ಜೈನ ವಧು-ವರರ ರಾಜ್ಯಮಟ್ಟದ ಸಮಾವೇಶ
Published Date: 26-Aug-2025
ಚಿಗುರು ಆಲ್ ಇಂಡಿಯಾ ವಧು-ವರರ ವೇದಿಕೆಯ ಆಶ್ರಯದಲ್ಲಿ ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಭಾನುವಾರ ಸಂಪರ್ಕ-ಪರಿಚಯ ರಾಜ್ಯಮಟ್ಟದ ಜೈನ ವಧು ವರರ ಸಮಾವೇಶ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸಮಾವೇಶವನ್ನು ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ ಮೋಹನ ಆಳ್ವ ಅವರು ವೆಬ್ಸೈಟ್ ಅನಾವರಣಗೊಳಿಸಿದರು. ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಿದರು. ಸಂಚಾಲಕ ಸಂಪತ್ ಜೈನ್ ಹೊಸ್ಕಾರ್ ಪ್ರಸ್ತಾವನೆಗೈದರು. ಜೈನ ಸಮುದಾಯದ ಪ್ರಮುಖರಾದ ಸಂಪತ್ ಶಿಮುಂಜೆಗುತ್ತು, ಭುಜಬಲಿ ಧರ್ಮಸ್ಥಳ, ಪೂರ್ಣಚಂದ್ರ ಜೈನ್, ವಿಜಯ ಕುಮಾರ್ ಜೈನ್ ನೂರಾಳ್ಬೆಟ್ಟು, ರಕ್ಷಿತ್ ಜೈನ್ ಬಡೆಕಾವುಗುತ್ತು, ಪ್ರಭಾತ್ ಬಲ್ನಾಡ್, ನೇಮಿರಾಜ್ ಅರಿಗ, ಜಿನೇಂದ್ರ ಜೈನ್ ಈದು, ಮಹೇಂದ್ರ ಜೈನ್, ಕೆ.ಸಿ. ಧರಣೇಂದ್ರಯ್ಯ, ಜ್ವಾಲ ಪ್ರಸಾದ್, ಆಮಂತ್ರಣ ವೇದಿಕೆ ಜಿಲ್ಲಾ ಉಪಾಧ್ಯಕ್ಷೆ ಅನಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.