ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ


Logo

Published Date: 26-Sep-2025

ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ. ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ನಮ್ಮ ಸಮಾಜದ ಎಚ್. ನಾಭಿರಾಜ ಜೈನ್ ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಚಾಲಕರಾದ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img