತರದ ಸ್ಥಾನದಲ್ಲಿದ್ದಾರೆ. ಅವರು 24.7 ಶತಕೋಟಿ ಡಾಲರ್ ಸಂಪತ್ತಿನೊಂದಿಗೆ ಭಾರತದ ಅತ್ಯಂತ ಶ್ರೀಮಂತ ಮಹಿಳೆಯಾಗಿ ಹೊರಹೊಮ್ಮಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳಲ್ಲಿನ ಶೇ.9ರಷ್ಟು ಹೆಚ್ಚಳವು ಮುಕೇಶ್ ಅಂಬಾನಿಯ ಸಂಪತ್ತನ್ನು ವೃದ್ಧಿಸಿದೆ. ಅಂಬಾನಿ ಅವರ ಸಂಪತ್ತಿನ ಒಟ್ಟು ನಿವ್ವಳ ಮೌಲ್ಯವು 97.1 ಶತಕೋಟಿ ಡಾಲರ್ಗೆ (8 ಲಕ್ಷಕೋಟಿ ರೂ.) ಮುಟ್ಟಿದ್ದು, ಭಾರತದ ನಂ.1 ಶ್ರೀಮಂತ ವ್ಯಕ್ತಿ ಎಂಬ ಹೆಗ್ಗಳಿಕೆ ಮುಂದುವರಿದಿದೆ. ಪ್ರಸ್ತುತ ವರ್ಷದಲ್ಲಿ ಆದಿತ್ಯ ಬಿರ್ಲಾ ಗ್ರೂಪ್ನ ಕುಮಾರ್ ಮಂಗಲಂ ಬಿರ್ಲಾ (ಸಂಪತ್ತಿಗೆ 7.09 ಶತಕೋಟಿ ಡಾಲರ್ ಸೇರ್ಪಡೆ), ವರುಣ್ ಬೆವರೇಜಸ್ನ ರವಿ ಜೈಪುರಿಯಾ (5.91 ಶತಕೋಟಿ ಡಾಲರ್) ಮತ್ತು ಸನ್ ಫಾರ್ಮಾದ ದಿಲೀಪ್ ಶಾಂಘ್ವಿ (5.26 ಶತಕೋಟಿ ಡಾಲರ್) ಸಹ ತಮ್ಮ ಸಂಪತ್ತನ್ನು ಗಣನೀಯವಾಗಿ ವೃದ್ಧಿಸಿದ್ದಾರೆ. ಅದಾನಿಗೆ ಹೆಚ್ಚು ನಷ್ಟ: ಈ ವರ್ಷ ಅತಿ ಹೆಚ್ಚು ಸಂಪತ್ತನ್ನು ಕಳೆದುಕೊಂಡ ವ್ಯಕ್ತಿ ಅದಾನಿ ಗ್ರೂಪ್ ನ ಗೌತಮ್ ಅದಾನಿ. ಭಾರತದ ಎರಡನೇ ಶ್ರೀಮಂ

ನೀವೇ ವೈದ್ಯರಾಗಿ, ಆಲೋಪತಿಯನ್ನು ದೂರವಿಡಿ.....

Article Image

ನೀವೇ ವೈದ್ಯರಾಗಿ, ಆಲೋಪತಿಯನ್ನು ದೂರವಿಡಿ.....

