Article Image

ಸುಸ್ಥಿರ ಆರೋಗ್ಯಕ್ಕೆ ಸ್ವಚ್ಛ ಪರಿಸರ : ರಶ್ಮಿತಾ ಜೈನ್

Article Image

ಸುಸ್ಥಿರ ಆರೋಗ್ಯಕ್ಕೆ ಸ್ವಚ್ಛ ಪರಿಸರ : ರಶ್ಮಿತಾ ಜೈನ್

ಕಲ್ಲಬೆಟ್ಟು  : ನೆಲ, ಜಲ, ಪ್ರಕೃತಿಯ ಸಂರಕ್ಷಣೆ ನಮ್ಮ ಆದ್ಯತೆಯಾಗಬೇಕು. ಉಸಿರಾಡುವುದಕ್ಕೆ ಹಸಿರು ಪ್ರಕೃತಿಯ ಅವಶ್ಯಕತೆ ಇದೆ.  ಸದೃಢ ಆರೋಗ್ಯಕ್ಕೆ ಸ್ವಚ್ಛ ಪರಿಸರ ಅತ್ಯಗತ್ಯ. ಇಂದು ನಾವು ನೆಡುವ ಗಿಡಗಳು ಮುಂದಿನ ಪೀಳಿಗೆಗೆ ವರದಾನವಾಗಬೇಕು. ಯುವ ಪೀಳಿಗೆ ಕ್ರಿಯಾಶೀಲವಾದಷ್ಟು ಹಿರಿಯರಿಂದ ಪ್ರೋತ್ಸಾಹ ದೊರಕುತ್ತದೆ. ಪರಿಸರ ಸಂರಕ್ಷಣೆಯತ್ತ ವಿದ್ಯಾರ್ಥಿಗಳ ಮನೋಭಾವ ಬೆಳೆಸುವ ನಿಟ್ಟಿನಲ್ಲಿ, ಸಾಮಾಜಿಕ ಜಾಗೃತಿ ಮೂಡಿಸುವ ನೆಲೆಯಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆ “ಸಸ್ಯ ಶ್ಯಾಮಲಾ” ಎಂಬ ಶೀರ್ಷಿಕೆಯಡಿ ಮೂಡುಬಿದಿರೆ ಸುತ್ತಮುತ್ತ ಪರಿಸರದಲ್ಲಿ 1000 ಗಿಡಗಳನ್ನು  ನೆಟ್ಟು ಸಂರಕ್ಷಿಸುವ ಕಾರ್ಯಕ್ರಮವನ್ನು ಪ್ರತಿ ವರ್ಷ ಹಮ್ಮಿಕೊಳ್ಳುತ್ತಿದೆ. ಸಾಮಾಜಿಕ ಜಾಗೃತಿಯ ಘೋಷ ವಾಕ್ಯಗಳು ನಮ್ಮ ಮನಸ್ಸಿನಲ್ಲಿ ಉತ್ಸಾಹವನ್ನು ತುಂಬಿ ದೈನಂದಿನ ಬದುಕಿನಲ್ಲಿ ಹೃದಯಪೂರ್ವಕವಾಗಿ ಆಚರಣೆಗೆ ತಂದಾಗ ಅರ್ಥಪೂರ್ಣ ಕಾರ್ಯಕ್ರಮ ವಾಗುತ್ತದೆ. ಮತ್ತು ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಾಮಾಜಿಕ ಕರ್ತವ್ಯಗಳ ಬಗ್ಗೆ ಯೋಚಿಸುತ್ತ  ಕಾರ್ಯ ಪ್ರವೃತ್ತರಾದಾಗ ಸ್ವಚ್ಛ ಪರಿಸರ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಹೇಳಿದರು. ಅವರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಮೂಡುಬಿದಿರೆರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್’, ಜವಾಹರಲಾಲ್ ನೆಹರು ಪ್ರೌಢಶಾಲೆ, ಶಿರ್ತಾಡಿ, ಜೀವ ನಿಧಿ ಸೇವಾ ಬಳಗ ಆರ್.ಸಿ.ಸಿ. ಹಾಗೂ ರಾಷ್ಟ್ರ ಸೇವಿಕಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಸಸ್ಯ ಶ್ಯಾಮಲಾ ವನಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ನ ಅಧ್ಯಕ್ಷ ರೊ. ಹರೀಶ್ ಎಂ.ಕೆ. ಅವರು ಮಾತನಾಡುತ್ತ ಎಕ್ಸಲೆಂಟ್ ಸಂಸ್ಥೆಯು ಸಸ್ಯ ಶಾಮಲಾ ಯೋಜನೆಯ ಮೂಲಕ ಜನ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಈ ರೀತಿಯ ಸಾಮಾಜಿಕ ಚಟುವಟಿಕೆಗಳಿಗೆ ರೋಟರಿ ಸಂಸ್ಥೆ ಸದಾ ಬೆಂಬಲವನ್ನು ನೀಡುತ್ತದೆ ಎಂದು ತಿಳಿಸುತ್ತ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಯ ಆವರಣದಲ್ಲಿ ನೆಟ್ಟ ಗಿಡಗಳ ಸಂರಕ್ಷಣೆಯ ಹೊಣೆಗಾರಿಕೆಗೆ ವಿದ್ಯಾರ್ಥಿಗಳ ತಂಡವನ್ನು ರಚಿಸಿದರು. ಶಿರ್ತಾಡಿ ಗ್ರಾ.ಪಂ. ಅಧ್ಯಕ್ಷೆ ಆಗ್ನೆಸ್ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಜನಾರ್ದನ ಸೇರಿಗಾರ್, ಜೀವ ನಿಧಿ ಸೇವಾ ಬಳಗ ಆರ್.ಸಿ.ಸಿ.ಯ ಅಧ್ಯಕ್ಷ ಶಶಿಧರ್ ದೇವಾಡಿಗ ಗೆಂದೊಟ್ಟು, ರಾಷ್ಟ್ರ ಸೇವಿಕಾ ಸಮಿತಿಯ ಅಧ್ಯಕ್ಷೆ ಮೂಕಾಂಬಿಕಾ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ. ಎಕ್ಸಲೆಂಟ್ ಸಂಸ್ಥೆಯ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ತೇಜಸ್ವೀ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕಿ ಸುಮಂಗಲಾ ಕಾರ್ಯಕ್ರಮ ನಿರೂಪಿಸಿ ಶಿಕ್ಷಕಿ ಮಾಲತಿ ವಂದಿಸಿದರು. ಕಾರ್ಯಕ್ರಮದ ನಂತರ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಮತ್ತು ಶಿರ್ತಾಡಿ ಜವಾಹರಲಾಲ್ ನೆಹರೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಕ್ಸಲೆಂಟ್ ಸಂಸ್ಥೆ ಒದಗಿಸಿದ ವಿವಿಧ ತಳಿಯ ಗಿಡಗಳನ್ನು ಶಾಲೆಯ ನೆಟ್ಟು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜು ಸಸ್ಯಶಾಸ್ತ್ರ ವಿಭಾಗದಿಂದ ನೇಜಿ ನಾಟಿ ಕಾರ್ಯಕ್ರಮ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಉಜಿರೆಯ ರತ್ನಮಾನಸದಲ್ಲಿ ಜು.20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರತ್ನಮಾನಸದ ಮೇಲ್ವಿಚಾರಕರಾದ ಯತೀಶ್ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ಜಗದೀಶ ಮುಂಡಾಜೆ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು. ಪ್ರಥಮ ಮತ್ತು ತೃತೀಯ ಬಿ.ಎಸ್ಸಿಯ ಸುಮಾರು 25 ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ ಸಂಭ್ರಮಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಶಕುಂತಲಾ. ಬಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು.

ಸ್ಪಟಿಕ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಅತಿಥಿ ಉಪನ್ಯಾಸ

Article Image

ಸ್ಪಟಿಕ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಅತಿಥಿ ಉಪನ್ಯಾಸ

ವಯೋಸಹಜವಾಗಿ ಮೈಗೂಡುವ ಋಣಾತ್ಮಕ ಚಿಂತನೆಗಳನ್ನು ತೊರೆದಾಗ ಮನಸಿನ ಮೇಲೆ ಹಿಡಿತ ಸಾಧಿಸಲು ಸಾಧ್ಯ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಮನಃಶಾಸ್ತ್ರ (ಸ್ನಾತಕೋತ್ತರ) ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಶ್ವಿನಿ ಎಸ್. ಶೆಟ್ಟಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.18ರಂದು ಅವರು ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘ ‘ಸ್ಪಟಿಕ’ ಉದ್ಘಾಟಿಸಿ, ‘ಕಾಲೇಜು ಜೀವನದಲ್ಲಿ ಮಾನಸಿಕ ಆರೋಗ್ಯದ ಪೋಷಣೆ’ ಕುರಿತು ಉಪನ್ಯಾಸ ನೀಡಿದರು. ಜೀವನದಲ್ಲಿ ಬರುವ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬರಬೇಕು. ಬದುಕಿನಲ್ಲಿ ಎದುರಾಗುವ ತೊಂದರೆಗಳನ್ನು ಸ್ವೀಕರಿಸಿ, ತಾಳ್ಮೆಯಿಂದ ಚಿಂತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಮನಸು ಮತ್ತು ಮೆದುಳಿನ ಸಮತೋಲನ ನಿರ್ವಹಣೆಯಿಂದ ಮಾನಸಿಕ ಆರೋಗ್ಯ ವೃದ್ಧಿಸುತ್ತದೆ ಎಂದರು. “ಮನಸ್ಸಿನ ದುಗುಡಗಳನ್ನು ನಮಗೆ ಸೂಕ್ತ ಎನಿಸುವ ವ್ಯಕ್ತಿಯ ಜೊತೆ ಹಂಚಿಕೊಂಡಾಗ ಮಾತ್ರ ಅವುಗಳಿಗೆ ಪರಿಹಾರ ಸಾಧ್ಯ. ನಮ್ಮ ಬದುಕಿನಲ್ಲಿ ಎದುರಾಗುವ ಪರಿಸ್ಥಿತಿಗಳಿಗೆ ನಾವು ಯಾವ ರೀತಿ ಸ್ಪಂದಿಸಬೇಕು ಎಂಬುದರ ಬಗ್ಗೆ ನಮಗೆ ಅರಿವಿರಬೇಕು. ಪ್ರತಿಯೊಂದು ಸಮಸ್ಯೆಗೂ ಪರಿಹಾರ ಎಂಬುದು ಇದ್ದೇ ಇದೆ. ಅವುಗಳನ್ನು ಹುಡುಕುವ ತಾಳ್ಮೆ ಮೈಗೂಡಬೇಕು” ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಪ್ರತಿಯೊಂದು ವಿಚಾರಕ್ಕೂ ತಂತ್ರಜ್ಞಾನದ ಮೊರೆ ಹೋಗುವುದನ್ನು ನಿಲ್ಲಿಸಿ ತಮ್ಮ ಮೆದುಳಿಗೆ ಕೆಲಸ ಕೊಡಬೇಕು. ಹಾಗಾದಾಗ ಮಾತ್ರ ಮೆದುಳು ಚುರುಕಾಗಿ ಕಾರ್ಯ ನಿರ್ವಹಿಸಲು ಸಾಧ್ಯ. ಯುವಜನತೆ ಮನಸ್ಸಿನ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಅನಿವಾರ್ಯತೆಯಿದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ಪ್ರತಿ ವಿಷಯಕ್ಕೂ ವಿಷಯವಾರು ಸಂಘ ರಚಿಸಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಮನೋರಂಜನೆಯ ಉದ್ದೇಶಕ್ಕಲ್ಲ. ಬದಲಾಗಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಎಂದರು. ರಸಾಯನಶಾಸ್ತ್ರ ವಿಭಾಗವು ಹಿಂದಿನಿಂದಲೂ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ ಆ ಯಶಸ್ಸನ್ನು ಮುನ್ನಡೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು. ವಿದ್ಯಾರ್ಥಿಗಳು ತಯಾರಿಸಿದ ‘ಸ್ಪಟಿಕ’ ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲೆ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥೆ ನಂದ ಕುಮಾರಿ ಕೆ.ಪಿ., ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಮೌಲ್ಯ ಮತ್ತು ಸಿಂಚನ, ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಶಾಂತ್ ಸ್ವಾಗತಿಸಿ, ಜೋಷ್ಣಾ ವಂದಿಸಿ, ಅನ್ವಿತಾ ಸೇರಾ ಕಾರ್ಯಕ್ರಮ ನಿರೂಪಿಸಿದರು.

ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

Article Image

ದ. ಕ. ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಕಾರ್ಯಾಗಾರ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ ಅಡಿಪಾಯವನ್ನು ಹಾಕುತ್ತದೆ ಎಂಬುದನ್ನು ಉಲ್ಲೇಖಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಆದರೆ ಜೆ.ಇ.ಇ., ಎನ್.ಎ.ಟಿ.ಎ., ಎನ್.ಡಿ.ಎ., ಬಿ. ನಂತಹ ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ಬಂದಾಗ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ. ಪಿ.ಯು.ಸಿ. ಮಟ್ಟದಲ್ಲಿ ಫಲಿತಾಂಶಗಳನ್ನು ಹೆಚ್ಚಿಸಲು ಗಣಿತದ ಅಡಿಪಾಯವನ್ನು ಬಲಪಡಿಸಲು ಉಪನ್ಯಾಸಕರು ಕಾರ್ಯ ಪ್ರವೃತರಾಗಬೇಕೆಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ, ಶಿಕ್ಷಕರು ಕೇವಲ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು, ಇಲ್ಲವಾದರೆ ಭವಿಷ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ಶಿಕ್ಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತದೆ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ವಿದ್ಯಾರ್ಥಿಗಳು ಗಣಿತದಲ್ಲಿ ಏಕೆ ಹಿಂದುಳಿಯುತ್ತಾರೆ ಎಂಬುದಕ್ಕೆ ಉದಾಹರಣೆಗಳನ್ನು ನೀಡಿದರು. ಗಣಿತ ಮತ್ತು ಭೌತಶಾಸ್ತ್ರವು ಹೇಗೆ ಪರಸ್ಪರ ಸಂಬಂಧ ಹೊಂದಿದೆ ಎಂಬುದನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಾಘವೇಂದ್ರ ಹಾಗೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಡಾ. ಪ್ರಶಾಂತ್ ರಾವ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ 'ದಿ ಬುಕ್ ಮ್ಯಾಥ್ ಮೇಡ್ ಈಸಿ' ಪುಸ್ತಕದ 8ನೇ ಆವೃತ್ತಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಗಣಿತ ಶಿಕ್ಷಕಿ ಸೀತಾ ಹಾಗೂ ಪುಸ್ತಕದ ಸಂಪಾದಕೀಯ ಮಂಡಳಿ ಸದಸ್ಯರನ್ನು ಸನ್ಮಾನಿಸಲಾಯಿತು. ಮುಂಬರುವ ಶೈಕ್ಷಣಿಕ ವರ್ಷದ ಸಂಘದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಲಾರೆನ್ಸ್ ಸಿಕ್ವೆರಿಯಾ, ಉಪಾಧ್ಯಕ್ಷ ಆದರ್ಶ್ ಚೊಕ್ಕಾಡಿ, ಕಾರ್ಯದರ್ಶಿ ಅನುಪಮಾ ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ವರುಣ್ ಪ್ರಭು, ವೆಲಿಟ, ಲೋಹಿತ್ ಸಾಲ್ಯಾನ್ ಹಾಗೂ ಸುಕನ್ಯ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ರವೀಂದ್ರನಾಥ್ ಬರ್ವೆ ವಂದಿಸಿದರು.

ಅಡಕೆ ಕೊಳೆರೋಗ ನಿರ್ವಹಣೆಗೆ ರೈತರಿಗೆ ಸಹಾಯಧನ

Article Image

ಅಡಕೆ ಕೊಳೆರೋಗ ನಿರ್ವಹಣೆಗೆ ರೈತರಿಗೆ ಸಹಾಯಧನ

ಮಂಗಳೂರು: ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಅಡಕೆ ಯಲ್ಲಿ ಕೊಳೆರೋಗ ಕಾಣಿಸಿಕೊಂಡಿರುವುದು ತೋಟ ಗಾರಿಕೆ ಇಲಾಖೆಯ ಗಮನಕ್ಕೆ ಬಂದಿದೆ. ಅಡಕೆ ಬೆಳೆಯಲ್ಲಿ ಸಮಗ್ರ ಪೋಷಕಾಂಶ, ಕೀಟ, ರೋಗ ನಿರ್ವಹಣೆ ಸಂಬಂಧ ಗೊಬ್ಬರ, ಸೂಕ್ಷ್ಮ ಪೋಷ ಕಾಂಶ, ಕೀಟನಾಶಕ, ಶಿಲೀಂಧ್ರನಾಶಕಗಳನ್ನು ಖರೀದಿ ಸುವ ರೈತರಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ಸಹಾಯಧನ ಸೌಲಭ್ಯ ಲಭ್ಯವಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ದ.ಕ. ತೋಟಗಾರಿಕೆ ಉಪ ನಿರ್ದೇಶಕ ಮಂಜುನಾಥ ಡಿ. ತಿಳಿಸಿದ್ದಾರೆ.

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್

Article Image

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ : ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೂರಜ್ ಶೈಕ್ಷಣಿಕ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ರೊಟೇರಿಯನ್ ಪಿ.ಎಚ್.ಎಫ್ ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ ಇವರು ಆಗಮಿಸಿದ್ದರು. ಗೌರವ ಅತಿಥಿಗಳಾದ ಅಡ್ವೋಕೇಟ್ ಪದ್ಮಪ್ರಸಾದ್ ಜೈನ್, ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಶಾಲಾ ಪ್ರಾಂಶುಪಾಲರಾದ ಪ್ರಸಾದ್ ಇವರು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ವಿವಿಧ ಜವಾಬ್ದಾರಿಯುತ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಕೋರಿ ನಾಯಕತ್ವದ ಗುಣವನ್ನು ಎಳವೆಯಲ್ಲಿಯೇ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ರವರು ತಿಳಿಸಿದರು. ಈ ಶುಭ ಸಂದರ್ಭದಲ್ಲಿ ಅತಿಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಯಕತ್ವದ ಗುಣ ದೊಡ್ಡ ಗುಣ. ಶಿಕ್ಷಣದೊಂದಿಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ. ಎಲ್ಲಿ ಸಂಸ್ಕಾರವಿರುತ್ತದೆಯೋ ಅಲ್ಲಿ ಶಿಕ್ಷಣವಿರುತ್ತದೆ ಶಾಲಾ ಸುಧಾರಣೆ ಮಕ್ಕಳ ಕೈಯಲ್ಲಿದೆ ಎಂದು ಮುಖ್ಯ ಅತಿಥಿಗಳಾದ ಡಾ. ಮಂಜುನಾಥ್ ಶ್ರೀಪಾದ್ ರೇವಣ್‌ಕರ್ ರವರು ತಿಳಿಸಿದರು. ಗೌರವ ಅತಿಥಿಗಳಾದ ಪದ್ಮಪ್ರಸಾದ್ ಜೈನರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಗ್ರಹಿಕಾ ಸಾಮರ್ಥ್ಯ ಬಹಳ ಅವಶ್ಯಕತೆ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬಹಳ ಮುಖ್ಯ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಬಳಸಿಕೊಳ್ಳುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕೆಂದು ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ರವರು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಮಾಣವಚನವನ್ನು ಸ್ವೀಕರಿಸಿ ಉದ್ಘಾಟನಾ ಸಮಾರಂಭವನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಹರ್ಷಿತ ನೆರವೇರಿಸಿದರು. ಶಾಲಾ ನಾಯಕಿ ನಿರೀಕ್ಷಾ ಸ್ವಾಗತಿಸಿ, ಶಾಲಾ ನಾಯಕ ಶ್ರೀಕಾರ್ ಪಾಟೀಲ್ ವಂದಿಸಿದರು.

ಮೂಡುಬಿದರೆ : ವಿಚಾರ ವಿನಿಮಯ ಕಾರ್ಯಕ್ರಮ

Article Image

ಮೂಡುಬಿದರೆ : ವಿಚಾರ ವಿನಿಮಯ ಕಾರ್ಯಕ್ರಮ

ಮಂಗಳೂರು ತೋಟಗಾರಿಕಾ ಇಲಾಖೆ, ಮೂಡುಬಿದರೆ ಕೃಷಿ ವಿಚಾರ ವಿನಿಮಯ ಕೇಂದ್ರ ಮತ್ತು ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಜಂಟಿ ಆಶ್ರಯದಲ್ಲಿ ಜುಲೈ 19ರಂದು ಸಮಾಜ ಮಂದಿರದಲ್ಲಿ ಅನಾನಸು ಮತ್ತು ಡ್ರ್ಯಾಗನ್, ಹಣ್ಣುಗಳ ಉಪ ಉತ್ಪನ್ನ ಘಟಕ ಸ್ಥಾಪಿಸುವರೆ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಡಿ ಮಾತನಾಡಿ, ಪ್ರಾಣಿ ಪಕ್ಷಿಗಳು ಮನುಷ್ಯನಿಗಿಂತ ನೂರು ಪಟ್ಟು ಹೆಚ್ಚು ಸೂಕ್ಷ್ಮ ಸಂವೇದಿಗಳಾಗಿದ್ದು ಯಾವುದೇ ಪರಿಸರದ ವಿನಾಶದ ಬಗ್ಗೆ ಮೊದಲೇ ತಿಳಿದಿರುತ್ತವೆ. ತೋಟಗಾರಿಕಾ ಬೆಳೆಗಳನ್ನು ಬೆಳೆಯುವಾಗ ಆಯಾ ಮಣ್ಣಿನ ಗುಣಮಟ್ಟ, ಪೂರಕಾಂಶಗಳನ್ನು ಸಮಗ್ರವಾಗಿ ತಿಳಿದುಕೊಂಡು ಮುಂದುವರಿಯಬೇಕಾಗುತ್ತದೆ ಎಂದು ತಿಳಿಸಿ ತೋಟಗಾರಿಕಾ ಬೆಳೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಸಂವಾದದಲ್ಲಿ ಪ್ರಸ್ತುತಪಡಿಸಿದರು. ಹಣ್ಣಿನ ಯಾವುದೇ ಉಪ ಉತ್ಪನ್ನಗಳಾದ ಡ್ರೈ ಹಣ್ಣು, ಜ್ಯೂಸ್, ಇತ್ಯಾದಿ ತಯಾರಿಸುವಾಗ ಬಹಳ ಜಾಗರೂಕತೆಯನ್ನು ವಹಿಸಬೇಕಾಗುತ್ತದೆ. ಹಾಗೂ ಶೇಖರಣಾ ಜಾಗರೂಕತೆಗಳ ಬಗ್ಗೆ ಮೊದಲೇ ತಿಳುವಳಿಕೆಯನ್ನು ಹೊಂದಿರಬೇಕಾಗುತ್ತದೆ ಎಂದು ವಿವೇಕ್ ಸೋನ್ಸ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಉಪ್ಪಿನಂಗಡಿಯ ಜೆರೋಮ್ ಸಂವಾದದಲ್ಲಿ ಭಾಗವಹಿಸಿ ಸ್ಥಾಪಿಸುವ ಸಂಘಕ್ಕೇ ಬೆಳೆಗಾರರು ತಮ್ಮ ಉತ್ಪನ್ನಗಳನ್ನು ನೀಡಿ ಸಹಕಾರಿ ಸಂಘದ ಏಳಿಗೆಗೆ ಒಂದಾಗಿರಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್ ಮಾತನಾಡಿ ಅಮುಲ್ ನಂತಹ ಸಂಸ್ಕರಣ ಘಟಕವನ್ನು ಅನಾನಸ್ಸು ಹಣ್ಣಿಗಾಗಿ ಸ್ಥಾಪಿಸಿ ಮೂಡುಬಿದಿರೆಯ ಬ್ರ್ಯಾಂಡ್ ಉತ್ಪನ್ನವನ್ನು ಜಗತ್ತಿಗೆ ಪರಿಚಯಿಸುವ ಎಂದು ಕರೆಕೊಟ್ಟರು. ವೇದಿಕೆಯಲ್ಲಿ ರಾಜವರ್ಮ ಹಾಜರಿದ್ದರು. ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ಅಭಯ್ ಕುಮಾರ್ ಸ್ವಾಗತಿಸಿದರು. ಜಿನೇಂದ್ರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ದೀಪಕ್ ವಂದಿಸಿದರು.

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣವಾಚನ ಪ್ರವಚನ ಉದ್ಘಾಟನೆ

Article Image

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣವಾಚನ ಪ್ರವಚನ ಉದ್ಘಾಟನೆ

ಉಜಿರೆ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ, ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು, ನಿಟ್ಟೂರು ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಪ್ರವಚನಮಂಟಪದಲ್ಲಿ 45ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ ಎಂದು ಪುರಾಣದಿಂದ ತಿಳಿದು ಬಂದಿದೆ. ಪುರಾಣ ವಾಚನ-ಪ್ರವಚನವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸುವ ಸತ್ಸಂಗದಿಂದ ಪರಸ್ಪರ ಪ್ರೀತಿ-ವಿಶ್ವಾಸ, ಭ್ರಾತೃತ್ವ, ದಯೆ, ಅನುಕಂಪ ಮೊದಲಾದ ಮಾನವೀಯಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಅಧ್ಯಕ್ಷತೆ ವಹಿಸಿದ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, ಓದುವ ಹವ್ಯಾಸದಿಂದ ನಮ್ಮ ಜ್ಞಾನಕ್ಷಿತಿಜ ವಿಸ್ತಾರವಾಗುತ್ತದೆ. ಊರಿನವರು ಹಾಗೂ ಧರ್ಮಸ್ಥಳಕ್ಕೆ ಬರುವ ಭಕ್ತರು ಕೂಡಾ ಪುರಾಣ ವಾಚನ-ಪ್ರವಚನದ ಸದುಪಯೋಗ ಪಡೆದು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಸುಪ್ರಿಯಾಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ದೇವಳದ ಪಾರುಪತ್ಯಹಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾದ ಪುರಂದರ ಭಟ್, ಉದಯಕುಮಾರ್ ಜೈನ್, ಚಂದ್ರಕಾಂತ್, ಮಹಾವೀರ ಅಜ್ರಿ, ಸಂತೋಷ್, ಭುಜಬಲಿ ಧರ್ಮಸ್ಥಳ ಮೊದಲಾದವರು ಉಪಸ್ಥಿತರಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ನಿಶಾಂತ್ ಧನ್ಯವಾದವಿತ್ತರು. ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಬಗ್ಗೆ ಗಣಪತಿ ಪದ್ಯಾಣ ವಾಚನಕಾರರಾಗಿ ಹಾಗೂ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿ ಸಹಕರಿಸಿದರು. ಸೆಪ್ಟೆಂಬರ್ 16ರ ವರೆಗೆ ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6.30 ರಿಂದ ರಾತ್ರಿ 8.00ರ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

ಸಾಹಿತ್ಯ ಮತ್ತು ಮಾಧ್ಯಮ ಬರವಣಿಗೆ ಕುರಿತು ಅತಿಥಿ ಉಪನ್ಯಾಸ

Article Image

ಸಾಹಿತ್ಯ ಮತ್ತು ಮಾಧ್ಯಮ ಬರವಣಿಗೆ ಕುರಿತು ಅತಿಥಿ ಉಪನ್ಯಾಸ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕನ್ನಡ ವಿಭಾಗದ ವತಿಯಿಂದ ‘ಸಾಹಿತ್ಯ ಮತ್ತು ಮಾಧ್ಯಮ ಬರವಣಿಗೆ’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ಜು.11ರಂದು ನಡೆಯಿತು. ಪತ್ರಕರ್ತೆ ರಶ್ಮಿ ಯಾದವ್ ಕೆ. ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಸಾಹಿತ್ಯವನ್ನು ಓದಿದಾಗ ಭಾಷಾ ಕೌಶಲ್ಯ ಬೆಳೆಯುತ್ತದೆ. ಜೀವನ ಹಲವು ಬಗೆಯಲ್ಲಿ ಅರ್ಥವಾಗುತ್ತದೆ. ಯಾಕೆಂದರೆ ಸಾಹಿತ್ಯದಲ್ಲಿ ಜೀವನದ ಅನೇಕ ಅನುಭವಗಳು ಇರುತ್ತವೆ. ಅನುಭವಗಳು ಜೀವನವನ್ನು ರೂಪಿಸುತ್ತವೆ ಎಂದರು. “ಸಾಹಿತ್ಯದ ಓದು ನಮ್ಮನ್ನು ಕ್ರಿಯಾಶೀಲರನ್ನಾಗಿ ಮಾಡುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಸಾಹಿತ್ಯವನ್ನು ಓದಲೇಬೇಕು. ನಮ್ಮ ಮಾಧ್ಯಮಗಳ ಚರಿತ್ರೆ ನೋಡಿದರೆ ಅಲ್ಲಿ ಸಾಹಿತ್ಯ ಓದಿದ ಮಹಾನ್ ಪತ್ರಕರ್ತರನ್ನು ಕಾಣಬಹುದು. ನಾವು ಯಾವುದೇ ವಿಷಯವನ್ನು ಬರೆಯುವಾಗ ಕವಿಗಳ ಪದ್ಯಗಳನ್ನು, ಹೇಳಿಕೆ, ವಿಚಾರಗಳನ್ನು ಉಲ್ಲೇಖಿಸಿದರೆ ಆ ಬರಹಕ್ಕೆ ಹೆಚ್ಚು ತೂಕ ಬರುತ್ತದೆ. ಓದುಗರ ಮನಸ್ಸನ್ನು ಸೆಳೆಯುತ್ತದೆ. ಆದ್ದರಿಂದ ಸಾಹಿತ್ಯವನ್ನು ಅಧ್ಯಯನ ಮಾಡುವುದು ಕೇವಲ ಬರವಣಿಗೆಗೆ ಅಷ್ಟೇ ಅಲ್ಲದೆ ಬದುಕಿಗೂ ಉಪಯುಕ್ತ” ಎಂದರು. ಮಾಧ್ಯಮ ಬರವಣಿಗೆ ಸ್ವರೂಪ ಕುರಿತು ವಿದ್ಯಾರ್ಥಿಗಳು ಸಂವಾದ ನಡೆಸಿದರು. ಕಾರ್ಯಕ್ರಮ ಸಂಯೋಜಕ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ಉಪಸ್ಥಿತರಿದ್ದರು. ಐಚ್ಛಿಕ ಕನ್ನಡ ದ್ವಿತೀಯ ವರ್ಷದ ವಿದ್ಯಾರ್ಥಿ ರಂಗನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

