ಇಂದಿನಿಂದ ದಶಲಕ್ಷಣ ಮಹಾ-ಪರ್ವ ಆಚರಣೆ


Logo

Published Date: 08-Sep-2024

ವೇಣೂರು: ಇಲ್ಲಿಯ ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿ (ರಿ.) ವತಿಯಿಂದ ದಶಲಕ್ಷಣ ಪರ್ವ ಆಚರಣೆಯು ಇತಿಹಾಸ ಪ್ರಸಿದ್ಧ ಭಗವಾನ್ ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಮೂಡುಬಿದಿರೆ ಶ್ರೀ ದಿಗಂಬರ ಜೈನ ಮಠದ ಪರಮಪೂಜ್ಯ 'ಭಾರತಭೂಷಣ' ಜಗದ್ಗುರು ಡಾ| ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ, ದಿವ್ಯ ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಮಿತಿಯ ಅಧ್ಯಕ್ಷರಾದ 'ಪದ್ಮವಿಭೂಷಣ' ರಾಜರ್ಷಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಇವರ ಪ್ರೇರಣೆ ಹಾಗೂ ಸಮಿತಿಯ ಉಪಾಧ್ಯಕ್ಷರಾದ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಅರಮನೆ ಇವರ ನೇತೃತ್ವದಲ್ಲಿ ತಾ. 08-09-2024ನೇ ಆದಿತ್ಯವಾರದಿಂದ ತಾ. 17-09-2024ನೇ ಮಂಗಳವಾರದವರೆಗೆ ಪ್ರತಿ ದಿನ ಅಪರಾಹ್ನ ಗಂಟೆ 4-30ರಿಂದ 6-00ರ ವರೆಗೆ ಜರುಗಲಿದೆ. ವಿ. ಸೂ.: ಪ್ರತೀ ದಿನ ಅಪರಾಹ್ನ ಗಂಟೆ 4-00ರಿಂದ ವೇಣೂರು ಬಸದಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಕ್ಷೀರಾಭಿಷೇಕ ಯಾತ್ರಿ ನಿವಾಸದಲ್ಲಿ ಉಪನ್ಯಾಸ ನಡೆಯಲಿದೆ.

Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img Recomendatoion img