ಸತ್ತೂರು, ಧಾರವಾಡ: “ಪರ್ವ 2024”-ಸಾಂಸ್ಕೃತಿಕ ಕಾರ್ಯಕ್ರಮ
Published Date: 25-May-2024
ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಅಲೈಡ ಹೆಲ್ತ್ ಸೈನ್ಸ್ ವಿಭಾಗದವರಿಂದ “ಪರ್ವ 2024”-ಸಾಗರ ಸಂರಕ್ಷಣೆಯ ಭಾಗವಾಗಿ “ಸಮುದ್ರ ನಮ್ಮ ಜೀವನದ ಸೌಂದರ್ಯ” ಎಂಬ ಧ್ಯೇಯೆಯೊಂದಿಗೆ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಲಾಗಿತ್ತು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ, ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ರತ್ನಮಾಲಾ ದೇಸಾಯಿ ಮತ್ತಿತರ ಗಣ್ಯರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪದ್ಮಲತಾ ನಿರಂಜನ್, ಸಾಕೇತ್ ಶೆಟ್ಟಿ, ಡಾ. ಚಿದೇಂದ್ರ ಶೆಟ್ಟರ ಮತ್ತಿತರರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಲೈಡ ಹೆಲ್ತ್ ಸೈನ್ಸ್ ನ ಸಂಯೋಜಕರಾದ ಡಾ. ವಿದ್ಯಾ ಪಾಟೀಲ ಅವರು ಪರ್ವ 2024 ಸಾಂಸ್ಕೃತಿಕ ಕಾರ್ಯಕ್ರಮದ ಅವಲೋಕನವನ್ನು ನೀಡಿದರು. ಶೋಧನ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಮೀನಾಜ್ ಮತ್ತು ತಾಂಜೀಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಸೌಮ್ಯ ವಂದನಾರ್ಪಣೆ ಸಲ್ಲಿಸಿದರು.