Article Image

ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ, ಜು.12: ವಿಜ್ಞಾನ, ಕಲೆ, ಆಧ್ಯಾತ್ಮಿಕತೆ ಹೀಗೆ ಎಲ್ಲವನ್ನೂ ಒಳಗೊಂಡಿರುವ ಸಾಂಪ್ರದಾಯಿಕ ಭಾರತೀಯ ಜ್ಞಾನವ್ಯವಸ್ಥೆಯು ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗಬೇಕಿದೆ ಎಂದು ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಎನ್.ಸಿ.ಇ.ಆರ್.ಟಿ.)ಯ ಸಹಾಯಕ ಪ್ರಾಧ್ಯಾಪಕ, ಯುವ ವಿಜ್ಞಾನಿ ಡಾ. ಅರ್ಪಣ್ ಕುಮಾರ್ ನಾಯಕ್ ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗವು ಜು.12 ರಂದು ಆಯೋಜಿಸಿದ್ದ ‘ಸಾಂಪ್ರದಾಯಿಕ ಭಾರತೀಯ ಜ್ಞಾನ ವ್ಯವಸ್ಥೆ: ಒಂದು ವೈಜ್ಞಾನಿಕ ದೃಷ್ಟಿಕೋನ’ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಭಾರತೀಯ ಸಾಂಪ್ರದಾಯಿಕ ಜ್ಞಾನವ್ಯವಸ್ಥೆಯು ಬ್ರಿಟಿಷರ ಆಡಳಿತ ಪರಿಣಾಮವಾಗಿ ಎಲ್ಲಿಯೂ ನಿಖರವಾಗಿ ದಾಖಲಾಗಿಲ್ಲ. ಇಂದಿನ ಪಠ್ಯಪುಸ್ತಕಗಳು ಕೂಡ ಅವುಗಳ ಕುರಿತಾಗಿ ಸರಿಯಾದ ಮಾಹಿತಿ ನೀಡುತ್ತಿಲ್ಲ. ಸಾವಿರಾರು ವರ್ಷಗಳು ಕಳೆದರೂ ದೃಢವಾಗಿ ನಿಂತಿರುವ ಪುರಾತನ ಕಟ್ಟಡಗಳ ನಿರ್ಮಾಣ ಮಾಡಲು ಬಳಸಿರುವ ಸಾಂಪ್ರದಾಯಿಕ ಜ್ಞಾನವ್ಯವಸ್ಥೆಯು ಇಂದಿನ ಯುವಜನತೆಗೆ ಪ್ರೇರಣೆಯಾಗಬೇಕಿದೆ ಎಂದು ಅವರು ಹೇಳಿದರು. “ಆಧುನಿಕ ವಿಜ್ಞಾನಕ್ಕೂ ಸವಾಲೆಸೆಯುವ ಶಿಲ್ಪಕಲೆಗಳ ರಚನೆ ಪುರಾತನ ಕಾಲದಲ್ಲಿ ನಡೆದಿದೆ. ತಂತ್ರಜ್ಞಾನದ ಸಹಾಯವಿಲ್ಲದೆ ಕೇವಲ ಇತರರಿಂದ ಕೇಳಿ, ನಿರಂತರ ಅಭ್ಯಾಸ ಮತ್ತು ಪ್ರಯೋಗಗಳಿಂದಲೇ ನಿರ್ಮಾಣಗೊಂಡ ಅವುಗಳ ಹಿಂದೆ ಒಂದು ವೈಜ್ಞಾನಿಕ ದೃಷ್ಟಿಕೋನವಿದೆ. ಅದನ್ನು ಗುರುತಿಸುವಲ್ಲಿ ನಾವುಗಳು ಎಡವುತ್ತಿದ್ದೇವೆ. ಯಾವುದೇ ಕಲಿಕೆಯಿಲ್ಲದೆಯೇ ನಮ್ಮ ಪೂರ್ವಜರು ಗಣಿತಶಾಸ್ತ್ರ, ಭೌತಶಾಸ್ತ್ರ ಹಾಗೂ ಖಗೋಳ ಶಾಸ್ತ್ರಗಳನ್ನು ಪುರಾತನ ಕಟ್ಟಡಗಳ ನಿರ್ಮಾಣದಲ್ಲಿ ಬಳಸಿಕೊಂಡಿರುವ ರೀತಿ ನಿಜಕ್ಕೂ ಮೆಚ್ಚುವಂತದ್ದು. ಅವರು ವಿಜ್ಞಾನವನ್ನು ಬಳಸಿಕೊಂಡಿರುವ ರೀತಿ ಮತ್ತು ಅವರ ಕೆಲಸಗಳಲ್ಲಿದ್ದ ಪರಿಪೂರ್ಣತೆಯನ್ನು ನಾವು ಅಳವಡಿಸಿಕೊಳ್ಳಬೇಕಿದೆ” ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., ಉಪ ಪ್ರಾಂಶುಪಾಲೆ, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದ ಕುಮಾರಿ ಕೆ.ಪಿ. ಹಾಗೂ ವಿಭಾಗದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಜ್ಯೋತಿಕಾ ಕಾರ್ಯಕ್ರಮ ನಿರೂಪಿಸಿ, ಹೇಮಾವತಿ ವಂದಿಸಿದರು.

ಎಕ್ಸಲೆಂಟ್ ಮೂಡುಬಿದಿರೆ: ವಾಣಿಜ್ಯ ಸಂಘದ ಉದ್ಘಾಟನೆ

Article Image

ಎಕ್ಸಲೆಂಟ್ ಮೂಡುಬಿದಿರೆ: ವಾಣಿಜ್ಯ ಸಂಘದ ಉದ್ಘಾಟನೆ

ಮೂಡುಬಿದಿರೆ: ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ಯಾಲಾಕ್ಸಿ ಸ್ಪೋರ್ಟ್ಸ್‌ ವರ್ಲ್ಡ್‌ನ ಎಂಡಿ, ಜೆಸಿಐ ರಾಷ್ಟ್ರೀಯ ತರಬೇತುದಾರರಾದ ಸದಾನಂದ ನಾವಡ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ನಾನು ತರಗತಿಯಲ್ಲಿ ಕಲಿತ ಪಾಠ ನನ್ನ ಜೀವನದಲ್ಲಿ ಉಪಯೋಗ ಆಗಲಿಲ್ಲ. ಆದರೆ ನಾನು ಭಾಗವಹಿಸಿದ ಪಠ್ಯೇತರ ಚಟುವಟಿಗಳು ನನ್ನ ವ್ಯಕ್ತಿತ್ವವನ್ನು ರೂಪಿಸಿತು. ಇದು ನನ್ನ ಉದ್ಯಮವನ್ನು ಬೆಳೆಸುವಲ್ಲಿ ಸಹಕಾರಿಯಾಯಿತು. ವಾಣಿಜ್ಯ ವಿಭಾಗದ ಚಟುವಟಿಕೆಗಳನ್ನು ಕ0ಡಾಗ ಖಂಡಿತವಾಗಿ ನಿಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಪಡೆಯಲು ಇದು ಸಹಕಾರಿಯಾಗುತ್ತದೆ ಎಂದರು. ಜಗತ್ತಿನ ಶೇಕಡಾ ತೊಂಭತ್ತೊಂದರಷ್ಟು ಜನರು ಉದ್ಯೋಗಿ ಅಥವಾ ಸ್ವಉದ್ಯೋಗಿಗಳಾಗಿರುತ್ತಾರೆ. ಉದ್ಯಮವನ್ನು ನಡೆಸಬೇಕಾದರೆ ರಿಸ್ಕ್ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಯಶಸ್ಸು ಕೇವಲ ರಿಸ್ಕ್ ತೆಗೆದುಕೊಳ್ಳುವವರ ಪಾಲಾಗಿದೆ ಎಂದರು. ಜೀವನದಲ್ಲಿ ಪ್ರಗತಿಯನ್ನು ಕಾಣಬೇಕಾದರೆ ತನ್ನ ತಪ್ಪನ್ನು ತಿದ್ದಿಕೊಂಡು ಮುನ್ನಡೆಯುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಉದ್ಯೋಗದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಕಾಲದೊಂದಿಗೆ ಬದಲಾಗಲು ಬಯಸದ ಅನೇಕ ಉದ್ದಿಮೆಗಳು ಇಂದು ವಿಫಲವಾಗಿವೆ. ತನ್ನ ಯಶಸ್ಸು ಅಥವಾ ಸೋಲಿಗೆ ತನ್ನ ಮನೋಭಾವವೇ ಕಾರಣ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ವಾಣಿಜ್ಯ ವಿಭಾಗ ಸಂಸ್ಥೆಯ ಅನೇಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊ0ಡಿದೆ. ಈ ಶೈಕ್ಷಣಿಕ ವರ್ಷದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯನ್ನು ರೂಪಿಸಿಕೊ0ಡಿದೆ. ಪ್ರತಿಯೊಂದು ಕಾರ್ಯಕ್ರಮವೂ ವಿದ್ಯಾರ್ಥಿಗಳ ಕೌಶಲವನ್ನು ಅಭಿವೃದ್ಧಿಪಡಿಸುವಲ್ಲಿ ಸಹಕಾರಿಯಾಗಿದೆ. ಈ ಎಲ್ಲಾ ಪಠ್ಯೇತರ ಚಟುವಟಿಕೆಗಳ ಹೊರತಾಗಿಯೂ ಶೈಕ್ಷಣಿಕವಾಗಿಯೂ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆಯಲ್ಲಿ ಅನೇಕ ಸ್ಥಾನಗಳನ್ನು ಪಡೆದುಕೊಳ್ಳುತ್ತಾ ಇದೆ. ಇಂಥಹ ಚಟುವಟಿಕೆಗಳು ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿದೆ ಎನ್ನುವುದಕ್ಕೆ ಈ ಫಲಿತಾಂಶಗಳೇ ಸಾಕ್ಷಿ ಎಂದು ಪ್ರಸಕ್ತ ಶೈಕ್ಷಣಿಕ ವರ್ಷದ ವಾಣಿಜ್ಯ ವಿಭಾಗದ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಅತಿಥಿಯಾಗಿ ಉಪಸ್ಥಿತರಿದ್ದ ಜೋರಮ್ಮಾ ಹೋಂ ಪ್ರೊಡಕ್ಟ್ಸ್‌ನ ಸ್ಥಾಪಕ ಹಾಗೂ ಪೂರ್ವ ವಿದ್ಯಾರ್ಥಿ ಶೇಖ್ ಸಾಹಿಲ್ ಮಾತನಾಡುತ್ತಾ ತಾನು ಉದ್ಯಮವನ್ನು ಆರಂಭಿಸಬೇಕಾದರೆ ಇಲ್ಲಿನ ವಾಣಿಜ್ಯ ವಿಭಾಗದ ಚಟುವಟಿಕೆಗಳೇ ಕಾರಣ. ಒಂದು ಉತ್ಪನ್ನದ ಬಗ್ಗೆ ಪ್ರದರ್ಶಿಸುವ ಸ್ಪರ್ಧೆ ಮತ್ತು ಇನ್ನಿತರ ಚಟುವಟಿಕೆಗಳು ನನ್ನಲ್ಲಿ ಆತ್ಮ ವಿಶ್ವಾಸವನ್ನು ಬೆಳೆಸಿತು ಮತ್ತು ಉದ್ಯಮವನ್ನು ಆರಂಭಿಸುವ ಯೋಚನೆಯನ್ನು ನೀಡಿತು. ಇಲ್ಲಿ ನಡೆಯುವ ಚಟುವಟಿಕೆಗಳ ಸ0ಪೂರ್ಣ ಲಾಭವನ್ನು ನೀವು ಪಡೆದುಕೊಂಡರೆ ಖ0ಡಿತ ನೀವು ಕೂಡ ಯಶಸ್ವಿ ಉದ್ಯಮಿಗಳಾಗಿ ರೂಪುಗೊಳ್ಳುವಿದರಲ್ಲಿ ಸಂದೇಹವಿಲ್ಲ. ಉದ್ಯಮದಲ್ಲಿ ಏರಿಳಿತಗಳು ಸರ್ವೇ ಸಾಮಾನ್ಯ. ಆದರೆ ಅವನ್ನು ಮೆಟ್ಟಿ ನಿಂತು ತಾಳ್ಮೆಯಿಂದ ನಿಮ್ಮ ಕರ್ತವ್ಯವನ್ನು ನೀವು ಮಾಡಿದರೆ ಯಶಸ್ಸು ಖಂಡಿತ ನಿಮಗೊಲಿಯುತ್ತದೆ ಎಂದರು. ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾ ವಾಣಿಜ್ಯ ವಿಭಾಗವು ಸ0ಸ್ಥೆಯ ಹೃದಯಬಡಿತವಾಗಿದೆ. ವರ್ಷದಿಂದ ವರ್ಷಕ್ಕೆ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬ0ದಿದೆ. ನಮ್ಮ ವಿದ್ಯಾರ್ಥಿಗಳು ಇಲ್ಲಿ ನಡೆಯುತ್ತಿರುವ ಚಟುವಟಿಗಳ ಲಾಭವನ್ನು ಪಡೆದುಕೊ0ಡು ಬೆಳೆದ ರೀತಿ ತು0ಬಾ ಸಂತಸ ತಂದಿದೆ. ಸ0ಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅನೇಕ ಅವಕಾಶಗಳಿವೆ. ಅದರ ಸದುಪಯೋಗವನ್ನು ಪಡೆದು ಜೀವನದಲ್ಲಿ ಸಾರ್ಥಕತೆಯನ್ನು ಪಡೆಯುವಂತಾಗಲಿ ಎಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಸುವಿತ್ ಭಂಡಾರಿ ಸ್ವಾಗತಿಸಿದರು. ವಾಣಿಜ್ಯ ಸಂಘದ ಅಧ್ಯಕ್ಷೆ ಶ್ರಾವಣಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿ ಸದಾನಂದ ನಾವಡರನ್ನು ನಿಶ್ಚಯ ಪರಿಚಯಿಸಿದರು. ಅತಿಥಿ ಶೇಖ್ ಸಾಹಿಲ್ ರನ್ನು ಸುಹಾನ ಸಚಿನ್ ಪರಿಚಯಿಸಿದರು. ಶಮಂತ್ ಕೆ ಎಂ ವಂದಿಸಿದರು.

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Article Image

ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

ಉಜಿರೆ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ. ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ”ಯ ವಾಚನ-ಪ್ರವಚನ ನಡೆಯುತ್ತದೆ. ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು. ಜುಲೈ 16 ರಂದು ಬುಧವಾರ ಮತ್ತು 17 ರಂದು ಗುರುವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು. ಉದ್ಘಾಟನಾ ಸಮಾರಂಭ: ಜುಲೈ 16 ರಂದು ಬುಧವಾರ ಸಂಜೆ 5 ಗಂಟೆಗೆ ಯಕ್ಷಗಾನ ಬಯಲಾಟ ಅಕಾಡೆಮಿಯ “ಯಕ್ಷಸಿರಿ” ಪ್ರಶಸ್ತಿ ಪುರಸ್ಕೃತರಾದ ಹಾಗೂ ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಅವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಶಿಕ್ಷಕ ಪಾಲಕ ವಿದ್ಯಾರ್ಥಿಗಳ ಸಭೆ 2025

