ಮೂಡಬಿದಿರೆ: ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ
Published Date: 08-Jul-2024
ಕೊಡುಗೈ ದಾನಿಗಳು ಶಾಲಾ ಹಿತೈಶಿಗಳು ಹಾಗೂ ಶಾಲಾ ಹಳೆ ವಿದ್ಯಾರ್ಥಿಯಾಗಿರುವ ಎಂ. ವಿ. ಶೆಟ್ಟಿಯವರು ಜುಲೈ 8ರಂದು ಮೂಡಬಿದಿರೆಯ ದಿಗಂಬರ ಜೈನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಅರ್ಹ ಬಡ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಜೈನ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರಾದ ಶಶಿಕಾಂತ್ ವೈ. ಇವರು ಉಪಸ್ಥಿತರಿದ್ದರು.