ಮೂಡುಬಿದಿರೆ: ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವ
Published Date: 22-Apr-2024
ವರ್ಷಂಪ್ರತಿ ಜರುಗುವ ಜಗತ್ಪ್ರಸಿದ್ಧ ತ್ರಿಭುವನ ತಿಲಕ ಚೂಡಾಮಣಿ ಸಾವಿರ ಕಂಬ ಬಸದಿಯ ಕಿರಿಯ ಮತ್ತು ಹಿರಿಯ ರಥೋತ್ಸವವು ಎ. 18ರಿಂದ ಪ್ರಾರಂಭಗೊಂಡಿದ್ದು, ಇಂದು (ಏ.23) ಹಿರಿಯ ರಥೋತ್ಸವ ಮತ್ತು ಶ್ರವಣ ಸಂಸ್ಕೃತಿ ಸಮ್ಮೇಳನ ೧೦೮ ಚಾರಿತ್ರ ಚಕ್ರವರ್ತಿ ಶಾಂತಿಸಾಗರ ಮುನಿಮಹಾರಾಜರ ಆಚಾರ್ಯ ಪದಾರೋಹಣ ಶತಾಬ್ಧಿವರ್ಷ ಆಚರಣೆಯು, ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಪಾವನ ಸಾನಿಧ್ಯ ಮತ್ತು ಆಶೀರ್ವಚನದೊಂದಿಗೆ ಜರಗಲಿರುವುದು.