Article Image

ಶಿಕ್ಷಕ ಪಾಲಕ ವಿದ್ಯಾರ್ಥಿಗಳ ಸಭೆ 2025

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2025ರ ಶೈಕ್ಷಣಿಕ ಸಾಲಿನ ಸ್ಥಳೀಯ ವಿದ್ಯಾರ್ಥಿಗಳ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆಯನ್ನು ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇದು ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ದಿಕ್ಕನ್ನು ತೀರ್ಮಾನಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರವನ್ನು ಗುರುತಿಸಿ, ಗುರಿ ಮುಟ್ಟುವೆಡೆಗೆ ಶ್ರಮಿಸಬೇಕು. ಈ ಪ್ರಯಾಣದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರವು ಬಹಳ ಮಹತ್ವದ್ದಾಗಿದೆ ಎಂದರು. ಅಲ್ಲದೆ, ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನದೇ ಆದ ಆಸಕ್ತಿಯ ಕ್ಷೇತ್ರದಲ್ಲಿ ಬೆಳೆಯುತ್ತಾನೆ. ಹಾಗಾಗಿ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ಅಳೆಯುವುದು ಸೂಕ್ತವಲ್ಲ ಎಂದರು. ಮನಸ್ಸಿನ ಸಮತೋಲನ ಅಗತ್ಯ. "ಬಾಲ್ಯಾವಸ್ಥೆಗಿಂತ ಪ್ರೌಢಾವಸ್ಥೆ ವಿಭಿನ್ನ ಮನೋಧರ್ಮದಿಂದ ಕೂಡಿರುತ್ತದೆ. ದೈಹಿಕವಾಗಿ ಶಕ್ತಿಶಾಲಿಯಾದರೂ, ಮನಸ್ಸು ಚಂಚಲವಾಗಿರುತ್ತದೆ. ಆದ್ದರಿಂದ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ. ಅಧ್ಯಯನ ಸಮಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ, ಪ್ರತಿಯೊಂದು ವಿಷಯಕ್ಕೂ ಸಮಾನ ಮಹತ್ವ ನೀಡಿ ಎಂದರು. ಶಿಸ್ತು ಮತ್ತು ಸಮಯದ ಮೌಲ್ಯ ಅರಿಯಿರಿ ಆರೋಗ್ಯದ ವಿಷಯದಲ್ಲೂ ಜಾಗೃತಿ ಅಗತ್ಯ. ಕಳೆದುಹೋದ ಸಮಯ ಮರಳದು. ಆದ್ದರಿಂದ ಸಮಯದ ಮೌಲ್ಯವನ್ನು ಅರ್ಥಮಾಡಿಕೊಳ್ಳಿ ಮತ್ತು ಶಿಸ್ತುಬದ್ಧ ಜೀವನ ನಡೆಸಿರಿ,” ಎಂದು ಸಲಹೆ ನೀಡಿದರು. ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್., ಸಂಯೋಜಕಿ ವಿದ್ಯಾ ಇದ್ದರು. ಕಾರ್ಯಕ್ರಮವನ್ನು ಇಂಗ್ಲಿಷ್ ಉಪನ್ಯಾಸಕ ರಾಜೇಶ್ ಡಿಸೋಜ ನಿರೂಪಿಸಿದರು.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಮತ್ತು ಉಚಿತ ಅರೋಗ್ಯ ತಪಾಸಣಾ ಶಿಬಿರ

Article Image

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಮತ್ತು ಉಚಿತ ಅರೋಗ್ಯ ತಪಾಸಣಾ ಶಿಬಿರ

ಮಡಂತ್ಯಾರು: 2024-2025ನೇ ಸಾಲಿನ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಮತ್ತು ಉಚಿತ ಅರೋಗ್ಯ ತಪಾಸಣಾ ಶಿಬಿರವು ಜು.13ರಂದು ಪೂರ್ವಾಹ್ನ ಗಂಟೆ 11.00ಕ್ಕೆ ಸರಿಯಾಗಿ ಸಂಘದ ಅಧ್ಯಕ್ಷ ಜೋಯೆಲ್ ಗಾಡ್ ಫ್ರೀ ಮೆಂಡೋನ್ಸ ಅವರ ಅಧ್ಯಕ್ಷತೆಯಲ್ಲಿ, ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಜರಗಲಿದೆ. ಮಹಾಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ, ಕ್ರೀಡಾ ಸಾಧಕರಿಗೆ, ಕೃಷಿ ಸಾಧನೆ ಮಾಡಿದ ಕೃಷಿಕರಿಗೆ, ಪ್ರಸ್ತುತ ವರ್ಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಹಾಗೂ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 'ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಫಾ. ಎಲ್.ಎಮ್. ಪಿಂಟೋ ಆಸ್ಪತ್ರೆ, ಬದ್ಯಾರು ಮತ್ತು ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ರಾಷ್ಟ್ರೀಯ ಸೇವಾ ಯೋಜನೆ (N.S.S.) ಮತ್ತು ಯೂತ್ ರಡ್ ಕ್ರಾಸ್ (Y.R.C) ಸಹಯೋಗದೊಂದಿಗೆ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರವು ಬೆಳಿಗ್ಗೆ 9ರಿಂದ ನಡೆಯಲಿದೆ. ಲಭ್ಯವಿರುವ ವೈದ್ಯರ ಸೇವೆ ಮೆಡಿಸಿನ್ ವಿಭಾಗ : ಡಾ. ಜೆಫ್ರಿ ಲೂವಿಸ್ ಮೂಳೆ ಚಿಕಿತ್ಸಾ ವಿಭಾಗ : ಡಾ. ವಿಲ್ಕರ್ ಲಿಯಾಂಡರ್ ಕುಟಿನ್ಹ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ: ಡಾ.ಜ್ಞಾನೇಶ್ವರಿ ಎಂಡಿ, ಒಜಿಬಿ ಶಸ್ತ್ರ ಚಿಕಿತ್ಸಾ ಹಾಗೂ ಕ್ಯಾನ್ಸರ್ ಚಿಕಿತ್ಸಾ ವಿಭಾಗ: ಡಾ. ಎಲ್ಲೋಯ್ ಸಲ್ದಾನ್ಹ ಕಿವಿ, ಮೂಗು, ಗಂಟಲು ಚಿಕಿತ್ಸಾ ವಿಭಾಗ: ಡಾ. ದೇವಶ್ಯ ಮಕ್ಕಳ ಚಿಕಿತ್ಸಾ ವಿಭಾಗ: ಡಾ. ಜೇಸನ್ ಡಿಸೋಜ ಕಣ್ಣಿನ ಚಿಕಿತ್ಸಾ ವಿಭಾಗ: ಡಾ. ಮಹೇಶ್ ಚರ್ಮರೋಗ ಚಿಕಿತ್ಸಾ ವಿಭಾಗ: ಡಾ. ನಾಗಭೂಷನ್, ಮನೋರೋಗ ಚಿಕಿತ್ಸಾ ವಿಭಾಗ: ಡಾ. ಕ್ಲಿಂಟನ್ ಕ್ಯಾಸ್ಟಲಿನೋ ಸೇವೆ ನೀಡಲಿದ್ದಾರೆ. ಲಭ್ಯವಿರುವ ಸೇವೆಗಳು: ಉಚಿತ ವೈದ್ಯರ ಸೇವೆ, ಮಹಿಳೆಯರಿಗೆ ಉಚಿತ ಪ್ಯಾಪ್ ಸ್ಮಿಯರ್ ಪರೀಕ್ಷೆ, ಉಚಿತ ಕ್ಯಾನ್ಸರ್ ತಪಾಸಣಾ, ಸ್ತನ ಪರೀಕ್ಷೆ, ಉಚಿತ ಫಾ. ಎಲ್.ಎಮ್. ಪಿಂಟೋ ಹೆಲ್ತ್ ಕರ‍್ಡ್, ಉಚಿತ ಮಧುಮೇಹ ತಪಾಸಣೆ, ಉಚಿತ ಇಸಿಜಿ (ಅಗತ್ಯವಿರುವವರಿಗೆ ಮಾತ್ರ), ಉಚಿತ ಔಷಧಿ, 50% ಹರ‍್ಮೊನ್ ರಕ್ತ ಪರೀಕ್ಷೆ, 50% ವಿಟಮಿನ್ 'ಡಿ'2 ಮತ್ತು ವಿಟಮಿನ್ ಬಿ 12, 50% ಹಿಮೋಗ್ಲೋಬಿನ್ ಪರೀಕ್ಷೆ, ಉಚಿತ ಕಣ್ಣು ತಪಾಸಣಾ ಶಿಬಿರ, ಶಿಬಿರ ಪ್ರಯುಕ್ತ ರೂ.1500/- ಬೆಲೆಯ ಕನ್ನಡಕಗಳನ್ನು 50% ರಿಯಾಯಿತಿ ದರದಲ್ಲಿ ರೂ. 750/-ಗೆ ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ಕನ್ನಡಕವನ್ನು (ಐದು ದಿನಗಳಲ್ಲಿ) ವಿತರಿಸಲಾಗುವುದು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ: ಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಜು.11ರಂದು ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು. ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ, ತಾ.ಪಂ. ಬೆಳ್ತಂಗಡಿ, ಗ್ರಾ.ಪಂ. ಉಜಿರೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಎಸ್.ಡಿ.ಎಂ. ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. “ಚೀನಾ ನಮ್ಮ ದೇಶಕ್ಕಿಂತ ಎರಡೂವರೆ ಪಟ್ಟು ದೊಡ್ಡ ದೇಶ. ಆದರೆ ಅದನ್ನು ಹಿಂದೆ ಹಾಕಿ ನಾವು ಮುಂದೆ ಬಂದಿದ್ದೇವೆ. ವಿಶ್ವ ಜನಸಂಖ್ಯೆ 820 ಕೋಟಿಯಲ್ಲಿ ಭಾರತದ ಜನಸಂಖ್ಯೆ 146 ಕೋಟಿ ಆಗಿದೆ. ಇದು ಹೆಮ್ಮೆ ಪಡುವ, ಸಂಭ್ರಮಿಸುವ ಸಂಗತಿಯಲ್ಲ. ಹೆಚ್ಚುತ್ತಿರುವ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವುದು ಅನಿವಾರ್ಯ” ಎಂದು ಅವರು ಹೇಳಿದರು. ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಪನ್ಮೂಲ ಕೂಡ ಹೆಚ್ಚು ಬೇಕಾಗುತ್ತದೆ. ಭೂಮಿಯಿಂದ ಪರಿಸರದಿಂದ ಸಂಪನ್ಮೂಲಗಳನ್ನು ಪಡೆಯುವ ಮಾನವ ಅರಣ್ಯನಾಶ ಮತ್ತು ಗಣಿಗಾರಿಕೆಯಲ್ಲಿ ತೊಡಗಿದ್ದಾನೆ. ಗಣಿಗಾರಿಕೆ ಆದಂತಹ ಜಾಗದಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇದರಿಂದ ಆಹಾರ ಉತ್ಪತ್ತಿಯೂ ಕಡಿಮೆಯಾಗುತ್ತದೆ‌ ಎಂದರು. ಪ್ರಾಣಿಗಳ ವಾಸಸ್ಥಳವನ್ನು ನಾವು ಅತಿಕ್ರಮಿಸಿರುವುದರಿಂದ ಅವುಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಪ್ರವಾಹದಿಂದ ಸಂಪನ್ಮೂಲಗಳು ನಾಶವಾಗುತ್ತಿವೆ. ಮನುಷ್ಯನ ಆಸೆಗಳಿಗೆ ಕೊನೆಯಿಲ್ಲದಂತಾಗಿದೆ. ಯುದ್ಧಗಳಲ್ಲಿ ಬಾಂಬ್ ಬಳಕೆಯಿಂದ ಭೂಮಿ ತನ್ನ ಫಲವಂತಿಕೆ ಕಳೆದುಕೊಳ್ಳುತ್ತಿದೆ ಎಂದರು. ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ., “ಜನಸಂಖ್ಯೆ ಹೆಚ್ಚಳ ಸಮಸ್ಯೆಯೇ ಅಲ್ಲ ಆದರೆ, ಜನರಿಗೆ ಬೇಕಾದ ವ್ಯವಸ್ಥೆ ಆಗದೆ ಇರುವುದೇ ಸಮಸ್ಯೆ. ಹಾಗಾಗಿ ಈ ಕುರಿತು ಅರಿವು ಮೂಡಿಸುವುದು ಅಗತ್ಯ” ಎಂದು ಅಭಿಪ್ರಾಯಪಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಮಾತನಾಡಿ, ಮರಣ ಸಂಖ್ಯೆ ಕಡಿಮೆ ಆಗಿರುವುದರ ಜೊತೆಗೆ ಜನನ ಸಂಖ್ಯೆ ಹೆಚ್ಚುತ್ತಿರುವುದರಿಂದ ಜನಸಂಖ್ಯೆ ಹೆಚ್ಚಳ ಕಂಡಿದ್ದು, ಜನಸಂಖ್ಯೆ ಸ್ಫೋಟಕ್ಕೆ ಕಾರಣವಾಗಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಆರ್.ಬಿ., ಪ್ರಕೃತಿಗೆ ವಿರುದ್ಧವಾಗಿ ಮನುಷ್ಯನ ವಿವಿಧ ಚಟುವಟಿಕೆಗಳಿಗೆ ಪ್ರತಿಯಾಗಿ ಇಂದು ಪ್ರಕೃತಿಯು ಮನುಷ್ಯನ ವಿರುದ್ಧ ಕ್ರಮ ಕೈಗೊಂಡಿದೆ ಎಂದು ವಿಶ್ಲೇಷಿಸಿದರು. ತಾಯಿ-ಮಗುವಿನ ಆರೋಗ್ಯಕ್ಕೆ ಬಹುವಾಗಿ ಪ್ರಾಮುಖ್ಯ ನೀಡಬೇಕು. ಕುಟುಂಬ ಯೋಜನೆ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಶಾ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಪ್ರಹಸನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹೆಚ್ಚು ಫಲಾನುಭವಿಗಳನ್ನು ಆರೋಗ್ಯ ಕೇಂದ್ರಗಳಿಗೆ ಕರೆತರುವಲ್ಲಿ ಯಶಸ್ವಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯಕರ್ತರನ್ನು ಗೌರವಿಸಲಾಯಿತು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬೆಳ್ತಂಗಡಿ ತಾ.ಸಾ. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮೇಲ್ವಿಚಾರಕಿ ಲೀಲಾವತಿ, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನಿತಾ, ತಾಲೂಕು ಆರೋಗ್ಯ ವಿಭಾಗದ ಸಿಬ್ಬಂದಿ ಅಮ್ಮಿ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಜೇಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ವಂದಿಸಿದರು.

ಉಜಿರೆ ಎಸ್‌.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ

Article Image

ಉಜಿರೆ ಎಸ್‌.ಡಿ.ಎಂ. ಎಜುಕೇಶನಲ್ ಟ್ರಸ್ಟ್ ನಿಂದ ಪ್ರಸಕ್ತ ವರ್ಷದ ವಿದ್ಯಾರ್ಥಿವೇತನ ಯೋಜನೆಗೆ ಚಾಲನೆ

ಉಜಿರೆ, ಜು.10: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಟ್ರಸ್ಟ್ 2025ನೇ ಶೈಕ್ಷಣಿಕ ವರ್ಷದಲ್ಲಿ ಮೀಸಲಿಟ್ಟಿರುವ ಒಟ್ಟು 2.50 ಕೋಟಿ ರೂ. ಮೊತ್ತದ ವಿದ್ಯಾರ್ಥಿವೇತನ ವಿತರಣೆ ಪ್ರಕ್ರಿಯೆಗೆ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಇಂದು (ಜು.10) ಸಾಂಕೇತಿಕ ಚಾಲನೆ ನೀಡಿದರು. ಉಜಿರೆಯ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ 2 ಸಾವಿರ ವಿದ್ಯಾರ್ಥಿಗಳನ್ನು ಒಳಗೊಳ್ಳುವ ವಿದ್ಯಾರ್ಥಿವೇತನ ಯೋಜನೆಯ ಮೊದಲ ಕಂತಿನ ಚೆಕ್ ವಿತರಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದಿರುವ ಅರ್ಹ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸಿ ಮನೆಯನ್ನು ಬೆಳಗಬೇಕು. ಹಣ ಸಂಪಾದನೆಗೆ ಇರುವ ಶ್ರಮವನ್ನು ಅರಿಯಬೇಕು. ಸಮಾಜದಲ್ಲಿ ಪ್ರಕಾಶಿಸುವ ವ್ಯಕ್ತಿತ್ವಗಳಾಗಿ ಬೆಳೆಯಬೇಕು ಎಂದು ಆಶಯ ವ್ಯಕ್ತಪಡಿಸಿದರು. ಎಸ್.ಡಿ.ಎಂ. ಸಂಸ್ಥೆಗಳ 1,450 ವಿದ್ಯಾರ್ಥಿಗಳ ಜೊತೆಗೆ ಇತರ ಸಂಸ್ಥೆಗಳ ವಿದ್ಯಾರ್ಥಿಗಳನ್ನೂ ಈ ವಿದ್ಯಾರ್ಥಿವೇತನ ಯೋಜನೆ ಒಳಗೊಂಡಿದೆ ಎಂದ ಅವರು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಸ್.ಡಿ.ಎಂ. ಕಾಲೇಜು, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಇತ್ಯಾದಿ ಸಂಸ್ಥೆಗಳ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದ ಬದ್ಧತೆ ಹಾಗೂ ಕಾಳಜಿ ಕುರಿತು ವಿವರಿಸಿದರು. ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, “ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳವು ಶ್ರೇಷ್ಠ, ಮೌಲ್ಯಯುತ ಶಿಕ್ಷಣ ಒದಗಿಸುತ್ತಿದೆ. 1985ರಿಂದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ ಮೂಲಕ ನಮ್ಮ ಸಂಸ್ಥೆಗಳ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡುತ್ತಿದ್ದು, ಆ ಮೂಲಕ ವಿದ್ಯಾದಾನದ ಕ್ರಾಂತಿ ನಡೆಯುತ್ತಿದೆ” ಎಂದರು. ಎಸ್ ಡಿ ಎಂ ಎಜುಕೇಶನಲ್ ಸೊಸೈಟಿಯ ಇನ್ನೋರ್ವ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಎಸ್ ಡಿ ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯಾ ಬಿ.ಪಿ. ಉಪಸ್ಥಿತರಿದ್ದರು. ಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಂದಿಸಿದರು. ಡಾ. ನೆಫೀಸತ್ ಪಿ. ನಿರೂಪಿಸಿದರು. ವೃತ್ತಿಪರ ಮತ್ತು ಸ್ನಾತಕೋತ್ತರ ಕೋರ್ಸಿಗೆ ಅನುಗುಣವಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ 10 ತಿಂಗಳ ಕಾಲ 1,000 ಮತ್ತು 1,250 ರೂ.ಗಳನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಲಾಗುತ್ತದೆ.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ಸಿರಿ ಮಿಲ್ಲೆಟ್ ಕೆಫೆ ಧಾರವಾಡದಲ್ಲಿ ಶುಭಾರಂಭ

