Article Image

ತಿಮ್ಮಣಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Article Image

ತಿಮ್ಮಣಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

ವೇಣೂರು: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳು ನಿಜವಾಗಿಯೂ ಸಂಸ್ಕಾರಯುತ ಶಿಕ್ಷಣವನ್ನು ನೀಡುವ ಕೇಂದ್ರಗಳಾಗಿವೆ ಇಂತಹ ಶಾಲೆಗಳ ವಿದ್ಯಾರ್ಥಿಗಳನ್ನು ಹಾಗೂ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಸಮಾಜದ ಸರ್ವರ ಪ್ರೋತ್ಸಾಹ ಅಗತ್ಯವಿದೆ. ಶಾಲಾ ಎಸ್.ಡಿ.ಎಂ.ಸಿ, ಮುಖ್ಯಶಿಕ್ಷಕರು ಮತ್ತು ಶಿಕ್ಷಕ ವೃಂದ ಹಾಗೂ ಪೋಷಕರು ಸಹಕಾರವಿದ್ದಾಗ ಮಾತ್ರ ಗ್ರಾಮೀಣ ಪ್ರದೇಶಗಳ ಶಾಲೆಗಳ ಉನ್ನತಿ ಸಾಧ್ಯ ಎಂದು ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಹಾಗೂ ಮೂಡುಬಿದಿರೆ ಶ್ರೀ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಹೇಮರಾಜ್ ಬೆಳ್ಳಿಬೀಡು ಹೇಳಿದರು. ಅವರು ಕರಿಮಣೇಲು ಗ್ರಾಮದ ತಿಮ್ಮಣಬೆಟ್ಟು ಸರಕಾರಿ ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ತಮ್ಮ ವೈಯಕ್ತಿಕ ನಿಧಿಯಿಂದ ಒಂದರಿಂದ ಏಳನೇ ತರಗತಿವರೆಗಿನ ಮಕ್ಕಳಿಗೆ ಇಡೀ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಮತ್ತು ಇತರ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿದ ಅವರು ಈ ದಿನದಂದು ವಿತರಿಸಿದ ಪುಸ್ತಕಗಳನ್ನು ಸದುಪಯೋಗ ಪಡಿಸಿಕೊಂಡು ತಾವು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ, ನಿಮ್ಮೊಂದಿಗೆ ನಿಮ್ಮ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕವೃಂದ, ಪೋಷಕರು ಬೆಂಬಲವಾಗಿ ಇರುತ್ತಾರೆ, ಕಲಿಕೆಯಲ್ಲಿ ಉತ್ತಮ ಆಸಕ್ತಿಯನ್ನು ವಹಿಸಿ ತಮ್ಮ ಸಾಧನೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಶಾಲೆಗೆ, ಊರಿಗೆ ಮತ್ತು ನಿಮ್ಮ ಹೆತ್ತವರಿಗೆ ಕೀರ್ತಿ ತರಬೇಕೆಂದರು. ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಜೈನ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್‌ ಮೂಡುಕೋಡಿ ಭಾಗವಹಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಸುಮ, ಮರಾಠಿ ಸೇವಾ ಸಂಘದ ಅಧ್ಯಕ್ಷ ವಿಠಲ ನಾಯ್ಕ, ಮಾಜಿ ಅಧ್ಯಕ್ಷ ಲಕ್ಷ್ಮಣ ನಾಯ್ಕ, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಸಚಿನ್ ಬೇಗೂರ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಗಾಯತ್ರಿ ಪ್ರಶಾಂತ್ ಅತಿಥಿಗಳಾದ ಕೆ. ಹೇಮರಾಜ್ ರವರನ್ನು ಸಭೆಗೆ ಪರಿಚಯಿಸಿದರು. ಶಿಕ್ಷಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ರಾಜುನಾಯ್ಕ ವಂದಿಸಿದರು.

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Article Image

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ಹಾಗೂ ಶ್ರಾವಕ ಬಂಧುಗಳ ಸರ್ವ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಾ ಬರಲಾಗುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನವನ್ನು ನೀಡಲಾಗುತ್ತಿದೆ. ಅದೇ ರೀತಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2025 ನೇ ಸೆಪ್ಟಂಬರ್ 21ರಂದು ಶ್ರೀಕ್ಷೇತ್ರ ಹೊಂಬುಜ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀಮದ್ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಿ ಪ್ರೋತ್ಸಾಹಿಸಲಾಗುವುದು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ SSLC, ಗಿಂತ ಮೇಲ್ಪಟ್ಟು ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಬಿಬಿಎಂ, ಎಂಬಿಎ, ಇಂಜಿನಿಯರಿಂಗ್, ವೈದ್ಯಕೀಯ ಇನ್ನಿತರ ವ್ಯಾಸಂಗವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳು ಮಾತ್ರ ನಿಗದಿತ ಅರ್ಜಿ ನಮೂನೆಯಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರದ ಕಚೇರಿಯಲ್ಲಿ ಪಡೆದುಕೊಳ್ಳುವುದು ಮತ್ತು ಅರ್ಜಿಯೊಂದಿಗೆ ಪ್ರಸ್ತುತ ಕಲಿಯುತ್ತಿರುವ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣ ಪತ್ರ, ಕಳೆದ ವರ್ಷ ಕಲಿತು ತೇರ್ಗಡೆ ಆಗಿರುವ ಬಗ್ಗೆ ಅಂಕಪಟ್ಟಿಯ ಯಥಾಪ್ರತಿ, ವಿದ್ಯಾರ್ಥಿಯ ಪ್ರಸ್ತುತ ಮನೆಯ ವಿಳಾಸ, ವಿದ್ಯಾರ್ಥಿಯ ಆಧಾರ್ ಕಾರ್ಡ್ ಯಥಾಪ್ರತಿ, ಸಂಪರ್ಕ ಸಂಖ್ಯೆ, ತಂದೆ ಮತ್ತು ತಾಯಿಯ ಹೆಸರು ನಮೂದಿಸಿ ಇವರಿಬ್ಬರಲ್ಲಿ ಒಬ್ಬರ ಸಹಿಯೊಂದಿಗೆ ಆಗಸ್ಟ್ 31ರ ಒಳಗೆ ಕೆ. ಜಯವರ್ಮರಾಜ್ ಬಳ್ಳಾಲ್, ಮ್ಯಾನೇಜಿಂಗ್ ಟ್ರಸ್ಟಿ, ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ,) ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನ್ ಪೇಟೆ, ಬೆಳ್ತಂಗಡಿ,-574214 ದಕ್ಷಿಣ ಕನ್ನಡ ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಿಕೊಡಬೇಕು. ಅದೇ ರೀತಿ ಉಭಯ ಜಿಲ್ಲೆಗಳಲ್ಲಿ ತೀವ್ರತರದ ಕಾಯಿಲೆಗಳಾದ ಕ್ಯಾನ್ಸರ್, ಕಿಡ್ನಿ, ಹೃದಯ ಸಂಬಂಧಿ ಇನ್ನಿತರ ಕಾಯಿಲೆಗಳಿಂದ ಬಳಲುತ್ತಿರುವ ಜೈನ ಸಮಾಜದ ಅರ್ಹ ಬಂಧುಗಳು ಕೂಡ ಈ ಬಗ್ಗೆ ಈ ಕೆಳಗಿನ ವಿಳಾಸದಾರರನ್ನು ಸಂಪರ್ಕಿಸಿದ್ದಲ್ಲಿ ಪರಿಶೀಲಿಸಿ ಅಗತ್ಯ ನೆರವು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 08256-233577 ಅಥವಾ 9448180439,8310381962 ಸಂಖ್ಯೆಯ ದೂರವಾಣಿಯನ್ನು ಸಂಪರ್ಕಿಸಬಹುದೆಂದು ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ. ಜಯವರ್ಮರಾಜ್ ಬಳ್ಳಾಲ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

ಧಾರವಾಡ ಜೈನ ಮಿಲನದ ಕಾರ್ಯಗಳು ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿದಿವೆ : ಡಾ. ಅಜಿತಪ್ರಸಾದ

Article Image

ಧಾರವಾಡ ಜೈನ ಮಿಲನದ ಕಾರ್ಯಗಳು ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿದಿವೆ : ಡಾ. ಅಜಿತಪ್ರಸಾದ

ಒಂದು ಸಂಸ್ಥೆ ಅದು ಮಾಡುವ ಅತ್ಯುನ್ನತ ಕಾರ್ಯಗಳಿಂದಲೇ ಸಮಾಜದಲ್ಲಿ ವಿಶಿಷ್ಟ ಸ್ಥಾನ ಪಡೆದು ವಿಶೇಷವಾಗಿ ಗುರುತಿಸಿಕೊಳ್ಳುತ್ತದೆ ಮತ್ತು ಅದು ಧರ್ಮಪ್ರಭಾವನೆಗೆ ಕಾರಣವಾಗುತ್ತದೆ ಎಂದು ಜನತಾ ಶಿಕ್ಷಣ ಸಮಿತಿ ಕಾರ್ಯದರ್ಶಿಗಳು ಹಾಗೂ ಧಾರವಾಡ ಜೈನ ಮಿಲನ ಸಂಸ್ಥಾಪಕ ಕಾರ್ಯದರ್ಶಿಗಳೂ ಆದ ಡಾ. ಅಜಿತಪ್ರಸಾದ ಹೇಳಿದರು, ಅವರು ಧಾರವಾಡ ಜೈನ ಮಿಲನ್ ಅಯೋಜಿಸಿದ್ದ ವನಮಹೋತ್ಸವ, ಪ್ರಸಕ್ತ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಮುಂದುವರೆದ ಅವರು ಕಳೆದ 33 ವರ್ಷಗಳಿಂದ ಧಾರವಾಡ ಜೈನ ಮಿಲನ್ ಇಂಥ ಹಲವಾರು ಜನೋಪಯೋಗಿ ಕಾರ್ಯಕ್ರಮ ಮಾಡುವಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದರು. ಪ್ರಾರಂಭದಲ್ಲಿ ಜೆ ಎಸ್ ಎಸ್ ಸಂಸ್ಥೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಸಾಂಕೇತಿಕವಾಗಿ ವನಮಹೋತ್ಸವ ಆಚರಿಸಲಾಯಿತು ಮುಂದಿನ ಒಂದು ವಾರದಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಅರ್ಥಪೂರ್ಣವಾಗಿ ವನಮಹೋತ್ಸವವನ್ನು ರಚನಾತ್ಮಕವಾಗಿ ಆಯೋಜಿಸಲಾಯಿತು. ಸಂಸ್ಥೆಯ ಐವತ್ತಕ್ಕೂ ಹೆಚ್ಚು ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ನೋಟ ಬುಕ್ ವಿತರಿಸಿ ಅವರ ವಿದ್ಯಾರ್ಜನೆಗೆ ಉತ್ಸಾಹ ಪ್ರೋತ್ಸಾಹ ತುಂಬಲಾಯಿತು. ಮಿಲನದ ನೂತನ ಅಧ್ಯಕ್ಷ ಜಿನ್ನಪ್ಪ ಕುಂದಗೋಳ, ಕಾರ್ಯದರ್ಶಿ ರತ್ನಾಕರ ಹೋಳಗಿ ಮತ್ತು ಖಜಾಂಚಿ ಮೋಹನಕುಮಾರ ಗೋಗಿ ಇವರುಗಳಿಗೆ ಬ್ಯಾಡ್ಜ್ ವಿತರಿಸಿ ಪ್ರಮಾಣ ವಚನವನ್ನು ಡಾ. ಅಜಿತಪ್ರಸಾದ ಬೋಧಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಕಾರ್ಯದರ್ಶಿ ಶಾಂತರಾಜ ಮಲ್ಲಸಮುದ್ರ ಇವರು ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಿಲನದ ನಿಕಟಪೂರ್ವಅಧ್ಯಕ್ಷಿಣಿ ಸುಜಾತಾ ಹಡಗಲಿ ಹಾಗೂ ಇತರ ಪದಾಧಿಕಾರಿಗಳಾದ ಸಂಗೀತಾ ಉಪಾಧ್ಯ, ಸುನಂದಾ ವರದಿ ಜೈನ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಿನದತ್ತ ಹಡಗಲಿ, ಗಣ್ಯರಾದ ಮಹಾವೀರ ಉಪಾಧ್ಯ, ಎ ಎ ಬಾಳಿಕಾಯಿ, ಕೆ.ಜೆ. ರಪಾಟಿ ಹಾಗೂ ಬ್ರಹ್ಮಪ್ರಕಾಶ, ಡಿ.ಸಿ. ನಾಯಕ, ಅಮಿತ್ ಡೊರ್ಲೆ ಹಾಗೂ ಮಿಲನದ ಸದಸ್ಯರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇದೇ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಆಥಿತ್ಯವನ್ನು ನೀಡಿದ ವಾಣಿಪ್ರಸಾದ ಇವರನ್ನು ಗೌರವಿಸಿ ಸತ್ಕಾರಿಸಲಾಯಿತು. ಣಮೋಕಾರ ಮಂತ್ರದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಿಕ್ಷಕಿ ರಾಜೇಶ್ವರಿ ಶೆಟ್ಟಿ ಇವರು ಸ್ವಾಗತ ಗೀತೆ ಹಾಡಿದರು, ಡಾ. ಸೂರಜ ಜೈನ ಇವರು ಸಮಾರಂಭದಲ್ಲಿ ಭಾಗವಹಿಸಿದ ಸರ್ವರನ್ನು ಸ್ವಾಗತಿಸಿದರು. ಕೊನೆಯಲ್ಲಿ ವೈಶಾಲಿ ಹೊನ್ನಪ್ಪನವರ ಇವರು ವಂದಿಸಿದರು. ಕಾರ್ಯಕ್ರಮವನ್ನು ಸುನಂದಾ ವರೂರ ಅತ್ಯಂತ ಅಚ್ಚುಕಟ್ಟಾಗಿ ನಿರೂಪಿಸಿದರು. ವರದಿ: ಶಾಂತರಾಜ ಮಲ್ಲಸಮುದ್ರ

