ಮೂಡುಬಿದಿರೆ: ಭಾರತೀಯ ಜೈನ್ ಮಿಲನ್ ಮಾಸಿಕ ಸಭೆ
Published Date: 19-May-2024
ಭಾರತೀಯ ಜೈನ್ ಮಿಲನ್ ಮೂಡುಬಿದಿರೆಯ ಮಾಸಿಕ ಸಭೆ ವಾಲ್ಪಾಡಿ ಬಸದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶ್ರೀಪಾಲ್ ಎಸ್. ರವರು ತಮ್ಮ ಧರ್ಮಪತ್ನಿ ಮತ್ತು ಮಾತೃಶ್ರೀಯವರ ಸ್ಮರಣೆಯಲ್ಲಿ ಕೊಡಮಾಡುವ "ವಜ್ರಶ್ರೀ ಅರ್ಚಕ ಪುರಸ್ಕಾರ"ವನ್ನು ಅಳಿಯೂರು ಬಸದಿಯ ಹಿರಿಯ ಅರ್ಚಕರಾದ ರತ್ನವರ್ಮ ಇಂದ್ರರ ಸೇವೆಯನ್ನು ಗುರುತಿಸಿ, ರತ್ನವರ್ಮ ಇಂದ್ರ ಹಾಗೂ ವಿನಯ ದಂಪತಿಯನ್ನು ಶಾಲು, ಫಲಕಾಣಿಕೆ, ಸನ್ಮಾನ ಪತ್ರ ಹಾಗೂ ನಗದು ಪುರಸ್ಕಾರದೊಂದಿಗೆ ಜೈನ್ ಮಿಲನ್ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಮಿಲನ್ ಅಧ್ಯಕ್ಷ ದಿನೇಶ್ ಕುಮಾರ್ ಆನಡ್ಕ, ಶ್ವೇತಾ ಜೈನ್, ಪ್ರಭಾಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.