Article Image

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ಸಿರಿ ಮಿಲ್ಲೆಟ್ ಕೆಫೆ ಧಾರವಾಡದಲ್ಲಿ ಶುಭಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತೀ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಪ್ರಪ್ರಥಮವಾಗಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ನೂತನ ಸಿರಿ ಮಿಲ್ಲೆಟ್ ಕೆಫೆ’ಯು ಜು. 04ರಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಸಿರಿ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಪರಮಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ವಿನೂತನವಾದ ಸಿರಿ ಮಿಲ್ಲೆಟ್ ಕೆಫೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಪೂಜ್ಯರು ಯುವ ಪೀಳಿಗೆಗೆ ಆರೋಗ್ಯಕರವಾಗಿ ಜೀವಿಸಲು ಅವಶ್ಯಕವಾಗಿರುವ ಪೌಷ್ಟಿಕಾಂಶಯುಕ್ತ ಆಹಾರೋತ್ಪನ್ನಗಳು ದೊರೆಯಬೇಕು ಎನ್ನುವ ಉದ್ದೇಶದಿಂದ ಈ ವಿನೂತನ ಸಿರಿ ಮಿಲ್ಲೆಟ್ ಕೆಫೆಯನ್ನು ಎಸ್.ಡಿ.ಎಂ ಆಸ್ಪತ್ರೆಯ ಆವರಣದಲ್ಲಿ ತೆರೆಯಲಾಗಿದೆ. ಇಲ್ಲಿ ಮಧುಮೇಹ, ಬೊಜ್ಜು ನಿವಾರಕ, ಉತ್ತಮ ಜೀರ್ಣಕ್ರಿಯೆಗೆ ಸಹಕಾರಿಯಾಗುವ ಹಾಗೂ ಹೃದಯ ಸಂಬಂಧಿ ಕಾಯಿಲೆಗಳನ್ನು ನಿಯಂತ್ರಿಸುವ ಸಿರಿಧಾನ್ಯ ಉತ್ಪನ್ನಗಳನ್ನು ಬಳಸಿ ಶುಚಿ-ರುಚಿಯಾದ ಆರೊಗ್ಯಕರವಾದ ಖಾದ್ಯಗಳನ್ನು ತಯಾರಿಸಿ ಗ್ರಾಹಕರಿಗೆ ನೀಡುವ ದೃಷ್ಟಿಯಿಂದ ಈ ವಿನೂತನ ಸಿರಿ ಮಿಲ್ಲೆಟ್ ಕೆಫೆಯನ್ನು ಆರಂಭಿಸಿದ್ದೇವೆ. ಅಲ್ಲದೆ ಈ ವಿನೂತನ ಸಿರಿ ಮಿಲ್ಲೆಟ್ ಕೆಫೆಯಲ್ಲಿ ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳಾದ ಮಿಲ್ಲೆಟ್ ಕುಕ್ಕೀಸ್, ಮಿಲ್ಲೆಟ್ ರಸ್ಕ್, ಡೋನಟ್, ರಿಬ್ಬನ್ ಪಕೋಡಾ, ನವಣೆ ಲಡ್ಡು, ಬೆಳಗ್ಗಿನ ಉಪಹಾರಕ್ಕೆ ಯೋಗ್ಯವಾಗಿರುವ ಬರಗು ದೋಸೆ, ಮಿಲ್ಲೆಟ್ ಉಪ್ಮ, ಪೋಹ, ವರ್ಮಸಲ್ಲಿ, ಮಧ್ಯಾಹ್ನದ ಭೋಜನಕ್ಕೆ ಸಿರಿಧಾನ್ಯಗಳ ಬಿಸಿಬೇಳೆ ಬಾತ್, ತಾಳಿಪಟ್ಟು, ದಾಲ್ ಕಿಚಡಿ, ಮಿಲ್ಲೆಟ್ ಮೊಸರನ್ನ, ಜೋಳ ರೋಟ್ಟಿ, ಸಂಜೆಗೆ ಸ್ನಾಕ್ಸ್ ಐಟಮ್ ಗಳಾದ ನ್ಯೂಟ್ರಿ ಅಟ್ಟ ಆನಿಯನ್ ಪಕೋಡಾ, ವೆಜ್ ಸ್ಯಾಂಡ್ ವಿಚ್, ಜೋಳ ವಡ ಇತ್ಯಾದಿ ಉತ್ತಮ ಗುಣಮಟ್ಟವುಳ್ಳ ಬಿಸಿ ಬಿಸಿ ಖಾದ್ಯಗಳು ಅತೀ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಎಲ್ಲರೂ ಸಿರಿ ಮಿಲ್ಲೆಟ್ ಕೆಫೆಗೆ ಭೇಟಿ ನೀಡಿ, ಇಲ್ಲಿ ದೊರೆಯುವ ವಿವಿಧ ಮಿಲ್ಲೆಟ್ ಖಾದ್ಯಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ| ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಪದ್ಮಲತಾ ನಿರಂಜನ್ ದಂಪತಿಗಳು ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧಾರವಾಡ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಜೀವಂಧರ್ ಕುಮಾರ್, ಹಣಕಾಸು ನಿರ್ದೇಶಕರಾದ ವಿ.ಜಿ.ಪ್ರಭು, ಧಾರವಾಡ ಎಸ್.ಡಿ.ಎಂ ಡೆಂಟಲ್ ಹಾಸ್ಪಿಟಲ್ ಪಿ.ಆರ್.ಒ. ಶ್ರೀ ನಾಗ್ ಕುಮಾರ್, ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿ.ಸಿ.ಒ ಗಣೇಶ್ ಪ್ರಸಾದ್ ಎಸ್ ಕಾಮತ್, ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವೃತ್ತಿಯಲ್ಲಿ ಆತ್ಮವಿಶ್ವಾಸ ಮತ್ತು ಶಿಸ್ತು ಮುಖ್ಯ

Article Image

ವೃತ್ತಿಯಲ್ಲಿ ಆತ್ಮವಿಶ್ವಾಸ ಮತ್ತು ಶಿಸ್ತು ಮುಖ್ಯ

ಉಜಿರೆ: ವೃತ್ತಿಯಲ್ಲಿ ಆತ್ಮವಿಶ್ವಾಸ ಮತ್ತು ಶಿಸ್ತು ಬಹುಮುಖ್ಯವಾಗಿದೆ. ಮಹಿಳೆಯರು ಸಮತೋಲನದೊಂದಿಗೆ ತಾಳ್ಮೆಯಿಂದ ಕೆಲಸ ಮಾಡಬೇಕಾಗುತ್ತದೆ. ಅದಕ್ಕಾಗಿ ಸಮಯ ನಿರ್ವಹಣೆ ಮಾಡಿಕೊಳ್ಳಬೇಕು. ಗ್ರಾಹಕರ ಜೊತೆಗೆ ಉತ್ತಮ ರೀತಿಯಲ್ಲಿ ಸೌಜನ್ಯಪೂರ್ವಕವಾಗಿ ಸಂವಹನ ಮಾಡಿ, ಉತ್ತಮವಾದ ಮನೋಭಾವ ಬೆಳಸಿಕೊಳ್ಳಿ. ಸರ್ಕಾರದ ಮತ್ತು ಬ್ಯಾಂಕಿನ ಆರ್ಥಿಕ ಸಹಕಾರ ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಎಸ್.ಡಿ.ಎಂ. ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ಸೌಮ್ಯ ಬಿ.ಪಿ ಹೇಳಿದರು. ಉಜಿರೆಯಲ್ಲಿ ರುಡ್‌ಸೆಟ್ ಸಂಸ್ಥೆಯಲ್ಲಿ 45 ದಿನಗಳ ಕಾಲ ನಡೆದ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು ಭಾಗವಹಿಸಿ, ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು.

ಸ್ವಾಧ್ಯಾಯದಿಂದ ಆತ್ಮಕಲ್ಯಾಣ

Article Image

ಸ್ವಾಧ್ಯಾಯದಿಂದ ಆತ್ಮಕಲ್ಯಾಣ

ಉಜಿರೆ: ಜೈನಧರ್ಮ ವಿಶ್ವದ ಶ್ರೇಷ್ಠ ಧರ್ಮವಾಗಿದ್ದು ಅಹಿಂಸೆ, ಸತ್ಯ, ಅಪರಿಗ್ರಹ, ಸ್ಯಾದ್ವಾದ ಮೊದಲಾದ ಉದಾತ್ತ ತತ್ವಗಳ ಪಾಲನೆಯಿಂದ ಜೀವನ ಪಾವನವಾಗಿ, ಸುಖ, ಶಾಂತಿ, ನೆಮ್ಮದಿ ಸಿಗುತ್ತದೆ. ರತ್ನತ್ರಯ ಧರ್ಮದ ಪಾಲನೆ ಮತ್ತು ಸ್ವಾಧ್ಯಾಯದಿಂದ ಆತ್ಮಕಲ್ಯಾಣವಾಗಿ ಮೋಕ್ಷ ಪ್ರಾಪ್ತಿಯಾಗುತ್ತದೆ. ಎಂದು ನಿವೃತ್ತ ಶಿಕ್ಷಕ ರಘುಚಂದ್ರ ಚೌಟ ಹೇಳಿದರು. ಅವರು ಶನಿವಾರ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ತ್ಯಾಗ, ಸತ್ಯ, ಅಹಿಂಸೆ, ಬದುಕು ಮತ್ತು ಬದುಕಲು ಬಿಡು ಮೊದಲಾದ ಉದಾತ್ತ ತತ್ವ, ಸಿದ್ಧಾಂತಗಳನ್ನು ಬದುಕಿನಲ್ಲಿ ನಿತ್ಯವೂ ಪಾಲಿಸುವವರೆಲ್ಲರೂ ಜೈನರಾಗುತ್ತಾರೆ. ಬರೆ ಜಾತಿಜೈನರಾದರೆ ಸಾಲದು, ನೀತಿ ಜೈನರೂ ಆಗಬೇಕು ಎಂದು ಅವರು ಸಲಹೆ ನೀಡಿದರು. ಸಕಲ ಪಾಪಕರ್ಮಗಳ ಕೊಳೆ ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಸಕಲ ಸುಖ-ಭೋಗ ಹಾಗೂ ಬಂಧನಗಳಿಂದ ಮುಕ್ತರಾಗಿ ಮೋಕ್ಷ ಪ್ರಾಪ್ತಿಯೇ ಬದುಕಿನ ಮುಖ್ಯ ಗುರಿಯಾಗಿದೆ ಎಂದು ಅವರು ಹೇಳಿದರು. ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಡಾ. ಜಯಕೀರ್ತಿ ಜೈನ್, ಧರ್ಮಸ್ಥಳ, ವಿಶ್ವಾಸ್ ರಾವ್, ಸನ್ಮತ್ ಕುಮಾರ್ ನಾರಾವಿ ಮತ್ತು ವಸಂತ ಸುವರ್ಣ ಉಪಸ್ಥಿತರಿದ್ದರು.