ಜೈನ ಸಮಾಜದ ಅಪರೂಪದ ರಾಜಕಾರಿಣಿ

Article Image

ಜೈನ ಸಮಾಜದ ಅಪರೂಪದ ರಾಜಕಾರಿಣಿ

ಶ್ರೀ ತವನಪ್ಪ ಅಷ್ಟಗಿ ಅವರ ೬೪ ನೇ ಜನ್ಮ ದಿನದ ಸಂಭ್ರಮ ಇಂದು ವಿಧಾನ ಪರಿಷತ್ ಸ್ಥಾನಕ್ಕೆ ನಾಮಕರಣಕ್ಕೆ ಸೂಕ್ತ ಅಭ್ಯರ್ಥಿ. ಜಾತಿ ಆಧಾರವೇ ನಿರ್ಣಾಯಕವಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಅಲ್ಪಸಂಖ್ಯಾತರಲ್ಲಿಯೇ ಅಲ್ಪಸಂಖ್ಯಾತ ಜೈನ ಸಮುದಾಯದ ನಾಯಕ ಧಾರವಾಡ ತಾಲೂಕು ಉಪ್ಪಿನ ಬೆಟಗೇರಿ ಗ್ರಾಮದ ಸ್ನೇಹ ಜೀವಿ ಶ್ರೀ ತವನಪ್ಪ ಅಷ್ಟಗಿಯವರು. ಸಾರ್ವಜನಿಕ ಕ್ಷೇತ್ರದಲ್ಲಿ ಇವರ ಜನಪರ ಕಾಳಜಿ, ಮೌಲ್ಯಾಧಾರಿತ ರಾಜಕೀಯ ಸಿದ್ದಾಂತ,ಸಾಮಾನ್ಯ ಜನರೊಂದಿಗೆ ನಿರಂತರ ಸಂಪರ್ಕ ಮತ್ತು ಸಮಸ್ಯೆ ಪರಿಹಾರದ ಬಗ್ಗೆ ಸ್ಪಂದನೆ ಪ್ರಾಮಾಣಿಕ ಪ್ರಯತ್ನ ಶುದ್ಧ ಚಾರಿತ್ಯ ಇವರ ಹುಟ್ಟುಗುಣ. ಈ ಕಾರಣದಿಂದಲೇ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಬಹಳ ಜನಪ್ರೀಯ ನಾಯಕರಾಗಿ ಹೊರಹೊಮ್ಮಿದ್ದಾರೆ ಹಾಗೂ ಒಂದೂ ವಿವಾದ ಇಲ್ಲದ ಅಪ್ಪಟ ನಾಯಕರು ಎನ್ನಬಹುದು. ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಅಪಾರ ಜನ ಬೆಂಬಲ ಇದ್ದು ಅಪಾರವಾದ ಅಭಿಮಾನಿಗಳನ್ನು, ಹಿತ ಚಿಂತಕರನ್ನು ಹೊoದಿ ಅವರ ಆಶಯದಂತೆ ಜನರ ಸೇವೆಗಾಗಿ ರಾಜಕೀಯವನ್ನು ಬಳಸಿಕೊಳ್ಳುತ್ತಿವ ಅಪರೂಪದ ರಾಜಕಾರಣಿ ಇವರು. ಜೊತೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಹಿಂದಿನ ಶಕ್ತಿ ಇವರೇ ಆಗಿದ್ದಾರೆ. ಹಿನ್ನಲೆ, ಕಾರ್ಯಾವಲೋಕನ ಮತ್ತು ಸಂಕ್ಷಿಪ್ತ ಪರಿಚಯ : ಶ್ರೀ ತವನಪ್ಪಾ ಅಷ್ಟಗಿಯವರು ಗ್ರಾಮೀಣ ಹಿನ್ನೆಲೆಯುಳ್ಳವರು ಧಾರವಾಡ ತಾಲೂಕು ಉಪ್ಪಿನ ಬೆಟಗೇರಿ ಗ್ರಾಮದ ರೈತ ಕುಟುಂಬದ ಶ್ರೀ ಪಾಯಪ್ಪ ಮತ್ತು ದ್ಯಾಮವ್ವ ದಂಪತಿಗಳ ಉದರದಲ್ಲಿ ಜನಿಸಿದ್ದು ದಿ 6-7-1961ರಲ್ಲಿ ಪಿಯುಸಿವರೆಗೆ ಶಿಕ್ಷಣ ಪಡೆದ ಇವರು ಸಮಾಜ ಸೇವೆಯನ್ನೇ ಗುರಿಯಾಗಿಟ್ಟುಕೊಂಡು ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ಅದರಲ್ಲಿ ಸಾರ್ಥಕತೆಯನ್ನು ಕಂಡಿದ್ದಾರೆ. ಸಾರ್ವಜನಿಕ ಸೇವೆಯ ಮನೋಭಾವನೆಯಿಂದ ರಾಜಕೀಯ ಪ್ರವೇಶಿಸಿದ ಇವರು 2005 ರ ಜಿಲ್ಲಾ ಪಂಚಾಯತು ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾಯಿತರಾದರು ಹಾಗೂ 2008 - 2009 ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಅರೋಗ್ಯ ಸಂಘಟನೆಯ ಅಧ್ಯಕ್ಷರಾಗಿ ಅತ್ಯಂತ ಸಮರ್ತವಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಧರ್ಮಪತ್ನಿ ಶ್ರೀಮತಿ ಕಸ್ತೂರಿ ಅಷ್ಟಗಿ ಕೂಡ ರಾಜಕೀಯದಲ್ಲಿ ಒಳ್ಳೆಯ ಹೆಸರು ಮಾಡಿದ್ದು ಇವರು ಕೂಡ ಉಪ್ಪಿನ ಬೆಟಗೇರಿ ಕ್ಷೇತ್ರದಿಂದ ಜಿಲ್ಲಾ ಪಂಚಾಯತಿ ಸದಸ್ಯರಾಗಿ 2011-2016 ರ ಅವಧಿಗೆ ಆಯ್ಕೆಯಾಗಿ 2016ರಲ್ಲಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. "ಇದುವರೆಗೂ ಎಲ್ಲಿಯೂ ಒಂದು ಪೈಸೆಯೂ ಭ್ರಷ್ಟಾಚಾರದ ಮಾಡಿದವನಲ್ಲ ಹಣಕ್ಕಾಗಿ ನನ್ನ ನಿಷ್ಠೆ ಹಾಗೂ ಕರ್ತವ್ಯ ಮರೆತವನಲ್ಲ" ಎಂದು ಶ್ರೀ ತವನಪ್ಪ ಹಲವಾರು ಬಾರಿ ಹೇಳಿಕೊಂಡಿದ್ದಾರೆ. ಇವರ ಮೂಲತ ಕೃಷಿ ಕುಟುಂಬದವರಾಗಿದ್ದು ಅತ್ಯಂತ ಪ್ರಗತಿಪರ ರೈತ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜೊತೆಗೆ ರೈತರಲ್ಲಿ ಆತ್ಮಸ್ಥರ್ಯ ತುಂಬಿ ಅವರನ್ನು ಸ್ವಾವಲಂಬರನ್ನಾಗಿ ಮಾಡಿ ಹೆಮ್ಮೆಯಿಂದ ಬದುಕಲು ಪ್ರೇರೇಪಿಸುತ್ತಾ ಅವರಿಗೆ ಪ್ರೀತಿ ಪಾತ್ರರಾಗಿದ್ದು ಉತ್ತಮ ಮಾರ್ಗದರ್ಶಕರಾಗಿದ್ದಾರೆ. ಇವರ ಕ್ಷೇತ್ರದಲ್ಲಿ ಸಣ್ಣವರಿರಲಿ ದೊಡ್ಡವರಲಿ ಪ್ರತಿಯೊಬ್ಬರ ಮನೆ ಮನೆಯಲ್ಲಿ ನಡೆಯುವ ಯಾವದೇ ಕಾರ್ಯಕ್ರಮವಿರಲಿ ಅಲ್ಲಿಗೆ ಬಿಡುವು ಮಾಡಿಕೊಂಡು ತಪ್ಪದೇ ಭಾಗವಹಿಸಿ ಅವರೊಂದಿಗೆ ಸ್ಪಂದಿಸುತ್ತಾರೆ ಇದೇ ಇವರ ದೊಡ್ಡಗುಣ. ಇವರದೇ ಮೇಲ್ವಿಚಾರಣೆಯಲ್ಲಿ ಧಾರವಾಡದಲ್ಲಿ ಕೃಷಿಗೆ ಪೂರಕ ಉದ್ದಿಮೆಯಾಗಿ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್ ಫ್ಯಾಕ್ಟರಿಯನ್ನು ಪ್ರಾರಂಭಿಸಿ ರೈತರ ಆಶಾಕಿರಣವಾಗಿದ್ದಾರೆ. ಜನ್ಮ ದಿನದ ವಿಶೇಷ : ತವನಪ್ಪ ಅಷ್ಟಗಿ ಇವರಿಗೆ ಅಭಿಮಾನಿಗಳು ಸ್ನೇಹಿತರು, ಕಾರ್ಯಕರ್ತರ, ಹಿತೈಸಿಗಳ ದೊಡ್ಡ ಬಳಗವೇ ಇದೆ. ಇವರೆಲ್ಲರೂ ಸೇರಿ ಇವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಸಲು ರವಿವಾರ ದಿನಾಂಕ ೬ ರಂದು ಇಡೀ ದಿನ ರಕ್ತದಾನ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಲವಾರು ಪೂಜ್ಯರ ಆಶೀರ್ವಚನ, ಅನ್ನಸಂತರ್ಪಣೆ ಮುಂತಾದ ಜನಸ್ನೇಹಿ ಕಾರ್ಯಕ್ರಗಳನ್ನು ಸವದತ್ತಿ ರಸ್ತೆಯಲ್ಲಿ ರುವ ಪದ್ಮಾವತಿ ಕಾಟನ್ ಇಂಡಸ್ಟ್ರಿ ಯಲ್ಲಿ ಆಯೋಜಿಸಿದ್ದಾರೆ. ಮುಂದಿನ ಚಿಂತನೆಗಳು : ಕ್ಷೇತ್ರ ಸರ್ವಾoಗೀನ ಅಭಿವೃದ್ಧಿಗೆ ಶ್ರಮಿಸುವುದು, ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುವುದು. ಯುವಕರಲ್ಲಿ ನವೋತ್ಸಾಹ ತುಂಬಿ ಸ್ವಯಂ ಉದ್ಯೋಗಕ್ಕೆ ಪ್ರೇರೇಪಿಸುವುದು ನಿರುದ್ಯೋಗ ನಿವಾರಣೆ, ರಾಜಕೀಯದಲ್ಲಿ ಪ್ರಾಮಾಣಿಕ ಮೌಲ್ಯ ಆಧಾರಿತ ಕ್ರಮವನ್ನು ಅನುಸರಿಸುವುದು. ಇಂಥ ಒಬ್ಬ ನಿಷ್ಠಾವಂತ ರಾಜಕಾರಿಣಿಯನ್ನು ಈಗ ಖಾಲಿ ಇರುವ ವಿಧಾನ ಪರಿಷತ್ ಸ್ಥಾನಕ್ಕೆ ಸರಕಾರ ನಾಮಕರಣ ಮಾಡಬೇಕೆಂದು ಈ ಸಂಧರ್ಭದಲ್ಲಿ ಸರಕಾರವನ್ನು ಒತ್ತಾಯಿಸುತ್ತೇವೆ. ಇವರ ರಾಜಕೀಯ ಭವಿಷ್ಯ ಉಜ್ವಲವಾಗಲಿ ಈ ನಾಡಿಗೆ ಇವರ ಸೇವೆ ಮಾರ್ಗದರ್ಶನ ಸದಾ ಲಭಿಸಲಿ ಇವರ ಆದರ್ಶ ನಡೆ ನುಡಿ ಇತರರಿಗೆ ಮಾದರಿಯಾಗಲಿ ಎನ್ನುವ ಹಾರೈಕೆಗಳೊಂದಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಶಾಂತರಾಜ ಮಲ್ಲಸಮುದ್ರ ಲೇಖಕರು

