ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ
Published Date: 21-Mar-2024
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಕೃತಿ ಸೌಂದರ್ಯದಿಂದ ಕೂಡಿದ ಮಲೆನಾಡ ಮಡಿಲಿನ ಹಂತೂರಿನ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣಾ ಪೂರ್ವಕ ಪಂಚಕಲ್ಯಾಣ ಮಹೋತ್ಸವ ಸಹಿತ ಮಾನಸ್ಥಂಭೋಪರಿ ಚತುರ್ಮುಖ ಬಿಂಬದ ಪ್ರತಿಷ್ಠಾಪನೆಯು ನರಸಿಂಹರಾಜಪುರ, ಸಿಂಹನಗದ್ದೆ ಬಸ್ತಿಮಠದ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಮತ್ತು ಸಮಸ್ತ ಭಟ್ಟಾರಕ ಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ದಿನಾಂಕ 22.03.2024 ರಿಂದ ಪ್ರಾರಂಭಗೊಂಡು 24.03.2024 ರವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ.