ಬೋಳ: ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ
Published Date: 19-Apr-2024
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಶ್ರೀ ವರ್ಧಮಾನ ಸ್ವಾಮಿ ಬಸದಿಯ ಪುನರ್ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಪ.ಪೂ ಮುನಿಶ್ರೀ ೧೦೮ ಅಮರಕೀರ್ತಿ ಮಹಾರಾಜರು, ಪ.ಪೂ. ಮುನಿಶ್ರೀ ೧೦೮ ಅಮೋಘಕೀರ್ತಿ ಮಹಾರಾಜರು ಮತ್ತು ಪ.ಪೂ. ಮುನಿಶ್ರೀ ೧೦೮ ಪ್ರಸಂಗ ಸಾಗರ ಮಹಾರಾಜರುಗಳ ಶುಭಾಶೀರ್ವಾದಗಳೊಂದಿಗೆ ಮತ್ತು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಏ.22 ರಂದು ನೆರವೇರಲಿರುವುದು.