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Article Image

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಜು.1 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯರ ಸೇವೆ ಮತ್ತು ತ್ಯಾಗ ಅಮೂಲ್ಯವಾದದ್ದು, ರೋಗಿಗಳ ಸೇವೆಗಾಗಿ ತನ್ನ ಹೆಚ್ಚಿನ ಸಮಯವನ್ನು ಮುಡಿಪಾಗಿಡುವ ವೈದ್ಯರದ್ದು ಒತ್ತಡದ ಜೀವನ. ಇಂತಹ ಗ್ರಾಮೀಣ ಪ್ರದೇಶದ ಆಸ್ಪತ್ರೆಯಲ್ಲಿ ವೈದ್ಯಕೀಯ ವೃತ್ತಿ ಮಾಡುತ್ತಾ, ರೋಗಿಗಳ ಸೇವೆಯ ವಿಷಯ ಬಂದಾಗ ಎಲ್ಲರು ಒಗ್ಗಟ್ಟಿನಿಂದ ರೋಗಿಯ ಸೇವೆಗೆ ಮುಂದಾಗುವ ನಮ್ಮ ಆಸ್ಪತ್ರೆಯ ವೈದ್ಯರ ಸೇವೆ ನಿಜವಾಗಿಯೂ ಶ್ಲಾಘನೀಯ ಎಂದರು. ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದ ಮತ್ತು ಆದೇಶದಂತೆ, ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಮ್ಮ ಆಸ್ಪತ್ರೆಯ ವೈದ್ಯಕೀಯ ತಂಡ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಿದ್ದು, ಸ್ವತಃ ರೋಗಿಗಳೇ ವೈದ್ಯರ ಮತ್ತು ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸುತ್ತಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಶೀಘ್ರದಲ್ಲಿ ಎಂ.ಆರ್.ಐ ‌ಸ್ಕ್ಯಾನಿಂಗ್ ಸೇವೆ ದೊರೆಯಲಿದ್ದು, ದೇಶದಲ್ಲಿಯೇ ಈ ಅತ್ಯಾಧುನಿಕ ಯಂತ್ರ ಹೊಂದಲಿರುವ 2ನೆಯ ಆಸ್ಪತ್ರೆ ನಮ್ಮದಾಗಲಿದೆ ಎಂದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್ ಮಾತನಾಡಿ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಹಗಲಿರುಳು ದುಡಿಯುತ್ತಿರುವ ಎಲ್ಲಾ ವೈದ್ಯರಿಗೆ ಶುಭ ಹಾರೈಸಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಮಾತನಾಡಿ, ಎಲ್ಲರಿಗೂ ವೈದ್ಯರ ದಿನಾಚರಣೆಯ ಶುಭಾಶಯ ತಿಳಿಸುತ್ತಾ, ಹಿರಿಯ ಅನುಭವಿ ವೈದ್ಯರೊಂದಿಗೆ ಯುವ ಮತ್ತು ಉತ್ಸಾಹಭರಿತ ವೈದ್ಯರ ತಂಡವೇ ಈ ಆಸ್ಪತ್ರೆಯಲ್ಲಿ ರೋಗಿಗಳ ಸೇವೆಗೆ ಸದಾ ಸಿದ್ಧವಾಗಿದೆ ಎಂದರು. ಈ ಸಂದರ್ಭದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಎಲ್ಲಾ ವೈದ್ಯರನ್ನು ಸನ್ಮಾನಿಸಲಾಯಿತು. ವಿವಿಧ ಮನರಂಜನಾ ಹಾಗೂ ಫನ್ನಿ ಗೇಮ್ಸ್‌ಗಳಲ್ಲಿ ಆಸ್ಪತ್ರೆಯ ವೈದ್ಯರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಖುಷಿಪಟ್ಟರು. ಆಸ್ಪತ್ರೆಯ ವೈದ್ಯರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಜಗನ್ನಾಥ ಎಂ ಮತ್ತು ಸೃಜನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇನ್ನರ್ ವೀಲ್ ಕ್ಲಬ್ ಮೂಡುಬಿದಿಯ ಜೈನ್ ಪೇಟೆಯಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಅಳವಡಿಕೆ

Article Image

ಇನ್ನರ್ ವೀಲ್ ಕ್ಲಬ್ ಮೂಡುಬಿದಿಯ ಜೈನ್ ಪೇಟೆಯಲ್ಲಿ ಸೋಲಾರ್ ಸ್ಟ್ರೀಟ್ ಲೈಟ್ ಅಳವಡಿಕೆ

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ ಯವರು ಸಾರ್ವಜನಿಕರಿಗೆ ಉಪಯೋಗ ಆಗುವಂತೆ ಸೋಲಾರ್ ಸ್ಟ್ರೀಟ್ ಲೈಟ್ ಅನ್ನು ಸಾವಿರ ಕಂಬದ ಬಸದಿಯ ಹತ್ತಿರ ಅಳವಡಿಸಿದರು. ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಉದ್ಘಾಟಿಸಿ ಇನ್ನರ್ ವೀಲ್ ಕ್ಲಬ್ ಇನ್ನಷ್ಟು ಸಮಾಜ ಮುಖಿಯಾಗಿ ತೊಡಗಿಸಿಕೊಳ್ಳಲಿ ಎಂದು ಹಾಗೂ ನೂತನ ಅಧ್ಯಕ್ಷರಾದ ಶ್ವೇತಾ ಜೈನ್ ಹಾಗೂ ಕಾರ್ಯದರ್ಶಿ ಅನಿತಾರವರಿಗೆ ಶುಭವನ್ನು ಹಾರೈಸಿ ಆರ್ಶೀವದಿಸಿದರು. ಎಂ.ಸಿ.ಎಸ್ ಬ್ಯಾಂಕಿನ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್‌ ಪೂರ್ವಾಧ್ಯಕ್ಷರಾದ ಎಂ ಬಾಹುಬಲಿ ಪ್ರಸಾದ್ ರವರು ಎಲ್ಲರಿಗೂ ಉಪಯೋಗವಾಗುವಂತಹ ಸಮಾಜಮುಖಿ ಕಾರ್ಯಕ್ರಮ ಇದಾಗಿದ್ದು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿದೆ. ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯ ಪಕ್ಕದಲ್ಲಿ ಇರುವಂತಹ ಈ ರಸ್ತೆಯಲ್ಲಿ ಸ್ಥಳೀಯರು ಮಾತ್ರವಲ್ಲದೆ ಹೊರ ಪ್ರದೇಶದಿಂದ ಬರುವವರು ಕೂಡ ಸಂಚರಿಸುತ್ತಾರೆ. ಇನ್ನರ್ ವೀಲ್ ಕ್ಲಬ್ ಕಳೆದ 33 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ವರ್ಷವು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸವನ್ನು ಮುಂದುವರಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಮ್., ಮಾಜಿ ಸಚಿವರಾದ ಕೆ. ಅಭಯ ಚಂದ್ರ ಜೈನ್, ಪುರಸಭಾ ಸದಸ್ಯ ಶ್ವೇತಾ ಪ್ರವೀಣೆ, ರೋಟರಿ ಕ್ಲಬ್‌ ಪೂರ್ವಾಧ್ಯಕ್ಷರಾದ ಡಾ| ಹರೀಶ್ ನಾಯಕ್, ಡಾ| ವಿನಯ್ ಕುಮಾರ್ ಹೆಗ್ಡೆ, ರೋ. ಜಯರಾಜ್ ಕಂಬಳಿ, ಇನ್ನರ್ ವೀಲ್ ಕ್ಲಬ್‌ ಸದಸ್ಯರಾದ ಪ್ರಕಾಶಿನಿ ಹೆಗ್ಡೆ, ಸುಜಯ ವೇದ ಕುಮಾರ, ವೀಣಾ, ರೇಷ್ಮಾ, ರಮ್ಯಾ, ಅಪೇಕ್ಷೆ, ದಿವ್ಯಾ ಹಾಗೂ ಜೈನ್ ಮಿಲನ್‌ನ ಪದಾಧಿಕಾರಿಗಳು ಭಾಗವಹಿಸಿದ್ದರು.

ಜೈನ ಶೋಭಾನೆ ಹಾಡುಗಳ ಪುಸ್ತಕ ಬಿಡುಗಡೆ

Article Image

ಜೈನ ಶೋಭಾನೆ ಹಾಡುಗಳ ಪುಸ್ತಕ ಬಿಡುಗಡೆ

ಜೈನ ಧರ್ಮದ ಸಂಪ್ರದಾಯದಲ್ಲಿ ಶೋಭಾನೆಗೆ ಬಹಳ ಮಹತ್ವವಿದೆ ಈ ಶೋಭಾನೆಗಳನ್ನು ಪಂಚಕಲ್ಯಾಣದ ವಿಧಿ-ವಿಧಾನಗಳಲ್ಲಿಯೂ ಕೂಡಾ ಹಾಡುತ್ತಾರೆ ಮದುವೆ, ಸೀಮಂತ, ನಾಮಕರಣ, ಉಪನಯನದ ಕಾರ್ಯಕ್ರಮಗಳಲ್ಲಿ ಶೋಭಾನೆ ಹಾಡುಗಳು ಬಹಳ ಪ್ರಾಮುಖ್ಯತೆಯನ್ನು ಪಡೆದಿರುತ್ತದೆ ಎಂದು ಮೂಡಬಿದಿರೆಯ ಪರಮಪೂಜ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀಯವರು ಪುಸ್ತಕವನ್ನು ಶ್ರುತ ಪಂಚಮಿಯ ದಿನದಂದು ಶ್ರೀ ಜೈನ ಮಠ ಮೂಡಬಿದಿರೆಯಲ್ಲಿ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಶೋಭಾನೆ ಹಾಡುಗಳ ಪುಸ್ತಕವನ್ನು ರಚಿಸಿದ ವಾಣಿಶ್ರೀ ಅಭಯ ಕುಮಾರ್ ಮೂಡಬಿದಿರೆ ಇವರನ್ನು ಶಾಲು ಹೊದಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಪಟ್ನ ಶೆಟ್ಟಿ ಸುಧೇಶ್ ಕುಮಾರ್, ಬಾಹುಬಲಿ ಪ್ರಸಾದ್, ಅಭಯ ಕುಮಾರ್, ವೀಣಾ ರಘ ಚಂದ್ರ, ವೃಂದಾ ರಾಜೇಂದ್ರ, ರೇಖಾ ಸುಧೇಶ್ ಕುಮಾರ್, ಮಂಜುಳ ಅಭಯ ಚಂದ್ರ, ಶ್ಚೇತಾ ಜೈನ್, ಉಷಾ ಜಯ ವೀರ್, ಮಂಜುಳ ಯಶೋಧರ್, ರಾಜೇಶ್ವರಿ ಶಂಭವ ಕುಮಾರ್, ಸುಧಾ ಪೃಥ್ವಿರಾಜ್ ಶಕುಂತಳಾ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

ಶಾಲಾ ಪ್ರಾರಂಭೋತ್ಸವ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

Article Image

ಶಾಲಾ ಪ್ರಾರಂಭೋತ್ಸವ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ಮೂಡುಬಿದಿರೆ, ದ.ಕ ಇಲ್ಲಿಯ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವವು ದಿನಾಂಕ 02-06-2025ನೇ ಸೋಮವಾರದಂದು ಶಾಲಾ ಅಮೃತ ಮಹೋತ್ಸವ ಕಟ್ಟಡದಲ್ಲಿ ನಡೆಸಲಾಯಿತು. ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಮೆರವಣಿಗೆಯ ಮೂಲಕ ಶಾಲಾ ಸಭಾಭವನಕ್ಕೆ ಕರೆತರಲಾಯಿತು. ಸಮಾರಂಭದ ಉದ್ಘಾಟನೆಯನ್ನು ಪುರಸಭೆಯ ಸದಸ್ಯರಾದ ಶ್ವೇತಾ ಪ್ರವೀಣ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಶಾಲೆಯ ಕೀರ್ತಿಯನ್ನು ಹೆಚ್ಚಿಸುವ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು. ಎಸ್.ಡಿ.ಎಂ.ಸಿಯ ಅಧ್ಯಕ್ಷರಾದ ಪವನ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಿದರು. ಶಾಲೆಯ ಎಲ್ಲಾ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಹಿತ ನುಡಿಗಳನ್ನಾಡಿದರು. ತಾಯಂದಿರ ಸಮಿತಿಯ ಅಧ್ಯಕ್ಷರಾದ ಆರತಿ ಜೈನ್ ಉಪಸ್ಥಿತರಿದ್ದರು. 2025-26ನೆ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು. ಶಾಲೆಯ ಹಿರಿಯ ಶಿಕ್ಷಕಿಯಾದ ಮಂಜುಳ ಜೈನ್ ಕಾರ್ಯಕ್ರಮದ ಅದ್ಯಕ್ಷಸ್ಥಾನವನ್ನು ವಹಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರನ್ನು ಸ್ವಾಗತಿಸಿ ತಮ್ಮ ಪ್ರಾಸ್ತವಿಕ ನುಡಿಯಲ್ಲಿ 2025-26ನೇ ಸಾಲಿನ ಯೋಜನೆಯ ಬಗ್ಗೆ ತಿಳಿಸಿದರು. 1 ರಿಂದ 7ನೇ ತರಗತಿಯವರೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳು ವೇದಿಕೆಯಲ್ಲಿ ತಮ್ಮ ಸ್ವ-ಪರಿಚಯ ಮಾಡಿಕೊಂಡರು ಕಾರ್ಯಕ್ರಮದ ನಿರೂಪಣೆಯನ್ನು ಮಂಜುಳ ಶಶೀಂದ್ರರವರು ನೆರವೇರಿಸಿದರು ಸಂದ್ಯಾರವರು ಧನ್ಯವಾದ ಗೈದರು.

ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ

Article Image

ಧರ್ಮಸ್ಥಳ: ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ

ಜೈನರ ಶ್ರದ್ಧಾಕೇಂದ್ರಗಳಾದ ಬಸದಿಗಳು ಸಮವಸರಣದ ಪ್ರತೀಕವಾಗಿದ್ದು, ಪರಿಶುದ್ಧ ಮನಸ್ಸಿನಿಂದ ಬಸದಿಗೆ ಹೋಗಿ ಅಷ್ಟದ್ರವ್ಯಗಳಿಂದ ಅಷ್ಟವಿಧಾರ್ಚನೆ ಪೂಜೆ ಮಾಡಿದಾಗ ಅಷ್ಟಕರ್ಮಗಳ ನಾಶವಾಗುತ್ತದೆ. ಸಕಲಕರ್ಮಗಳ ಕ್ಷಯದೊಂದಿಗೆ ಅಕ್ಷಯ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯೇ ಜೀವನದ ಗುರಿಯಾಗಬೇಕು ಎಂದು ಶ್ರವಣಬೆಳಗೊಳ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಮೂಹಿಕ ಋಷಿಮಂಡಲ ಪುಷ್ಪಾರ್ಚನೆಯಲ್ಲಿ ಭಾಗವಹಿಸಿ ಮಂಗಲ ಪ್ರವಚನ ನೀಡಿದರು. ದಾನ ಮತ್ತು ದೇವರ ಪೂಜೆ ಶ್ರಾವಕರ ಧರ್ಮವಾಗಿದೆ. ಗೃಹಸ್ಥರು ದಾನ, ಧರ್ಮಾದಿ ಸತ್ಕಾರ್ಯಗಳಿಂದ ಶೋಭಿಸುತ್ತಾರೆ. ದಾನದಿಂದ ದುರ್ಗತಿಯ ನಾಶವಾಗಿ ಸದ್ಗತಿ ಪ್ರಾಪ್ತವಾಗುತ್ತದೆ. ಪೂಜೆಯಲ್ಲಿ ದ್ರವ್ಯಪೂಜೆ ಮತ್ತು ಭಾವಪೂಜೆ ಎಂಬ ಎರಡು ವಿಧಗಳಿದ್ದು ದ್ರವ್ಯಪೂಜೆಯು ಭಾವಪೂಜೆಗೆ ನಾಂದಿಯಾಗಿದೆ. ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ಎಂಬ ಚತುರ್ವಿಧ ದಾನ ಪರಂಪರೆ ವಿಶ್ವವಿಖ್ಯಾತವಾಗಿದೆ. ಧರ್ಮಾಧಿಕಾರಿಗಳಾದ ಹೆಗ್ಗಡೆಯವರ ಮೂಲಕ ದಾನವೇ ಧರ್ಮವಾಗಿ ಧರ್ಮಸ್ಥಳದಲ್ಲಿ ನೆಲೆನಿಂತಿದೆ. ತೀರ್ಥಂಕರರು ತಮ್ಮ ಆತ್ಮಕಲ್ಯಾಣದೊಂದಿಗೆ ಲೋಕಕಲ್ಯಾಣ ಮಾಡಿದಂತೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೂಡಾ ತಮ್ಮ ಅವಿರತ ಸೇವಾಕಾಯಕ ಹಾಗೂ ಲೋಕಕಲ್ಯಾಣ ಕಾರ್ಯಗಳಿಂದ ತೀರ್ಥಂಕರರಾಗುವ ಎಲ್ಲಾ ಯೋಗ್ಯತೆ ಹಾಗೂ ಮಾನ್ಯತೆ ಹೊಂದಿದ್ದಾರೆ ಎಂದು ಸ್ವಾಮೀಜಿ ಬಣ್ಣಿಸಿದರು. ಧರ್ಮಸ್ಥಳಕ್ಕೆ ಬಂದಾಗ ತವರು ಮನೆಗೆ ಬಂದ ಅನುಭವ ತಮಗಾಗಿದೆ. ಹೆಗ್ಗಡೆಯವರು ಮತ್ತು ಕುಟುಂಬದವರ ಸೇವಾವೈಖರಿ ಶ್ಲಾಘಿಸಿ ಅಭಿನಂದಿಸಿದರು. ತಮ್ಮ ಪೂರ್ವಾಶ್ರಮದಲ್ಲಿ ಸಿದ್ಧವನ ಗುರುಕುಲದಲ್ಲಿ ವಿದ್ಯೆಯೊಂದಿಗೆ ತಮಗೆ ದೊರೆತ ಸಂಸ್ಕಾರ, ಶಿಸ್ತು ಮತ್ತು ಮಾರ್ಗದರ್ಶನದಿಂದ ತಮ್ಮ ಇಂದಿನ ಸ್ಥಾನಕ್ಕೆ ಶೋಭೆ ತಂದಿದೆ ಎಂದರು. ಸಿದ್ಧವನ ಗುರುಕುಲದಲ್ಲಿ ತಮ್ಮ ಮುತ್ತಜ್ಜ ನೇಮಿಸಾಗರವರ್ಣೀಜಿಯವರ ಸ್ಮಾರಕವನ್ನು ನಿರ್ಮಿಸಬೇಕೆಂದು ಸ್ವಾಮೀಜಿ ಹೆಗ್ಗಡೆಯವರಿಗೆ ಸಲಹೆ ನೀಡಿದರು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಉಪಸ್ಥಿತರಿದ್ದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪಂಚನಮಸ್ಕಾರ ಮಂತ್ರ ಪಠಣದಿಂದ ಅಪಾರ ಶಕ್ತಿ ದೊರಕಿ ನಮಗೆ ಪುಣ್ಯ ಸಂಚಯವಾಗುತ್ತದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಂಚನಮಸ್ಕಾರ ಮಂತ್ರ ಪಠಣದ ಬಗ್ಗೆ ವಿಶೇಷ ಉಪನ್ಯಾಸ ನೀಡಿರುವುದನ್ನು ಅವರು ಧನ್ಯತೆಯಿಂದ ಸ್ಮರಿಸಿದರು. ಉಭಯ ಸ್ವಾಮೀಜಿಯವರ ಪಾದಪೂಜೆ ಮಾಡಿ, ಧರ್ಮಸ್ಥಳದ ವತಿಯಿಂದ ಗೌರವಿಸಲಾಯಿತು. ಹೇಮಾವತಿ ವೀ. ಹೆಗ್ಗಡೆಯವರು, ಶ್ರದ್ಧಾಅಮಿತ್, ಡಿ. ಹರ್ಷೇಂದ್ರ ಕುಮಾರ್, ಶ್ರುತಾಜಿತೇಶ್, ಸೋನಿಯಾವರ್ಮ ಉಪಸ್ಥಿತರಿದ್ದರು. ಪ್ರಥಮ ಬಾರಿ ಧರ್ಮಸ್ಥಳ ಪುರಪ್ರವೇಶ ಮಾಡಿದ ಶ್ರವಣಬೆಳಗೊಳದ ಪೂಜ್ಯ ಸ್ವಾಮೀಜಿಯವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಉಪನ್ಯಾಸಕ ಮಹಾವೀರ ಜೈನ್ ಇಚಿಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಶ್ರವಣಬೆಳಗೊಳದ ಸ್ವಾಮೀಜಿಯವರು ಸಿದ್ಧವನ ಗುರುಕುಲಕ್ಕೂ ಭೇಟಿ ನೀಡಿದರು.

ಮಂಗಳೂರು: ರಾಜೇಶ್ ಎಮ್.ರವರು ಅಧ್ಯಕ್ಷರಾಗಿ ಆಯ್ಕೆ

Article Image

ಮಂಗಳೂರು: ರಾಜೇಶ್ ಎಮ್.ರವರು ಅಧ್ಯಕ್ಷರಾಗಿ ಆಯ್ಕೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ನ್ಯಾಯಾಂಗ ಇಲಾಖಾ ಅಧಿಕಾರಿಗಳ ಸಹಕಾರ ಸಂಘದ ಅಧ್ಯಕ್ಷರಾಗಿ ಸತತವಾಗಿ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ರಾಜೇಶ್ ಎಮ್.ರವರು ಪ್ರಸ್ತುತ ಮಂಗಳೂರು ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಾರ್ಷಿಕೋತ್ಸವ ಸಮಾರಂಭ

Article Image

ವಾರ್ಷಿಕೋತ್ಸವ ಸಮಾರಂಭ

ಧರ್ಮಸ್ಥಳದಲ್ಲಿರುವ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ ಸಮಾರಂಭವು ಮೇ. 10, 11 ಮತ್ತು 12ರಂದು ನಡೆಯಲಿದೆ. ಮೇ, 10 : ಶನಿವಾರ: ಬೆಳಿಗ್ಗೆ ಗಂಟೆ 8.45ಕ್ಕೆ ತೋರಣಮುಹೂರ್ತ, ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ, ನವಕಲಶ ಅಭಿಷೇಕ. ಸಂಜೆ ಗಂಟೆ 4 ರಿಂದ ನಾಂದಿಮಂಗಲ, ಪೂಜಾವಿಧಾನ, ಮಹಾಮಂಗಳಾರತಿ ಮೇ, 11 : ಭಾನುವಾರ : ಬೆಳಿಗ್ಗೆ ಗಂಟೆ 8.30 ರಿಂದ ವಾಸ್ತುಪೂಜಾ ವಿಧಾನ, ಋಷಿಮಂಡಲ ಯಂತ್ರಾರಾಧನೆ, 16 ಕಲಶಾಭಿಷೇಕ. ಸಂಜೆ ಗಂಟೆ 4 ರಿಂದ ನವಗ್ರಹ ಮಹಾಶಾಂತಿ, ಗ್ರಾಮ ಬಲಿವಿಧಾನ, ಮಹಾಮಂಗಳಾರತಿ ಮೇ, 12: ಸೋಮವಾರ: ಬೆಳಿಗ್ಗೆ ಗಂಟೆ 9 ರಿಂದ ಕಲಿಕುಂಡ ಯಂತ್ರಾರಾಧನೆ ಸಂಜೆ ಗಂಟೆ 5.30ರಿಂದ ಭವ್ಯ ಅಗ್ರೋದಕ ಮೆರವಣಿಗೆ, 108 ಕಲಶ ಮಹಾಭಿಷೇಕ, ಮಹೋತ್ಸವ, ಮಹಾಮಂಗಳಾರತಿ

ಬಳ್ಳಮಂಜ: ಬಸದಿಯಲ್ಲಿ ವಾರ್ಷಿಕೋತ್ಸವ, ವಿಶೇಷ ಪೂಜೆ

Article Image

ಬಳ್ಳಮಂಜ: ಬಸದಿಯಲ್ಲಿ ವಾರ್ಷಿಕೋತ್ಸವ, ವಿಶೇಷ ಪೂಜೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಬಳ್ಳಮಂಜ ಗ್ರಾಮದಲ್ಲಿರುವ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಪ್ರತಿಷ್ಠಾ ಮಹೋತ್ಸವದ 39ನೆ ವಾರ್ಷಿಕೋತ್ಸವದ ಅಂಗವಾಗಿ ಮೇ. 3ರಂದು ಶನಿವಾರ ಬೆಳಿಗ್ಗೆಯಿಂದ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ 24 ಕಲಶಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಜಿನಭಜನೆ, ಮಹಾಪೂಜೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಕೆ. ರಾಜವೀರ ಇಂದ್ರ ತಿಳಿಸಿದ್ದಾರೆ. ಅಳಿಯೂರು ಆದಿರಾಜ ಜೈನ್ ನೇತೃತ್ವದಲ್ಲಿ ಸಂಗೀತ ಮತ್ತು ಭಜನೆಯೊಂದಿಗೆ ಶ್ರಾವಕರು ಮತ್ತು ಶ್ರಾವಕಿಯರಿಂದ ಹನ್ನೆರಡು ವೃತಗಳ ಪೂಜೆ ನಡೆಯಲಿದೆ. ಧಾರ್ಮಿಕ ಸಭೆ: ಭಾರತೀಯ ಜೈನ್ ಮಿಲನ್, ಮಂಗಳೂರು ವಲಯದ ಉಪಾಧ್ಯಕ್ಷ ಸುದರ್ಶನ್ ಜೈನ್ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ನಾರಾವಿ ಅಜಿತ್ ಕುಮಾರ್ ಜೈನ್ ಧಾರ್ಮಿಕ ಉಪಾನ್ಯಾಸ ನೀಡುವರು.

