ಡಾ. ಅಜಿತ ಮುರುಗುಂಡೆ
Published Date: 16-Jan-2024
ಡಾ. ಅಜಿತ ಮುರುಗುಂಡೆ ಅವರ ಕೃತಿ ಕೆ. ಸಾ. ಪ. ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ. ಕನ್ನಡ ಸಾಹಿತ್ಯ ಪರಿಷತ್ತು ೨೦೨೦ ಎರಡನೇ ಸಾಲಿನ ವಿವಿಧ ದತ್ತಿ ಪ್ರತಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ಡಾ. ಅಜಿತ ಮುರಗುಂಡೆ ಇವರು ಬರೆದ ‘ರತ್ನಾಕರ ವರ್ಣಿಯ ಹಾಡುಗಳು, ಸಾಹಿತ್ಯ ಮತ್ತು ತಾತ್ವಿಕತೆ’ ಈ ಕೃತಿ ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲ ಶೆಟ್ಟಿ ಡಾ. ಮದನಕೇಸರಿ ಜೈನ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಸ್ತುತ ಇವರು ಯೋಜನೆ ಮತ್ತು ಸಾಂಖ್ಯಿಕ ಸಚಿವರ ವಿಶೇಷ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