ಗೃಹರಕ್ಷಕ ಪಾಂಡುರಾಜ್‌ಗೆ ಮುಖ್ಯಮಂತ್ರಿ ಚಿನ್ನದ ಪದಕ


Logo

Published Date: 10-Mar-2026

ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ತಾಲೂಕು ಗೃಹರಕ್ಷಕ ದಳ ಘಟಕದ ಹಿರಿಯ ಗೃಹ ರಕ್ಷಕ, ಘಟಕಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಪಾ೦ಡುರಾಜ ಅವರ ಸೇವೆ ಗುರುತಿಸಿ 2024-25ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವ ನೀಡಲಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ ಪೌರ ರಕ್ಷಣೆ ಮತ್ತು ಎಸ್.ಡಿ.ಆರ್.ಎಫ್ ಅವರಿಗೆ ನೀಡಲಾಗುವ ಗೌರವಕ್ಕೆ ದ.ಕ ಜಿಲ್ಲೆಯಿಂದ ಏಕೈಕ ಪ್ರತಿನಿಧಿಯಾಗಿ ಪಾಂಡುರಾಜ ಈ ಗೌರವ ಸ್ವೀಕರಿಸಿದ್ದಾರೆ. ಬೆಂಗಳೂರಿನ ಆ‌ರ್.ವಿ. ಮುಂಡೂರ್‌ ಅಗ್ನಿಶಾಮಕ ತರಬೇತಿ ಅಕಾಡೆಮಿ ಆವರಣದಲ್ಲಿ ಕಳೆದ ಮಂಗಳವಾರ ಜರಗಿದ ಸಮಾರಂಭದಲ್ಲಿ ರಾಜ್ಯ ಗೃಹ ಸಚಿವ ಡಾ. ಪರಮೇಶ್ವರ್‌ಸೇವಾಸಾಧಕರಿಗೆ ಪದಕಪ್ರದಾನ ಮಾಡಿ ಗೌರವಿಸಿದರು. ಗೃಹರಕ್ಷಕರಾಗಿ 1986 ರಿಂದ ಹಾಗೂ ಘಟಕಾಧಿಕಾರಿಯಾಗಿ 2015ರಿಂದ 2024 ರ ಅವಧಿಗೆ ಒಟ್ಟು 38 ವರ್ಷಗಳ ಕರ್ತವ್ಯ ನಿರ್ವಹಿಸಿದ್ದಾರೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img