ಶಿಶಿಲ ವಾರ್ಷಿಕೋತ್ಸವ


Logo

Published Date: 10-Mar-2025

ಬೆಳ್ತಂಗಡಿ: ತಾಲೂಕಿನ, ಶಿಶಿಲ, ಶ್ರೀ ಕ್ಷೇತ್ರ ಚಂದ್ರಪುರದಲ್ಲಿರುವ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 11ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಪೂಜಾ ಕಾರ್ಯಕ್ರಮಗಳು: ತಾ. 11-03-2025ನೇ ಮಂಗಳವಾರ ಬೆಳಿಗ್ಗೆ 7.45ರ ಶುಭ ಲಗ್ನದಲ್ಲಿ ತೋರಣ ಮುಹೂರ್ತ ನಂತರ ವಿಮಾನ ಶುದ್ಧಿ ಪ್ರಾರಂಭ, ಬೆಳಿಗ್ಗೆ 9.19ರ ಶುಭ ಲಗ್ನದಲ್ಲಿ ಮುಖವಸ್ತ್ರ ಉದ್ಘಾಟನೆ, ಬೆಳಿಗ್ಗೆ 9.30ರಿಂದ ಶಾಂತಿ ಚಕ್ರ ಆರಾಧನೆ ಮತ್ತು ಪದ್ಮಾವತಿ ಆರಾಧನೆ, ಮಧ್ಯಾಹ್ನ 12ರಿಂದ 24 ಕಲಶ ಅಭಿಷೇಕ ಮಹೋತ್ಸವ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪಾದಪೂಜೆ, ಶ್ರೀ ಜಿನಗಂಧೋದಕ ವಿತರಣೆ. ವಿ.ಸೂ.: ಪೂಜ್ಯ ಸ್ವಾಮೀಜಿಯವರಿಂದ ಶ್ರೀಕ್ಷೇತ್ರ ಚಂದ್ರಪುರ-ಶಿಶಿಲದ ಸ್ಥಳ ಪರಿಚಯ ಪುಸ್ತಕ ಬಿಡುಗಡೆ

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img