ಸರಗೂರು:ಅಷ್ಟಾಹ್ನಿಕ ಪೂಜೆ
Published Date: 08-Mar-2025
ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಬಸದಿಯಲ್ಲಿ ಶ್ರೀ ನಂದೀಶ್ವರ ಅಷ್ಟಾಹ್ನಿಕ ಪರ್ವದ ಮೊದಲ ದಿನದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಆರಾಧನೆಗಳು ನಡೆದವು. ಸಮಾಜದ ಮುಖಂಡರಾದ ಸೋಮಪ್ರಭ ಸೇರಿದಂತೆ ಜೈನ ಸಮಾಜದ ಮುಖಂಡರುಗಳು, ವಿವಿಧ ಜೈನ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಜೈನ ಮಹಿಳಾ ಸಂಘಟನೆಗಳು ಮುಖಂಡರುಗಳು, ಶ್ರಾವಕ-ಶ್ರಾವಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. -ಜೆ ರಂಗನಾಥ ತುಮಕೂರು