ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ದಶ ಲಕ್ಷಣ ಮಹಾಪರ್ವದ ಆಚರಣೆ
Published Date: 21-Sep-2024
ಪ.ಪೂ.ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು, ಶ್ರೀ ಜೈನ ಮಠ, ಕಾರ್ಕಳ, ಇವರ ಪಾವನ ಸಾನಿಧ್ಯ, ಪೂಜ್ಯ ಖಾವಂದರ ಆಶೀರ್ವಾದ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದಂತೆ ಶ್ರೀ ಬಾಹುಬಲಿ ಶ್ರಾವಿಕಾಶ್ರಮದಲ್ಲಿ ದಶಲಕ್ಷಣ ಮಹಾಪರ್ವವು ಹತ್ತು ದಿನಗಳ ಪರ್ಯಂತ ಅಷ್ಟವಿಧಾರ್ಚನೆ ಪೂಜಾವಿಧಿಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬರು ಉಪಾಹಾರದ ವ್ಯವಸ್ಥೆಯನ್ನು ಮಾಡಿದ್ದಲ್ಲದೆ, ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಅಭಿವೃದ್ಧಿ ಕಾರ್ಯಗಳಿಗಾಗಿ ರೂ. ಒಂದು ಲಕ್ಷದ ಹನ್ನೊಂದು ಸಾವಿರದ ನೂರ ಹನ್ನೊಂದುದನ್ನು ದಾನವಾಗಿ ನೀಡಿದ್ದಾರೆ. ಇವರನ್ನು ಶ್ರೀ ಬಾಹುಬಲಿ ಶ್ರಾವಿಕಾಶ್ರಮದ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಶಿಶುಪಾಲ ಪೂವಣಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಸನ್ಮಾನಿಸಿದರು. ಡಾ. ಭರತೇಶ್ ರವರು, ಊರಿನ ಸದ್ಧರ್ಮ ಬಂಧುಗಳು ಮತ್ತು ಆಡಳಿತ ಮಂಡಳಿಯ ಸದಸ್ಯರೆಲ್ಲಾ ಉಪಸ್ಥಿತರಿದ್ದರು.