ಅವಲೋಕನ ಅವಾರ್ಡ್ಸ್ : ರೋಟರಿ ಕ್ಲಬ್ ಬೆಳ್ತಂಗಡಿಗೆ ಅತಿ ಹೆಚ್ಚು ಪ್ರಶಸ್ತಿ

Article Image

ಅವಲೋಕನ ಅವಾರ್ಡ್ಸ್ : ರೋಟರಿ ಕ್ಲಬ್ ಬೆಳ್ತಂಗಡಿಗೆ ಅತಿ ಹೆಚ್ಚು ಪ್ರಶಸ್ತಿ

ಬೆಳ್ತಂಗಡಿ : 'ಅವಲೋಕನ' ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಪಿಲಿಕುಳದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3181 ಒಳಪಟ್ಟ ರೋಟರಿ ಕ್ಲಬ್ ಗಳ ಪೈಕಿ 2024 -25 ನೇ ಸಾಲಿನ ವಾರ್ಷಿಕ ಸಾಧನೆ ಮತ್ತು ಸೇವೆಗಳನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಗೆ ವಿವಿಧ ವಿಭಾಗಗಳಲ್ಲಿ 10 ಪ್ರಶಸ್ತಿಗಳು ಲಭಿಸಿವೆ. RI ಜಿಲ್ಲೆ 3181 ರೋಟರಿ ಕ್ಲಬ್ ಗಳ ಪೈಕಿ ರೋಟರಿ ಕ್ಲಬ್ ಬೆಳ್ತಂಗಡಿಗೆ ಅತಿ ಹೆಚ್ಚು ಪ್ರಶಸ್ತಿಗಳು ಈ ಬಾರಿ ದೊರೆತಿದೆ. ಪ್ರಶಸ್ತಿಗಳ ವಿವರ : 1. 3181 ಜಿಲ್ಲೆಯ ದೊಡ್ಡ ಕ್ಲಬ್‌ಗಳ ವಿಭಾಗದಲ್ಲಿ ಡೈಮಂಡ್ ಪ್ಲಸ್ ಪ್ರಶಸ್ತಿ (ಅತ್ಯುನ್ನತ ಗೌರವ) 2. ಕಾರ್ಯೋನ್ಮುಕ ಶ್ರೇಷ್ಠತೆ ಪ್ರಶಸ್ತಿ -ಪ್ರಥಮ ಸ್ಥಾನ 3. ಎಕ್ಸೆಲೆನ್ಸ್ ಇನ್ ಪಬ್ಲಿಕ್ ಇಮೇಜ್‌ - ಪ್ರಥಮ ಸ್ಥಾನ 4. ಆಕ್ಷನ್ ಚಾಂಪಿಯನ್ ಮೆಚ್ಚುಗೆ ಪ್ರಶಸ್ತಿ - ರೋ. ಅನಂತ್ ಭಟ್ ಮತ್ತು ರೋ. ವಿದ್ಯಾಕುಮಾರ್ ಕಾಂಚೋಡುರವರಿಗೆ ಶಾಲಾ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಪ್ರಶಸ್ತಿ. 5. ಸಿಗ್ನಿಫಿಕೆಂಟ್ ಸರ್ವೀಸ್ ಅವಾರ್ಡ್ - ರೋಟರಿ ಕ್ಲಬ್ ಬೆಳ್ತಂಗಡಿ 6. ಸೇವಾ ವಿಭಾಗದ ವೈಯಕ್ತಿಕ ಪ್ರಶಸ್ತಿ : ರೋ. ಶ್ರೀಧರ್ ಕೆ ವಿ 7. TRF ಚಾಂಪಿಯನ್ ಅವಾರ್ಡ್ 8. ಇಂಟರಾಕ್ಟ್ ಕ್ಲಬ್ ಡೈಮಂಡ್ ಪ್ಲಸ್ ಅವಾರ್ಡ್ಸ್-ಡೈಮಂಡ್ ಪ್ಲಸ್ ಅವಾರ್ಡ್ - ಎಸ್.ಡಿ.ಎಂ ಇಂಗ್ಲಿಷ್ ಮಾಧ್ಯಮ ಶಾಲೆ (CBSE) ಉಜಿರೆ. 9. ಡೈಮಂಡ್ ಪ್ಲಸ್ ಅವಾರ್ಡ್ - ಎಸ್.ಡಿ.ಎಂ ಇಂಗ್ಲಿಷ್ ಮಾಧ್ಯಮ ಶಾಲೆ, ಉಜಿರೆ 10. ಡೈಮಂಡ್ ಪ್ಲಸ್ ಅವಾರ್ಡ್ - ಎಸ್.ಡಿ.ಎಂ ಅನುದಾನಿತ ಮಾಧ್ಯಮಿಕ ಶಾಲೆ ಉಜಿರೆ ಬೆಳ್ತಂಗಡಿ ರೋಟರಿ ಕ್ಲಬ್ ನ 2024-25 ನೇ ಸಾಲಿನ ಶೈಕ್ಷಣಿಕ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರದಲ್ಲಿನ ಪ್ರಮುಖ ಸೇವಾ ಕಾರ್ಯಗಳು : ಶಾಲಾ ಕಟ್ಟಡಗಳ ನಿರ್ಮಾಣ ಮತ್ತು ನವೀಕರಣ ಕಾರ್ಯಗಳು, 40 ಲಕ್ಷ ಮೊತ್ತದ ಸರಕಾರಿ ಶಾಲಾ ಕಾಲೇಜುಗಳಿಗೆ ಹೊಸ ಶೌಚಾಲಯಗಳ ನಿರ್ಮಾಣ ಕಾರ್ಯ, 25 ಲಕ್ಷಕ್ಕೂ ಅಧಿಕ ಮೊತ್ತದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಣೆ, 14 ಲಕ್ಷ ಮೊತ್ತದ ಸರಕಾರಿ ಶಾಲೆಗಳಿಗೆ ಕಂಪ್ಯೂಟರ್ ವಿತರಣೆ, 5 ಲಕ್ಷ ಮೊತ್ತದ ಶಾಲಾ ಕಾಲೇಜುಗಳಿಗೆ ಮೂಲಭೂತ ಪೀಟೋಪಕರಣಗಳ ಕೊಡುಗೆ, ವಿವಿಧ ತರಭೇತಿ ಮತ್ತು ಮಾಹಿತಿ ಕಾರ್ಯಕ್ರಮ, ಅಂತರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ, ಯುತ್ ಕಾರ್ನಿವಲ್ - ವಿವಿಧ ಜಿಲ್ಲಾ ವಿದ್ಯಾರ್ಥಿಗಳ ಜಿಲ್ಲಾ ಸಮ್ಮೇಳನ, 7 ಉಚಿತ ಗ್ರಾಮೀಣ ಭಾಗಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರಗಳು, 9 ಬೃಹತ್ ರಕ್ತದಾನ ಶಿಬಿರಗಳ ಮೂಲಕ 1300 ಯುನಿಟ್ ರಕ್ತ ಸಂಗ್ರಹ, 9 ಲಕ್ಷಕ್ಕೂ ಅಧಿಕ ಮೊತ್ತದ ತಾಲೂಕು ಪಶು ಆಸ್ಪತ್ರೆಯ ಕಟ್ಟಡ ನವೀಕರಣ, ವಿದ್ಯಾರ್ಥಿಗಳಿಗೆ ಆರೋಗ್ಯ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ, ಅಶಕ್ತರಿಗೆ ವೀಲ್ ಚೇರ್, ವಾಕರ್ ಮತ್ತು ವಾಟರ್ ಬೆಡ್ ವಿತರಣೆ ಇತ್ಯಾದಿ ಕಾರ್ಯಕ್ರಮಗಳು ಸೇರಿದಂತೆ 200ಕ್ಕೂ ಅಧಿಕ ಸಾಮಾಜಿಕ ಕಾರ್ಯಕ್ರಮಗಳು, 2 ಕೋಟಿಗೂ ಹೆಚ್ಚಿನ ಅನುದಾನ ಸಾಮಾಜಿಕ ಸೇವಾ ಕಾರ್ಯಗಳಿಗೆ ವಿನಿಯೋಗ ರೋಟರಿ ಕ್ಲಬ್ ಬೆಳ್ತಂಗಡಿಯದ್ದಾಗಿದೆ. ಈ ಎಲ್ಲಾ ಕಾರ್ಯಗಳನ್ನು ಗುರುತಿಸಿ ರೋಟರಿ RI ಜಿಲ್ಲೆ 3181 ಬೆಳ್ತಂಗಡಿ ರೋಟರಿ ಕ್ಲಬ್ ಗೆ ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ರೋಟರಿ 3181 ಜಿಲ್ಲಾ ಗವರ್ನರ್ ರೋ.ವಿಕ್ರಮ ದತ್ತ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಗವರ್ನರ್ ರೋ. ಮೊಹಮ್ಮದ್ ವಳವೂರು, ನಿಯೋಜಿತ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಜಯಕುಮಾರ್ ಶೆಟ್ಟಿ, ರೋ.ಅಳಗಪ್ಪನ್ ರೋ. ದೇವ್ ಆನಂದ್, ಎಲ್ಐ ಜಿಲ್ಲೆ 317 ಜಿಲ್ಲಾ ಗವರ್ನರ್ ಲಯನ್ ಎನ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಪೂರನ್ ವರ್ಮ, ಕಾರ್ಯದರ್ಶಿ ರೋ. ಸಂದೇಶ್ ಕುಮಾರ್ ರಾವ್, ರೋ. ಧನಂಜಯ ರಾವ್, ರೋ. ಅನಂತ ಭಟ್, ರೋ. ವಿದ್ಯಾ ಕುಮಾರ್ ಕಾಂಚೋಡು,ರೋ. ಅರುಣ್, ರೋ. ಶ್ರೀಧರ್ ಕೆ.ವಿ, ರೋ. ಪ್ರವೀಣ್ ಗೋರ್ ಸೇರಿದಂತೆ ಬೆಳ್ತಂಗಡಿ ರೋಟರಿ ಕ್ಲಬ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಖಾವಂದರ ಆರ್ಶಿವಾದ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನ ಎಲ್ಲಾ ಸದಸ್ಯರುಗಳ ಸಹಕಾರದಿಂದ ಈ ವರ್ಷ ಅತ್ಯುತ್ತಮ ಸೇವಾ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಯಿತು. ತಾಲೂಕಿನಲ್ಲಿನ ಬೇರೆ ಬೇರೆ ಅಗತ್ಯತೆಗಳನ್ನು ಅರಿತು ಈ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂತಹ ಕಾರ್ಯಕ್ರಮಗಳನ್ನು ಯೋಜನೆಗೆ ತರಲು ಸಹಕಾರ ನೀಡಿದ ಬೆಳ್ತಂಗಡಿಯ ಅನೇಕ ಸಂಘ - ಸಂಸ್ಥೆಗಳು, ಬೆಂಗಳೂರಿನ ಸಿಎಸ್ಆರ್ ಪಾರ್ಟ್ನರ್ ಕಂಪೆನಿಗಳು ಮತ್ತು ಇಂದಿರಾನಗರ ಕ್ಲಬ್ ಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಬಂದಿರುವ ಈ ಎಲ್ಲಾ ಪ್ರಶಸ್ತಿಗಳು ಬೆಳ್ತಂಗಡಿ ರೋಟರಿ ಕ್ಲಬ್ ನ ಸರ್ವ ಸದಸ್ಯರ ಪರಿಶ್ರಮದ ಫಲವಾಗಿದೆ. - ಪೂರನ್ ವರ್ಮ ಅಧ್ಯಕ್ಷರು ರೋಟರಿ ಕ್ಲಬ್, ಬೆಳ್ತಂಗಡಿ .

ಸಾವಯವ ಕೃಷಿಯಿಂದ ನಿರುದ್ಯೋಗಕ್ಕೆ ಪರಿಹಾರ: ಕೆ. ಜಗದೀಶ

Article Image

ಸಾವಯವ ಕೃಷಿಯಿಂದ ನಿರುದ್ಯೋಗಕ್ಕೆ ಪರಿಹಾರ: ಕೆ. ಜಗದೀಶ

ಸಾವಯವ ಕೃಷಿಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ನಿರುದ್ಯೋಗಕ್ಕೆ ಪರಿಹಾರ ನೀಡಬಹುದಾಗಿದೆ ಎಂದು ಬೆಂಗಳೂರಿನ ಸ್ವದೇಶಿ ಜಾಗರಣ ಮಂಚ್ ವೇದಿಕೆಯ ಹಿರಿಯ ಭಾಷಣಕಾರ ಕೆ. ಜಗದೀಶ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಉದ್ಯಮಶೀಲತೆ ಅಭಿವೃದ್ಧಿ ಕೋಶದ ವತಿಯಿಂದ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ‘ಸ್ವೋದ್ಯೋಗ ಹಾಗೂ ಸ್ವದೇಶಿ ಚಿಂತನೆಯ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ’ ಕುರಿತು ಉಪನ್ಯಾಸ ನೀಡಿದರು. ಭಾರತವು ಆರ್ಥಿಕವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದರೂ ಉದ್ಯೋಗ ಕೊರತೆ ಹಾಗೆಯೇ ಇದೆ. ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಹಸು, ಜಾನುವಾರಗಳನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಅಧಿಕ ಉತ್ಪಾದನೆ ಮಾಡಬಹುದು ಎಂದು ಅವರು ಹೇಳಿದರು. ಪ್ರತಿವರ್ಷ 1 ಕೋಟಿಗಿಂತಲೂ ಅಧಿಕ ಪದವೀಧರರು ಹೊರಬರುತ್ತಿದ್ದು, ಅವರಿಗೆ 10 ಲಕ್ಷದಷ್ಟು ಮಾತ್ರ ಉದ್ಯೋಗ ಸೃಷ್ಟಿಯಾಗುತ್ತಿದೆ. ಕೊರೋನ ನಂತರ ಪರಿಸ್ಥಿತಿ ಹದಗೆಟ್ಟಿದ್ದು, ಉದ್ಯೋಗ ಸೃಷ್ಟಿ ನಮ್ಮ ಮೊದಲ ಆದ್ಯತೆಯಾಗಿರಬೇಕು ಎಂದರು. ಭಾರತದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂ.ಎಸ್.ಎಂ.ಇ.)ಗಳಿಗೆ 26 ಶೇ.ದಷ್ಟು ಗ್ರಾಮೀಣ ಭಾಗದಲ್ಲಿ ಬೇಡಿಕೆ ಇದೆ. ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಶ್ವದಲ್ಲಿ 8 ಸಾವಿರ ಕೋಟಿಯಷ್ಟು ಉದ್ಯಮಾವಕಾಶ ಇದೆ. ಸ್ವ ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ವ್ಯಾಪಾರ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತಿದೆ. ಯುವಕರು ಉದ್ಯೋಗ ಸೃಷ್ಟಿ ಮಾಡಬೇಕು. ಪದವಿ ಜೊತೆ ಕೌಶಲ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕರು, ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮೀನಾರಾಯಣ ಕೆ.ಎಸ್. ಸ್ವಾಗತಿಸಿ, ಸುಮನ್ ಜೈನ್ ವಂದಿಸಿದರು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ

Article Image

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮ

ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊಂದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ದಿನಾಂಕ 08-ಜುಲೈ 2025 ರ ಮಂಗಳವಾರದಂದು ಜರಗಿದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ವೇದಿಕೆಯ ಮೇಲಿರುವವರು ಮಾತ್ರ ನಾಯಕರಲ್ಲ ಮುಂಭಾಗದಲ್ಲಿರುವವರು ನಾಯಕರಾಗುವ ಯೋಗ್ಯತೆಯನ್ನು ಹೊಂದಿರುತ್ತಾರೆ. ಗುರುಕುಲ ಶಿಕ್ಷಣ ವ್ಯವಸ್ತೆ ಇರುವ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ’ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಇನ್ನೋರ್ವ ಅತಿಥಿಯಾಗಿ ಆಗಮಿಸಿದ ನ್ಯಾಯವಾದಿ ಜಿನೇಂದ್ರ ಕುಮಾರ್ ಅವರು ಮಾತನಾಡುತ್ತಾ ‘ಜೀವನದಲ್ಲಿ ಯಾವ ಹುದ್ದೆಯು ಅಧಿಕಾರವಲ್ಲ, ಅದು ಜವಬ್ದಾರಿಯಾಗಿದೆ. ಸಂವಿಧಾನವು ಹಕ್ಕುಗಳಿಗೆ ಮಾತ್ರ ಸೀಮಿತವಲ್ಲ, ಅದರಲ್ಲಿ ಕರ್ತವ್ಯಗಳು ಕೂಡ ಇದೆ. ಪ್ರತಿಯೊಬ್ಬರೂ ಅವರ ವಯಸ್ಸಿಗನುಗುಣವಾಗಿ ದೇಶಸೇವೆಯನ್ನು ಮಾಡಬೇಕು. ಸಾರ್ವಜನಿಕ ಸಂಪತ್ತನ್ನು ರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿ ಜೀವನದಲ್ಲಿ ಮುಖ್ಯವಾದುದು. ಇಲ್ಲಿ ಗೆದ್ದವನು ನಾಯಕನಲ್ಲ ಬಿದ್ದವನನ್ನು ಮೇಲೆತ್ತುವವ ನಿಜವಾದ ನಾಯಕ’ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ವಿದ್ಯಾರ್ಥಿ ಸಂಸತ್ತು ಕಲಿಕೆಯನ್ನು ಪಾಯೋಗಿಕವಾಗಿ ಅನುಭವಿಸುವ ಒಂದು ಉತ್ತಮ ವೇದಿಕೆಯಾಗಿದ್ದು, ಅದು ನಾಯಕತ್ವ ಮತ್ತು ಜವಬ್ದಾರಿಯ ಮೌಲ್ಯವನ್ನು ಬೆಳೆಸುತ್ತದೆ. ವ್ಯಕ್ತಿಯ ವರ್ತನೆ, ನಡತೆಗಳೇ ವ್ಯಕ್ತಿತ್ವದ ಮಾನದಂಡವಾಗಿದೆ. ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ತಿಳಿಸಿದರು. ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ಅವರು ಮಾತನಾಡುತ್ತಾ ಸಿಕ್ಕ ಜವಬ್ದಾರಿಗಳನ್ನು ಶ್ರದ್ಧೆಯಿಂದ ನಿರ್ವಹಿಸುತ್ತ ಸಮಾಜದ ಶ್ರೇಯಸ್ಸಿಗೆ ಕಾರಣರಾಗಬೇಕು. ಇಂದು ನಿಮಗೆ ಸಿಕ್ಕ ಸ್ಥಾನ ಭಾರತೀಯ ಸಂಸತ್ತನ್ನೇರಲು ಪ್ರಥಮ ಮೆಟ್ಟಿಲಾಗಲಿ. ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಿಥುನ್ ರೈ ಹಾಗೂ ಜಿನೇಂದ್ರ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೂ ನಾಗರಿಕ ಕರ್ತವ್ಯದ ಹೊಣೆಗಾರಿಕಾ ಫಲಕವನ್ನು ವಿವಿಧ ವಿಭಾಗದ ಮುಖ್ಯಸ್ಥರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್, ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಶಿಕ್ಷಕಿ ವೆನೆಸ್ಸಾ ನೊರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಹಿತೇಶ್ ನಾಯಕ್ ಸ್ವಾಗತಿಸಿ ರೀನಲ್ ರಿನ್ಸಿಯಾ ಸೆರಾವೋ ವಂದಿಸಿದರು.

