ವೇಣೂರು: ಭಾರತೀಯ ಜೈನ್ ಮಿಲನ್ ತಿಂಗಳ ಮಾಸಿಕ ಸಭೆ
Published Date: 18-Aug-2024
ವೇಣೂರು: ಭಾರತೀಯ ಜೈನ್ ಮಿಲನ್ ನ ಜುಲೈ ತಿಂಗಳ ಮಾಸಿಕ ಸಭೆ ಹಾಗೂ ಆಹಾರವೋತ್ಸವ ಕಾರ್ಯಕ್ರಮವನ್ನು ಆ. 15ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ವೀರ್ ವೀರಾಂಗನೆಯರು ತಮ್ಮ ಮನೆಯಲ್ಲಿ ತಯಾರಿಸಿದ ಸುಮಾರು 50 ಬಗೆಯ ಆಹಾರ ಪದಾರ್ಥಗಳನ್ನು ಪ್ರದರ್ಶಿಸಿದರು. ಮಾಸಿಕ ಸಭೆಯ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದ್ದರು. ಆಹಾರೋತ್ಸವದ ಉದ್ಘಾಟನೆಯನ್ನು ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಸಾಂಪ್ರದಾಯಿಕ ತಿಂಡಿ ತಿನಿಸುಗಳ ಮಹತ್ವದ ಕುರಿತು ಉದ್ಘಾಟಕರು ಮತ್ತು ಅತಿಥಿಗಳು ವಿವರಿಸಿದರು. ವಿಜಯರಾಜ ಅಧಿಕಾರಿ ಅವರ ಪ್ರಾರ್ಥನೆಯೊಂದಿಗೆ ನಿರ್ಮಲ್ ಕುಮಾರ್ ಜೈನ್ ಸ್ವಾಗತಿಸಿ, ಪ್ರಾರಂಭವಾದ ಕಾರ್ಯಕ್ರಮವನ್ನು ಮಹಾವೀರ ಜೈನ್ ನಿರೂಪಿಸಿದರು. ಸುನಿತಾ ಎನ್. ಬಲ್ಲಾಳ್ ರವರ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸುಮಾರು 150 ವೀರ್ ವೀರಾಂಗನೆಯರು ಮತ್ತು ವೀರ್ ಕುವರಿಯರು ಮತ್ತು ವೀರ್ ಕುವರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.