ಮಹಾವೀರ ಜನ್ಮ ಕಲ್ಯಾಣೋತ್ಸವ

Article Image

ಮಹಾವೀರ ಜನ್ಮ ಕಲ್ಯಾಣೋತ್ಸವ

ಧರ್ಮಸ್ಥಳ, ಏಪ್ರಿಲ್ 10: ಇಂದು ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ, ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ತೀರ್ಥಂಕರರಿಗೆ ವಿಶೇಷ ಅಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ, ಬಾಲ ತೀರ್ಥಂಕರನಿಗೆ ವೈಭವಯುತವಾದ ನಾಮಕರಣೋತ್ಸವವನ್ನು ಆಚರಿಸಲಾಯಿತು. ಈ ಪವಿತ್ರ ಕಾರ್ಯಕ್ರಮದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಉಪಸ್ಥಿತರಿದ್ದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಸ್ಪರ್ಧೆಗಳು

Article Image

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿವಿಧ ಸ್ಪರ್ಧೆಗಳು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಹಾಗೂ ಕರಾವಳಿ ಮತ್ತು ಮಲೆನಾಡಿನ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಆಚರಣೆ ಪ್ರಯುಕ್ತ ಸರ್ವಧರ್ಮೀಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 20ರ ಭಾನುವಾರದಂದು ಬೆಳಿಗ್ಗೆ 09.30ರಿಂದ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಗಳ ವಿವರ: ೧) ಚಿತ್ರಕಲಾ ಸ್ಪರ್ಧೆ: • ಪ್ರಾಥಮಿಕ ಶಾಲಾ ವಿಭಾಗ: ವಿಷಯ: ಸುಂದರ ಪ್ರಕೃತಿ • ಪ್ರೌಢಶಾಲಾ ವಿಭಾಗ: ವಿಷಯ: ರಥೋತ್ಸವ ಸಮಯ: 1 ಗಂಟೆ ೨) ಭಾಷಣ ಸ್ಪರ್ಧೆ (ಕನ್ನಡ) • ಪ್ರೌಢಶಾಲಾ ವಿಭಾಗ: ವಿಷಯ: ಕ್ಷಮೆ ಮತ್ತು ಅಹಿಂಸೆಯ ಮಹತ್ವ • ಪಿಯುಸಿ/ಪದವಿ ವಿಭಾಗ: ವಿಷಯ: ವಿಶ್ವಶಾಂತಿ ಮತ್ತು ಜೈನಧರ್ಮ ಸಮಯ: 4+1 ನಿಮಿಷ ೩) ಭಾಷಣ ಸ್ಪರ್ಧೆ (ಇಂಗ್ಲೀಷ್) • ಪ್ರೌಢಶಾಲಾ ವಿಭಾಗ: ವಿಷಯ: ಕ್ಷಮೆ ಮತ್ತು ಅಹಿಂಸೆಯ ಮಹತ್ವ • ಪಿಯುಸಿ/ಪದವಿ ವಿಭಾಗ: ವಿಷಯ: ಜಾಗತಿಕ ಶಾಂತಿ ಹಾಗೂ ಜೈನಧರ್ಮ ಸಮಯ: 4+1 ನಿಮಿಷ ೪) ಪ್ರಬಂಧ ಸ್ಪರ್ಧೆ (ಕನ್ನಡ) • ಪ್ರೌಢಶಾಲಾ ವಿಭಾಗ: ವಿಷಯ: ಬದುಕಿ ಮತ್ತು ಬದುಕಲು ಬಿಡು ಸಮಯ: 30 ನಿಮಿಷಗಳು • ಪಿಯುಸಿ ಮತ್ತು ಪದವಿ ವಿಭಾಗ: ವಿಷಯ: ಭಾರತೀಯ ಸಂಸ್ಕೃತಿಗೆ-ಜೈನಧರ್ಮದ ಕೊಡುಗೆ ಸಮಯ: 45 ನಿಮಿಷಗಳು ೫) ಪ್ರಬಂಧ ಸ್ಪರ್ಧೆ (ಇಂಗ್ಲೀಷ್) • ಪ್ರೌಢಶಾಲಾ ವಿಭಾಗ: ವಿಷಯ: ಬದುಕಿ ಹಾಗೂ ಬದುಕಲು ಬಿಡಿ ಸಮಯ: 30 ನಿಮಿಷಗಳು • ಪಿಯುಸಿ ಮತ್ತು ಪದವಿ ವಿಭಾಗ: ವಿಷಯ: ಭಾರತೀಯ ಸಂಸ್ಕೃತಿಗೆ ಜೈನ ಧರ್ಮದ ಕೊಡುಗೆ ಸಮಯ: 45 ನಿಮಿಷಗಳು ಸ್ಪರ್ಧೆಗಳಲ್ಲಿ ಎಲ್ಲರಿಗೂ ಭಾಗವಹಿಸಲು ಮುಕ್ತ ಅವಕಾಶವಿದ್ದು, ಪ್ರತಿಯೊಂದು ವಿಭಾಗದ ಸ್ಪರ್ಧೆಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳಿರುತ್ತವೆ. ವಿದ್ಯಾರ್ಥಿಗಳು ಸ್ಪರ್ಧೆಗೆ ಬರುವಾಗ ತಪ್ಪದೇ ಶಾಲೆ ಅಥವಾ ಕಾಲೇಜಿನ ಗುರುತಿನ ಚೀಟಿ ಧರಿಸಿಕೊಂಡು ಬರಬೇಕು. ಒಬ್ಬರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸುವ ಅವಕಾಶವಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಏಪ್ರಿಲ್15ರ ಒಳಗೆ ತಮ್ಮ ಹೆಸರನ್ನು ಈ ವಾಟ್ಸಾಪ್ ನಂಬರ್ ಮೂಲಕ- 9448625888/ 9480600507 ತಿಳಿಸುವಂತೆ ಕೋರಲಾಗಿದೆ.

ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭ

Article Image

ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭ

ವೇಣೂರು: ಪ್ರವಕ್ತಾ ಜಿನಭಜನಾ ಕಲಿಕಾ ಕೇಂದ್ರದ ಉದ್ಘಾಟನಾ ಸಮಾರಂಭವು ಯಾತ್ರಿ ನಿವಾಸದಲ್ಲಿ ಮಾ.3೦ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವೇಣೂರಿನ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಯವರಾದ ವಿ. ಪ್ರವೀಣ್‌ ಕುಮಾರ್‌ ಇಂದ್ರರವರು ನೆರವೇರಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬ್ರಾಹ್ಮೀ ಜೈನ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷರಾದ ಪ್ರಸನ್ನ ಆರ್.ಹೆಗ್ಡೆ , ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ದ.ಕ. ಜಿಲ್ಲಾ ವಿಭಾಗದ ನಿರ್ದೇಶಕಿ ಮತ್ತು ಬ್ರಾಹ್ಮೀ ಜೈನ ಮಹಿಳಾ ಸಂಘದ ಅಧ್ಯಕ್ಷರು ಆದ ಸರೋಜಾ ಗುಣಪಾಲ್‌ ಜೈನ್‌ ಅಗಮಿಸಿ, ಶುಭ ಹಾರೈಸಿದರು. ಸಂಗೀತಾ ಶಿಕ್ಷಕರಾದ ಮೂಡುಬಿದಿರೆಯ ಭಗೀರಥ ಮಣಕೋಣ್‌ ರವರು ಸಂಗೀತ ಕಲಿಕೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಸುಮಧುರ ಗಾಯನವನ್ನು ಪ್ರಸ್ತುತ ಪಡಿಸಿದರು. ವೇದಿಕೆಯಲ್ಲಿ ಸುನೀತಾ ಎನ್.ಸಿ.ಬಲ್ಲಾಳ್‌ ಉಪಸ್ಥಿತರಿದ್ದರು. ಸುನೀತಾ ಎನ್.ಸಿ. ಬಲ್ಲಾಳ್‌, ಸುಜಯಭರತ್‌, ದೀಪಶ್ರಿ ಪ್ರಾರ್ಥಿಸಿದರು. ಚಂದ್ರಪ್ರಭ‌ ಜೈನ್ ರವರು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಶ್ರಾವಕ- ಶ್ರಾವಕಿಯರು , ಮಕ್ಕಳು ಭಾಗವಹಿಸಿದ್ದರು. .ಕಾರ್ಯಕ್ರಮವು ಶಾಂತಿ ಮಂತ್ರದೊಂದಿಗೆ ಮುಕ್ತಾಯವಾಯಿತು.

ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು

Article Image

ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು

ಭಗವಾನ್ ಶ್ರೀ 1008 ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಜೈನ್ ಪೇಟೆ ಮೂಡುಬಿದಿರೆ, ಜೈನ್ ಮಿಲನ್, ಶ್ರೀ ಮಹಾವೀರ ಸಂಘ (ರಿ.), ತೌಳವ ಇಂದ್ರ ಸಮಾಜ (ರಿ.), ತ್ರಿಭುವನ್ ಯೂತ್ ಅಸೋಸಿಯೆಶನ್, ರೋಟರಿ ಕ್ಲಬ್ ಟೆಂಪಲ್ ಟೌನ್, ಡಿ.ಜೆ.ಐ.ಐ ಸಂಘ (ನಿ.), ತ್ರಿಭುವನ್ ಹಾಗೂ ಬೆದ್ರ ಅಟೋ ಸ್ಪೋರ್ಟ್ಸ್ ಕ್ಲಬ್ (TASC-BAC), ತ್ರಿಭುವನ್ ಟ್ರಸ್ಟ್ (ರಿ.) ಬಸದಿ ಸ್ವಚ್ಚತಾ ತಂಡ, ಸರ್ವಮಂಗಳಾ ಮಹಿಳಾ ಸಂಘ, ಜೈನ್ ಮೆಡಿಕಲ್ ಸೆಂಟರ್‌ ಅಸ್ಪತ್ರೆ ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಭ| ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಪ್ರಯುಕ್ತ ಎ. ಜೆ ಆಸ್ಪತ್ರೆ, ದಂತ ಕಾಲೇಜು, ಬ್ಲಡ್ ಬ್ಯಾಂಕ್, ಮಂಗಳೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ, ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ ಶಿಬರಗಳು ದಿನಾಂಕ: 10-04-2025 ಗುರುವಾರ, ಬೆಳಗ್ಗೆ ಗಂಟೆ 9.30ರಿಂದ 1.00ರವರೆಗೆ, ಶ್ರೀ ಧವಳಾ ಕಾಲೇಜು, ಜೈನ್ ಪೇಟೆ, ಮೂಡುಬಿದಿರೆಯಲ್ಲಿ ನಡೆಯಲಿದೆ. ವಿಭಾಗಗಳು • ಬಿಪಿ/ ಬ್ಲಡ್ ಶುಗರ್ (BP ECG, BLOOD SUGAR) • ಕಿವಿ, ಮೂಗು, ಗಂಟಲು (ENT) • ಸಾಮಾನ್ಯ ಅರೋಗ್ಯ ವಿಭಾಗ (GRL MEDICINE) • ನೇತ್ರ ಚಿಕಿತ್ಸೆ (Eye) • ಸ್ತ್ರೀ ರೋಗ (OBG) ಎಲುಬು / ಕೀಲು(ARTHO) • ಚರ್ಮ (SKIN) • ದಂತ ಚಿಕಿತ್ಸೆ (DENTAL) ಮಾಹಿತಿಗಾಗಿ ಸಂಪರ್ಕಿಸಿ : ಡಾ| ಮಹಾವೀರ್ ಜೈನ್, ಮೊ: 9008384865 ಯತಿರಾಜ್ ಶೆಟ್ಟ, ಮೊ: 9448625888 ಪ್ರವೀಣ್ ಜೈನ್ ಬೆಳುವಾಯಿ, ಮೊ: 9886474143