ಪೃಥ್ವಿ ಜುವೆಲ್ಸ್ ನಲ್ಲಿ ಭರ್ಜರಿ ಆಷಾಢ ಸೇಲ್ಸ್

Article Image

ಪೃಥ್ವಿ ಜುವೆಲ್ಸ್ ನಲ್ಲಿ ಭರ್ಜರಿ ಆಷಾಢ ಸೇಲ್ಸ್

ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ. ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ ಕೊಡುಗೆಗಳು ಜು.31 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಆರೋಗ್ಯವೇ ಮಹಾಭಾಗ್ಯ ಡಾ.ವಿನಯ್ ಕುಮಾರ್ ಹೆಗ್ಡೆ

Article Image

ಆರೋಗ್ಯವೇ ಮಹಾಭಾಗ್ಯ ಡಾ.ವಿನಯ್ ಕುಮಾರ್ ಹೆಗ್ಡೆ

“ಮನುಷ್ಯನಿಗೆ ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಬೇರಿಲ್ಲ. ದೇಹದ ಪ್ರತಿಯೊಂದು ಅಂಗವೂ ಕೂಡ ಆರೋಗ್ಯ ಪೂರ್ಣವಾಗಿದ್ದಾಗ ಮನುಷ್ಯ ಲವಲವಿಕೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯ. ಹಲ್ಲಿನ ಬಗ್ಗೆಯೂ ಕಾಳಜಿ ಅತೀ ಮುಖ್ಯ, ನಿರ್ಲಕ್ಷ ಸಲ್ಲದು” ಎಂದು ಖ್ಯಾತ ದಂತ ವೈದ್ಯ ಡಾ. ವಿನಯ ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು. ಮೂಡಬಿದಿರೆಯ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ‘ಮಕ್ಕಳು ಬಾಲ್ಯದಲ್ಲಿ ಹಲ್ಲು ಮತ್ತು ಒಸಡುಗಳ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಗಮನ ಹರಿಸಬೇಕು. ದಿನನಿತ್ಯದ ದಂತ ಆರೈಕೆಯು ಬಾಯಿಯ ಆರೋಗ್ಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ’ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಮಾತನಾಡುತ್ತಾ “ವೈದ್ಯೋ ನಾರಾಯಣೋ ಹರಿ” ಎಂಬ ಉಕ್ತಿಗೆ ಬದ್ಧರಾಗಿದ್ದುಕೊಂಡು ಡಾ. ವಿನಯ ಕುಮಾರ್ ಹೆಗ್ಡೆ ಅವರು ಮೂಡಬಿದಿರೆಯ ಜನತೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರಲ್ಲಿರುವ ಕಾಳಜಿ, ನಿಸ್ವಾರ್ಥ ಸೇವಾ ಮನೋಭಾವ ಮುಂತಾದ ಮಾನವೀಯ ಮೌಲ್ಯಗಳು ಇಂದು ಅವರನ್ನು ವೃದ್ಧ, ತರುಣರೆಂಬ ಬೇಧವಿಲ್ಲದೆ ಪ್ರತಿಯೊಬ್ಬರಿಗೂ ನೆಚ್ಚಿನ ವೈದ್ಯರನ್ನಾಗುವಂತೆ ಮಾಡಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ವೈದ್ಯರ ಮಹತ್ವವನ್ನು ಮಕ್ಕಳಿಗೆ ಹೇಳಿ ‘ವೈದ್ಯರ ದಿನಾಚರಣೆ’ ಆಚರಣೆಯ ಅಗತ್ಯತೆಯನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಡಾ. ವಿನಯ ಕುಮಾರ್ ಹೆಗ್ಡೆ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವೈದ್ಯರ ಮಹತ್ವದ ಸಂದೇಶವನ್ನು ಸಾರುವ ಹಲವು ಚಟುವಟಿಕೆಗಳ ಮೂಲಕ ಮಕ್ಕಳೇ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಉಪ ಮುಖ್ಯೋಪಾಧ್ಯಾಯ ಜಯಶೀಲ ಹಾಗೂ ಶಿಕ್ಷಕಿ ಜಯಲಕ್ಷ್ಮೀ ಉಪಸ್ಥಿತರಿದ್ದರು.

ಕಲೆಯ ಜೊತೆಗೆ ವಿದ್ಯೆ ಇದ್ದರೆ ಹೆಚ್ಚು ಸಾಧನೆ ಮಾಡಬಹುದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್

Article Image

ಕಲೆಯ ಜೊತೆಗೆ ವಿದ್ಯೆ ಇದ್ದರೆ ಹೆಚ್ಚು ಸಾಧನೆ ಮಾಡಬಹುದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್

ಎಕ್ಸಲೆಂಟ್ ವಿದ್ಯಾ ಸಂಸ್ಥೆ ಹೆಸರಿಗೆ ತಕ್ಕಂತೆ ಎಕ್ಸಲೆಂಟ್ ಆಗಿದೆ. ಇಂತಹ ಶಾಲೆಯಲ್ಲಿ ಕಲಿಯುತ್ತಿರುವ ನೀವು ಧನ್ಯರು. ವಿದ್ಯಾರ್ಥಿ ಜೀವನ ಬಾಲ್ಯದ ಸುವರ್ಣ ಯುಗ ಚಿನ್ನಕ್ಕೆ ಬಡಿದಷ್ಟು ಆಕಾರ ಮತ್ತು ಹೆಚ್ಚು ಹೊಳಪು ಬರುತ್ತದೆ. ಕಲಾ ಮಾತೆ ಶಾರದೆ ನಮಗೆ ಒಲಿಯದಿದ್ದರೂ ನಾವೂ ಅದರ ಬೆನ್ನ ಹಿಂದೆ ಸಾಗಬೇಕು. ಎಂದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಹೇಳಿದರು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ನಡೆದ ವಾರ್ಷಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟನೆ ಮಾಡಿ ಮುಂದುವರಿದು ಮಾತನಾಡಿದ ಅವರು ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ಮರೆಯಬಾರದು, ನಮ್ಮ ಮನೆಯನ್ನು ಪ್ರೀತಿ ಮಾಡಿದಂತೆ ಶಾಲೆಯನ್ನು ಪ್ರೀತಿ ಮಾಡಬೇಕು. ಶಾಲೆ ವಿದ್ಯಾ ದೇಗುಲ. ಸ್ವಂತ ಉದ್ಯೋಗ ಪಡೆದ ನಂತರ ಹೆತ್ತವರನ್ನು ಗುರುಗಳನ್ನು ಶ್ರದ್ಧೆಯಿಂದ ಸ್ಮರಿಸಬೇಕು. ತಂದೆ ತಾಯಿಯನ್ನು ನೋಡಿಕೊಂಡರೆ ಅವರ ಸಂತೋಷದಷ್ಟು ಆರ್ಶೀವಾದ ಇನ್ನೊಂದಿಲ್ಲ. ಪ್ರಪಂಚವನ್ನು ತೋರಿಸಿಕೊಟ್ಟವರು ಅವರು ಅವರೊಂದಿಗೆ ಪ್ರತಿದಿನ ಮಾತನಾಡಬೇಕು. ಪ್ರತಿಯೊಬ್ಬರಲ್ಲಿಯೂ ನನಗೆ ಎಲ್ಲಾ ಗೊತ್ತಿದೆ ಎಂಬ ಅಹಂಕಾರ ಇರಬಾರದು. ಕಲೆಯ ಜೊತೆ ವಿದ್ಯೆ ಇದ್ದರೆ ಹೆಚ್ಚು ಸಾಧನೆ ಮಾಡಬಹುದು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ “Golden Book of Record holder” ವಿದ್ವಾನ್ ಯಶವಂತ್ ಎಮ್ ಜಿ ಮಾತನಾಡಿ ದೀಪ ಬೆಳಗಬೇಕಾದರೆ ದೇವರ ಅಸ್ತಿತ್ವ ಅತೀ ಮುಖ್ಯ, ಇಚ್ಛಾ ಶಕ್ತಿ, ದೈವೀಶಕ್ತಿ ಮತ್ತು ಆತ್ಮ ವಿಶ್ವಾಸ ಜೊತೆಗಿದ್ದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು. ಆಶ್ರಯ ಕೊಟ್ಟವರಿಗೆ ಯಾವಾಗಲೂ ನಾವೂ ಕೃತಜ್ಞರಾಗಿರಬೇಕು. ಜೀವನದಲ್ಲಿ ಸಾಧನೆ ಮಾಡಲು ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಮತ್ತು ಸಂಸಾರ ಅತೀ ಮುಖ್ಯ. ಸಾಧನೆ ಮಾಡಲು ಒಂದು ಉತ್ತಮ ಶಿಕ್ಷಣ ಸಂಸ್ಥೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಆಗಿದೆ. ಅಧ್ಯಯನ ಮಾಡುವಾಗ ನಾನು ದಡ್ಡ ಬೇರೆಯವರು ಜಾಣರು ಎಂಬ ಮನೋಭಾವ ಬಿಡಿ. ನಾವು ನಮ್ಮ ಮೇಲೆ ಆತ್ಮ ವಿಶ್ವಾಸ ಇಟ್ಟು ಹಂತ ಹಂತವಾಗಿ ಸಾಧನೆಯ ಮೆಟ್ಟಿಲು ಹತ್ತಿ ಅಸಾಧಾರಣೆಯ ಸಾಧನೆ ಮಾಡಬಹುದು. ನಮಗೆ ಸಹಾಯ ಮಾಡಿದವರನ್ನು ಸ್ಮರಿಸದಿದ್ದರೆ ಬದುಕು ವ್ಯರ್ಥ. ಮೊದಲು ಕೆಟ್ಟ ಸಮಯ ಇದ್ದರೆ ಮುಂದೆ ಉತ್ತಮ ಸಮಯ ಬಂದೇ ಬರುತ್ತದೆ. ಕಲೆ ಮತ್ತು ಕಲಾವಿದರನ್ನು ಬೆಳೆಸುವ, ಗೌರವಿಸುವ ಗುಣ ಯುವರಾಜ್ ಸರ್ ಮತ್ತು ರಶ್ಮಿತಾ ಮೇಡಂ ಅವರಲ್ಲಿ ಇದೆ ಎಂದರು. ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮಾತಾನಾಡಿ, ಕಲೆಯನ್ನು ಕಟ್ಟಿಕೊಂಡು ಜೀವನ ನಡೆಸಬಹುದು, ಕಲೆ ಹೃದಯವನ್ನು ತಟ್ಟಿದ್ದರೆ ಸರಳತೆ ಮನ ಗೆಲ್ಲುತ್ತದೆ. ಇದರಿಂದ ಜೀವನದಲ್ಲಿ ಸಾರ್ಥಕತೆ ಸಾಧಿಸಬಹುದು. ಸಾಧಕರ ಜೀವನ ನಮಗೆ ಆದರ್ಶವಾಗಬೇಕು. ಕಲೆಯನ್ನು ಜೀವನ ಪೂರ್ತಿ ಅಳವಡಿಸಿಕೊಂಡರೆ ಬದುಕು ಸುಂದರಮಯವಾಗುತ್ತದೆ. ಕಲೆಗೆ ಎಂತಹ ಕಲ್ಲನ್ನು ಶಿಲೆ ಮಾಡುವ ಸಾಮರ್ಥ್ಯವಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಮಾತನಾಡಿ ಎಲ್ಲರಿಗೂ ಭಗವಂತ ಏನಾದರೂ ಒಂದು ಪ್ರತಿಭೆಯನ್ನು ಕೊಟ್ಟಿದ್ದಾನೆ ಅದನ್ನು ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬೇಕು. ಜೀವನದಲ್ಲಿ ಪ್ರತಿಭೆಯಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಅಂತಹ ಕಲೆಗೆ ಮತ್ತು ಕಲಾವಿದರಿಗೆ ಗೌರವವನ್ನು ನೀಡುತ್ತಾ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಬೆಳೆಯುತ್ತಿದೆ. ವಿದ್ಯಾರ್ಥಿಗಳು ಬೇರೆ ಬೇರೆ ಗುರಿಗಳನ್ನು ಇಟ್ಟು ಕೊಳ್ಳುವುದಕ್ಕಿಂತ ಒಂದೇ ಗುರಿಯನ್ನು ಬೇರೆ ಬೇರೆ ರೀತಿಯಲ್ಲಿ ಸಾಧಿಸಿ ತೋರಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅರವಿಂದ ಬೋಳಾರ್ ಮತ್ತು ಯಶವಂತ್ ಎಂ.ಜೆ. ಅವರನ್ನು ಸಂಸ್ಥೆಯ ಕಡೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಭಾ ಕಾರ್ಯಕ್ರಮದ ನಂತರ ಸಂಪನ್ಮೂಲ ಶಿಕ್ಷಕರು ಹಾಗೂ ಸಂಸ್ಥೆಗೆ ಹೊಸದಾಗಿ ಈ ವರ್ಷ ದಾಖಲಾದ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾರಾದ ಶಿವಪ್ರಸಾದ್ ಭಟ್ ಮತ್ತು ಸಿ ಬಿ ಎಸ್ ಇ ಶಾಲೆಯ ಪ್ರಾಂಶುಪಾಲರು ಶ್ರೀ ಪ್ರಸಾದ್ ಮತ್ತು ಉಪ ಮುಖ್ಯೋಪಾಧ್ಯಾಯ ಜಯಶೀಲ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಜಯಲಕ್ಷ್ಮಿ, ವಿದ್ಯಾರ್ಥಿನಿ ಅದಿತಿ ನಿರೂಪಿಸಿದರು, ಆಕಾಂಕ್ಷ್ ಜೈನ್ ಸ್ವಾಗತಿಸಿ, ನಕ್ಷತ್ರ ವಂದಿಸಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

