ಹುಬ್ಬಳ್ಳಿ ಜೈನ್ ಬೋರ್ಡಿಂಗ್ ನಲ್ಲಿ ದಶಲಕ್ಷಣ ಪರ್ವ
Published Date: 12-Sep-2024
ಹುಬ್ಬಳ್ಳಿ ಜೈನ್ ಬೋರ್ಡಿಂಗ್ ನಲ್ಲಿ ದಶಲಕ್ಷಣ ಪರ್ವ ಆಚರಣೆಯ ಸಂದರ್ಭದಲ್ಲಿ ಪರಮ ಪೂಜ್ಯ ಮುನಿಶ್ರೀ 108 ಪುಣ್ಯಸಾಗರ ಮಹಾರಾಜರು ಮತ್ತು ಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು ನಂತರ ಉತ್ತಮ ಮಾರ್ದವ ಧರ್ಮದ ಬಗ್ಗೆ ಡಾ. ನೀರಜಾ ನಾಗೇಂದ್ರಕುಮಾರ್ ಅವರು ಉಪನ್ಯಾಸ ನೀಡಿದರು. ಹುಬ್ಬಳ್ಳಿ ಜೈನ ಸಮಾಜದ ಲೋಬೋಗೋಳ್, ವಿದ್ಯಾಧರ್, ಬೀಳಗಿ, ರತ್ನಾಕರ್ ಅಣ್ಣಿಗೇರಿ, ಶಾಂತಿನಾಥ ಹೋತಪೇಟೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.