ಕರ್ನಾಟಕದಲ್ಲಿ ಜೈನಧರ್ಮದ ಇತಿಹಾಸದ ಕುರಿತು ಸಂಶೋಧನಾ ಪ್ರಬಂಧ ಮಂಡನೆ


Logo

Published Date: 07-Mar-2026

ಚೆನ್ನೈ, ಫೆಬ್ರವರಿ 28, 2026: ಚೆನ್ನೈನ "ಸಿ.ಪಿ. ರಾಮಸ್ವಾಮಿ ಅಯ್ಯರ್ ಇಂಡೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಚೆನ್ನೈ" ಮತ್ತು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿ ಸ್ಥಾಪಿತವಾದ ಸ್ವಾಯತ್ತ ಸಂಸ್ಥೆಯಾದ ನವದೆಹಲಿಯ "ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್" (ICHR) ಸಂಯುಕ್ತವಾಗಿ ಸಿ.ಪಿ.ರಾಮಸ್ವಾಮಿ ಅಯ್ಯರ್ ಫೌಂಡೇಶನ್‌ನಲ್ಲಿ 27–28 ಫೆಬ್ರವರಿ 2026 ರಂದು “ದಕ್ಷಿಣ ಭಾರತದಲ್ಲಿ ಜೈನಧರ್ಮ – ಇತಿಹಾಸ, ಕಲೆ ಮತ್ತು ಸಂಸ್ಕೃತಿ” ಎಂಬ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿತ್ತು. ಈ ರಾಷ್ಟ್ರೀಯ ಸಮ್ಮೇಳನದಲ್ಲಿ “ಕರ್ನಾಟಕದಲ್ಲಿ ಜೈನಧರ್ಮದ ಇತಿಹಾಸ” ವಿಷಯದ ಕುರಿತು ಸಂಶೋಧನಾ ಪ್ರಬಂಧವನ್ನು ಜೈನ ಸಂಶೋಧಕ ಬೆಂಗಳೂರಿನ ನಿತಿನ್ ಹೆಚ್.ಪಿ.ರವರು ಮಂಡಿಸಿದರು. ಜೈನ್ ಹೆರಿಟೇಜ್ ಸೆಂಟರ್ಸ್.ಕಾಂ - www.jainheritagecentres.com ಅಂತರ್ಜಾಲತಾಣದ ಸಂಸ್ಥಾಪಕ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ವಿಪ್ರೋ ಕಂಪೆನಿಯಲ್ಲಿ ಮಾರ್ಕೆಟಿಂಗ್ ಟೆಕ್ನಾಲಜಿ ಹಾಗೂ ಡಿಜಿಟಲ್ ಮಾರ್ಕೆಟಿಂಗ್ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಿತಿನ್‌ರವರು ಶ್ರೀ ಭದ್ರಬಾಹು ಮುನಿಗಳ ಆಗಮನದಿಂದ ಆರಂಭವಾದ ಕರ್ನಾಟಕದ ಜೈನಧರ್ಮದ ಶಾಸನೋಕ್ತ ಇತಿಹಾಸ, ಮುನಿ ಹಾಗೂ ಭಟ್ಟಾರಕ ಪರಂಪರೆ, ಜೈನಧರ್ಮಕ್ಕೆ ರಾಜಮನೆತನಗಳ ಪೋಷಣೆ, ಸಾಹಿತ್ಯಿಕ ಕೊಡುಗೆ, ಕರ್ನಾಟಕದಲ್ಲಿ ಜೈನಧರ್ಮಕ್ಕೆ ಅನ್ಯಧರ್ಮಗಳಿಂದುಂಟಾದ ದಾಳಿಗಳು, ಬಸದಿಗಳು ಅವುಗಳ ಬೆಳವಣಿಗೆ ಮತ್ತು ವಾಸ್ತುಶಿಲ್ಪ ಹೀಗೆ ಇನ್ನೂ ಹಲವು ವಿಷಯಗಳನ್ನೊಳಗೊಂಡಂತೆ ವಿಸ್ತೃತವಾದ ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಭಾರತದಾದ್ಯಂತದಿಂದ 23 ಸಂಶೋಧಕರು ವಿವಿಧ ವಿಷಯಗಳ ಕುರಿತು ಸಂಶೋಧನಾ ಪ್ರಬಂಧಗಳನ್ನು ಸಮ್ಮೇಳನದಲ್ಲಿ ಮಂಡಿಸಿದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img