ಮೈಸೂರು: ಜೈನಾಲಜಿ ಮತ್ತು ಪ್ರಾಕೃತ ವಿಭಾಗ ಮುಂದುವರಿಸುವಂತೆ ಆಗ್ರಹ
Published Date: 10-Sep-2024
ಮೈಸೂರು ವಿಶ್ವವಿದ್ಯಾಲಯದಲ್ಲಿ ಜೈನಾಲಜಿ ಮತ್ತು ಪ್ರಾಕೃತ ವಿಭಾಗವನ್ನು ಮುಂದುವರಿಸುವಂತೆ ಆಗ್ರಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಹೆಗಡೆ ನೇತೃತ್ವದಲ್ಲಿ ಇಂದು ಉಪಕುಲಪತಿ ಲೋಕನಾಥ್ ರವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಜಯಶ್ರೀ, ಪದ್ಮಪ್ರಸಾದ್, ಭಾರತೀಯ ಜೈನ್ ಮಿಲನ್ ಅಧ್ಯಕ್ಷ ಯುವರಾಜ್ ಭಂಡಾರಿ, ಗೌರವ ಅಧ್ಯಕ್ಷರಾದ ಶೀಲಾ ಅನಂತರಾಜು, ಪ್ರಧಾನ ಕಾರ್ಯದರ್ಶಿ ರತ್ನರಾಜು, ಖಜಾಂಚಿ ಚಂದ್ರಶೇಖರ ಅರಿಗ, ಜಂಟಿ ಕಾರ್ಯದರ್ಶಿ ಪ್ರಶಾಂತ್, ಮೈಸೂರು ವಿಭಾಗದ ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಚಂದ್ರು ಪ್ರಕಾಶ್, ಅರುಣಾಚಂದ್ರ ಪ್ರಕಾಶ್, ಪದ್ಮಶ್ರೀ ಮಹಿಳಾ ಸಮಾಜದ ಅಧ್ಯಕ್ಷರಾದ ಲತಾ ಸುದರ್ಶನ್, ಜಂಟಿ ಕಾರ್ಯದರ್ಶಿ ಸಿಂಧೂ ಅರುಣ್, ಕರ್ನಾಟಕ ಜೈನ ತೀರ್ಥಕ್ಷೇತ್ರ ಕಮಿಟಿ ಅಧ್ಯಕ್ಷ ವಿನೋದ್ ಬಾಕ್ಲಿವಾಲ, ಶ್ವೇತಾಂಬರ ಮೂರ್ತಿ ಪೂಜಕ್ ಸಂಘದ ಅಧ್ಯಕ್ಷ ಬೇರು ಲಾಲ್, ಟ್ರಸ್ಟಿಗಳಾದ ಹನ್ಸರಾಜ್, ದೇವಿ ಚಂದ, ಚಂಪಾಲಾಲ್, ಪ್ರೊ. ಶುಭಚಂದ್ರ ಭಾಗವಹಿಸಿದ್ದರು. ಜೆ.ರಂಗನಾಥ ತುಮಕೂರು