ಫೆ. 13: ಶ್ರೀ ಅತಿಶಯ ಕ್ಷೇತ್ರ ಪರುಷಗುಡ್ಡೆ ಬಸದಿಯ ವಾರ್ಷಿಕೋತ್ಸವ
Published Date: 12-Feb-2024
ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಶ್ರೀ ಅತಿಶಯ ಕ್ಷೇತ್ರ ಪರುಷಗುಡ್ಡೆ ಬಸದಿಯ ಭಗವಾನ್ ಶ್ರೀ ಶಾಂತಿನಾಥ ತೀರ್ಥಂಕರರ ಮತ್ತು ಭಗವಾನ್ ಶ್ರೀ ಪಾರ್ಶ್ವನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವದ ಹಾಗೂ ಶ್ರೀ ಪದ್ಮಾವತಿ ಅಮ್ಮನವರ ಬಿಂಬ ಪ್ರತಿಷ್ಠಾ ಮಹೋತ್ಸವದ ವಾರ್ಷಿಕೋತ್ಸವ ಸಮಾರಂಭವು ಮೂಡುಬಿದಿರೆ ಶ್ರೀ ಜೈನ ಮಠದ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಮಾರ್ಗದರ್ಶನದಲ್ಲಿ, ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಫೆ. 13ರಂದು ಜರಗಲಿರುವುದು.