ವೇಣೂರು : ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ


Logo

Published Date: 24-Feb-2024

ವೇಣೂರು, ಫೆ. 24: ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆಯು ಪರಮಪೂಜ್ಯ ಯುಗಳ ಮುನಿಶ್ರೀಗಳಿಂದ ನೆರವೇರಿತು. ಈ ಸಂದರ್ಭ ಹೊಂಬುಜ ಮಠಾಧೀಶರಾದ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು, ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು, ಕ್ಷೇತ್ರದ ಸ್ಥಾಪಕ ವಂಶೀಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ತೀರ್ಥಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ವಿ. ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಯ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ಥರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img