ವರಂಗ: ವಾರ್ಷಿಕ ಮಹಾರಥಯಾತ್ರಾ ಮಹೋತ್ಸವ
Published Date: 14-Feb-2024
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅತಿಶಯ ಶ್ರೀ ಕ್ಷೇತ್ರ ವರಂಗದಲ್ಲಿ ಪರಂಪರಾನುಗತವಾಗಿ ನೆರವೇರಿಸಿಕೊಂಡು ಬಂದಿರುವ ಭಗವಾನ್ ಶ್ರೀ ೧೦೦೮ ನೇಮಿನಾಥ ಸ್ವಾಮಿ ಮತ್ತು ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ವಾರ್ಷಿಕ ರಥಯಾತ್ರಾ ಮಹೋತ್ಸವವು ಹೊಂಬುಜ ಜೈನ ಮಠದ ಪ.ಪೂ. ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮತ್ತು ದಿವ್ಯ ನೇತೃತ್ವದಲ್ಲಿ ಫೆ.24ರಿಂದ ಮೊದಲ್ಗೊಂಡು ಫೆ.28ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.