ಅರ್ಜಿ ಆಹ್ವಾನ
Published Date: 16-Jan-2024
ರಾಜಸ್ಥಾನ ಸಾಂಗನೇರದಲ್ಲಿರುವ ಶ್ರಮಣ ಸಂಸ್ಕೃತಿ ಸಂಸ್ಥಾನದಲ್ಲಿ ಸಂತ ಶಿರೋಮಣಿ 108 ಆಚಾರ್ಯ ಶ್ರೀ ವಿದ್ಯಾಸಾಗರ ಮುನಿ ಮಹಾರಾಜರ ಆಶೀರ್ವಾದ ಮತ್ತು ಮುನಿಪುಂಗವ 108 ಶ್ರೀ ಸುಧಾಸಾಗರ ಮಹಾರಾಜರ ಪ್ರೇರಣೆಯಿಂದ ನಡೆಯುತ್ತಿರುವ ದ್ವಾದಶ ವರ್ಷಿಯ ಕೋರ್ಸ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಉತ್ತಮ ಪಂಡಿತರಿಂದ ಗ್ರಂಥ ಸ್ವಾಧ್ಯಾಯ ಮತ್ತು ಪ್ರತಿ ವರ್ಷ ಪರೀಕ್ಷೆ ಬರೆಯ ಬೇಕಾಗುತ್ತದೆ. ಇಲ್ಲಿಯವರೆಗೂ ಹಿಂದಿಯಲ್ಲಿ ನಡೆಯುತ್ತಿದ್ದು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಪಠ್ಯಕ್ರಮವನ್ನು ಕನ್ನಡಕ್ಕೆ ಅನುವಾದಿಸಿ, ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಎಲ್ಲರಿಗೂ ಈ ಪರೀಕ್ಷೆ ಬರೆಯುವ ಅವಕಾಶವಿದ್ದು, ಪರೀಕ್ಷೆಯನ್ನು ಬರೆಯಲು ಯಾವುದೇ ವ್ಯಾಸಂಗದ ಅರ್ಹತೆ ಮತ್ತು ವಯಸ್ಸಿನ ಮಿತಿ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2024 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಸಪ್ನ ಲಕ್ಷ್ಮೀಶ್ ಮೈಸೂರು: 9448254546 / 8660747004