ವಿಮಲ ತಾಳಿಕೋಟಿ -ಸೇವಾರತ್ನ
Published Date: 27-May-2025
ಸಿಂಗಾಪುರ: ಬೆಂಗಳೂರಿನ ಸುಹಾಸ್ತಿ ಯುವ ಜೈನ ಮಿಲನ್ ಸಂಘಟನೆಯು ಸಿಂಗಾಪುರದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಅಂತರ ರಾಷ್ಟ್ರೀಯ ಜೈನ ಮಿಲನ್ ಸದಸ್ಯರ ಸಮಾವೇಶ "ಜಿನ ಸಮ್ಮಿಲನ"ದಲ್ಲಿ ಹುಬ್ಬಳ್ಳಿಯ ಸಮಾಜ ಸೇವಾಕರ್ತ ವಿಮಲ್ ತಾಳಿಕೋಟಿ ಅವರಿಗೆ, ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿನ ಸೇವೆಗಾಗಿ "ಸೇವಾರತ್ನ" ಪ್ರಶಸ್ತಿಯನ್ನು ನೀಡಿ ಅಭಿನಂದಿಸಿ ಗೌರವಿಸಲಾಯಿತು. ನವಗ್ರಹ ತೀರ್ಥ, ವರೂರಿನ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕರು, ಆರತಿಪುರ ಜೈನ ಮಠದ ಸ್ವಸ್ತಿಶ್ರೀ ಸಿದ್ಧಾಂತ ಕೀರ್ತಿ ಭಟ್ಟಾರಕರು, ಅಖಿಲ ಭಾರತ ಜೈನ ಮಿಲನ್ ಕಾರ್ಯಧ್ಯಕ್ಷ ಡಿ. ಸುರೇಂದ್ರಕುಮಾರ, ಅನಿತಾ ಸುರೇಂದ್ರಕುಮಾರ್, ಸುಹಾಸ್ತಿ ಜೈನ ಮಿಲನ್ ನ ಚಿತ್ತ ಜಿನೇಂದ್ರ ವಜ್ರ ಕುಮಾರ್, ಜಿನೇಂದ್ರ ಕಣಗಾವಿ ಯುವರಾಜ್ ಜೈನ್, ಮಾಳ ಹರ್ಷೇಂದ್ರ ಉಪಸ್ಥಿತರಿದ್ದರು. ಕರ್ನಾಟಕದಿಂದ 250ಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಿಂಗಪುರದ ಜೈನ್ ಸಮಾಜ ಅತ್ಯುತ್ತಮ ಸಹಕಾರ ನೀಡಿದರು. ಶಾಂತಿನಾಥ ಕೆ ಹೋತಪೇಟಿ