Article Image

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ, ಜೂ.30: ಶಿಕ್ಷಣ ದೊಡ್ಡ ಶಕ್ತಿಯಾಗಿದ್ದು, ಜ್ಞಾನದ ಜೊತೆಗೆ ಕೌಶಲಗಳನ್ನು ಹೊಂದಿ ಸಮಾಜವನ್ನು ಎದುರಿಸುವ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಮೈಗೂಡಿಸಿಕೊಳ್ಳಬೇಕು ಎಂದು ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಹೇಳಿದರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಎರಡು ದಿನದ ಪ್ರಶಿಕ್ಷಣ ಕಾರ್ಯಕ್ರಮವನ್ನು ಜೂ.30ರಂದು ಉದ್ಘಾಟಿಸಿ, ವಿದ್ಯಾರ್ಥಿಗಳು ಹಾಗೂ ಪೋಷಕರನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದೆ ಆಸ್ತಿವಂತರು, ಹಣವಂತರು ಶಕ್ತಿಶಾಲಿ, ಶ್ರೀಮಂತರೆಂದು ಪರಿಗಣಿಸಲ್ಪಟ್ಟಿದ್ದರೆ, ಪ್ರಸ್ತುತ ಕಾಲದಲ್ಲಿ ಜ್ಞಾನವಂತರು ಭೌತಿಕ ಮತ್ತು ಬೌದ್ಧಿಕವಾಗಿ ಶಕ್ತಿಶಾಲಿಗಳು, ಶ್ರೀಮಂತರೆಂದು ಪರಿಗಣಿಸಲ್ಪಡುತ್ತಾರೆ. ಉನ್ನತ ಶಿಕ್ಷಣ ಪಡೆದುಕೊಳ್ಳುವ ಮೂಲಕ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. ಪದವಿ ಶಿಕ್ಷಣವು ಜವಾಬ್ದಾರಿಯುತ ಘಟ್ಟವಾಗಿದ್ದು, ಬೋಧಕರೇ ಎಲ್ಲವನ್ನೂ ಕಲಿಸಬೇಕಾಗಿಲ್ಲ. ವಿದ್ಯಾರ್ಥಿಗಳು ಲಭ್ಯ ವ್ಯವಸ್ಥೆಗಳನ್ನು ಸದುಪಯೋಗ ಪಡಿಸಿಕೊಂಡು ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ, ಸಹಯೋಗ ಮತ್ತು ಸಂವಹನ ಕೌಶಲದ ಮೂಲಕ ನಿಜ ಜೀವನದ ಸಮಸ್ಯೆಗಳನ್ನು ಎದುರಿಸಲು ಶಕ್ತರಾಗಬೇಕು ಎಂದು ಅವರು ಸಲಹೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳವು ಶಿಕ್ಷಣ ಸಂಸ್ಥೆ (ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿ) ಮೂಲಕ ಗುಣಮಟ್ಟದ ಶಿಕ್ಷಣ, ಮೌಲ್ಯ ಶಿಕ್ಷಣಕ್ಕೆ ಒತ್ತು ನೀಡುತ್ತ ಶಿಕ್ಷಣ ಯಜ್ಞ ನಡೆಸುತ್ತಿದೆ. ದೇಶದ ಸುಮಾರು 1,350 ವಿವಿಗಳ ಅಧೀನದ 50-52 ಸಾವಿರ ಕಾಲೇಜುಗಳಲ್ಲಿ ಉನ್ನತ 100 ಕಾಲೇಜುಗಳ ಪೈಕಿ ಎಸ್.ಡಿ.ಎಂ. ಕಾಲೇಜು ಒಂದೆಂದು ಗುರುತಿಸಲ್ಪಟ್ಟಿದೆ. ಕಡಿಮೆ ಶುಲ್ಕ, ನುರಿತ ಬೋಧಕ ವರ್ಗ, ಪಠ್ಯೇತರ ಚಟುವಟಿಕೆಗೆ ಅವಕಾಶ ಇತ್ಯಾದಿ ವ್ಯವಸ್ಥೆಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನ, ಬೌದ್ಧಿಕ ವಿಕಸನಕ್ಕೆ ಒತ್ತು ನೀಡುತ್ತಿದೆ ಎಂದರು. ಮುಖ್ಯ ಅತಿಥಿ, ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಜೋಸೆಫ್ ಎನ್.ಎಂ. ಮಾತನಾಡಿದರು. ಮಾಹಿತಿ ಪೂರಕ್ಕೆ ಸಿಲುಕಿರುವ ಯುವ ಪೀಳಿಗೆ ಅಗತ್ಯವಾದುದನ್ನು ಅರಗಿಸಿಕೊಂಡು ಕಲಿಕೆಯನ್ನು ಒರೆಹಚ್ಚಿ ನೋಡುವ ಪ್ರಯತ್ನ ಮಾಡಬೇಕು ಎಂದರು. ಎಲ್ಲವೂ ತಿಳಿದಿದೆ ಎಂಬ ಅಹಂ ಬಿಟ್ಟು, ಕಲಿಕೆಯತ್ತ ಮನಸ್ಸು ಮಾಡಬೇಕು. ಅಂಧಾನುಕರಣೆ ಬಿಟ್ಟು ಜ್ಞಾನವಂತರನ್ನು ಹಿಂಬಾಲಿಸಬೇಕು. ಸಮಾಜಕ್ಕೆ ಪ್ರಯೋಜನಕಾರಿ ಜ್ಞಾನವಂತರಾಗಿ ರೂಪುಗೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗುಣಮಟ್ಟದ ಶಿಕ್ಷಣ, ಸಂಸ್ಕೃತಿ, ಮೌಲ್ಯ ಕಲಿಕೆ ನಮ್ಮ ಆಶಯವಾಗಿದ್ದು, ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಪೂರಕವಾದ ವ್ಯವಸ್ಥೆಗಳು ನಮ್ಮಲ್ಲಿವೆ. ಆದರೆ ಅಂತಿಮವಾಗಿ ಪರಿಶ್ರಮವೆಂಬುದು ವಿದ್ಯಾರ್ಥಿಗಳದ್ದೇ ಆಗಿರುತ್ತದೆ. ಅವಕಾಶಗಳನ್ನು ವರವಾಗಿ ಪರಿವರ್ತಿಸಿಕೊಳ್ಳಬೇಕು. ಪೋಷಕರೂ ತಮ್ಮ ಮಕ್ಕಳ ಕಲಿಕಾ ಪ್ರಗತಿ ಬಗ್ಗೆ ಗಮನ ಇರಿಸಬೇಕು ಎಂದರು. ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಶೈಕ್ಷಣಿಕ ಸಂಯೋಜಕ ಎಸ್. ಎನ್. ಕಾಕತ್ಕರ್, ಕಾಲೇಜಿನ ಉಪ ಪ್ರಾಂಶುಪಾಲೆ ನಂದಕುಮಾರಿ, ಆಡಳಿತಾಂಗ ಕುಲಸಚಿವ ಡಾ. ಶ್ರೀಧರ ಭಟ್, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯಕ್, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಜಿ. ಆರ್. ಭಟ್ ಉಪಸ್ಥಿತರಿದ್ದರು. ಸುಪ್ರೀತಾ ಪ್ರಾರ್ಥಿಸಿದರು. ವಿದ್ಯಾರ್ಥಿ ಶಿಸ್ತುಪಾಲನ ಸಮಿತಿ ಸಂಯೋಜಕ ನಟರಾಜ್ ಎಚ್. ಕೆ. ಸ್ವಾಗತಿಸಿ, ಮುಖ್ಯ ಸಂಯೋಜಕ ಶ್ರೇಯಸ್ ಬಿ. ವಂದಿಸಿದರು. ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು.

ಸಮಯನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ: ಡಾಕ್ಟರ್ ಪುನೀತ್

Article Image

ಸಮಯನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ: ಡಾಕ್ಟರ್ ಪುನೀತ್

ಮೂಡುಬಿದಿರೆ: ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ ವೈದ್ಯ ದಿನಾಚರಣೆಯನ್ನು ನೆರವೇರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನದೊಂದಿಗೆ ವೈದ್ಯರಿಗೆ ಗೌರವವನ್ನು ಅರ್ಪಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಯುವರಾಜ್ ಜೈನ್ ರವರು ಉಪಸ್ಥಿತರಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳ ಜೀವನದ ಘಟನೆಗಳನ್ನು ಸ್ಮರಿಸುವ ಮೂಲಕ ವೈದ್ಯ ವೃತ್ತಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾಕ್ಟರ್ ಪುನೀತ್ ರವರು ಮಾತನಾಡಿ ಸಮಯ ನಿಷ್ಠೆಯಿಂದ ಕಾರ್ಯಪ್ರವೃತ್ತನಾಗುವವನೇ ನಿಜವಾದ ವೈದ್ಯ ಎಂದು ಹೇಳುವ ಮೂಲಕ ವೈದ್ಯರಾಗಬೇಕೆಂಬ ಕನಸನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ವೈದ್ಯ ವೃತ್ತಿಯ ಘನತೆಯ ಕುರಿತು ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ಮುಖ್ಯಸ್ಥರಾಗಿರುವ ವಿಶ್ವರಾಜ್, ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿ ಇಷಿತ ನೆರವೇರಿಸಿದರು. ವಿದ್ಯಾರ್ಥಿನಿಯಾದ ಪ್ರಿಯಾಂಕರವರು ಸ್ವಾಗತಿಸಿ, ಆರವ್ ಕಿರಣ್ ವಂದಿಸಿದರು.

ಜೈನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Article Image

ಜೈನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಜೈನ ಪದವಿಪೂರ್ವ ಕಾಲೇಜು ಮೂಡುಬಿದಿರೆ ಇದರ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು.ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಗೌರವಾನ್ವಿತ ಸಂಚಾಲಕರಾದ ಶ್ರೀಯುತ ಕೆ. ಹೇಮರಾಜ್ ವಹಿಸಿದ್ದರು. ಉದ್ಘಾಟಕರಾಗಿ ಆಗಮಿಸಿದ ಡಾII ಮಾಧವ ಎಮ್. ಕೆ. ಮುಖ್ಯಸ್ಥರು ಕನ್ನಡ ವಿಭಾಗ ಹಾಗೂ ಸಂಯೋಜಕರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳೂರು ಇವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಜೀವನದಲ್ಲಿಒಳ್ಳೆಯ ಸಂಸ್ಕಾರ, ಒಂದು ಗುರಿಯನ್ನು ಇಟ್ಟುಕೊಂಡು, ಕಠಿಣ ಪರಿಶ್ರಮ ಪಡುತ್ತಾ ಇಷ್ಡಪಟ್ಟು ಓದಿದರೆ ಯಶಸ್ಸು ಖಂಡಿತ ಸಾಧ್ಯ. ಎಷ್ಟೇ ಶ್ರೀಮಂತರಿರಲಿ ಎಷ್ಟೇ ಬಡವರಿರಲಿ ಎಲ್ಲರಿಗೂ ಇರುವ ದಿನದ ಸಮಯ ಒಂದೇ. ವಿದ್ಯಾರ್ಥಿಗಳು ಅದನ್ನು ಸರಿಯಾಗಿ ಸದುಪಯೋಗ ಪಡಿಸಿಕೊಂಡು ಶ್ರಮ ಪಡಬೇಕು ಎಂದು ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾII ಪ್ರಭಾತ್ ಬಲ್ನಾಡು ಇವರು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚರಣ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಪರಿಚಯಿಸಿದರು. ದಿಗಂಬರ ಜೈನ ವಿದ್ಯಾವರ್ಧಕ ಸಂಘದ ವತಿಯಿಂದ 2024-25 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಘದ ಸಂಚಾಲಕರು ಹಾಗೂ ಕಾರ್ಯಕ್ರಮದ ಅಧ್ಯಕ್ಷರೂ ಆಗಿರುವ ಕೆ. ಹೇಮರಾಜ್ ಇವರು ಅಭಿನಂದಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಮಾತುಗಳನ್ನು ಆಡಿದರು. ವಿದ್ಯಾರ್ಥಿ ಸಂಘದ ಮಾರ್ಗದರ್ಶಕ ಉಪನ್ಯಾಸಕರಾದ ಶ್ರೀರಾಮಚಂದ್ರ ಭಟ್ ಇವರು ಅಭಿನಂದನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಕ್ಷಿತ್ ಟಿ.ಜಿ ಸರ್ವರನ್ನೂ ಸ್ವಾಗತಿಸಿದರು, ಕಾರ್ಯದರ್ಶಿ ಸಿಲ್ವಿಯಾ ಡಿ.ಸೋಜ ವಂದಿಸಿದರು. ಸಾಹಿತ್ಯ ಮತ್ತು ಲಲಿತ ಕಲಾ ಸಂಘದ ಕಾರ್ಯದರ್ಶಿ ಶ್ರವಣ್ ಶೆಟ್ಟಿ ಹಾಗೂ ಜೊತೆ ಕಾರ್ಯದರ್ಶಿ ಸಾನಿಕಾ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿ 17 ನೇ ಸ್ಥಾನ: ರಾಷ್ಟ್ರಮಟ್ಟದ ಸಾಧನೆ

Article Image

ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿ 17 ನೇ ಸ್ಥಾನ: ರಾಷ್ಟ್ರಮಟ್ಟದ ಸಾಧನೆ

ಮೂಡುಬಿದಿರೆ: ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರತಿಷ್ಠಿತ ಐಸರ್ ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಿಶಿರ್ ಶೆಟ್ಟಿ ಐಸರ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್ ನ ವಿದ್ಯಾರ್ಥಿ 17 ನೇ ಸ್ಥಾನವನ್ನು ಪಡೆದಿದ್ದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾನೆ. ಶಿಶಿರ್ ಈ ವರ್ಷ ನಡೆದ ಕಾಮೆಡ್ ಕೆ ನಲ್ಲಿ ರಾಷ್ಟ್ರಮಟ್ಟದಲ್ಲಿ ಮೊದಲ ಸ್ಥಾನ, ಜೆಇಇ ಅಡ್ವಾನ್ಸ್ಡ್‌ನಲ್ಲಿ ರಾಷ್ಟ್ರ ಮಟ್ಟದಲ್ಲಿ 664ನೇ ಸ್ಥಾನ, ಸಿಇಟಿ ಇ0ಜಿನಿಯರಿಂಗ್ ವಿಭಾಗದಲ್ಲಿ 4 ನೇ ಸ್ಥಾನ ಮತ್ತು ದ್ವಿತೀಯ ಪದವಿಪೂರ್ವ ಬೋರ್ಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7 ನೇ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುತ್ತಾನೆ. ಸ0ಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಯುವರಾಜ ಜೈನ್, ಪ್ರಾಂಶುಪಾಲರಾದ ಪ್ರದೀಪ ಕುಮಾರ್ ಶೆಟ್ಟಿ, ಮತ್ತು ಉಪನ್ಯಾಸಕ ವರ್ಗದವರು ಅಭಿನ0ದನೆ ಸಲ್ಲಿಸಿದ್ದಾರೆ.

ಉಜಿರೆ ಎಸ್.ಡಿ.ಎಂ. ಆಸ್ಪತ್ರೆ ವೈದ್ಯರಿಂದ ಮೈತ್ರಿ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಉಚಿತ ಚರ್ಮರೋಗ ತಪಾಸಣಾ ಶಿಬಿರ

Article Image

ಉಜಿರೆ ಎಸ್.ಡಿ.ಎಂ. ಆಸ್ಪತ್ರೆ ವೈದ್ಯರಿಂದ ಮೈತ್ರಿ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಉಚಿತ ಚರ್ಮರೋಗ ತಪಾಸಣಾ ಶಿಬಿರ

ಡಾ. ಡಿ. ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಎಸ್.ಡಿ.ಎಂ ಎಜ್ಯುಕೇಶನ್ ಸೊಸೈಟಿ ಸಹಯೋಗದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿ ಇವರು ಮೈತ್ರೆ ಹಾಸ್ಟೆಲ್ ಪದವಿ ಪೂರ್ವ ವಿದ್ಯಾರ್ಥಿನಿಯರಿಗೆ ಉಚಿತ ಚರ್ಮರೋಗ ತಪಾಸಣೆ ಮತ್ತು ಜಾಗೃತಿ ಶಿಬಿರವನ್ನು 2 ದಿನ ನಡೆಸಿಕೊಟ್ಟರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ಶರೀರದ ಆರೋಗ್ಯ ಕಾಪಾಡುವಲ್ಲಿ ಚರ್ಮದ ಪಾತ್ರ, ಹಾನಿಕಾರಕ ಪರಿಸರದ ಅಂಶಗಳಿಂದ ನಮ್ಮ ಚರ್ಮವನ್ನು ರಕ್ಷಿಸಿಕೊಳ್ಳಲು ಮಾಡಬೇಕಾದ ಚರ್ಮದ ಆರೈಕೆ. ಹದಿಹರೆಯದಲ್ಲಿ ಮೊಡವೆಗಳನ್ನು ತಡೆಗಟ್ಟುವ ವಿಧಾನ ಇತ್ಯಾದಿ ವಿಷಯಗಳನ್ನು ತಿಳಿಸಿಕೊಟ್ಟರು. ಸುಮಾರು 120 ವಿದ್ಯಾರ್ಥಿನಿಯರಿಗೆ ತಪಾಸಣೆ ನಡೆಸಿ, ಸೂಕ್ತ ಸಲಹೆ ನೀಡಿದರು.

First Previous

Showing 4 of 15 pages

Next Last