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಸಂಪನ್ನ

Article Image

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಸಂಪನ್ನ

ವೇಣೂರು: ರಥೋತ್ಸವದಂತಹ ಪುಣ್ಯ ಕಾರ್ಯ ಗಳಲ್ಲಿ ನಿಷ್ಠೆ ಯಿಂದ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಲ್ಲಿ ಜಿನೇಂದ್ರ ಭಗವಂತರ ಅನುಗ್ರಹ ನಮಗೆ ಪ್ರಾಪ್ತವಾಗುತ್ತದೆ. ಸಮ್ಯಕ್ ಜ್ಞಾನ, ಸಮ್ತಕ್ ದರ್ಶನ ಮತ್ತು ಸಮ್ಯಕ್ ಚಾರಿತ್ರ್ಯದ ಪ್ರತೀಕವೇ ರಥೋತ್ಸವ. ಇದರಿಂದ ಶ್ರಾವಕ-ಶ್ರಾವಕಿಯರಾದ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆಯು ಜಾಗೃತವಾಗುತ್ತದೆ ಎಂದು ಮೂಡಬಿದ್ರೆ ಶ್ರೀ ಜೈನಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ನುಡಿದರು. ಅವರು ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ವಹಿಸಿ, ಮಾತನಾಡಿ ಈ ವರ್ಷದಿಂದ ವೇಣೂರು ಯಾತ್ರಿ ನಿವಾಸದಲ್ಲಿ “ಶ್ರುತ ಭಂಡಾರ” ಸ್ವಾಧ್ಯಾಯ ಕೇಂದ್ರ ಪ್ರಾರಂಭಿಸಿದ್ದು, ಶ್ರಾವಕ-ಶ್ರಾವಕಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ ಇವರು “ಶ್ರುತ ಭಂಡಾರ” ಸ್ವಾಧ್ಯಾಯ ಕೇಂದ್ರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ ಬಾರಿಯ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರಿರುವುದಕ್ಕೆ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು ಹಾಗೂ ವೇಣೂರು ತೀರ್ಥಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಯಾತ್ರಾರ್ಥಿಗಳ ಅನುಕೂಲಕ್ಕೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸರಕಾರದ ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ: ರಥೋತ್ಸವದ ಧಾರ್ಮಿಕ ಸಭೆಯಲ್ಲಿ 90ವರ್ಷ ದಾಟಿದ ಹಿರಿಯ ಶ್ರಾವಕಿ ಗುಣಾವತಿ ಪಿ.ಎ. ಆಳ್ವ ಪಂಜಾಲ್‌ಬೈಲು, ಹಿರಿಯ ಶ್ರಾವಕ ಜಗತ್ಪಾಲ ಮುದ್ಯ ಕತ್ತೋಡಿ ಹಾಗೂ ಹಿರಿಯ ಶ್ರಾವಕಿ ಗುಣಾವತಿ ಅಮ್ಮ ಬರಮೇಲು ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಇತ್ತೀಚೆಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪಡೆದ ಮಾಂಡೋವಿ ಮೋಟರ್ಸ್‌ನ ಚೀಫ್ ಜನರಲ್ ಮೇನೆಜರ್ ನೇರೆಂಕಿ ಪಾರ್ಶ್ವನಾಥ ಜೈನ್, ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ದ್ವಿಶಾನ್ ಜೈನ್ ಕಂಚ ಇವರನ್ನು ಗೌರವಿಸಲಾಯಿತು. 2024ರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯ ಪ್ರತಿಭಾವಂತ ಜೈನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರದ ಪ್ರಾಯೋಜಕರುಗಳಾದ ದಿ. ಅಂತಪ್ಪ ಆಳ್ವರು, ಬಡಕೋಡಿ ದಿ. ಆದಿರಾಜ ಶೆಟ್ಟಿ, ಮಾರಗುತ್ತು ದಿ. ವಿಜಯರಾಜ ಅಧಿಕಾರಿ ಕುಟುಂಬಸ್ಥರನ್ನು ಹಾಗೂ ಅಕ್ಷಯ ಕುಮಾರ್ ಕಂಬಳಿ ಉಜಿರೆ ಮೂಡುಬಿದಿರೆಯ ಎಮ್. ವಿ. ಶೆಟ್ಟಿ ಇವರನ್ನು ಗೌರವಿಸಲಾಯಿತು. ಚಾರ್ವಿ ಪ್ರಾರ್ಥಿಸಿ, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ, ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಸಮಿತಿ ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಜೊತೆ ಕಾರ್ಯದರ್ಶಿ ಮಹಾವೀರ್ ಜೈನ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವೇಣೂರು, ಮೂಡುಬಿದಿರೆ, ಪರುಷಗುಡ್ಡೆ ಜಿನಭಜನಾ ತಂಡಗಳಿಂದ ಜಿನಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಉತ್ಸವ, ಶ್ರೀ ಕೊಡಮಣಿತ್ತಾಯ ದೈವದ ನೇಮ, ಬಾಹುಬಲಿ ಸ್ವಾಮಿಗೆ 24 ಕಲಶಗಳಿಂದ ಪಾದಾಭಿಷೇಕ, ದ್ವಜಾವರೋಹಣದೊಂದಿಗೆ ರಥಯಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಪೂಜಾ ಕಾರ್ಯಕ್ರಮ

Article Image

ಪೂಜಾ ಕಾರ್ಯಕ್ರಮ

ಮೂಡುಬಿದಿರೆ: ದರೆಗುಡ್ಡೆಯಲ್ಲಿರುವ ಶ್ರೀ 1008 ಅನಂತನಾಥ ಸ್ವಾಮಿ ಬಸದಿಯಲ್ಲಿ ಬೆಳಗ್ಗೆ ಗಂಟೆ 9ರಿಂದ ಶ್ರೀ 1008 ಅನಂತನಾಥ ಸ್ವಾಮಿಗೆ ಕ್ಷೀರಾಭಿಷೇಕ, ಅಷ್ಟಮ ನಂದೀಶ್ವರದ 52 ಜಿನಬಿಂಬಗಳಿಗೆ 54 ಕಲಶಗಳಿಂದ ಮಹಾಭಿಷೇಕವು ಮೂಡುಬಿದಿರೆ ಶ್ರಿ ಜೈನ ಮಠದ ಪ. ಪೂ. ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಮತ್ತು ಆ‌ಶೀರ್ವಚನದೊಂದಿಗೆ ಮಾ. 22ರಂದು ನೆರವೇರಲಿರುವುದು.

24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ

Article Image

24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ

ವೇಣೂರು ಭಗವಾನ್ ಶ್ರೀ ಬಾಹುಬಲಿ ಬೆಟ್ಟದ ಬಲ ಭಾಗದಲ್ಲಿರುವ ಬಿನ್ನಾಣಿ ಬಸದಿ ಭ| ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯ ಗಂಧಕುಟಿಗೆ, ಎಡ ಭಾಗದಲ್ಲಿರುವ ಅಕ್ಕಂಗಳ ಬಸದಿ ಭ| ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯ ಗಂಧಕುಟಿಗೆ ಪರಮಪೂಜ್ಯ ಮುನಿಶ್ರೀ ೧೦೮ ಶ್ರೀ ಆದಿತ್ಯ ಸಾಗರ ಮುನಿ ಮಹಾರಾಜರ ಮಾರ್ಗದರ್ಶನದಲ್ಲಿ ದಾನವಾಗಿ ನೀಡಿದ 24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಭ| ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ನಾಳೆ (ಮಾ. 14) ಬೆಳಿಗ್ಗೆ 9.00 ಗಂಟೆಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ ನೆರವೇರಲಿರುವುದು.

ವಾರ್ಷಿಕ ರಥಯಾತ್ರ ಮಹೋತ್ಸವದ ಇಂದಿನ ಕಾರ್ಯಕ್ರಮ

Article Image

ವಾರ್ಷಿಕ ರಥಯಾತ್ರ ಮಹೋತ್ಸವದ ಇಂದಿನ ಕಾರ್ಯಕ್ರಮ

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರ ಮಹೋತ್ಸವವು ದಿನಾಂಕ 14.03.2025ನೇ ಶುಕ್ರವಾರ ಜರುಗಲಿರುವುದು. ಅದರ ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಗಂಟೆ 10:00ಕ್ಕೆ ಬೆಟ್ಟದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಶಾಂತಿಚಕ್ರ ಆರಾಧನೆ ನೆರವೇರಲಿದೆ. ಇಂದು ಸಾಯಂಕಾಲ ಗಂಟೆ 6:30 ರಿಂದ ರಥಯಾತ್ರ ಮಹೋತ್ಸವದ ಪ್ರಯುಕ್ತ ಶ್ರೀ ರಕ್ಷಾ ಯಂತ್ರಾರಾಧನೆ, ಶ್ರೀ ಬಲಿಪೂಜೆ, ವಸಂತಕಟ್ಟೆ ಪೂಜೆ, ಶ್ರೀ ವಿಹಾರ, ಶ್ರೀ ದೇವರ ಉತ್ಸವ ಹಾಗೂ ಶ್ರೀ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ಜರಗಲಿರುವುದು.

ಶಿಶಿಲ ವಾರ್ಷಿಕೋತ್ಸವ

Article Image

ಶಿಶಿಲ ವಾರ್ಷಿಕೋತ್ಸವ

ಬೆಳ್ತಂಗಡಿ: ತಾಲೂಕಿನ, ಶಿಶಿಲ, ಶ್ರೀ ಕ್ಷೇತ್ರ ಚಂದ್ರಪುರದಲ್ಲಿರುವ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 11ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಪೂಜಾ ಕಾರ್ಯಕ್ರಮಗಳು: ತಾ. 11-03-2025ನೇ ಮಂಗಳವಾರ ಬೆಳಿಗ್ಗೆ 7.45ರ ಶುಭ ಲಗ್ನದಲ್ಲಿ ತೋರಣ ಮುಹೂರ್ತ ನಂತರ ವಿಮಾನ ಶುದ್ಧಿ ಪ್ರಾರಂಭ, ಬೆಳಿಗ್ಗೆ 9.19ರ ಶುಭ ಲಗ್ನದಲ್ಲಿ ಮುಖವಸ್ತ್ರ ಉದ್ಘಾಟನೆ, ಬೆಳಿಗ್ಗೆ 9.30ರಿಂದ ಶಾಂತಿ ಚಕ್ರ ಆರಾಧನೆ ಮತ್ತು ಪದ್ಮಾವತಿ ಆರಾಧನೆ, ಮಧ್ಯಾಹ್ನ 12ರಿಂದ 24 ಕಲಶ ಅಭಿಷೇಕ ಮಹೋತ್ಸವ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪಾದಪೂಜೆ, ಶ್ರೀ ಜಿನಗಂಧೋದಕ ವಿತರಣೆ. ವಿ.ಸೂ.: ಪೂಜ್ಯ ಸ್ವಾಮೀಜಿಯವರಿಂದ ಶ್ರೀಕ್ಷೇತ್ರ ಚಂದ್ರಪುರ-ಶಿಶಿಲದ ಸ್ಥಳ ಪರಿಚಯ ಪುಸ್ತಕ ಬಿಡುಗಡೆ

ವೇಣೂರು: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವೇಣೂರು: ವಾರ್ಷಿಕ ರಥಯಾತ್ರಾ ಮಹೋತ್ಸವ

ವೇಣೂರು: ದಿನಾಂಕ 14.03.2025ನೇ ಶುಕ್ರವಾರ ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ಜರಗಲಿರುವುದು ಅದರ ಪೂರ್ವಭಾವಿಯಾಗಿ ದಿನಾಂಕ 11.03.2025ನೇ ಮಂಗಳವಾರ (ಇಂದು) ಸಾಯಂಕಾಲ ಗಂಟೆ 6.00ಕ್ಕೆ ತೋರಣ ಮುಹೂರ್ತ, ವಿಮಾನ ಶುದ್ಧಿ, ದ್ವಜಾರೋಹಣ, ಪಾದಾಭಿಷೇಕ ಜರಗಲಿರುವುದು. ವಿ.ಸೂ.: ದಿನಾಂಕ 13.03.2025ನೇ ಗುರುವಾರ ರಾತ್ರಿ ಗಂಟೆ 7.00ರಿಂದ ಶ್ರೀ ದೇವರ ಶ್ರೀ ವಿಹಾರ ನೆರವೇರಲಿದೆ.