ಮಲ್ಲಿಗೆ ಎಲೆಗಳನ್ನು ಕಿತ್ತು ಬಾಯಲ್ಲಿ ಹಿಡಿದುಕೊಂಡರೆ ಹಲ್ಲು ನೋವಿಗೆ ತಕ್ಷಣ ಪರಿಹಾರ ಸಿಗುತ್ತದೆ. ಮಲ್ಲಿಗೆ ಎಲೆಗಳನ್ನು ಜಜ್ಜಿ ಹುಣ್ಣುಗಳ ಮೇಲೆ ಹಚ್ಚಬೇಕು. ಹಲ್ಲು ನೋಯುತ್ತಿದ್ದರೆ ಮಲ್ಲಿಗೆ ಎಲೆಯನ್ನು ಕಚ್ಚಿ ತಿನ್ನಿ. ಮಲ್ಲಿಗೆ ಎಲೆಗಳು ಗಾಯಗಳನ್ನು ವಾಸಿಮಾಡುವ ಉತ್ತಮವಾದ ಹುಣ್ಣು ನಿವಾರಕ. ಜಾಸ್ಮಿನ್ ಎಣ್ಣೆಯನ್ನು ಅನ್ವಯಿಸಿ. ಜಾಸ್ಮಿನ್ ಕುಷ್ಠರೋಗ ಮತ್ತು ಕಂಡುಘ್ನ ಎಂದು ಹೇಳಿದ್ದಾರೆ. ದೇಹದಲ್ಲಿ ತುರಿಕೆ ಅಥವಾ ಚರ್ಮ ರೋಗವಿದ್ದರೆ ಮಲ್ಲಿಗೆ ಎಲೆಯನ್ನು ಜಜ್ಜಿ ಲೇಪಿಸಿ. ತುರಿಕೆ ಕಡಿಮೆ ಮಾಡುತ್ತದೆ. ಅನೇಕ ಚರ್ಮ ರೋಗಗಳು, ಅಂದರೆ. ಎಸ್ಜಿಮಾ, ಫಂಗಲ್ ಸೋಂಕು ಇತ್ಯಾದಿ. ಇದರ ನಡುವೆ ಮಲ್ಲಿಗೆ ಎಲೆಯ ಎಣ್ಣೆ ಅಥವಾ ಎಲೆ ಬೇರಿನ ಪೇಸ್ಟ್ ಪ್ರಯೋಜನಕಾರಿ. ತಲೆನೋವು ಇದ್ದರೆ ಮಲ್ಲಿಗೆಯ ಬೇರನ್ನು ಕಿತ್ತು ಹಚ್ಚುತ್ತಾರೆ. ಮಲ್ಲಿಗೆ ಎಣ್ಣೆಯಿಂದ ತಲೆಗೆ ಮಸಾಜ್ ಮಾಡುವುದರಿಂದ ತಲೆತಿರುಗುವಿಕೆ ಅಥವಾ ಮಾನಸಿಕ ಖಿನ್ನತೆಯಿಂದ ಪರಿಹಾರ ದೊರೆಯುತ್ತದೆ. ನೀರಿನಲ್ಲಿ ಶೀತ ಅಥವಾ ನಿರಂತರ ಕೆಲಸದಿಂದ ಅಂಗೈಯು ಬಿರುಕು ಬಿಟ್ಟರೆ, ಮಲ್ಲಿಗೆ ಎಲೆಗಳನ್ನು ವಿಂಗಡಿಸಿ ಮತ್ತು ಬಿರುಕುಗಳನ್ನು ಮುಚ್ಚಿ ಹಚ್ಚಿದರೆ ಗಾಯಗಳು ಬೇಗ ವಾಸಿಯಾಗುತ್ತವೆ. ಮಲ್ಲಿಗೆ ಎಲೆಯ ಸಿದ್ಧ ಎಣ್ಣೆಯಿಂದ ನಿಧಾನವಾಗಿ ಮಸಾಜ್ ಮಾಡಬೇಕು, ಇದರಿಂದ ದೇಹದ ಭಾಗವು ಮೃದು ಮತ್ತು ನೈಸರ್ಗಿಕವಾಗಿರುತ್ತದೆ. * ಕಿವಿ ನೋವು ಮತ್ತು ಕಿವಿಯಿಂದ ಸ್ರಾವದಂತಹ ದೂರುಗಳಿಗೆ ಎಲೆಗಳ ಸಿದ್ಧ ಎಣ್ಣೆ

First Previous

Showing 15 of 15 pages

Next Last