ಮೈಸೂರು: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರ ಭೇಟಿ
Published Date: 10-Oct-2025
ಮೈಸೂರು, ಅ.10: ಕರ್ನಾಟಕ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಾದ ದೇವರಾಜ್ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಬಸದಿಗಳ ಸಂರಕ್ಷಣೆಯ ಬಗ್ಗೆ ವಿವರವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಇದಕ್ಕೆ ಉತ್ತರಿಸಿದ ಆಯುಕ್ತರು ಬಸದಿಗಳಿಗೆ ಯಾವುದೇ ರೀತಿಯ ತೊಂದರೆಗಳನ್ನು ಮಾಡುವುದಿಲ್ಲ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಬಂದ ನಂತರ ಒಂದೆರಡು ದಿನದಲ್ಲಿ ಲಿಖಿತವಾಗಿ ಉತ್ತರ ನೀಡುವುದಾಗಿ ಭರವಸೆ ನೀಡಿದರು. ಎಲ್ಲಾ ಬಸದಿಗಳನ್ನು ಸಂರಕ್ಷಣೆ ಮಾಡಲು ಇಲಾಖೆ ಒತ್ತು ನೀಡಲಿದೆ ಎಂಬುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಡಾ. ಕೆ ಜಯಕೀರ್ತಿ ಜೈನ್, ವಿಜಯಕುಮಾರ್. H, ಸುರೇಂದ್ರ ಕುಮಾರ್ ಜೈನ್, ಅಜಿತ್ ಕುಮಾರ್ ಜೈನ್ ಮುಂತಾದವರು ಉಪಸ್ಥಿತರಿದ್ದರು