ವಾರ್ಷಿಕೋತ್ಸವ ಕಾರ್ಯಕ್ರಮ
Published Date: 25-Jan-2025
ಕಾರ್ಕಳ: ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ನಿರ್ಮಾಣಗೊಂಡ ಶ್ರೀ ಜೈನ ಮಠದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಕಾರ್ಯಕ್ರಮವು ನಾಳೆ(ಜ.26) ಜರುಗಲಿದೆ. ನರಸಿಂಹರಾಜಪುರ, ಶ್ರೀ ಸಿಂಹನಗದ್ದೆ ಬಸ್ತಿಮಠದ ಪ.ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.