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಥ್ರೋ ಬಾಲ್‌ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ತಂಡದ ದಾಖಲಾತಿ ಮತ್ತು ಕ್ರೀಡಾ ನಿಯಮಗಳು * ಪ್ರತಿ ತಂಡದಲ್ಲಿ ಏಳು ಜನ ಆಟಗಾರರನ್ನು ಮತ್ತು ಮೂರು ಜನ ಬದಅ ಆಟಗಾರರನ್ನು ಹೊಂದಿರಬೇಕು. * ತಂಡವನ್ನು ದಿನಾಂಕ 30 ಮಾರ್ಚ್ 2025 ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. * ಒಂದು ತಂಡಕ್ಕೆ ಪ್ರವೇಶ ಶುಲ್ಕ 1000/- ರೂ ಅಗಿರುತ್ತದೆ. * ಒಬ್ಬ ಆಟಗಾರರಿಗೆ ಒಂದು ತಂಡದಲ್ಲಿ ಮಾತ್ರ ಅಡಲು ಅವಕಾಶವಿರುತ್ತದೆ. * ವಿಜೇತ ತಂಡಗಳಿಗೆ ವಿಶೇಷ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ಏರುತ್ತದೆ. * ನಿರ್ಣಾಯಕರ ಮತ್ತು ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಅರ್ಹನ್ ಜೈನ್, ತನುಜ ಜೈನ್, ಕವಿತ ಮಂಜಯ್ಯ ಜೈನ್, ವೃಷಭ್ ಜೈನ್ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9481252358, 9036109108

ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ

Article Image

ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆ

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ವರ್ಷಂಪ್ರತಿ ಜರಗುವ ಆಯನ ಮತ್ತು ಸಿರಿಗಳ ಜಾತ್ರೆಯು ಇಂದಿನಿಂದ ಪ್ರಾರಂಭಗೊಂಡು ದಿನಾಂಕ 13-03-2025ನೇ ಗುರುವಾರದವರೆಗೆ ಜರಗಲಿರುವುದು. ದಿನಾಂಕ 13-03-2025ನೇ ಗುರುವಾರ ರಾತ್ರಿ ಗಂಟೆ 9.00ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಅತ್ರಿಜಾಲು ಶ್ರೀ ಮಹಾಲಿಂಗೇಶ್ವರ ಸಂಚಾರಿ ಚಿಕ್ಕಮೇಳದ ಸಹಯೋಗದೊಂದಿಗೆ ಊರ-ಪರವೂರ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ "ಕದಂಬ ಕೌಶಿಕ" ಎಂಬ ಕನ್ನಡ ಯಕ್ಷಗಾನ ಬಯಲಾಟ ಜರಗಲಿದೆ.

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ

ವೇಣೂರು: ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ದಿನಾಂಕ 11-03-2025 ಮಂಗಳವಾರದಿಂದ ಮೊದಲ್ಗೊಂಡು 15-03-2025ರ ಶನಿವಾರದವರೆಗೆ ಜರುಗಲಿದೆ. ದಿನಾಂಕ 14-03-2025ರ ಶುಕ್ರವಾರ ರಾತ್ರಿ ಗಂಟೆ 7-00ರಿಂದ ಭಗವಾನ್‌ ಶ್ರೀ ೧೦೦೮ ಬಾಹುಬಲಿ ಸ್ವಾಮಿ ಸನ್ನಿಧಿಯಲ್ಲಿ ರಥಯಾತ್ರಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಜರಗಲಿರುವುದು. ರಾತ್ರಿ ಗಂಟೆ 7-30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ: ಆಶೀರ್ವಚನ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಅಧ್ಯಕ್ಷತೆ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ, ಉಪಾಧ್ಯಕ್ಷರು, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ವೇಣೂರು ಮುಖ್ಯ ಅತಿಥಿಗಳು: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ ಪ್ರತಿಭಾ ಪುರಸ್ಕಾರ: 2024ರ ಎಸ್.ಎಸ್.‌ಎಲ್‌.ಸಿ. ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನೆ: 90 ವರ್ಷ ದಾಟಿದ ಹಿರಿಯ ಶ್ರಾವಕ/ಶ್ರಾವಕಿಯರಿಗೆ. ಯಾತ್ರಿ ನಿವಾಸದಲ್ಲಿ ನೂತನ ಶ್ರುತ ಭಂಡಾರ (ಸ್ವಾಧ್ಯಾಯ ಕೇಂದ್ರ) ಉದ್ಘಾಟನಾ ಸಮಾರಂಭ: ಸಂಜೆ ಗಂಟೆ 6-00ಕ್ಕೆ ಪಾವನ ಸಾನ್ನಿಧ್ಯ: ಪ. ಪೂ. ಭಾರತಭೂಷಣ ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಶ್ರೀ ಜೈನ ಮಠ ಮೂಡುಬಿದಿರೆ ಉಪಸ್ಥಿತಿ: ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ ಅರಮನೆ ಉದ್ಘಾಟನೆ: ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವರು, ಕರ್ನಾಟಕ ಸರಕಾರ

ವೇಣೂರು: ಬಾಹುಬಲಿ ಬೆಟ್ಟದ ರಥೋತ್ಸವದಂದು ವಿದ್ಯಾರ್ಥಿವೇತನ

Article Image

ವೇಣೂರು: ಬಾಹುಬಲಿ ಬೆಟ್ಟದ ರಥೋತ್ಸವದಂದು ವಿದ್ಯಾರ್ಥಿವೇತನ

ವೇಣೂರು: ಬೆಳ್ತಂಗಡಿ ತಾಲೂಕು, ವೇಣೂರು ಭ| ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ಮಾ.14ರಂದು ಜರಗಲಿರುವುದು. ಅಂದು ರಾತ್ರಿ 7.30ರಿಂದ ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಜೈನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ, ದಿ| ಡಾ| ಪಿ. ಅಂತಪ್ಪ ಆಳ್ವ ರವರ ಸ್ಮರಣಾರ್ಥ ಪತ್ನಿ ಮತ್ತು ಮಕ್ಕಳು ಪಂಜಾಲಬೈಲು ವೇಣೂರು ಹಾಗೂ ಬಡಕೋಡಿ ಹೊಸಮನೆ ದಿ| ಪಿ. ಆದಿರಾಜ ಶೆಟ್ಟಿ ಹಾಗೂ ಶ್ರೀಮತಿ ದಿ| ಶಾರದಾದೇವಿಯವರ ಸ್ಮರಣಾರ್ಥ ಮಕ್ಕಳಿಂದ ಹಾಗೂ ಮಾರಗುತ್ತು ದಿ|ವಿಜಯರಾಜ ಅಧಿಕಾರಿಯವರ ಸ್ಮರಣಾರ್ಥ ಪತ್ನಿ ರಾಜೇಶ್ವರಿ ವಿ.ಅಧಿಕಾರಿ ಹಾಗೂ ಶ್ರೀ ಅಕ್ಷಯ ಕುಮಾರ್ ಕಂಬಳಿ ಮತ್ತು ಮಕ್ಕಳು ಜಿನಪದ ಬೆಳಾಲುರಸ್ತೆ ಉಜಿರೆ ಇವರಿಂದ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಹ ಪ್ರತಿಭಾವಂತ ಜೈನ ವಿದ್ಯಾರ್ಥಿಗಳು 2024ನೇ ಸಾಲಿನ ಪಿ.ಯು.ಸಿ. ಹಾಗೂ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ಜೆರಾಕ್ಸ್‌ ನೊಂದಿಗೆ ಅರ್ಜಿಯನ್ನು ಕಾರ್ಯದರ್ಶಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ಯಾತ್ರಿ ನಿವಾಸ ಶ್ರೀ ಮಹಾವೀರ ನಗರ ವೇಣೂರು-574242 ಇವರಿಗೆ ಕಳುಹಿಸಿಕೊಡುವಂತೆ ವಿನಂತಿಸಲಾಗಿದೆ. ಅರ್ಜಿದಾರರು ಸರಿಯಾದ ವಿಳಾಸ ಹಾಗೂ ಮೊಬೈಲ್ ನಂಬರ್ ನಮೂದಿಸಬೇಕು. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಛೇರಿ ಮೊಬೈಲ್ ನಂ: 9606356288

ಸವಣಾಲು: ಧಾಮ ಸಂಪ್ರೋಕ್ಷಣ ವೈಭವ

Article Image

ಸವಣಾಲು: ಧಾಮ ಸಂಪ್ರೋಕ್ಷಣ ವೈಭವ

ಉಜಿರೆ: ಆಧ್ಯಾತ್ಮವೇ ಭಾರತದ ಆತ್ಮವಾಗಿದ್ದು ಪರಿಶುದ್ಧ ಶ್ರದ್ಧಾ-ಭಕ್ತಿಯಿಂದ ದೇವರ ಸೇವೆ ಮಾಡಿದಾಗ ಸರ್ವಶಕ್ತನಾದ ಭಗವಂತನು ನಮ್ಮ ಎಲ್ಲಾ ಕಷ್ಟಗಳನ್ನು ಪರಿಹರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು. ಅವರು ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಆದಿನಾಥಸ್ವಾಮಿ ಬಸದಿಯಲ್ಲಿ ಭಾನುವಾರ ಧಾಮ ಸಂಪ್ರೋಕ್ಷಣ ಸಂದರ್ಭದಲ್ಲಿ ಆಯೋಜಿಸಿದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಎಲ್ಲರಲ್ಲಿಯೂ ದೇವರನ್ನು ಕಂಡು ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ. ನಂಬಿಕೆಗಿಂತಲೂ ಜಿಜ್ಞಾಸೆ ಹಾಗೂ ಅನ್ವೇಷಣಾ ಪ್ರವೃತ್ತಿಯಿಂದಾಗಿ ಕಷ್ಟ ಬಂದಾಗ ಆರ್ತರಾಗಿ ಪರಿಹಾರಕ್ಕಾಗಿ ನಾವು ದೇವರ ಭಕ್ತಿ ಮಾಡುತ್ತೇವೆ. ದೇವರ ಅನುಗ್ರಹದಿಂದ ನಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಕರ್ಮ ಸಿದ್ಧಾಂತವನ್ನು ನಂಬುವ ನಾವು ತಾಳ್ಮೆಯಿಂದ ಧರ್ಮದ ಮರ್ಮವನ್ನರಿತು ಆಚರಿಸಿದಾಗ ಜೀವನ ಪಾವನವಾಗುತ್ತದೆ. ನಮ್ಮ ಹಿರಿಯರು, ಸಾಧು-ಸಂತರು ಇದನ್ನು ಸಾಧಿಸಿ ತೋರಿಸಿದ್ದಾರೆ ಎಂದು ಹೇಳಿದ ಅವರು ಜೈನರ ತ್ಯಾಗ, ಅಹಿಂಸೆ, ಅಪರಿಗ್ರಹ ಮೊದಲಾದ ತತ್ವ-ಸಿದ್ಧಾಂತಗಳಿಂದ ಶಾಂತಿ-ಸಾಮರಸ್ಯದ ಬದುಕು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಪಡುಬಿದ್ರೆ ಬೀಡು ರತ್ನಾಕರ ರಾಜ್ ಅರಸು, ರಕ್ಷಿತ್ ಶಿವರಾಂ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಶುಭಾಶಂಸನೆ ಮಾಡಿದರು. ವಿಶಿಷ್ಠ ಸೇವೆ-ಸಾಧನೆ ಮಾಡಿದ ವೇಣೂರಿನ ಪ್ರವೀಣಕುಮಾರ್ ಇಂದ್ರ ಮತ್ತು ಉಜಿರೆಯ ಸುರೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಠಾಚಾರ್ಯರಾದ ಬೆಳ್ತಂಗಡಿಯ ಕೆ. ಜಯರಾಜ ಇಂದ್ರ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಬಿ. ರಾಜಶೇಖರ ಅಜ್ರಿ, ಬಸದಿ ಸಮಿತಿಯ ಕೋಶಾಧಿಕಾರಿ ಚಾಮರಾಜ ಸೇಮಿತ, ವೃಷಭರಾಜ ಇಂದ್ರ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ ಮಾತನಾಡಿ, ಸ್ವಧರ್ಮದಲ್ಲಿ ಜೀವಿಸಿ, ಪರಧರ್ಮವನ್ನು ಪ್ರೀತಿಸುವ ಜೈನರು ಗುಣಗಳ ಆರಾಧಕರಾಗಿದ್ದು ಸರ್ವಧರ್ಮೀಯರೊಂದಿಗೂ ಶಾಂತಿ-ಸಾಮರಸ್ಯದ ಜೀವನ ನಡೆಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಬಸದಿಯ ಸೇವೆಯಲ್ಲಿ ಜನರ ಶ್ರದ್ಧಾ-ಭಕ್ತಿಯ ಪರಿಶ್ರಮವನ್ನು ಶ್ಲಾಘಿಸಿ, ಅಭಿನಂದಿಸಿದರು. ಕಿಶೋರ್‌ಹೆಗ್ಡೆ ಎರ್ಮೆತ್ತೋಡಿಗುತ್ತು ಸ್ವಾಗತಿಸಿದರು. ಮುಂಡೂರುಗುತ್ತು ಆಕರ್ಷ್ ಜೈನ್ ಧನ್ಯವಾದವಿತ್ತರು. ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರ್ವಹಿಸಿದರು. ಧಾರ್ಮಿಕ ವಿಧಿ-ವಿಧಾನಗಳು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಭಾನುವಾರದ ಪೂಜೆಯ ಸೇವಾಕರ್ತೃಗಳಾಗಿ ಪುಣ್ಯಭಾಗಿಗಳಾದರು. ಭಗವಾನ್ ಆದಿನಾಥ ಸ್ವಾಮಿಯ ಪ್ರತಿಷ್ಠೆ, ಶಿಖರಾರೋಹಣ, ಭಕ್ತಾಮರ ಆರಾಧನೆ, ೧೦೮ ಕಲಶ ಅಭಿಷೇಕದ ಬಳಿಕ ಮಹಾಪೂಜೆ ನಡೆಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ, ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ನಿರೀಕ್ಷಾ ಜೈನ್ ಹೊಸ್ಮಾರು ಇವರು ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆ

