ಕಾರ್ಕಳ: ಜೈನ್ ಮಿಲನ್ ಮಾಸಿಕ ಸಭೆ


Logo

Published Date: 24-Jul-2026

ಭಾರತೀಯ ಜೈನ್ ಮಿಲನ್ ಇದರ ಜುಲೈ ತಿಂಗಳ ಮಾಸಿಕ ಸಭೆ ಮತ್ತು ಆಹಾರೋತ್ಸವ ಕಾರ್ಯಕ್ರಮವು ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ಅಶೋಕ್ ಎಚ್ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಾಮೂಹಿಕ ಪಂಚ ನಮಸ್ಕಾರ ಮಂತ್ರದೊಂದಿಗೆ ಸಭೆ ಆರಂಭಗೊಂಡಿತು. ಪ್ರಣಮ್ಯ ಅಶ್ವಿನ್ ಕುಮಾರ್ ಇವರು ಜೂನ್ ತಿಂಗಳ ಮಾಸಿಕ ಸಭೆಯ ವರದಿ ವಾಚಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ಜೈನ್ ಮಿಲನ್ ವಲಯ 8 ಇದರ ಮಂಗಳೂರು ವಿಭಾಗದ ನಿರ್ದೇಶಕರಾದ ಸುಕುಮಾರ್ ಬಲ್ಲಾಳ್ ಇವರು ಅನೇಕ ದೃಷ್ಟಾಂತಗಳ ಮೂಲಕ ಎಲ್ಲರ ಮನ ಮುಟ್ಟುವಂತೆ ಜೈನ ಧರ್ಮದ ತತ್ವಗಳ ಬಗ್ಗೆ ಮಾತನಾಡಿದರು. ಜುಲೈ ತಿಂಗಳಲ್ಲಿ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದವರಿಗೆ ಶುಭಾಶಯ ಕೋರಲಾಯಿತು. ಅದೃಷ್ಟಶಾಲಿ ವ್ಯಕ್ತಿ ಮತ್ತು ಅದೃಷ್ಟಶಾಲಿ ದಂಪತಿಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿ ನೆನಪಿನ ಕಾಣಿಕೆ ವಿತರಿಸಲಾಯಿತು. ನಿರ್ದೇಶಕರಾದ ಯುವರಾಜ್ ಬಲಿಪ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಆಹಾರೋತ್ಸವದಲ್ಲಿ 33 ಬಗೆಯ ತಿಂಡಿಗಳ ವ್ಯವಸ್ಥೆ ಮಾಡಲಾಗಿತ್ತು. ಅಧ್ಯಕ್ಷರಾದ ಅಶೋಕ್ ಎಚ್ ಎಂ ಅಧ್ಯಕ್ಷೀಯ ಭಾಷಣದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ದುಡಿದವರಿಗೆ ಅಭಿನಂದಿಸಿದರು. ನಂತರ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವೀಕ್ಷಿತ ಏ ಜೈನ್, ಪ್ರಖ್ಯ ಜೈನ್, ಮತ್ತು ರಿಧಿ ಜೈನ ರವರು ಪ್ರಾರ್ಥಿಸಿದರು. ಮಿಲನ್ ಕಾರ್ಯದರ್ಶಿ ವಸಂತ್ ಕುಮಾರ್ ಬಂಗ ರವರು ಸ್ವಾಗತಿಸಿ ಆಷಾಢ ಮಾಸದಲ್ಲಿ ಆಹಾರೋತ್ಸವದ ಪ್ರಾಮುಖ್ಯತೆ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುರೇಶ್ ಇಂದ್ರ ರವರು ವಂದಿಸಿದರು. ವೀರೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು. ಸಾಮೂಹಿಕ ಶಾಂತಿ ಮಂತ್ರದೊಂದಿಗೆ ಸಭೆಯು ಮುಕ್ತಾಯಗೊಂಡಿತು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img