ಡಾ. ನಿರಂಜನ್ ಕುಮಾರ್ ಅವರಿಗೆ ಡಾ. ಮುರಳಿ ಮನೋಹರ ಜೋಶಿ ಜೀವಮಾನ ಸಾಧನಾ ಪ್ರಶಸ್ತಿ
Published Date: 04-Nov-2025
ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರಿಗೆ ಪದ್ಮವಿಭೂಷಣ ಡಾ. ಮುರಳಿ ಮನೋಹರ ಜೋಶಿ ಜೀವಮಾನ ಸಾಧನಾ ಪ್ರಶಸ್ತಿಯನ್ನು ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಶ್ರೇಷ್ಠ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ಅಕ್ಟೋಬರ್ 31, 2025 ರಂದು ನವದೆಹಲಿಯಲ್ಲಿ ನಡೆದ ವಿಶ್ವ ಶೈಕ್ಷಣಿಕ ಒಕ್ಕೂಟದ ((Federation of World Academics)) ಸಮಾರಂಭದ 8ನೇ ವಾರ್ಷಿಕ ಸಮ್ಮೇಳನದಲ್ಲಿ ನೀಡಲಾಯಿತು. ಮಾಜಿ ಮಾನವ ಸಂಪನ್ಮೂಲ ಸಚಿವರು ಹಾಗೂ ಶ್ರೇಷ್ಠ ಶಿಕ್ಷಕರು ಆದ ಡಾ. ಮುರಳಿ ಮನೋಹರ ಜೋಶಿ ಅವರು ಈ ಪ್ರಶಸ್ತಿಗಳನ್ನು ನೀಡಿದರು.