ವಿಶ್ವಶಾಂತಿ ಯುವಸೇವಾ ಸಮಿತಿ (ರಿ) ಬೆಂಗಳೂರು ಶ್ರೀ ಆದಿನಾಥ ವೈಭವ ಕಾರ್ಯಕ್ರಮ
ವಿಶ್ವಶಾಂತಿ ಯುವಸೇವಾ ಸಮಿತಿ (ರಿ) ಬೆಂಗಳೂರು “ಶ್ರೀ ಆದಿನಾಥ ವೈಭವ” ವಿಶ್ವದ ಮೊದಲ ಬೃಹತ್ ಜಿನಸಹಸ್ರನಾಮ ಸ್ತುತಿ ವಿಶ್ವ ದಾಖಲೆ ಕಾರ್ಯಕ್ರಮವು ಸಾವಿರಕಂಬ ಬಸದಿಯಲ್ಲಿ ಪೂಜ್ಯ ಸ್ವಾಮೀಜಿಯವರ ಚಾಲನೆ ಮೂಲಕ ಸೆ. 22ರಂದು ಪ್ರಾತಃಕಾಲ 3.15ಕ್ಕೆ ನಡೆಯಲಿದೆ. ಕಾರ್ಯಕ್ರಮದ ಸಮಾರೋಪ ಸಮಾರಂಭವು ಮೂಡುಬಿದಿರೆ ಶ್ರೀ ಜೈನ ಮಠದ ಭಾರತಭೂಷಣ ಜಗದ್ಗುರು ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಸಂಜೆ 6.15ರಿಂದ ನಡೆಯಲಿದ್ದು, ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಗೌರವ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರೀಯಾ ಹರ್ಷೇಂದ್ರ ಕುಮಾರ್ ಇವರ ಗೌರವ ಅತಿಥೇಯದಲ್ಲಿ, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಮತ್ತು ಕಾರ್ಯದರ್ಶೀಯಾದ ರಶ್ಮಿತಾ ಯುವರಾಜ್ ಜೈನ್ ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಅಭಯಚಂದ್ರ ಜೈನ್ ಇವರ ವಿಶೇಷ ಅತಿಥೇಯದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಪ್ರೊ. ಅಜಿತ್ ಪ್ರಸಾದ್ ನಿವೃತ್ತ ಉಪ ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಮತ್ತು ವೀಣಾ ಬಿ. ಆರ್. ಶೆಟ್ಟಿ ಸಾಹಿತಿಗಳು ಮೂಡುಬಿದಿರೆ ಇವರು ಆಗಮಿಸಲಿದ್ದಾರೆ.
