ಮೈಸೂರು: 20ನೇ ವಲಯ ಸಮ್ಮೇಳನ
Published Date: 26-Jun-2026
ಮೈಸೂರು: ಭಾರತೀಯ ಜೈನ್ ಮಿಲನ್ ವಲಯ 8ರ 20ನೇ ವಲಯ ಸಮ್ಮೇಳನವು ಇತ್ತೀಚೆಗೆ ಮಾನಸ ಗಂಗೋತ್ರಿಯ ಸೆನೆಟ್ ಹಾಲ್ ನಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್ ರವರು ವಿದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜೈನ್ ಮಿಲನ್ ಗಳ ಬಗ್ಗೆ ಮಾಹಿತಿ ನೀಡಿದರು. ದುಬೈ, ಜರ್ಮನಿ, ಲಂಡನ್, ಅಮೇರಿಕಾ, ಕೆನಡಾ, ಆಸ್ಟ್ರೇಲಿಯಾ ಮತ್ತು ಸಿಂಗಾಪುರದಲ್ಲಿ ಜೈನ್ ಮಿಲನ್ ಶಾಖೆಗಳು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು ಬಹಳ ಜನಪ್ರಿಯವಾಗಿವೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ರಾಷ್ಟ್ರೀಯ ಉಪಾಧ್ಯಕ್ಷೆ ಅನಿತಾ ಸುರೇಂದ್ರ ಕುಮಾರ್ ಸೇರಿದಂತೆ ಗಣ್ಯಾತೀಗಣ್ಯರು ಉಪಸ್ಥಿತರಿದ್ದರು.