ರತ್ನತ್ರಯ ಜೈನ ಮಿಲನ್ ಮಾಸಿಕ ಸಭೆಯ ವರದಿ


Logo

Published Date: 08-Mar-2025

ದಿನಾಂಕ 07-03-2025 ಶುಕ್ರವಾರದಂದು ರತ್ನತ್ರಯ ಜೈನ ಮಿಲನ್‌ನ ಮಾಸಿಕ ಸಭೆಯನ್ನು ಆನ್‌ಲೈನ್‌ಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಪ್ರೇಮಕುಮಾರಿ, ಸುಖಾನಂದ, ರತ್ನತ್ರಯ ಜೈನ ಮಿಲನ ಅಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ಇವರು ಉಪಸ್ಥಿತರಿದ್ದರು. ಪಂಚ ನಮಸ್ಕಾರ ಪಠಣೆ ಮತ್ತು ಆರ್. ಎಸ್. ಭಾಮ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವೀಣಾ ಅರಿಹಂತ್ ಅವರು ರತ್ನತ್ರಯ ಮಿಲನಿನ ಉದ್ದೇಶವನ್ನು ತಿಳಿಸಿದರು. ಪದ್ಮಸೂರಿ ಅವರು ಹಿಂದಿನ ಸಭೆಯ ವರದಿಯನ್ನು ಮಂಡಿಸಿದರು. ಪೂರ್ಣಿಮಾ ಜಯಂತರವರು ಮಾರ್ಚ್ ತಿಂಗಳ ಪರ್ವವಾಚನ ಮಾಡಿದರು. ಸುನೀತಾ ಸುಂದರರಾಜ್ ಅವರು ಕಳೆದ ತಿಂಗಳಲ್ಲಿ ವಿವಾಹ ವಾರ್ಷಿಕ ಹಾಗೂ ಹುಟ್ಟುಹಬ್ಬ ಆಚರಿಸಿಕೊಂಡ ರತ್ನತ್ರಯ ಮಿಲನ ಸದಸ್ಯರಿಗೆ ಶುಭ ಕೋರಿದರು. ರಾಣಿ ಪ್ರಫುಲ್ಲ ಅವರು ಅತಿಥಿಗಳ ಪರಿಚಯ ಮಾಡಿದರು. ಮುಖ್ಯ ಅತಿಥಿಗಳಾಗಿಭಾಗವಹಿಸಿದ್ದ ಸಿ. ಪಿ. ಉಷಾ ರಾಣಿಯವರು ವೀರ್ ಚಂದ್ ಗಾಂಧಿಯವರ ಬದುಕು ಮತ್ತು ಸಾಧನೆಗಳ ಕುರಿತು ಉಪನ್ಯಾಸ ಮಾಡಿದರು. ನವೀನ್ ಕುಮಾರ್ ಗುಬ್ಬಿಯವರು ಅಧ್ಯಕ್ಷರ ನುಡಿಗಳನ್ನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಅನಂತ ಕುಮಾರಿ ಅವರು ನಡೆಸಿಕೊಟ್ಟರು. ಶೋಭಿತ ನವೀನಕುಮಾರ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img