ಮೂಡುಬಿದಿರೆ: ರತ್ನತ್ರಯ ಸೂತ್ರ ಧಾರಣೆ ಮತ್ತು ಬಸದಿಗಳಲ್ಲಿ ವಿಶೇಷ ಪೂಜೆ
Published Date: 09-Aug-2025
ಮೂಡುಬಿದಿರೆ: ಇಲ್ಲಿಯ ಶ್ರೀ ಜೈನ ಮಠದಲ್ಲಿ ಆ. 09ರಂದು ನೂಲ ಹುಣ್ಣಿಮೆ ಶ್ರಾವಣದ ದಿನ ಆಚರಿಸುವ ರತ್ನತ್ರಯ ಸೂತ್ರ ಧರಿಸುವ ಹಬ್ಬವನ್ನು ಆಚರಿಸಲಾಯಿತು. ಕಾಶಿಯ 18 ಬಸದಿಗಳಲ್ಲಿ ವಿಶೇಷ ಪೂಜೆ, ಹವನ ಮೂಲಕ ಶ್ರಾವಕರು ರತ್ನತ್ರಯ ಸೂತ್ರ ಧರಿಸಿದರು. ಆಚಾರ್ಯ ಗುಲಾಬ್ ಭೂಷಣ ಮುನಿರಾಜ್ ಉಪಸ್ಥಿತರಿದ್ದರು. ಧರ್ಮ ನಿರತರಾದವರಿಗೆ ರಕ್ಷಣೆ ನೀಡುವ ಭಾವನೆ ಮಾಡುವ ದಿನ ಎಂದು ಇಂದು ಶ್ರೀ ಮಠದಲ್ಲಿ ಹವನದ ಬಳಿಕ ಜನಿವಾರ ಧಾರಣೆ ಸಂದರ್ಭದಲ್ಲಿ ಮೂಡುಬಿದಿರೆ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿ ತಮ್ಮ ಅನುಗ್ರಹ ಆಶೀರ್ವಾದದಲ್ಲಿ ತಿಳಿಸಿದರು. ಅಪರಾಹ್ನ ಶ್ರೀ ಮಠದ ಶಾಂತಿ ಭವನದಲ್ಲಿ ಶಾಂತಿ ಚಕ್ರ ಆರಾಧನೆಯ 16ನೇ ಆರಾಧನೆ ಸಮಾಪನಗೊಂಡಿತು. ಆಚಾರ್ಯರ ಭಟ್ಟಾರಕರ ಪಾದ ಪೂಜೆ ಆರತಿ ಮಾಡಿ ಭಕ್ತವೃಂದ ಧರ್ಮಲಾಭಗಳಿಸಿದರು. ಅಭಯ ಚಂದ್ರ ಜೈನ್, ತಿಲಕ್ ಪ್ರಸಾದ್, ದರ್ಶನ್ ಶೆಟ್ಟಿ, ಸಂಜಯಂತ ಕುಮಾರ್, ಸುದೇಶ್ ಬೆಟ್ ಕೇರಿ, ಶ್ವೇತಾ ಜೈನ್ ಸೂರಜ್, ಮೊದಲಾದವರು ಉಪಸ್ಥಿತರಿದ್ದರು. ಉ.ಪ್ರ, ಮಹಾರಾಷ್ಟ್ರ, ಮ.ಪ್ರ, ಇಂದೂರಿನ ನೂರಾರು ಸಂಖ್ಯೆಯ ಭಕ್ತರು ಶ್ರೀಗಳಿಂದ ಜನಿವಾರ ಹಾಗೂ ರಕ್ಷಾ ಸೂತ್ರ ಪಡೆದರು.