Article Image

ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆ

ಇಂದಿನ ಜಾಗತೀಕರಣ ಹಾಗೂ ಉಧಾರಿಕರಣದ ಕಾಲಘಟ್ಟದಲ್ಲಿ ಸಂಸ್ಕೃತಿ, ಸಂಸ್ಕಾರ, ಶಾಂತಿ ಮತ್ತು ಅಹಿಂಸೆಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಕಾಲಕ್ಕೆ ತಕ್ಕಂತೆ ನಾವು ಬದಲಾವಣೆ ಕಾಣುವುದು ಅಗತ್ಯವಾಗಿದೆ ಎಂದು ಧಾರವಾಡದ ಎಸ್‌.ಡಿ.ಎಂ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನ್ ಕುಮಾರ್ ತಿಳಿಸಿದರು. ಅವರು ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆ, ಪೆನುಗೊಂಡೇ ಪಟ್ಟಣದ ಶ್ರೀ ಅಜಿತನಾಥ ತೀರ್ಥಂಕರ ಬಸದಿ ಆವರಣದಲ್ಲಿ ನಡೆದ ಬೆಂಗಳೂರಿನ ಕುಬೇರ ಜೈನ್ ಮಿಲನ್ ನ 180ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಶ್ರೀ ಧರ್ಮಸ್ಥಳ ಧರ್ಮೊತ್ತನ ಟ್ರಸ್ಟ ನಿಂದ ಶ್ರೀ ಅಜಿತನಾಥ ಬಸದಿ ಜೀರ್ಣೋದ್ಧಾರಗೊoಡು ಹೊಸ ರೂಪ ಕಂಡಿದೆ, ಜೈನ ಧರ್ಮ ಚಿಕ್ಕ ಧರ್ಮವಾದರೂ ಸುರಕ್ಷಿತ ಹಾಗೂ ವಿಶಿಷ್ಟ ಧರ್ಮವಾಗಿದೆ, ನಮ್ಮ ಧರ್ಮ ಶ್ರಮಣ ಪರಂಪರೆ ಹೊಂದಿದೆ, ಇತ್ತೀಚಿನ ದಿನಗಳಲ್ಲಿ ವಿಶ್ವದಲ್ಲಿ ಅಶಾಂತಿ, ಹಿಂಸೆ, ರಕ್ತಪಾತ, ತಾಂಡವ ಮಾಡುತ್ತಿದ್ದು ಯುದ್ಧದ ಕಾರ್ಮೋಡ ಕವಿದಿದೆ. ಬದಲಾವಣೆ ಇಂದು ಅಗತ್ಯವಾಗಿದ್ದು ಇವಕ್ಕೆಲ್ಲ ಶಾಂತಿ ಮತ್ತು ಅಹಿಂಸೆಗೆ ಪೂರಕವಾಗಿರುವ ಜೈನ ಧರ್ಮದ ಸಿದ್ಧಾಂತಗಳು ಅಗತ್ಯ ಎಂದರು. ಯಾವುದೇ ಕಾರ್ಯಕ್ಕೆ ನಾವು ಹೊಂದಿಕೊಳ್ಳುವ ಭಾವನೆ, ಭೂಮಿಯ ಮೇಲೆ ಬದುಕುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು. ಡಾ ಪದ್ಮಲತ ನಿರಂಜನ್ ಮಾತನಾಡಿ ಎಲ್ಲರಿಗೂ ಪ್ರೀತಿಸುವ ಶಕ್ತಿ ನೀಡಲಿ ಎಂದು ಹಾರೈಸಿ ಭಕ್ತಿಗೀತೆ ಹಾಡಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೇ ಪದ್ಮಿನಿ ಪದ್ಮರಾಜ್ ಮಾತನಾಡಿ ಭಾರತೀಯ ಜೈನ ಮಿಲನ್ ಹಾಗೂ ಜೈನ ಮಹಿಳಾ ಒಕ್ಕೂಟಗಳು ಧರ್ಮಸ್ಥಳದ ಧರ್ಮಕಾರ್ಯಗಳು ಪ್ರಶಂಸನಿಯ, ಧರ್ಮ ಸಂಸ್ಕಾರ ಕಾರ್ಯಗಳನ್ನು ಅಳವಡಿಸಿಕೊಳ್ಳುವಂತೆ ಸಮಾಜ ಬಂದುಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಅಮರಾಪುರ ಜೈನ ಸಮಾಜದ ಅಧ್ಯಕ್ಷ ಪದ್ಮರಾಜ್, ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷ ಕೆ. ಜೆ. ಎ. ಮಂಜುನಾಥ್ ಯುವರಾಜ್, ನಾಗಕುಮಾರ್ ಸಂಜು, ಮಂಜು, ಅಮರಾಪುರ ಚಂದ್ರಿಕೀರ್ತಿ, ಅಮರಾಪುರ ಅನಿಲ್, ಬೆಂಗಳೂರಿನ ಕುಬೇರ ಜೈನ್ ಮಿಲನ್ ಅಧ್ಯಕ್ಷರು, ಪದಾಧಿಕಾರಿಗಳು, ಅಮರಾಪುರ, ಪೆನಗೊಂಡೆ, ಜೈನ್ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಜೈನ ಸಮಾಜದ ಮುಖಂಡರುಗಳು, ವಿವಿಧ ಮಹಿಳಾ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು. ಇಸ್ರೋ ಅಜಿತ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪುರೋಹಿತ್ ಕೋಮಲ್ ಕುಮಾರ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಜೆ ರಂಗನಾಥ- ತುಮಕೂರು

ವೇಣೂರು: ಮುನಿಮಹಾರಾಜರ ಪುರಪ್ರವೇಶ

Article Image

ವೇಣೂರು: ಮುನಿಮಹಾರಾಜರ ಪುರಪ್ರವೇಶ

ಪರಮ ಪೂಜ್ಯ ವಾತ್ಸಲ್ಯಮೂರ್ತಿ ಗಣಾಧರ ಆಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರು ಸತ್ಗಂಗ ಸಮೇತರಾಗಿ ವೇಣೂರು ಶ್ರೀ ಬಾಹುಬಲಿ ಕ್ಷೇತ್ರಕ್ಕೆ ಇಂದು ಬೆಳಿಗ್ಗೆ 8.00ಗಂಟೆಗೆ ಪುರಪ್ರವೇಶ ಗೈದಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು, ಕಾರ್ಯದರ್ಶಿಗಳಾದ ವಿ. ಪ್ರವೀಣ್‌ ಕುಮಾರ್‌ ಇಂದ್ರ, ಕೋಶಾಧಿಕಾರಿಗಳಾದ ಜಯರಾಜ್‌ ಕಂಬಳಿ ಮತ್ತು ಸಮಿತಿಯ ಎಲ್ಲಾ ಸದಸ್ಯರು ಹಾಗೂ ಸಮಸ್ತ ಶ್ರಾವಕ-ಶ್ರಾವಕಿಯರು ಪಾಲ್ಗೊಂಡಿದ್ದರು. ಮುನಿಮಹಾರಾಜರುಗಳು ಇಂದು ಸಂಜೆ 4.00ಗಂಟೆಗೆ ವೇಣೂರಿನಿಂದ ಪೆರಿಂಜೆ ಬಸದಿಗೆ ವಿಹಾರ ಹೊರಡಲಿದ್ದಾರೆ.

ಸವಣಾಲು: ಧಾಮ ಸಂಪ್ರೋಕ್ಷಣ ಮಹೋತ್ಸವ

Article Image

ಸವಣಾಲು: ಧಾಮ ಸಂಪ್ರೋಕ್ಷಣ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸವಣಾಲು ಗ್ರಾಮದಲ್ಲಿರುವ ಭಗವಾನ್ ಆದಿನಾಥಸ್ವಾಮಿ ಬಸದಿಯು ಜೀಣೋದ್ಧಾರಗೊಂಡಿದ್ದು ಶುಕ್ರವಾರ ಬೆಳಿಗ್ಗೆ ಇಂದ್ರಪ್ರತಿಷ್ಠೆ ಹಾಗೂ ತೋರಣ ಮುಹೂರ್ತದೊಂದಿಗೆ ಧಾಮಸಂಪ್ರೋಕ್ಷಣೆಯ ವಿಧಿ-ವಿಧಾನಗಳು ಶುಭಾರಂಭಗೊಂಡವು. ಪ್ರತಿಷ್ಠಾಚಾರ್ಯರಾದ ಬೆಳ್ತಂಗಡಿಯ ಜಯರಾಜ ಇಂದ್ರರು ಇಂದ್ರಪ್ರತಿಷ್ಠೆಯ ವಿಧಿ-ವಿಧಾನಗಳ ಮಹತ್ವವನ್ನು ವಿವರಿಸಿದರು. ಶುಕ್ರವಾರದಿಂದ ಮೂರು ದಿನಗಳಲ್ಲಿ ನಡೆಯುವ ಪೂಜಾಕಾರ್ಯಕ್ರಮಗಳಲ್ಲಿ ಪುರೋಹಿತರು, ಸೇವಾಕರ್ತರು ಹಾಗೂ ಶ್ರಾವಕರು ಮತ್ತು ಶ್ರಾವಕಿಯರು ಮನ, ವಚನ, ಕಾಯದಿಂದ ತ್ರಿಕರಣಪೂರ್ವಕವಾಗಿ ಪರಿಶುದ್ಧರಾಗಿದ್ದು ಶ್ರದ್ಧಾ-ಭಕ್ತಿಯಿಂದ, ವೃತ-ನಿಯಮಗಳ ಪಾಲನೆಯೊಂದಿಗೆ ಭಾಗವಹಿಸಿ ಪುಣ್ಯ ಸಂಚಯ ಮಾಡಿಕೊಳ್ಳಬೇಕು ಎಂದು ಹೇಳಿದರು. ಪ್ರತಿಷ್ಠಾಚಾರ್ಯರುಗಳಾದ ಜಯರಾಜಇಂದ್ರರು ಮತ್ತು ಪುಷ್ಪರಾಜಇಂದ್ರರು, ಸ್ಥಳ ಪುರೋಹಿತರುಗಳಾದ ವೃಷಭರಾಜಇಂದ್ರರ ನೇತೃತ್ವದಲ್ಲಿ ಸಹಪುರೋಹಿತರ ಸಹಭಾಗಿತ್ವದೊಂದಿಗೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ವಿಮಾನಶುದ್ಧಿ, ಮುಖವಸ್ತ್ರ ಉದ್ಘಾಟನೆ, ನಾಂದಿಮಂಗಲ ಪೂಜಾವಿಧಾನ, ಕ್ಷೇತ್ರಪಾಲ ಪ್ರತಿಷ್ಠೆ, ನಾಗಪ್ರತಿಷ್ಠೆ ಹಾಗೂ ಭಗವಾನ್ ಆದಿನಾಥಸ್ವಾಮಿಗೆ ೨೪ ಕಲಶ ಅಭಿಷೇಕ ಹಾಗೂ ಮಹಾಪೂಜೆ ನಡೆಯಿತು. ಕಿಶೋರ್ ಹೆಗ್ಡೆ, ಎರ್ಮೆತ್ತೋಡಿಗುತ್ತು , ಉಜಿರೆಯ ಸುರೇಶ್ ಕುಮಾರ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಇಂದು ಶನಿವಾರ ವಾಸ್ತುಪೂಜಾ ವಿಧಾನ, ನವಗ್ರಹಶಾಂತಿ, ಪದ್ಮಾವತಿದೇವಿಗೆ ರಜತಕವಚ ಸಮರ್ಪಣೆ, ಲಕ್ಷ ಹೂವಿನಪೂಜೆ, ಭಗವಾನ್ ಆದಿನಾಥಸ್ವಾಮಿಗೆ ೫೪ ಕಲಶ ಅಭಿಷೇಕ ಮತ್ತು ಮಹಾಪೂಜೆ ನಡೆಯುತ್ತದೆ. ನಾಳೆ, ಭಾನುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಹಾಗೂ ಕುಟುಂಬಸ್ಥರು ಸೇವಾಕರ್ತೃಗಳಾಗಿದ್ದು ಭಗವಾನ್ ಆದಿನಾಥ ಸ್ವಾಮಿ ಪ್ರತಿಷ್ಠೆ ಹಾಗೂ ೧೦೮ ಕಲಶ ಅಭಿಷೇಕ, ಶಿಖರಾರೋಹಣ, ಭಕ್ತಾಮರ ಆರಾಧನೆ, ಮಹಾಪೂಜೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ. ಧಾರ್ಮಿಕ ಸಭೆ: ಸಂಜೆ 5 ಗಂಟೆಗೆ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕಸಭೆಯಲ್ಲಿ ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಹರೀಶ್ ಕುಮಾರ್, ರಕ್ಷಿತ್‌ಶಿವರಾಂ, ಸುಮಂತ್ ಕುಮಾರ್, ಸಂದೀಪ್ ಜೈನ್, ಪ್ರವೀಣ ಕುಮಾರ್ ಇಂದ್ರ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

First Previous

Showing 3 of 8 pages

Next Last