ಉಜಿರೆ : “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
Published Date: 31-Mar-2024
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುವ “ರತ್ನಮಾನಸ” ವಿದ್ಯಾರ್ಥಿ ನಿಲಯಕ್ಕೆ 8ನೇ ತರಗತಿ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಬಡ, ಹಿಂದುಳಿದ ಹಾಗೂ ಕೃಷಿಕ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ನಮ್ಮ ಆಯ್ಕೆ ಪರೀಕ್ಷೆಗೆ ಹಾಜರಾಗಿ ಮೂರು ದಿನ ರತ್ನಮಾನಸದಲ್ಲಿ ಉಳಿದು ಇಲ್ಲಿನ ಪರಿಸರ ಹಾಗೂ ಶಿಸ್ತಿನ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಹೈಸ್ಕೂಲ್ ವಿದ್ಯಾಭ್ಯಾಸದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಕ್ರಮವನ್ನು ಅಳವಡಿಸಿಕೊಳ್ಳುವ ಅಂಗವಾಗಿ ಕೃಷಿ, ಹೈನುಗಾರಿಕೆ, ಸಮಾಜಸೇವೆ ಮುಂತಾದ ವೃತ್ತಿಪರ ಹಾಗೂ ಸ್ವ-ಉದ್ಯೋಗ ತರಬೇತಿಯನ್ನು ನೀಡಲಾಗುವುದು. ಇಲ್ಲಿನ ಜೀವನ ಶಿಕ್ಷಣ ಕ್ರಮದ ಮಾಹಿತಿಯನ್ನು ಪಡೆದ ಬಳಿಕ ಅಭ್ಯರ್ಥಿಗೆ ಒಪ್ಪಿಗೆಯಾದಲ್ಲಿ 8ನೇ ತರಗತಿಯ ಕನ್ನಡ ಮಾಧ್ಯಮಕ್ಕೆ ಸೇರಲಿಚ್ಛಿಸುವ ಅರ್ಹ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ದಿನಾಂಕ 05-04-2024ರಿಂದ ಅರ್ಜಿಗಳನ್ನು ನೀಡಲಾಗುವುದು ಮತ್ತು 25-04-2024ರಂದು ಅರ್ಜಿ ನೀಡಲು ಕೊನೆಯ ದಿನಾಂಕವಾಗಿರುತ್ತದೆ. ವಿ.ಸೂ. : ಆಂಗ್ಲಮಾಧ್ಯಮ, 9ನೇ ಮತ್ತು 10ನೇ ತರಗತಿ ದಾಖಲಾತಿಗೆ ಅವಕಾಶವಿರುವುದಿಲ್ಲ. ಹಾಗೂ ಹುಡುಗಿಯರಿಗೆ ದಾಖಲಾತಿ ಇರುವುದಿಲ್ಲ. ಅರ್ಜಿಯನ್ನು ರತ್ನಮಾನಸ ವಸತಿ ನಿಲಯದಲ್ಲಿಯೇ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 08023901791, 9480351201, 9449244425, 9901546846