ಬೆಳ್ತಂಗಡಿ: ವಾರ್ಷಿಕ ಸಮಾರಂಭ
Published Date: 13-Feb-2025
ಶ್ರೀ ಅತಿಶಯ ಕ್ಷೇತ್ರ ಪರುಷಗುಡ್ಡೆ ಬಸದಿಯ 1008 ಭ|| ಶ್ರೀ ಪಾಶ್ವ೯ನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವದ ಹಾಗೂ ಶ್ರೀ ಪದ್ಮಾವತೀ ಅಮ್ಮನವರ ಬಿಂಬ ಪ್ರತಿಷ್ಠಾ ಮಹೋತ್ಸವದ ವಾರ್ಷಿಕೋತ್ಸವ ಸಮಾರಂಭವು ಮೂಡುಬಿದಿರೆ ಶ್ರೀ ಜೈನ ಮಠದ ಪ.ಪೂ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ ಮಾರ್ಗದರ್ಶನ ಮತ್ತು ಆಶೀರ್ವಾದಗಳೊಂದಿಗೆ ಜರಗಲಿರುವುದು ಹಾಗೂ ಬೆಳಿಗ್ಗೆ 10.00ಗಂಟೆಗೆ ಚತುರ್ವಿಂಶತಿ ತೀರ್ಥಂಕರರ ಚರಣ ಕೂಟಗಳ ದರ್ಶನದ ದಾರಿಯನ್ನು ಲೋಕಾರ್ಪಣೆ ಮಾಡಲಿರುವರು ಹಾಗೂ ಶಾಸಕರ ಅನುದಾನದಿಂದ ಬಸದಿಗೆ ಪ್ರವೇಶಿಸುವ ಕಾಂಕ್ರೀಟ್ ರಸ್ತೆಯ ಲೋಕಾರ್ಪಣೆಯನ್ನು ಶಾಸಕರಾದ ಹರೀಶ್ ಪೂಂಜಾರವರು ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.