ಸಚಿನ್ ಕುಮಾರ್ ಜೈನ್ ನಿರ್ದೇಶಕರಾಗಿ ಆಯ್ಕೆ
Published Date: 02-Oct-2025
ಸವಣೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಇದರ ಪುತ್ತೂರು ಕ್ಷೇತ್ರದಿಂದ ನಿರ್ದೇಶಕರಾಗಿ ಪುಣ್ಚಪ್ಪಾಡಿ ಗ್ರಾಮದ ಸಚಿನ್ ಕುಮಾರ್ ಜೈನ್ ಅವರು 2ನೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಚಿನ್ ಕುಮಾರ್ ಜೈನ್ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದು, ಪ್ರಸ್ತುತ ಪುಣ್ಚಪ್ಪಾಡಿ ಗೌರಿಗಣೇಶ ಸೇವಾಟ್ರಸ್ಟ್ ಅಧ್ಯಕ್ಷರಾಗಿ, ಮಂಗಳೂರಿನ ಧವಳ ಕೋ-ಅಪರೇಟಿವ್ ಸೊಸೈಟಿ ನಿಯಮಿತ ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಚಿನ್ ಕುಮಾರ್ ಅವರು ಪುಣ್ಚಪಾಡಿ ಯುವರಾಜ ಕಡಂಬ ಮತ್ತು ಮಲ್ಲಿಕಾ ಯುವರಾಜ್ ಅವರ ಪುತ್ರ.